Homeಮುಖಪುಟ‘ಗಾರ್ಗಿ’ ವಿಮರ್ಶೆ: ಪುರುಷಾಧಿಪತ್ಯದ ತಣ್ಣನೆಯ ಕ್ರೌರ್ಯ ಅನಾವರಣ

‘ಗಾರ್ಗಿ’ ವಿಮರ್ಶೆ: ಪುರುಷಾಧಿಪತ್ಯದ ತಣ್ಣನೆಯ ಕ್ರೌರ್ಯ ಅನಾವರಣ

- Advertisement -
- Advertisement -

ಲೇಡಿ ಸೂಪರ್‌ ಸ್ಟಾರ್‌ ಎಂದೇ ಖ್ಯಾತರಾದ, ಬಹುಭಾಷಾ ನಟಿ ಸಾಯಿ ಪಲ್ಲವಿ ಇತ್ತೀಚಿನ ದಿನಗಳಲ್ಲಿ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದು, ‘ಗಾರ್ಗಿ’ ಸಿನಿಮಾ ಅದರ ಮುಂದುವರಿದ ಭಾಗವಾಗಿ ದಾಖಲಾಗಿದೆ.

ತೆಲುಗು, ತಮಿಳು ಹಾಗೂ ಕನ್ನಡ ಭಾಷೆಯಲ್ಲಿ ತೆರೆಕಂಡಿರುವ ‘ಗಾರ್ಗಿ’, ಹೆಣ್ಣಿನ ಮೇಲಾಗುತ್ತಿರುವ ಅನಾದಿಕಾಲದ ಕಿರುಕುಳದ ಕುರಿತು ಮಾತನಾಡುತ್ತದೆ. ‘ಎಲ್ಲಿ ಮಹಿಳೆಯರನ್ನು ಪೂಜಿಸುತ್ತಾರೋ, ಅಲ್ಲಿ ದೇವತೆಗಳು ನಲೆಸಿರುತ್ತಾರೆ’ ಎಂಬುದೆಲ್ಲ ಬಾಯಿ ಮಾತಿನ ಗೌರವ. ಆದರೆ ಹೆಣ್ಣನ್ನು ಭೋಗದ ವಸ್ತು ಎಂದು ನೋಡುವ ಪುರುಷಪ್ರಧಾನ ಮನಸ್ಥಿತಿಯೇ ವಾಸ್ತವ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಬೇಟಿ ಪಡಾವೋ, ಬೇಟಿ ಬಜಾವೋ’ ಎಂದು ಸರ್ಕಾರವೂ ಹೇಳುತ್ತದೆ. ಹೆಣ್ಣಿನ ರಕ್ಷಣೆಯ ಮೇಲೆ ಮಾಡುವ ಉದ್ದುದ್ದದ ಭಾಷಣಗಳಿಗೆ ಕೊನೆಯೂ ಇಲ್ಲ. ಆದರೆ ಸಮಾಜ ತನ್ನ ಆಂತರ್ಯದಲ್ಲಿ ಇಟ್ಟುಕೊಂಡಿರುವ ಪುರುಷಾಧಿಪತ್ಯದ ತಣ್ಣನೆಯ ಕ್ರೌರ್ಯ, ಯಾವಾಗ, ಯಾವ ರೀತಿಯಲ್ಲಿ ಅನಾವರಣವಾಗುತ್ತದೆ ಎಂದು ಹೇಳಲಾಗದು. ನಿರ್ದೇಶಕ ಗೌತಮ್‌ ರಾಮಚಂದ್ರನ್‌ ಈ ಕಹಿ ಸತ್ಯವನ್ನು ಇಲ್ಲಿ ಚರ್ಚಿಸಿದ್ದಾರೆ.

“ಹೆಣ್ಣಿನ ಜಗತ್ತಿನಲ್ಲೇ ಹೆಣ್ಣೇ ಹೆಣ್ಣಿಗೆ ಅಂತಿಮ ಆಸರೆ. ವಿಕೃತ ಜಗತ್ತನ್ನು ಎದುರಿಸಬೇಕಾದರೆ ಹೆಣ್ಣೊಬ್ಬಳು ಇನ್ನೊಬ್ಬ ಹೆಣ್ಣಿನ ಕೈ ಹಿಡಿದು ಸಂಘಟಿತವಾಗಿ ನಡೆಯಬೇಕು. ತನ್ನ ಮೇಲಾಗುವ ದೌರ್ಜನ್ಯವನ್ನು ಯಾವುದೇ ಮರ್ಜಿಗೆ ಒಳಗಾಗದೆ ಮಣಿಸಬೇಕು” ಎಂಬ ಸಂದೇಶವನ್ನು ‘ಗಾರ್ಗಿ’ ಸಿನಿಮಾ ನೀಡುತ್ತದೆ.

ಬಾಲಕಿಯೊಬ್ಬಳ ಮೇಲೆ ನಡೆಯುವ ಗ್ಯಾಗ್ ರೇಪ್‌ವೊಂದರ ಸುತ್ತಲಿನ ಕಥಾ ಹಂದರವನ್ನು ಒಳಗೊಂಡಿರುವ ‘ಗಾರ್ಗಿ’- ಕೋರ್ಟ್ ರೂಮ್‌ ಡ್ರಾಮಾ ಕೂಡ ಹೌದು. ‘ಪೊಲೀಸರು ಬಂಧಿಸಿರುವವರೆಲ್ಲರೂ ತಪ್ಪಿತಸ್ಥರಾ?’ ಎಂಬ ಪ್ರಶ್ನೆಯ ಮೇಲೆ ಸಾಗುವ ಸಿನಿಮಾ ಅಂತಿಮವಾಗಿ ನೀಡುವ ಸಂದೇಶವೂ ಮೌಲಿಕವಾಗಿದೆ. ಹಿತಮಿತವಾದ ಸಿನಿಮ್ಯಾಟಿಕ್‌ ನಿರೂಪಣೆಯಲ್ಲಿ ಸಾಗುವ ಕೆಳ ಮಧ್ಯಮ ವರ್ಗವೊಂದರ ಕಥೆಯನ್ನೊಳಗೊಂಡ ‘ಗಾರ್ಗಿ’ ವಾಸ್ತವಗಳಿಗೆ ಹತ್ತಿರವಾಗಿ ಚಿತ್ರಿತವಾಗಿದೆ.

‘ಗಾರ್ಗಿ’ ಎಂಬ ಹೆಸರಿಗೆ ವಿಶೇಷ ಅರ್ಥವೂ ಇದೆ. ಆಕೆ, ವೇದ ಕಾಲದಲ್ಲಿ ದಾಖಲಾಗಿರುವ ಮಹಿಳಾ ವಿದ್ವಾಂಸೆಯೂ ಹೌದು. ಆರಂಭಿಕ ಮಹಿಳಾವಾದಿಗಳ ಸಾಲಿನಲ್ಲೂ ಆಕೆಯನ್ನು ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ‘ಗಾರ್ಗಿ’ ಎಂಬ ಹೆಸರಿಗೆ ವಿಶೇಷವಾದ ಅರ್ಥವಂತಿಕೆ ಪ್ರಾಪ್ತವಾಗಿದೆ.

“ಹೆಣ್ಣೆಂದರೆ ಅಬಲೆ, ಆಕೆಯ ಹಣೆಯ ಬರವೇ ಇಷ್ಟು, ಅವಳಿಂದ ಏನೂ ಆಗದು” ಎಂಬ ಸಿದ್ಧಮಾದರಿ ಚೌಕಟ್ಟುಗಳನ್ನು ಶಿಕ್ಷಕಿ ಗಾರ್ಗಿ ಪ್ರಶ್ನಿಸುತ್ತಾಳೆ. “ನೀನು ಹಣೆಬರ, ಕಾಲ, ವಿಧಿ ಎಲ್ಲವನ್ನೂ ನಂಬು. ನನ್ನನ್ನು ಮಾತ್ರ ನಂಬಬೇಡ. ಯಾಕಂದ್ರೆ ನಾನು ಗಂಡು ಹುಡುಗ ಅಲ್ಲ, ಹೆಣ್ಣು ತಾನೇ?” ಎಂದು ತನ್ನ ತಾಯಿಗೆ ಗಾರ್ಗಿ ಬೇಸರದಿಂದ ಕೇಳುತ್ತಾಳೆ. ಸತ್ಯಕ್ಕಾಗಿ ಹೋರಾಡುತ್ತಾಳೆ. ಸತ್ಯ ತಿಳಿದ ಮೇಲೆ ದಿಟ್ಟ ನಿಲುವನ್ನು ತಾಳುತ್ತಾಳೆ.

ಇಲ್ಲಿ ಟ್ರಾನ್ಸ್‌ಜೆಂಡರ್‌ ಮಹಿಳೆಯೊಬ್ಬರು ನ್ಯಾಯಾಧೀಶೆಯಾಗಿದ್ದಾರೆ. ಸಂತ್ರಸ್ತೆಯ ಪರವಾಗಿ ವಾದ ಮಂಡಿಸುತ್ತಿರುವ ವಕೀಲನ ಒರಟು ಮಾತುಗಳಿಗೆ ನ್ಯಾಯಾಧೀಶೆ ತೀಕ್ಷ್ಣವಾಗಿ ಉತ್ತರಿಸುತ್ತಾರೆ. ಅಂತಿಮವಾಗಿ ಸತ್ಯದ ಅನಾವರಣವಷ್ಟೇ ಮುಖ್ಯವಾಗಬೇಕು ಎಂಬುದನ್ನು ಟ್ರಾನ್ಸ್‌ಜೆಂಡರ್‌ ನ್ಯಾಯಾಧೀಶೆ ಮನವರಿಕೆ ಮಾಡಿಕೊಡುತ್ತಾರೆ.

ಒಂದು ಸಣ್ಣ ಎಳೆಯ ಕಥೆಯಾದರೂ ತೀರಾ ಮೈನವಿರೇಳಿಸುವ ರೋಚಕತೆಯನ್ನೇನೂ ಗಾರ್ಗಿ ಒಳಗೊಂಡಿಲ್ಲ. ಅಗತ್ಯಕ್ಕೂ ಮೀರಿ ರೋಚಕತೆಯನ್ನು ಸೇರಿಸಲು ನಿರ್ದೇಶಕರು ಪ್ರಯತ್ನಿಸಿಲ್ಲ. ಬಂಧನಕ್ಕೊಳಗಾದ ತಂದೆಯನ್ನು ಹೊರಗೆ ತರಲು ಒಬ್ಬೊಂಟಿಯಾಗಿ ಹೋರಾಡುವ, ಸತ್ಯದ ಹುಡುಕಾಟಕ್ಕಾಗಿ ಪರಿತಪಿಸುತ್ತಿರುವ ಹೆಣ್ಣು ಮಗಳೊಬ್ಬಳ ತೊಳಲಾಟಗಳನ್ನು ಗಾರ್ಗಿ ಕಟ್ಟಿಕೊಡುತ್ತದೆ. ಎಲ್ಲವನ್ನೂ ಸಮರ್ಥವಾಗಿ ಎದುರಿಸುವ ಆಕೆಯ ಮನೋಬಲ ಚಿತ್ರಕತೆಯಲ್ಲಿ ನಿರೂಪಣೆಗೊಂಡಿದೆ.

ಸೂಕ್ಷ್ಮ ಸಂಗತಿಯೊಂದರ ಸುತ್ತ ಮಾಧ್ಯಮಗಳು ತೋರುವ ಧಾವಂತವನ್ನು ಇಲ್ಲಿಯೂ ನಿಕಶಕ್ಕೊಡ್ಡಿದ್ದರೂ, ಅಂತಿಮ ಜಿಜ್ಞಾಸೆಯಾಗಿ ಅದು ಉಳಿದಿಲ್ಲ. ಮಾಧ್ಯಮಗಳು ತೋರುವುದೆಲ್ಲ ಸತ್ಯವಲ್ಲದಿದ್ದರೂ ಅವುಗಳು ತೋರಿಸುವ ಕೆಲವು ಸಂಗತಿಗಳು ಸತ್ಯವೂ ಆಗಿರಬಹುದು ಎನಿಸುತ್ತದೆ.

ಇದನ್ನೂ ಓದಿರಿ: ‘ಮಾರಿ ಸೆಲ್ವರಾಜ್‌‌’ ಸಿನಿಮಾಗಳಲ್ಲಿನ ರೂಪಕಗಳ ಸುತ್ತ…

ಸಾಯಿ ಪಲ್ಲವಿ ಮತ್ತೊಮ್ಮೆ ತಮ್ಮ ಅಭಿಮಾನಿಗಳಿಗೆ ಇಷ್ಟವಾಗುವುದು ಖಚಿತ. ಕನ್ನಡ ವರ್ಷನ್‌ನಲ್ಲಿ ಸಾಯಿ ಪಲ್ಲವಿಯವರೇ ಡಬ್‌ ಮಾಡಿರುವುದು ಇಲ್ಲಿನ ಅಭಿಮಾನಿಗಳಿಗೆ ಮುದ ನೀಡುತ್ತದೆ. ಅತ್ಯಾಚಾರಿ ಆರೋಪಿಯಾಗಿ ಅಭಿನಯಿಸಿರುವ ಆರ್‌.ಎಸ್‌.ಶಿವಾಜಿ, ತಣ್ಣನೆಯ ಕ್ರೌರ್ಯವನ್ನು ಪರಿಚಯಿಸುತ್ತಾರೆ. ವಕೀಲನಾಗಿ ಕಾಳಿ ವೆಂಕಟ್‌, ಪತ್ರಕರ್ತೆಯಾಗಿ ಐಶ್ವರ್ಯ ಲಕ್ಷ್ಮಿ, ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ತಂದೆಯ ಪಾತ್ರದಲ್ಲಿ ಸರವಣ್‌ ಅಭಿನಯಿಸಿದ್ದಾರೆ.

ಹಿನ್ನೆಲೆ ಸಂಗೀತ ಮತ್ತಷ್ಟು ತೀವ್ರವಾಗಿಸಬಹುದಿತ್ತು ಎನಿಸುತ್ತದೆ. ಸಿನಿಮಾದಲ್ಲಿ ಬಳಸಿರುವ ಬಿಟ್ ಸಾಂಗ್‌ಗಳು ಅಷ್ಟಾಗಿ ನೆನಪಿನಲ್ಲಿ ಉಳಿಯುವುದಿಲ್ಲ. ‘ಗಾರ್ಗಿ’ಯ ಪ್ರಿಯಕರನ ಪಾತ್ರ- ಹಾಗೆ ಬಂದು ಹೀಗೆ ಹೋದಂತೆ ಭಾಸವಾಗುತ್ತದೆ. ಕಾನೂನು ಸೇವೆಗಳ ಪ್ರಾಧಿಕಾರದಂತಹ ವ್ಯವಸ್ಥೆಯನ್ನು ಅತ್ಯಂತ ಬಾಲಿಷವಾಗಿ ತೋರಿಸಿದ್ದಾರೆನಿಸುತ್ತದೆ. ಇಂತಹ ದೃಶ್ಯಗಳಿಂದಾಗಿ ನ್ಯಾಯಾಂಗದ ನೆರವಿನ ಕುರಿತು ಜನರಲ್ಲಿ ಕೆಟ್ಟ ಅಭಿಪ್ರಾಯವೂ ಮೂಡಿಬಿಡಬಹುದು. ಇಂತಹ ಕೆಲವು ಕೊರತೆ ಬಿಟ್ಟರೆ ‘ಗಾರ್ಗಿ’, ಚರ್ಚೆಗೊಳಪಡಬೇಕಾದ ಸಿನಿಮಾ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...