Homeಮುಖಪುಟ‘ಗಾರ್ಗಿ’ ವಿಮರ್ಶೆ: ಪುರುಷಾಧಿಪತ್ಯದ ತಣ್ಣನೆಯ ಕ್ರೌರ್ಯ ಅನಾವರಣ

‘ಗಾರ್ಗಿ’ ವಿಮರ್ಶೆ: ಪುರುಷಾಧಿಪತ್ಯದ ತಣ್ಣನೆಯ ಕ್ರೌರ್ಯ ಅನಾವರಣ

- Advertisement -
- Advertisement -

ಲೇಡಿ ಸೂಪರ್‌ ಸ್ಟಾರ್‌ ಎಂದೇ ಖ್ಯಾತರಾದ, ಬಹುಭಾಷಾ ನಟಿ ಸಾಯಿ ಪಲ್ಲವಿ ಇತ್ತೀಚಿನ ದಿನಗಳಲ್ಲಿ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದು, ‘ಗಾರ್ಗಿ’ ಸಿನಿಮಾ ಅದರ ಮುಂದುವರಿದ ಭಾಗವಾಗಿ ದಾಖಲಾಗಿದೆ.

ತೆಲುಗು, ತಮಿಳು ಹಾಗೂ ಕನ್ನಡ ಭಾಷೆಯಲ್ಲಿ ತೆರೆಕಂಡಿರುವ ‘ಗಾರ್ಗಿ’, ಹೆಣ್ಣಿನ ಮೇಲಾಗುತ್ತಿರುವ ಅನಾದಿಕಾಲದ ಕಿರುಕುಳದ ಕುರಿತು ಮಾತನಾಡುತ್ತದೆ. ‘ಎಲ್ಲಿ ಮಹಿಳೆಯರನ್ನು ಪೂಜಿಸುತ್ತಾರೋ, ಅಲ್ಲಿ ದೇವತೆಗಳು ನಲೆಸಿರುತ್ತಾರೆ’ ಎಂಬುದೆಲ್ಲ ಬಾಯಿ ಮಾತಿನ ಗೌರವ. ಆದರೆ ಹೆಣ್ಣನ್ನು ಭೋಗದ ವಸ್ತು ಎಂದು ನೋಡುವ ಪುರುಷಪ್ರಧಾನ ಮನಸ್ಥಿತಿಯೇ ವಾಸ್ತವ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಬೇಟಿ ಪಡಾವೋ, ಬೇಟಿ ಬಜಾವೋ’ ಎಂದು ಸರ್ಕಾರವೂ ಹೇಳುತ್ತದೆ. ಹೆಣ್ಣಿನ ರಕ್ಷಣೆಯ ಮೇಲೆ ಮಾಡುವ ಉದ್ದುದ್ದದ ಭಾಷಣಗಳಿಗೆ ಕೊನೆಯೂ ಇಲ್ಲ. ಆದರೆ ಸಮಾಜ ತನ್ನ ಆಂತರ್ಯದಲ್ಲಿ ಇಟ್ಟುಕೊಂಡಿರುವ ಪುರುಷಾಧಿಪತ್ಯದ ತಣ್ಣನೆಯ ಕ್ರೌರ್ಯ, ಯಾವಾಗ, ಯಾವ ರೀತಿಯಲ್ಲಿ ಅನಾವರಣವಾಗುತ್ತದೆ ಎಂದು ಹೇಳಲಾಗದು. ನಿರ್ದೇಶಕ ಗೌತಮ್‌ ರಾಮಚಂದ್ರನ್‌ ಈ ಕಹಿ ಸತ್ಯವನ್ನು ಇಲ್ಲಿ ಚರ್ಚಿಸಿದ್ದಾರೆ.

“ಹೆಣ್ಣಿನ ಜಗತ್ತಿನಲ್ಲೇ ಹೆಣ್ಣೇ ಹೆಣ್ಣಿಗೆ ಅಂತಿಮ ಆಸರೆ. ವಿಕೃತ ಜಗತ್ತನ್ನು ಎದುರಿಸಬೇಕಾದರೆ ಹೆಣ್ಣೊಬ್ಬಳು ಇನ್ನೊಬ್ಬ ಹೆಣ್ಣಿನ ಕೈ ಹಿಡಿದು ಸಂಘಟಿತವಾಗಿ ನಡೆಯಬೇಕು. ತನ್ನ ಮೇಲಾಗುವ ದೌರ್ಜನ್ಯವನ್ನು ಯಾವುದೇ ಮರ್ಜಿಗೆ ಒಳಗಾಗದೆ ಮಣಿಸಬೇಕು” ಎಂಬ ಸಂದೇಶವನ್ನು ‘ಗಾರ್ಗಿ’ ಸಿನಿಮಾ ನೀಡುತ್ತದೆ.

ಬಾಲಕಿಯೊಬ್ಬಳ ಮೇಲೆ ನಡೆಯುವ ಗ್ಯಾಗ್ ರೇಪ್‌ವೊಂದರ ಸುತ್ತಲಿನ ಕಥಾ ಹಂದರವನ್ನು ಒಳಗೊಂಡಿರುವ ‘ಗಾರ್ಗಿ’- ಕೋರ್ಟ್ ರೂಮ್‌ ಡ್ರಾಮಾ ಕೂಡ ಹೌದು. ‘ಪೊಲೀಸರು ಬಂಧಿಸಿರುವವರೆಲ್ಲರೂ ತಪ್ಪಿತಸ್ಥರಾ?’ ಎಂಬ ಪ್ರಶ್ನೆಯ ಮೇಲೆ ಸಾಗುವ ಸಿನಿಮಾ ಅಂತಿಮವಾಗಿ ನೀಡುವ ಸಂದೇಶವೂ ಮೌಲಿಕವಾಗಿದೆ. ಹಿತಮಿತವಾದ ಸಿನಿಮ್ಯಾಟಿಕ್‌ ನಿರೂಪಣೆಯಲ್ಲಿ ಸಾಗುವ ಕೆಳ ಮಧ್ಯಮ ವರ್ಗವೊಂದರ ಕಥೆಯನ್ನೊಳಗೊಂಡ ‘ಗಾರ್ಗಿ’ ವಾಸ್ತವಗಳಿಗೆ ಹತ್ತಿರವಾಗಿ ಚಿತ್ರಿತವಾಗಿದೆ.

‘ಗಾರ್ಗಿ’ ಎಂಬ ಹೆಸರಿಗೆ ವಿಶೇಷ ಅರ್ಥವೂ ಇದೆ. ಆಕೆ, ವೇದ ಕಾಲದಲ್ಲಿ ದಾಖಲಾಗಿರುವ ಮಹಿಳಾ ವಿದ್ವಾಂಸೆಯೂ ಹೌದು. ಆರಂಭಿಕ ಮಹಿಳಾವಾದಿಗಳ ಸಾಲಿನಲ್ಲೂ ಆಕೆಯನ್ನು ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ‘ಗಾರ್ಗಿ’ ಎಂಬ ಹೆಸರಿಗೆ ವಿಶೇಷವಾದ ಅರ್ಥವಂತಿಕೆ ಪ್ರಾಪ್ತವಾಗಿದೆ.

“ಹೆಣ್ಣೆಂದರೆ ಅಬಲೆ, ಆಕೆಯ ಹಣೆಯ ಬರವೇ ಇಷ್ಟು, ಅವಳಿಂದ ಏನೂ ಆಗದು” ಎಂಬ ಸಿದ್ಧಮಾದರಿ ಚೌಕಟ್ಟುಗಳನ್ನು ಶಿಕ್ಷಕಿ ಗಾರ್ಗಿ ಪ್ರಶ್ನಿಸುತ್ತಾಳೆ. “ನೀನು ಹಣೆಬರ, ಕಾಲ, ವಿಧಿ ಎಲ್ಲವನ್ನೂ ನಂಬು. ನನ್ನನ್ನು ಮಾತ್ರ ನಂಬಬೇಡ. ಯಾಕಂದ್ರೆ ನಾನು ಗಂಡು ಹುಡುಗ ಅಲ್ಲ, ಹೆಣ್ಣು ತಾನೇ?” ಎಂದು ತನ್ನ ತಾಯಿಗೆ ಗಾರ್ಗಿ ಬೇಸರದಿಂದ ಕೇಳುತ್ತಾಳೆ. ಸತ್ಯಕ್ಕಾಗಿ ಹೋರಾಡುತ್ತಾಳೆ. ಸತ್ಯ ತಿಳಿದ ಮೇಲೆ ದಿಟ್ಟ ನಿಲುವನ್ನು ತಾಳುತ್ತಾಳೆ.

ಇಲ್ಲಿ ಟ್ರಾನ್ಸ್‌ಜೆಂಡರ್‌ ಮಹಿಳೆಯೊಬ್ಬರು ನ್ಯಾಯಾಧೀಶೆಯಾಗಿದ್ದಾರೆ. ಸಂತ್ರಸ್ತೆಯ ಪರವಾಗಿ ವಾದ ಮಂಡಿಸುತ್ತಿರುವ ವಕೀಲನ ಒರಟು ಮಾತುಗಳಿಗೆ ನ್ಯಾಯಾಧೀಶೆ ತೀಕ್ಷ್ಣವಾಗಿ ಉತ್ತರಿಸುತ್ತಾರೆ. ಅಂತಿಮವಾಗಿ ಸತ್ಯದ ಅನಾವರಣವಷ್ಟೇ ಮುಖ್ಯವಾಗಬೇಕು ಎಂಬುದನ್ನು ಟ್ರಾನ್ಸ್‌ಜೆಂಡರ್‌ ನ್ಯಾಯಾಧೀಶೆ ಮನವರಿಕೆ ಮಾಡಿಕೊಡುತ್ತಾರೆ.

ಒಂದು ಸಣ್ಣ ಎಳೆಯ ಕಥೆಯಾದರೂ ತೀರಾ ಮೈನವಿರೇಳಿಸುವ ರೋಚಕತೆಯನ್ನೇನೂ ಗಾರ್ಗಿ ಒಳಗೊಂಡಿಲ್ಲ. ಅಗತ್ಯಕ್ಕೂ ಮೀರಿ ರೋಚಕತೆಯನ್ನು ಸೇರಿಸಲು ನಿರ್ದೇಶಕರು ಪ್ರಯತ್ನಿಸಿಲ್ಲ. ಬಂಧನಕ್ಕೊಳಗಾದ ತಂದೆಯನ್ನು ಹೊರಗೆ ತರಲು ಒಬ್ಬೊಂಟಿಯಾಗಿ ಹೋರಾಡುವ, ಸತ್ಯದ ಹುಡುಕಾಟಕ್ಕಾಗಿ ಪರಿತಪಿಸುತ್ತಿರುವ ಹೆಣ್ಣು ಮಗಳೊಬ್ಬಳ ತೊಳಲಾಟಗಳನ್ನು ಗಾರ್ಗಿ ಕಟ್ಟಿಕೊಡುತ್ತದೆ. ಎಲ್ಲವನ್ನೂ ಸಮರ್ಥವಾಗಿ ಎದುರಿಸುವ ಆಕೆಯ ಮನೋಬಲ ಚಿತ್ರಕತೆಯಲ್ಲಿ ನಿರೂಪಣೆಗೊಂಡಿದೆ.

ಸೂಕ್ಷ್ಮ ಸಂಗತಿಯೊಂದರ ಸುತ್ತ ಮಾಧ್ಯಮಗಳು ತೋರುವ ಧಾವಂತವನ್ನು ಇಲ್ಲಿಯೂ ನಿಕಶಕ್ಕೊಡ್ಡಿದ್ದರೂ, ಅಂತಿಮ ಜಿಜ್ಞಾಸೆಯಾಗಿ ಅದು ಉಳಿದಿಲ್ಲ. ಮಾಧ್ಯಮಗಳು ತೋರುವುದೆಲ್ಲ ಸತ್ಯವಲ್ಲದಿದ್ದರೂ ಅವುಗಳು ತೋರಿಸುವ ಕೆಲವು ಸಂಗತಿಗಳು ಸತ್ಯವೂ ಆಗಿರಬಹುದು ಎನಿಸುತ್ತದೆ.

ಇದನ್ನೂ ಓದಿರಿ: ‘ಮಾರಿ ಸೆಲ್ವರಾಜ್‌‌’ ಸಿನಿಮಾಗಳಲ್ಲಿನ ರೂಪಕಗಳ ಸುತ್ತ…

ಸಾಯಿ ಪಲ್ಲವಿ ಮತ್ತೊಮ್ಮೆ ತಮ್ಮ ಅಭಿಮಾನಿಗಳಿಗೆ ಇಷ್ಟವಾಗುವುದು ಖಚಿತ. ಕನ್ನಡ ವರ್ಷನ್‌ನಲ್ಲಿ ಸಾಯಿ ಪಲ್ಲವಿಯವರೇ ಡಬ್‌ ಮಾಡಿರುವುದು ಇಲ್ಲಿನ ಅಭಿಮಾನಿಗಳಿಗೆ ಮುದ ನೀಡುತ್ತದೆ. ಅತ್ಯಾಚಾರಿ ಆರೋಪಿಯಾಗಿ ಅಭಿನಯಿಸಿರುವ ಆರ್‌.ಎಸ್‌.ಶಿವಾಜಿ, ತಣ್ಣನೆಯ ಕ್ರೌರ್ಯವನ್ನು ಪರಿಚಯಿಸುತ್ತಾರೆ. ವಕೀಲನಾಗಿ ಕಾಳಿ ವೆಂಕಟ್‌, ಪತ್ರಕರ್ತೆಯಾಗಿ ಐಶ್ವರ್ಯ ಲಕ್ಷ್ಮಿ, ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ತಂದೆಯ ಪಾತ್ರದಲ್ಲಿ ಸರವಣ್‌ ಅಭಿನಯಿಸಿದ್ದಾರೆ.

ಹಿನ್ನೆಲೆ ಸಂಗೀತ ಮತ್ತಷ್ಟು ತೀವ್ರವಾಗಿಸಬಹುದಿತ್ತು ಎನಿಸುತ್ತದೆ. ಸಿನಿಮಾದಲ್ಲಿ ಬಳಸಿರುವ ಬಿಟ್ ಸಾಂಗ್‌ಗಳು ಅಷ್ಟಾಗಿ ನೆನಪಿನಲ್ಲಿ ಉಳಿಯುವುದಿಲ್ಲ. ‘ಗಾರ್ಗಿ’ಯ ಪ್ರಿಯಕರನ ಪಾತ್ರ- ಹಾಗೆ ಬಂದು ಹೀಗೆ ಹೋದಂತೆ ಭಾಸವಾಗುತ್ತದೆ. ಕಾನೂನು ಸೇವೆಗಳ ಪ್ರಾಧಿಕಾರದಂತಹ ವ್ಯವಸ್ಥೆಯನ್ನು ಅತ್ಯಂತ ಬಾಲಿಷವಾಗಿ ತೋರಿಸಿದ್ದಾರೆನಿಸುತ್ತದೆ. ಇಂತಹ ದೃಶ್ಯಗಳಿಂದಾಗಿ ನ್ಯಾಯಾಂಗದ ನೆರವಿನ ಕುರಿತು ಜನರಲ್ಲಿ ಕೆಟ್ಟ ಅಭಿಪ್ರಾಯವೂ ಮೂಡಿಬಿಡಬಹುದು. ಇಂತಹ ಕೆಲವು ಕೊರತೆ ಬಿಟ್ಟರೆ ‘ಗಾರ್ಗಿ’, ಚರ್ಚೆಗೊಳಪಡಬೇಕಾದ ಸಿನಿಮಾ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...