Homeಕರ್ನಾಟಕಕಸ ಸಂಗ್ರಹಣೆ, ವಿಲೇವಾರಿ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು: ಬಿಬಿಎಂಪಿಗೆ ಕಾರ್ಮಿಕರ ಸಂಘಟನೆಯಿಂದ ಒತ್ತಾಯ

ಕಸ ಸಂಗ್ರಹಣೆ, ವಿಲೇವಾರಿ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು: ಬಿಬಿಎಂಪಿಗೆ ಕಾರ್ಮಿಕರ ಸಂಘಟನೆಯಿಂದ ಒತ್ತಾಯ

- Advertisement -
- Advertisement -

ಬಿಬಿಎಂಪಿ ಘನತ್ಯಾಜ್ಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ವಾಹನ ಚಾಲಕರು (ಅಟೋ, ಟ್ರಾಕ್ಟರ್, ಕಾಂಪ್ಟ್ರಾಕ್ಟರ್ ಮತ್ತು ಲಾರಿ) ಸಹಾಯಕರು, ಲೋಡರ್‍‌ಗಳು ಮತ್ತು ಕ್ಲೀನರ್‍‌ಗಳನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕೆಂದು ಒತ್ತಾಯಿಸಿ ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯು ಬುಧವಾರ ಪತ್ರಿಕಾ ಘೋಷ್ಠಿ ನಡೆಸಿತು.

ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯ ಪತ್ರಿಕಾ ಪ್ರಕಟನೆಯಲ್ಲಿ, ಬಿಬಿಎಂಪಿ ಅಧಿಕಾರಿಗಳಿಂದ ಮತ್ತು ನೆಪಮಾತ್ರ ಗುತ್ತಿಗೆದಾರರಿಂದ ಕಾರ್ಮಿಕರ ಮೇಲೆ ಆಗುತ್ತಿರುವ ಕಿರುಕುಳ, ಅನ್ಯಾಯ ನಿಲ್ಲಬೇಕು ಮತ್ತು ಈ ಕಾರ್ಮಿಕರನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕೆಂದು ಬಿಬಿಎಂಪಿಯನ್ನು ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.

ಘನತ್ಯಾಜ್ಯ ನಿರ್ವಹಣೆಯ ಕೆಲಸವನ್ನು ಬಿಬಿಎಂಪಿಯು ಕಾನೂನು ಪ್ರಕಾರ ಕಡ್ಡಾಯವಾಗಿ ಮಾಡಲೇ ಬೇಕಾಗಿರುತ್ತದೆ ಮತ್ತು ಇದು ನಿರಂತರ ಸ್ವರೂಪದ ಕೆಲಸವಾಗಿರುತ್ತದೆ. ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಸಗುಡಿಸುವ ಪೌರಕಾರ್ಮಿರಿಗೆ ನೇರವೇತನವನ್ನು ಪಾವತಿ ಮಾಡುತ್ತಿರುತ್ತಿದೆ. ಆದರೆ ಮನೆ ಮನೆಗಳಲ್ಲಿ ಆಟೋ ಮತ್ತು ಇತರೆ ವಾಹನಗಳ ಮೂಲಕ ಕಸ ಸಂಗ್ರಹಿಸುವ ಮತ್ತು ಕಸ ವಿಲೇವಾರಿ ಮಾಡುವ ಪೌರಕಾರ್ಮಿಕರನ್ನು ನಾಮಮಾತ್ರ ಗುತ್ತಿಗೆ ವ್ಯವಸ್ಥೆಯಡಿಯಲ್ಲಿ ನೇಮಕ ಮಾಡಿಕೊಂಡಿರುತ್ತದೆ. ನಿರಂತರ ಸ್ವರೂಪದ ಕೆಲಸವನ್ನು ಗುತ್ತಿಗೆ ನೀಡುವುದು ‘ಗುತ್ತಿಗೆ ಕಾರ್ಮಿಕ (ನಿಯಂತ್ರಣ ಮತ್ತು ನಿಷೇಧ) ಕಾಯ್ದೆಯ ಅನ್ವಯ ಕಾನೂನು ಬಾಹಿರ’ ಕ್ರಮವಾಗಿದೆ.

ಇದನ್ನೂ ಓದಿ: ಬೆಂಗಳೂರು: ಕಾರ್ಮಿಕ ಸಂಘಟನೆ ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನ ಉದ್ಘಾಟನೆ

2022ರ ಜುಲೈ 1 ರಂದು ಬಿಬಿಎಎಂಪಿ ಪೌರಕಾರ್ಮಿಕರ ಸಂಘಟನೆಯು ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕೆಂದು ರಾಜ್ಯ ಮಟ್ಟದ ಅನಿರ್ಧಿಷ್ಠಾವಧಿ ಧರಣಿ ನಡೆಸಿತ್ತು. ಈ ಸಂದರ್ಭದಲಿ ಮುಖ್ಯಮಂತ್ರಿಗಳು ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುವುದಾಗಿ ಮತ್ತು ಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುವ ಪೌರಕಾರ್ಮಿಕರಾದ ಕಸ ಸಾಗಿಸುವ ಸಂಗ್ರಹಿಸುವ ಮತ್ತು ಸಾಗಿಸುವ ವಾಹನಗಳ ಚಾಲಕರು, ಲೋಡರ್‍‌ಗಳು, ಸಹಾಯಕರು ಮತ್ತು ಕ್ಲೀನರ್‍‌ಗಳನ್ನು ಮೊದಲಿಗೆ ಬಿಬಿಎಂಪಿಯಿಂದ ನೇರವೇತನ ಪಾವತಿಯಡಿಯಲ್ಲಿ ತಂದು, ನಂತರ ಖಾಯಂಗೊಳಿಸುವುದಾಗಿ ಲಿಖಿತ ರೂಪದಲ್ಲಿ ಭರವಸೆ ನೀಡಿದ್ದರು. ಈ ಸಂಬಂಧ ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುವುದಕ್ಕಾಗಿ ಸರ್ಕಾರದ ಅಧಿಕಾರಿಗಳು ಸೇರಿದಂತೆ ಕಾರ್ಮಿಕ ಸಂಘಟನೆಗಳ ಮುಖಂಡರುಗಳನ್ನೊಳಗೊಂಡ ಸಮಿತಿಯನ್ನು ಸಹ ಸರ್ಕಾರ ರಚಿಸಿತ್ತು.

ಈ ಸಮಿತಿಯು 2022 ಅಕ್ಟೋಬರ್ 28ರಂದು ನಡೆಸಿದ ಸಭೆಯಲ್ಲಿ ”ಘನತ್ಯಾಜ್ಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ನೆಪಮಾತ್ರ ಗುತ್ತಿಗೆ ಪೌರಕಾರ್ಮಿಕರಾದ ವಾಹನ ಚಾಲಕರು, ಲೋಡರ್‍‌ಗಳನ್ನು ಮತ್ತು ಸಹಾಯಕರನ್ನು ಮೊದಲಿಗೆ ನೇರವೇತನ ಪಾವತಿಯಡಿ ತಂದು ತಕ್ಷಣವೇ ಖಾಯಂಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ತೀರ್ಮಾನಿಸಿರುತ್ತದೆ” ಎಂದು ಚರ್ಚಿಸಲಾಗಿತ್ತು.

ಆದರೆ, ಬಿಬಿಎಂಪಿಯ ಅಡಿಯಲ್ಲಿ ಬರುವ ‘ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್‍ಮೆಂಟ್ ಲೀ.’ರವರು 2023 ಜನವರಿ 21ರಂದು ಘನ ತ್ಯಾಜ್ಯ ನಿರ್ವಹಣೆ ಮಾಡಲು ಟೆಂಡರ್ ಕರೆಯಿತು. ಈ ರೀತಿ ವಾಹನ ಚಾಲಕರು, ಲೋಡರ್‍‌ಗಳು ಮತ್ತು ಸಹಾಯಕರನ್ನು ಗುತ್ತಿಗೆದಾರರ ಮೂಲಕ ದುಡಿಸಿಕೊಳ್ಳುವುದು ಆಧುನಿಕ ಜೀತ ಮತ್ತು ಗುಲಾಮಿ ಪದ್ಧತಿಯ ಪ್ರತೀಕವಾಗಿದೆ. ಬಿಬಿಎಂಪಿಯ ಈ ಕ್ರಮವನ್ನು ಎಐಸಿಸಿಟಿಯು ತೀವ್ರವಾಗಿ ಖಂಡಿಸುತ್ತದೆ ಮತ್ತು ತಕ್ಷಣದಲ್ಲೇ ಟೆಂಡರ್ ಅಧಿಸೂಚನೆಯನ್ನು ವಾಪಸ್ಸು ಪಡೆದು ಸರ್ಕಾರದ ಲಿಖಿತ ಭರವಸೆಯಂತೆ ಈ ಕಾರ್ಮಿಕರನ್ನು ಕೂಡಲೇ ನೇರವೇತನ ಪಾವತಿಯಡಿ ತಂದು, ಖಾಯಂಗೊಳಿಸಬೇಕೆಂದು ಪತಿಕಾಗೋಷ್ಠಿಯಲ್ಲಿ ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯು ಒತ್ತಾಯಿಸಿದೆ.

ಪೌರಕಾರ್ಮಿಕ ಸಂಘಟನೆಯು ಪ್ರಮುಖ ಹಕ್ಕೋತ್ತಾಯಗಳನ್ನು ಬಿಬಿಎಂಪಿಗೆ ಸಲ್ಲಿಸಿದೆ.

1. ತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ವಾಹನ ಚಾಲಕರು, ಸಹಾಯಕರು, ಲೋಡರ್‍‌ಗಳು ಮತ್ತು ಕ್ಲೀನರ್‍‌ಗಳನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕು.
2. ಬಿಬಿಎಂಪಿ ಅಡಿಯಲ್ಲಿರುವ ‘ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್‍ಮೆಂಟ್ ಲೀ.’ ರವರು ಕರೆದಿರುವ ಟೆಂಡರ್ ಪ್ರಕ್ರಿಯೆಯನ್ನು ತಕ್ಷಣದಲ್ಲೇ ರದ್ಧುಗೊಳಿಸಬೇಕು.
3. ಖಾಯಂಗೊಳ್ಳುವವರೆಗೆ ಕನಿಷ್ಠ ವೇತನ ಪಾವತಿ ಮಾಡಬೇಕು.
4. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಮತ್ತು ಹೆಚ್ವುವರಿ ಅವಧಿಗೆ ಅಧಿಕವೇತನ ನೀಡಬೇಕು.
5. ಸಕಾಲಕ್ಕೆ ವೇತನ ಪಾವತಿ ಮಾಡಬೇಕು ಮತ್ತು ವೇತನ ಚೀಟಿ ನೀಡಬೇಕು.
6. 3 ರಿಂದ 8 ತಿಂಗಳ ವರಗೆ ಬಾಕಿ ಇರುವ ವೇತನವನ್ನು ತಕ್ಷಣದಲ್ಲೇ ಪಾವತಿಸಬೇಕು.
7. ವಿಶ್ರಾಂತಿ ಕೊಠಡಿ, ಶೌಚಾಲಯ, ಕುಡಿಯುವ ನೀರು ಮತ್ತು ಸಮಪರ್ಕವಾದ ಪೌಷ್ಠಿಕ ಆಹಾರವನ್ನು ಒದಗಿಸಬೇಕು.
8. ಇ.ಎಸ್.ಐ ಮತ್ತು ಪಿ.ಎಫ್ ಸೌಲಭ್ಯವನ್ನು ಕಲ್ಪಿಸಬೇಕು ಮತ್ತು ಸುರಕ್ಷತಾ ಪರಿಕರಗಳನ್ನು ನೀಡಬೇಕು.
9. ಕಸ ಸಂಗ್ರಹಿಸಲು ಮತ್ತು ಸಾಗಿಸಲು ಬಳಸುವ ಆಟೋಗಳ ದುರಸ್ಥಿ ವೆಚ್ಚ ಬಿಬಿಎಂಪಿಯೇ ಭರಿಸಬೇಕು.
10. ಸರ್ಕಾರಿ ಘೋಷಿತ ಎಲ್ಲಾ ರಾಷ್ಟ್ರೀಯ ಮತ್ತು ಹಬ್ಬ ದಿನಗಳು ಒಳಗೊಂಡಂತೆ ರಜೆ ನೀಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...