Homeಕರ್ನಾಟಕಕಸ ಸಂಗ್ರಹಣೆ, ವಿಲೇವಾರಿ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು: ಬಿಬಿಎಂಪಿಗೆ ಕಾರ್ಮಿಕರ ಸಂಘಟನೆಯಿಂದ ಒತ್ತಾಯ

ಕಸ ಸಂಗ್ರಹಣೆ, ವಿಲೇವಾರಿ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು: ಬಿಬಿಎಂಪಿಗೆ ಕಾರ್ಮಿಕರ ಸಂಘಟನೆಯಿಂದ ಒತ್ತಾಯ

- Advertisement -
- Advertisement -

ಬಿಬಿಎಂಪಿ ಘನತ್ಯಾಜ್ಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ವಾಹನ ಚಾಲಕರು (ಅಟೋ, ಟ್ರಾಕ್ಟರ್, ಕಾಂಪ್ಟ್ರಾಕ್ಟರ್ ಮತ್ತು ಲಾರಿ) ಸಹಾಯಕರು, ಲೋಡರ್‍‌ಗಳು ಮತ್ತು ಕ್ಲೀನರ್‍‌ಗಳನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕೆಂದು ಒತ್ತಾಯಿಸಿ ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯು ಬುಧವಾರ ಪತ್ರಿಕಾ ಘೋಷ್ಠಿ ನಡೆಸಿತು.

ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯ ಪತ್ರಿಕಾ ಪ್ರಕಟನೆಯಲ್ಲಿ, ಬಿಬಿಎಂಪಿ ಅಧಿಕಾರಿಗಳಿಂದ ಮತ್ತು ನೆಪಮಾತ್ರ ಗುತ್ತಿಗೆದಾರರಿಂದ ಕಾರ್ಮಿಕರ ಮೇಲೆ ಆಗುತ್ತಿರುವ ಕಿರುಕುಳ, ಅನ್ಯಾಯ ನಿಲ್ಲಬೇಕು ಮತ್ತು ಈ ಕಾರ್ಮಿಕರನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕೆಂದು ಬಿಬಿಎಂಪಿಯನ್ನು ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.

ಘನತ್ಯಾಜ್ಯ ನಿರ್ವಹಣೆಯ ಕೆಲಸವನ್ನು ಬಿಬಿಎಂಪಿಯು ಕಾನೂನು ಪ್ರಕಾರ ಕಡ್ಡಾಯವಾಗಿ ಮಾಡಲೇ ಬೇಕಾಗಿರುತ್ತದೆ ಮತ್ತು ಇದು ನಿರಂತರ ಸ್ವರೂಪದ ಕೆಲಸವಾಗಿರುತ್ತದೆ. ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಸಗುಡಿಸುವ ಪೌರಕಾರ್ಮಿರಿಗೆ ನೇರವೇತನವನ್ನು ಪಾವತಿ ಮಾಡುತ್ತಿರುತ್ತಿದೆ. ಆದರೆ ಮನೆ ಮನೆಗಳಲ್ಲಿ ಆಟೋ ಮತ್ತು ಇತರೆ ವಾಹನಗಳ ಮೂಲಕ ಕಸ ಸಂಗ್ರಹಿಸುವ ಮತ್ತು ಕಸ ವಿಲೇವಾರಿ ಮಾಡುವ ಪೌರಕಾರ್ಮಿಕರನ್ನು ನಾಮಮಾತ್ರ ಗುತ್ತಿಗೆ ವ್ಯವಸ್ಥೆಯಡಿಯಲ್ಲಿ ನೇಮಕ ಮಾಡಿಕೊಂಡಿರುತ್ತದೆ. ನಿರಂತರ ಸ್ವರೂಪದ ಕೆಲಸವನ್ನು ಗುತ್ತಿಗೆ ನೀಡುವುದು ‘ಗುತ್ತಿಗೆ ಕಾರ್ಮಿಕ (ನಿಯಂತ್ರಣ ಮತ್ತು ನಿಷೇಧ) ಕಾಯ್ದೆಯ ಅನ್ವಯ ಕಾನೂನು ಬಾಹಿರ’ ಕ್ರಮವಾಗಿದೆ.

ಇದನ್ನೂ ಓದಿ: ಬೆಂಗಳೂರು: ಕಾರ್ಮಿಕ ಸಂಘಟನೆ ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನ ಉದ್ಘಾಟನೆ

2022ರ ಜುಲೈ 1 ರಂದು ಬಿಬಿಎಎಂಪಿ ಪೌರಕಾರ್ಮಿಕರ ಸಂಘಟನೆಯು ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕೆಂದು ರಾಜ್ಯ ಮಟ್ಟದ ಅನಿರ್ಧಿಷ್ಠಾವಧಿ ಧರಣಿ ನಡೆಸಿತ್ತು. ಈ ಸಂದರ್ಭದಲಿ ಮುಖ್ಯಮಂತ್ರಿಗಳು ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುವುದಾಗಿ ಮತ್ತು ಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುವ ಪೌರಕಾರ್ಮಿಕರಾದ ಕಸ ಸಾಗಿಸುವ ಸಂಗ್ರಹಿಸುವ ಮತ್ತು ಸಾಗಿಸುವ ವಾಹನಗಳ ಚಾಲಕರು, ಲೋಡರ್‍‌ಗಳು, ಸಹಾಯಕರು ಮತ್ತು ಕ್ಲೀನರ್‍‌ಗಳನ್ನು ಮೊದಲಿಗೆ ಬಿಬಿಎಂಪಿಯಿಂದ ನೇರವೇತನ ಪಾವತಿಯಡಿಯಲ್ಲಿ ತಂದು, ನಂತರ ಖಾಯಂಗೊಳಿಸುವುದಾಗಿ ಲಿಖಿತ ರೂಪದಲ್ಲಿ ಭರವಸೆ ನೀಡಿದ್ದರು. ಈ ಸಂಬಂಧ ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುವುದಕ್ಕಾಗಿ ಸರ್ಕಾರದ ಅಧಿಕಾರಿಗಳು ಸೇರಿದಂತೆ ಕಾರ್ಮಿಕ ಸಂಘಟನೆಗಳ ಮುಖಂಡರುಗಳನ್ನೊಳಗೊಂಡ ಸಮಿತಿಯನ್ನು ಸಹ ಸರ್ಕಾರ ರಚಿಸಿತ್ತು.

ಈ ಸಮಿತಿಯು 2022 ಅಕ್ಟೋಬರ್ 28ರಂದು ನಡೆಸಿದ ಸಭೆಯಲ್ಲಿ ”ಘನತ್ಯಾಜ್ಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ನೆಪಮಾತ್ರ ಗುತ್ತಿಗೆ ಪೌರಕಾರ್ಮಿಕರಾದ ವಾಹನ ಚಾಲಕರು, ಲೋಡರ್‍‌ಗಳನ್ನು ಮತ್ತು ಸಹಾಯಕರನ್ನು ಮೊದಲಿಗೆ ನೇರವೇತನ ಪಾವತಿಯಡಿ ತಂದು ತಕ್ಷಣವೇ ಖಾಯಂಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ತೀರ್ಮಾನಿಸಿರುತ್ತದೆ” ಎಂದು ಚರ್ಚಿಸಲಾಗಿತ್ತು.

ಆದರೆ, ಬಿಬಿಎಂಪಿಯ ಅಡಿಯಲ್ಲಿ ಬರುವ ‘ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್‍ಮೆಂಟ್ ಲೀ.’ರವರು 2023 ಜನವರಿ 21ರಂದು ಘನ ತ್ಯಾಜ್ಯ ನಿರ್ವಹಣೆ ಮಾಡಲು ಟೆಂಡರ್ ಕರೆಯಿತು. ಈ ರೀತಿ ವಾಹನ ಚಾಲಕರು, ಲೋಡರ್‍‌ಗಳು ಮತ್ತು ಸಹಾಯಕರನ್ನು ಗುತ್ತಿಗೆದಾರರ ಮೂಲಕ ದುಡಿಸಿಕೊಳ್ಳುವುದು ಆಧುನಿಕ ಜೀತ ಮತ್ತು ಗುಲಾಮಿ ಪದ್ಧತಿಯ ಪ್ರತೀಕವಾಗಿದೆ. ಬಿಬಿಎಂಪಿಯ ಈ ಕ್ರಮವನ್ನು ಎಐಸಿಸಿಟಿಯು ತೀವ್ರವಾಗಿ ಖಂಡಿಸುತ್ತದೆ ಮತ್ತು ತಕ್ಷಣದಲ್ಲೇ ಟೆಂಡರ್ ಅಧಿಸೂಚನೆಯನ್ನು ವಾಪಸ್ಸು ಪಡೆದು ಸರ್ಕಾರದ ಲಿಖಿತ ಭರವಸೆಯಂತೆ ಈ ಕಾರ್ಮಿಕರನ್ನು ಕೂಡಲೇ ನೇರವೇತನ ಪಾವತಿಯಡಿ ತಂದು, ಖಾಯಂಗೊಳಿಸಬೇಕೆಂದು ಪತಿಕಾಗೋಷ್ಠಿಯಲ್ಲಿ ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯು ಒತ್ತಾಯಿಸಿದೆ.

ಪೌರಕಾರ್ಮಿಕ ಸಂಘಟನೆಯು ಪ್ರಮುಖ ಹಕ್ಕೋತ್ತಾಯಗಳನ್ನು ಬಿಬಿಎಂಪಿಗೆ ಸಲ್ಲಿಸಿದೆ.

1. ತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ವಾಹನ ಚಾಲಕರು, ಸಹಾಯಕರು, ಲೋಡರ್‍‌ಗಳು ಮತ್ತು ಕ್ಲೀನರ್‍‌ಗಳನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕು.
2. ಬಿಬಿಎಂಪಿ ಅಡಿಯಲ್ಲಿರುವ ‘ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್‍ಮೆಂಟ್ ಲೀ.’ ರವರು ಕರೆದಿರುವ ಟೆಂಡರ್ ಪ್ರಕ್ರಿಯೆಯನ್ನು ತಕ್ಷಣದಲ್ಲೇ ರದ್ಧುಗೊಳಿಸಬೇಕು.
3. ಖಾಯಂಗೊಳ್ಳುವವರೆಗೆ ಕನಿಷ್ಠ ವೇತನ ಪಾವತಿ ಮಾಡಬೇಕು.
4. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಮತ್ತು ಹೆಚ್ವುವರಿ ಅವಧಿಗೆ ಅಧಿಕವೇತನ ನೀಡಬೇಕು.
5. ಸಕಾಲಕ್ಕೆ ವೇತನ ಪಾವತಿ ಮಾಡಬೇಕು ಮತ್ತು ವೇತನ ಚೀಟಿ ನೀಡಬೇಕು.
6. 3 ರಿಂದ 8 ತಿಂಗಳ ವರಗೆ ಬಾಕಿ ಇರುವ ವೇತನವನ್ನು ತಕ್ಷಣದಲ್ಲೇ ಪಾವತಿಸಬೇಕು.
7. ವಿಶ್ರಾಂತಿ ಕೊಠಡಿ, ಶೌಚಾಲಯ, ಕುಡಿಯುವ ನೀರು ಮತ್ತು ಸಮಪರ್ಕವಾದ ಪೌಷ್ಠಿಕ ಆಹಾರವನ್ನು ಒದಗಿಸಬೇಕು.
8. ಇ.ಎಸ್.ಐ ಮತ್ತು ಪಿ.ಎಫ್ ಸೌಲಭ್ಯವನ್ನು ಕಲ್ಪಿಸಬೇಕು ಮತ್ತು ಸುರಕ್ಷತಾ ಪರಿಕರಗಳನ್ನು ನೀಡಬೇಕು.
9. ಕಸ ಸಂಗ್ರಹಿಸಲು ಮತ್ತು ಸಾಗಿಸಲು ಬಳಸುವ ಆಟೋಗಳ ದುರಸ್ಥಿ ವೆಚ್ಚ ಬಿಬಿಎಂಪಿಯೇ ಭರಿಸಬೇಕು.
10. ಸರ್ಕಾರಿ ಘೋಷಿತ ಎಲ್ಲಾ ರಾಷ್ಟ್ರೀಯ ಮತ್ತು ಹಬ್ಬ ದಿನಗಳು ಒಳಗೊಂಡಂತೆ ರಜೆ ನೀಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...