Homeಮುಖಪುಟ‘ಗಾರ್ಗಿ’ ವಿಮರ್ಶೆ: ಪುರುಷಾಧಿಪತ್ಯದ ತಣ್ಣನೆಯ ಕ್ರೌರ್ಯ ಅನಾವರಣ

‘ಗಾರ್ಗಿ’ ವಿಮರ್ಶೆ: ಪುರುಷಾಧಿಪತ್ಯದ ತಣ್ಣನೆಯ ಕ್ರೌರ್ಯ ಅನಾವರಣ

- Advertisement -
- Advertisement -

ಲೇಡಿ ಸೂಪರ್‌ ಸ್ಟಾರ್‌ ಎಂದೇ ಖ್ಯಾತರಾದ, ಬಹುಭಾಷಾ ನಟಿ ಸಾಯಿ ಪಲ್ಲವಿ ಇತ್ತೀಚಿನ ದಿನಗಳಲ್ಲಿ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದು, ‘ಗಾರ್ಗಿ’ ಸಿನಿಮಾ ಅದರ ಮುಂದುವರಿದ ಭಾಗವಾಗಿ ದಾಖಲಾಗಿದೆ.

ತೆಲುಗು, ತಮಿಳು ಹಾಗೂ ಕನ್ನಡ ಭಾಷೆಯಲ್ಲಿ ತೆರೆಕಂಡಿರುವ ‘ಗಾರ್ಗಿ’, ಹೆಣ್ಣಿನ ಮೇಲಾಗುತ್ತಿರುವ ಅನಾದಿಕಾಲದ ಕಿರುಕುಳದ ಕುರಿತು ಮಾತನಾಡುತ್ತದೆ. ‘ಎಲ್ಲಿ ಮಹಿಳೆಯರನ್ನು ಪೂಜಿಸುತ್ತಾರೋ, ಅಲ್ಲಿ ದೇವತೆಗಳು ನಲೆಸಿರುತ್ತಾರೆ’ ಎಂಬುದೆಲ್ಲ ಬಾಯಿ ಮಾತಿನ ಗೌರವ. ಆದರೆ ಹೆಣ್ಣನ್ನು ಭೋಗದ ವಸ್ತು ಎಂದು ನೋಡುವ ಪುರುಷಪ್ರಧಾನ ಮನಸ್ಥಿತಿಯೇ ವಾಸ್ತವ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಬೇಟಿ ಪಡಾವೋ, ಬೇಟಿ ಬಜಾವೋ’ ಎಂದು ಸರ್ಕಾರವೂ ಹೇಳುತ್ತದೆ. ಹೆಣ್ಣಿನ ರಕ್ಷಣೆಯ ಮೇಲೆ ಮಾಡುವ ಉದ್ದುದ್ದದ ಭಾಷಣಗಳಿಗೆ ಕೊನೆಯೂ ಇಲ್ಲ. ಆದರೆ ಸಮಾಜ ತನ್ನ ಆಂತರ್ಯದಲ್ಲಿ ಇಟ್ಟುಕೊಂಡಿರುವ ಪುರುಷಾಧಿಪತ್ಯದ ತಣ್ಣನೆಯ ಕ್ರೌರ್ಯ, ಯಾವಾಗ, ಯಾವ ರೀತಿಯಲ್ಲಿ ಅನಾವರಣವಾಗುತ್ತದೆ ಎಂದು ಹೇಳಲಾಗದು. ನಿರ್ದೇಶಕ ಗೌತಮ್‌ ರಾಮಚಂದ್ರನ್‌ ಈ ಕಹಿ ಸತ್ಯವನ್ನು ಇಲ್ಲಿ ಚರ್ಚಿಸಿದ್ದಾರೆ.

“ಹೆಣ್ಣಿನ ಜಗತ್ತಿನಲ್ಲೇ ಹೆಣ್ಣೇ ಹೆಣ್ಣಿಗೆ ಅಂತಿಮ ಆಸರೆ. ವಿಕೃತ ಜಗತ್ತನ್ನು ಎದುರಿಸಬೇಕಾದರೆ ಹೆಣ್ಣೊಬ್ಬಳು ಇನ್ನೊಬ್ಬ ಹೆಣ್ಣಿನ ಕೈ ಹಿಡಿದು ಸಂಘಟಿತವಾಗಿ ನಡೆಯಬೇಕು. ತನ್ನ ಮೇಲಾಗುವ ದೌರ್ಜನ್ಯವನ್ನು ಯಾವುದೇ ಮರ್ಜಿಗೆ ಒಳಗಾಗದೆ ಮಣಿಸಬೇಕು” ಎಂಬ ಸಂದೇಶವನ್ನು ‘ಗಾರ್ಗಿ’ ಸಿನಿಮಾ ನೀಡುತ್ತದೆ.

ಬಾಲಕಿಯೊಬ್ಬಳ ಮೇಲೆ ನಡೆಯುವ ಗ್ಯಾಗ್ ರೇಪ್‌ವೊಂದರ ಸುತ್ತಲಿನ ಕಥಾ ಹಂದರವನ್ನು ಒಳಗೊಂಡಿರುವ ‘ಗಾರ್ಗಿ’- ಕೋರ್ಟ್ ರೂಮ್‌ ಡ್ರಾಮಾ ಕೂಡ ಹೌದು. ‘ಪೊಲೀಸರು ಬಂಧಿಸಿರುವವರೆಲ್ಲರೂ ತಪ್ಪಿತಸ್ಥರಾ?’ ಎಂಬ ಪ್ರಶ್ನೆಯ ಮೇಲೆ ಸಾಗುವ ಸಿನಿಮಾ ಅಂತಿಮವಾಗಿ ನೀಡುವ ಸಂದೇಶವೂ ಮೌಲಿಕವಾಗಿದೆ. ಹಿತಮಿತವಾದ ಸಿನಿಮ್ಯಾಟಿಕ್‌ ನಿರೂಪಣೆಯಲ್ಲಿ ಸಾಗುವ ಕೆಳ ಮಧ್ಯಮ ವರ್ಗವೊಂದರ ಕಥೆಯನ್ನೊಳಗೊಂಡ ‘ಗಾರ್ಗಿ’ ವಾಸ್ತವಗಳಿಗೆ ಹತ್ತಿರವಾಗಿ ಚಿತ್ರಿತವಾಗಿದೆ.

‘ಗಾರ್ಗಿ’ ಎಂಬ ಹೆಸರಿಗೆ ವಿಶೇಷ ಅರ್ಥವೂ ಇದೆ. ಆಕೆ, ವೇದ ಕಾಲದಲ್ಲಿ ದಾಖಲಾಗಿರುವ ಮಹಿಳಾ ವಿದ್ವಾಂಸೆಯೂ ಹೌದು. ಆರಂಭಿಕ ಮಹಿಳಾವಾದಿಗಳ ಸಾಲಿನಲ್ಲೂ ಆಕೆಯನ್ನು ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ‘ಗಾರ್ಗಿ’ ಎಂಬ ಹೆಸರಿಗೆ ವಿಶೇಷವಾದ ಅರ್ಥವಂತಿಕೆ ಪ್ರಾಪ್ತವಾಗಿದೆ.

“ಹೆಣ್ಣೆಂದರೆ ಅಬಲೆ, ಆಕೆಯ ಹಣೆಯ ಬರವೇ ಇಷ್ಟು, ಅವಳಿಂದ ಏನೂ ಆಗದು” ಎಂಬ ಸಿದ್ಧಮಾದರಿ ಚೌಕಟ್ಟುಗಳನ್ನು ಶಿಕ್ಷಕಿ ಗಾರ್ಗಿ ಪ್ರಶ್ನಿಸುತ್ತಾಳೆ. “ನೀನು ಹಣೆಬರ, ಕಾಲ, ವಿಧಿ ಎಲ್ಲವನ್ನೂ ನಂಬು. ನನ್ನನ್ನು ಮಾತ್ರ ನಂಬಬೇಡ. ಯಾಕಂದ್ರೆ ನಾನು ಗಂಡು ಹುಡುಗ ಅಲ್ಲ, ಹೆಣ್ಣು ತಾನೇ?” ಎಂದು ತನ್ನ ತಾಯಿಗೆ ಗಾರ್ಗಿ ಬೇಸರದಿಂದ ಕೇಳುತ್ತಾಳೆ. ಸತ್ಯಕ್ಕಾಗಿ ಹೋರಾಡುತ್ತಾಳೆ. ಸತ್ಯ ತಿಳಿದ ಮೇಲೆ ದಿಟ್ಟ ನಿಲುವನ್ನು ತಾಳುತ್ತಾಳೆ.

ಇಲ್ಲಿ ಟ್ರಾನ್ಸ್‌ಜೆಂಡರ್‌ ಮಹಿಳೆಯೊಬ್ಬರು ನ್ಯಾಯಾಧೀಶೆಯಾಗಿದ್ದಾರೆ. ಸಂತ್ರಸ್ತೆಯ ಪರವಾಗಿ ವಾದ ಮಂಡಿಸುತ್ತಿರುವ ವಕೀಲನ ಒರಟು ಮಾತುಗಳಿಗೆ ನ್ಯಾಯಾಧೀಶೆ ತೀಕ್ಷ್ಣವಾಗಿ ಉತ್ತರಿಸುತ್ತಾರೆ. ಅಂತಿಮವಾಗಿ ಸತ್ಯದ ಅನಾವರಣವಷ್ಟೇ ಮುಖ್ಯವಾಗಬೇಕು ಎಂಬುದನ್ನು ಟ್ರಾನ್ಸ್‌ಜೆಂಡರ್‌ ನ್ಯಾಯಾಧೀಶೆ ಮನವರಿಕೆ ಮಾಡಿಕೊಡುತ್ತಾರೆ.

ಒಂದು ಸಣ್ಣ ಎಳೆಯ ಕಥೆಯಾದರೂ ತೀರಾ ಮೈನವಿರೇಳಿಸುವ ರೋಚಕತೆಯನ್ನೇನೂ ಗಾರ್ಗಿ ಒಳಗೊಂಡಿಲ್ಲ. ಅಗತ್ಯಕ್ಕೂ ಮೀರಿ ರೋಚಕತೆಯನ್ನು ಸೇರಿಸಲು ನಿರ್ದೇಶಕರು ಪ್ರಯತ್ನಿಸಿಲ್ಲ. ಬಂಧನಕ್ಕೊಳಗಾದ ತಂದೆಯನ್ನು ಹೊರಗೆ ತರಲು ಒಬ್ಬೊಂಟಿಯಾಗಿ ಹೋರಾಡುವ, ಸತ್ಯದ ಹುಡುಕಾಟಕ್ಕಾಗಿ ಪರಿತಪಿಸುತ್ತಿರುವ ಹೆಣ್ಣು ಮಗಳೊಬ್ಬಳ ತೊಳಲಾಟಗಳನ್ನು ಗಾರ್ಗಿ ಕಟ್ಟಿಕೊಡುತ್ತದೆ. ಎಲ್ಲವನ್ನೂ ಸಮರ್ಥವಾಗಿ ಎದುರಿಸುವ ಆಕೆಯ ಮನೋಬಲ ಚಿತ್ರಕತೆಯಲ್ಲಿ ನಿರೂಪಣೆಗೊಂಡಿದೆ.

ಸೂಕ್ಷ್ಮ ಸಂಗತಿಯೊಂದರ ಸುತ್ತ ಮಾಧ್ಯಮಗಳು ತೋರುವ ಧಾವಂತವನ್ನು ಇಲ್ಲಿಯೂ ನಿಕಶಕ್ಕೊಡ್ಡಿದ್ದರೂ, ಅಂತಿಮ ಜಿಜ್ಞಾಸೆಯಾಗಿ ಅದು ಉಳಿದಿಲ್ಲ. ಮಾಧ್ಯಮಗಳು ತೋರುವುದೆಲ್ಲ ಸತ್ಯವಲ್ಲದಿದ್ದರೂ ಅವುಗಳು ತೋರಿಸುವ ಕೆಲವು ಸಂಗತಿಗಳು ಸತ್ಯವೂ ಆಗಿರಬಹುದು ಎನಿಸುತ್ತದೆ.

ಇದನ್ನೂ ಓದಿರಿ: ‘ಮಾರಿ ಸೆಲ್ವರಾಜ್‌‌’ ಸಿನಿಮಾಗಳಲ್ಲಿನ ರೂಪಕಗಳ ಸುತ್ತ…

ಸಾಯಿ ಪಲ್ಲವಿ ಮತ್ತೊಮ್ಮೆ ತಮ್ಮ ಅಭಿಮಾನಿಗಳಿಗೆ ಇಷ್ಟವಾಗುವುದು ಖಚಿತ. ಕನ್ನಡ ವರ್ಷನ್‌ನಲ್ಲಿ ಸಾಯಿ ಪಲ್ಲವಿಯವರೇ ಡಬ್‌ ಮಾಡಿರುವುದು ಇಲ್ಲಿನ ಅಭಿಮಾನಿಗಳಿಗೆ ಮುದ ನೀಡುತ್ತದೆ. ಅತ್ಯಾಚಾರಿ ಆರೋಪಿಯಾಗಿ ಅಭಿನಯಿಸಿರುವ ಆರ್‌.ಎಸ್‌.ಶಿವಾಜಿ, ತಣ್ಣನೆಯ ಕ್ರೌರ್ಯವನ್ನು ಪರಿಚಯಿಸುತ್ತಾರೆ. ವಕೀಲನಾಗಿ ಕಾಳಿ ವೆಂಕಟ್‌, ಪತ್ರಕರ್ತೆಯಾಗಿ ಐಶ್ವರ್ಯ ಲಕ್ಷ್ಮಿ, ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ತಂದೆಯ ಪಾತ್ರದಲ್ಲಿ ಸರವಣ್‌ ಅಭಿನಯಿಸಿದ್ದಾರೆ.

ಹಿನ್ನೆಲೆ ಸಂಗೀತ ಮತ್ತಷ್ಟು ತೀವ್ರವಾಗಿಸಬಹುದಿತ್ತು ಎನಿಸುತ್ತದೆ. ಸಿನಿಮಾದಲ್ಲಿ ಬಳಸಿರುವ ಬಿಟ್ ಸಾಂಗ್‌ಗಳು ಅಷ್ಟಾಗಿ ನೆನಪಿನಲ್ಲಿ ಉಳಿಯುವುದಿಲ್ಲ. ‘ಗಾರ್ಗಿ’ಯ ಪ್ರಿಯಕರನ ಪಾತ್ರ- ಹಾಗೆ ಬಂದು ಹೀಗೆ ಹೋದಂತೆ ಭಾಸವಾಗುತ್ತದೆ. ಕಾನೂನು ಸೇವೆಗಳ ಪ್ರಾಧಿಕಾರದಂತಹ ವ್ಯವಸ್ಥೆಯನ್ನು ಅತ್ಯಂತ ಬಾಲಿಷವಾಗಿ ತೋರಿಸಿದ್ದಾರೆನಿಸುತ್ತದೆ. ಇಂತಹ ದೃಶ್ಯಗಳಿಂದಾಗಿ ನ್ಯಾಯಾಂಗದ ನೆರವಿನ ಕುರಿತು ಜನರಲ್ಲಿ ಕೆಟ್ಟ ಅಭಿಪ್ರಾಯವೂ ಮೂಡಿಬಿಡಬಹುದು. ಇಂತಹ ಕೆಲವು ಕೊರತೆ ಬಿಟ್ಟರೆ ‘ಗಾರ್ಗಿ’, ಚರ್ಚೆಗೊಳಪಡಬೇಕಾದ ಸಿನಿಮಾ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...