Homeಮುಖಪುಟ‘ಗಾರ್ಗಿ’ ವಿಮರ್ಶೆ: ಪುರುಷಾಧಿಪತ್ಯದ ತಣ್ಣನೆಯ ಕ್ರೌರ್ಯ ಅನಾವರಣ

‘ಗಾರ್ಗಿ’ ವಿಮರ್ಶೆ: ಪುರುಷಾಧಿಪತ್ಯದ ತಣ್ಣನೆಯ ಕ್ರೌರ್ಯ ಅನಾವರಣ

- Advertisement -
- Advertisement -

ಲೇಡಿ ಸೂಪರ್‌ ಸ್ಟಾರ್‌ ಎಂದೇ ಖ್ಯಾತರಾದ, ಬಹುಭಾಷಾ ನಟಿ ಸಾಯಿ ಪಲ್ಲವಿ ಇತ್ತೀಚಿನ ದಿನಗಳಲ್ಲಿ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದು, ‘ಗಾರ್ಗಿ’ ಸಿನಿಮಾ ಅದರ ಮುಂದುವರಿದ ಭಾಗವಾಗಿ ದಾಖಲಾಗಿದೆ.

ತೆಲುಗು, ತಮಿಳು ಹಾಗೂ ಕನ್ನಡ ಭಾಷೆಯಲ್ಲಿ ತೆರೆಕಂಡಿರುವ ‘ಗಾರ್ಗಿ’, ಹೆಣ್ಣಿನ ಮೇಲಾಗುತ್ತಿರುವ ಅನಾದಿಕಾಲದ ಕಿರುಕುಳದ ಕುರಿತು ಮಾತನಾಡುತ್ತದೆ. ‘ಎಲ್ಲಿ ಮಹಿಳೆಯರನ್ನು ಪೂಜಿಸುತ್ತಾರೋ, ಅಲ್ಲಿ ದೇವತೆಗಳು ನಲೆಸಿರುತ್ತಾರೆ’ ಎಂಬುದೆಲ್ಲ ಬಾಯಿ ಮಾತಿನ ಗೌರವ. ಆದರೆ ಹೆಣ್ಣನ್ನು ಭೋಗದ ವಸ್ತು ಎಂದು ನೋಡುವ ಪುರುಷಪ್ರಧಾನ ಮನಸ್ಥಿತಿಯೇ ವಾಸ್ತವ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಬೇಟಿ ಪಡಾವೋ, ಬೇಟಿ ಬಜಾವೋ’ ಎಂದು ಸರ್ಕಾರವೂ ಹೇಳುತ್ತದೆ. ಹೆಣ್ಣಿನ ರಕ್ಷಣೆಯ ಮೇಲೆ ಮಾಡುವ ಉದ್ದುದ್ದದ ಭಾಷಣಗಳಿಗೆ ಕೊನೆಯೂ ಇಲ್ಲ. ಆದರೆ ಸಮಾಜ ತನ್ನ ಆಂತರ್ಯದಲ್ಲಿ ಇಟ್ಟುಕೊಂಡಿರುವ ಪುರುಷಾಧಿಪತ್ಯದ ತಣ್ಣನೆಯ ಕ್ರೌರ್ಯ, ಯಾವಾಗ, ಯಾವ ರೀತಿಯಲ್ಲಿ ಅನಾವರಣವಾಗುತ್ತದೆ ಎಂದು ಹೇಳಲಾಗದು. ನಿರ್ದೇಶಕ ಗೌತಮ್‌ ರಾಮಚಂದ್ರನ್‌ ಈ ಕಹಿ ಸತ್ಯವನ್ನು ಇಲ್ಲಿ ಚರ್ಚಿಸಿದ್ದಾರೆ.

“ಹೆಣ್ಣಿನ ಜಗತ್ತಿನಲ್ಲೇ ಹೆಣ್ಣೇ ಹೆಣ್ಣಿಗೆ ಅಂತಿಮ ಆಸರೆ. ವಿಕೃತ ಜಗತ್ತನ್ನು ಎದುರಿಸಬೇಕಾದರೆ ಹೆಣ್ಣೊಬ್ಬಳು ಇನ್ನೊಬ್ಬ ಹೆಣ್ಣಿನ ಕೈ ಹಿಡಿದು ಸಂಘಟಿತವಾಗಿ ನಡೆಯಬೇಕು. ತನ್ನ ಮೇಲಾಗುವ ದೌರ್ಜನ್ಯವನ್ನು ಯಾವುದೇ ಮರ್ಜಿಗೆ ಒಳಗಾಗದೆ ಮಣಿಸಬೇಕು” ಎಂಬ ಸಂದೇಶವನ್ನು ‘ಗಾರ್ಗಿ’ ಸಿನಿಮಾ ನೀಡುತ್ತದೆ.

ಬಾಲಕಿಯೊಬ್ಬಳ ಮೇಲೆ ನಡೆಯುವ ಗ್ಯಾಗ್ ರೇಪ್‌ವೊಂದರ ಸುತ್ತಲಿನ ಕಥಾ ಹಂದರವನ್ನು ಒಳಗೊಂಡಿರುವ ‘ಗಾರ್ಗಿ’- ಕೋರ್ಟ್ ರೂಮ್‌ ಡ್ರಾಮಾ ಕೂಡ ಹೌದು. ‘ಪೊಲೀಸರು ಬಂಧಿಸಿರುವವರೆಲ್ಲರೂ ತಪ್ಪಿತಸ್ಥರಾ?’ ಎಂಬ ಪ್ರಶ್ನೆಯ ಮೇಲೆ ಸಾಗುವ ಸಿನಿಮಾ ಅಂತಿಮವಾಗಿ ನೀಡುವ ಸಂದೇಶವೂ ಮೌಲಿಕವಾಗಿದೆ. ಹಿತಮಿತವಾದ ಸಿನಿಮ್ಯಾಟಿಕ್‌ ನಿರೂಪಣೆಯಲ್ಲಿ ಸಾಗುವ ಕೆಳ ಮಧ್ಯಮ ವರ್ಗವೊಂದರ ಕಥೆಯನ್ನೊಳಗೊಂಡ ‘ಗಾರ್ಗಿ’ ವಾಸ್ತವಗಳಿಗೆ ಹತ್ತಿರವಾಗಿ ಚಿತ್ರಿತವಾಗಿದೆ.

‘ಗಾರ್ಗಿ’ ಎಂಬ ಹೆಸರಿಗೆ ವಿಶೇಷ ಅರ್ಥವೂ ಇದೆ. ಆಕೆ, ವೇದ ಕಾಲದಲ್ಲಿ ದಾಖಲಾಗಿರುವ ಮಹಿಳಾ ವಿದ್ವಾಂಸೆಯೂ ಹೌದು. ಆರಂಭಿಕ ಮಹಿಳಾವಾದಿಗಳ ಸಾಲಿನಲ್ಲೂ ಆಕೆಯನ್ನು ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ‘ಗಾರ್ಗಿ’ ಎಂಬ ಹೆಸರಿಗೆ ವಿಶೇಷವಾದ ಅರ್ಥವಂತಿಕೆ ಪ್ರಾಪ್ತವಾಗಿದೆ.

“ಹೆಣ್ಣೆಂದರೆ ಅಬಲೆ, ಆಕೆಯ ಹಣೆಯ ಬರವೇ ಇಷ್ಟು, ಅವಳಿಂದ ಏನೂ ಆಗದು” ಎಂಬ ಸಿದ್ಧಮಾದರಿ ಚೌಕಟ್ಟುಗಳನ್ನು ಶಿಕ್ಷಕಿ ಗಾರ್ಗಿ ಪ್ರಶ್ನಿಸುತ್ತಾಳೆ. “ನೀನು ಹಣೆಬರ, ಕಾಲ, ವಿಧಿ ಎಲ್ಲವನ್ನೂ ನಂಬು. ನನ್ನನ್ನು ಮಾತ್ರ ನಂಬಬೇಡ. ಯಾಕಂದ್ರೆ ನಾನು ಗಂಡು ಹುಡುಗ ಅಲ್ಲ, ಹೆಣ್ಣು ತಾನೇ?” ಎಂದು ತನ್ನ ತಾಯಿಗೆ ಗಾರ್ಗಿ ಬೇಸರದಿಂದ ಕೇಳುತ್ತಾಳೆ. ಸತ್ಯಕ್ಕಾಗಿ ಹೋರಾಡುತ್ತಾಳೆ. ಸತ್ಯ ತಿಳಿದ ಮೇಲೆ ದಿಟ್ಟ ನಿಲುವನ್ನು ತಾಳುತ್ತಾಳೆ.

ಇಲ್ಲಿ ಟ್ರಾನ್ಸ್‌ಜೆಂಡರ್‌ ಮಹಿಳೆಯೊಬ್ಬರು ನ್ಯಾಯಾಧೀಶೆಯಾಗಿದ್ದಾರೆ. ಸಂತ್ರಸ್ತೆಯ ಪರವಾಗಿ ವಾದ ಮಂಡಿಸುತ್ತಿರುವ ವಕೀಲನ ಒರಟು ಮಾತುಗಳಿಗೆ ನ್ಯಾಯಾಧೀಶೆ ತೀಕ್ಷ್ಣವಾಗಿ ಉತ್ತರಿಸುತ್ತಾರೆ. ಅಂತಿಮವಾಗಿ ಸತ್ಯದ ಅನಾವರಣವಷ್ಟೇ ಮುಖ್ಯವಾಗಬೇಕು ಎಂಬುದನ್ನು ಟ್ರಾನ್ಸ್‌ಜೆಂಡರ್‌ ನ್ಯಾಯಾಧೀಶೆ ಮನವರಿಕೆ ಮಾಡಿಕೊಡುತ್ತಾರೆ.

ಒಂದು ಸಣ್ಣ ಎಳೆಯ ಕಥೆಯಾದರೂ ತೀರಾ ಮೈನವಿರೇಳಿಸುವ ರೋಚಕತೆಯನ್ನೇನೂ ಗಾರ್ಗಿ ಒಳಗೊಂಡಿಲ್ಲ. ಅಗತ್ಯಕ್ಕೂ ಮೀರಿ ರೋಚಕತೆಯನ್ನು ಸೇರಿಸಲು ನಿರ್ದೇಶಕರು ಪ್ರಯತ್ನಿಸಿಲ್ಲ. ಬಂಧನಕ್ಕೊಳಗಾದ ತಂದೆಯನ್ನು ಹೊರಗೆ ತರಲು ಒಬ್ಬೊಂಟಿಯಾಗಿ ಹೋರಾಡುವ, ಸತ್ಯದ ಹುಡುಕಾಟಕ್ಕಾಗಿ ಪರಿತಪಿಸುತ್ತಿರುವ ಹೆಣ್ಣು ಮಗಳೊಬ್ಬಳ ತೊಳಲಾಟಗಳನ್ನು ಗಾರ್ಗಿ ಕಟ್ಟಿಕೊಡುತ್ತದೆ. ಎಲ್ಲವನ್ನೂ ಸಮರ್ಥವಾಗಿ ಎದುರಿಸುವ ಆಕೆಯ ಮನೋಬಲ ಚಿತ್ರಕತೆಯಲ್ಲಿ ನಿರೂಪಣೆಗೊಂಡಿದೆ.

ಸೂಕ್ಷ್ಮ ಸಂಗತಿಯೊಂದರ ಸುತ್ತ ಮಾಧ್ಯಮಗಳು ತೋರುವ ಧಾವಂತವನ್ನು ಇಲ್ಲಿಯೂ ನಿಕಶಕ್ಕೊಡ್ಡಿದ್ದರೂ, ಅಂತಿಮ ಜಿಜ್ಞಾಸೆಯಾಗಿ ಅದು ಉಳಿದಿಲ್ಲ. ಮಾಧ್ಯಮಗಳು ತೋರುವುದೆಲ್ಲ ಸತ್ಯವಲ್ಲದಿದ್ದರೂ ಅವುಗಳು ತೋರಿಸುವ ಕೆಲವು ಸಂಗತಿಗಳು ಸತ್ಯವೂ ಆಗಿರಬಹುದು ಎನಿಸುತ್ತದೆ.

ಇದನ್ನೂ ಓದಿರಿ: ‘ಮಾರಿ ಸೆಲ್ವರಾಜ್‌‌’ ಸಿನಿಮಾಗಳಲ್ಲಿನ ರೂಪಕಗಳ ಸುತ್ತ…

ಸಾಯಿ ಪಲ್ಲವಿ ಮತ್ತೊಮ್ಮೆ ತಮ್ಮ ಅಭಿಮಾನಿಗಳಿಗೆ ಇಷ್ಟವಾಗುವುದು ಖಚಿತ. ಕನ್ನಡ ವರ್ಷನ್‌ನಲ್ಲಿ ಸಾಯಿ ಪಲ್ಲವಿಯವರೇ ಡಬ್‌ ಮಾಡಿರುವುದು ಇಲ್ಲಿನ ಅಭಿಮಾನಿಗಳಿಗೆ ಮುದ ನೀಡುತ್ತದೆ. ಅತ್ಯಾಚಾರಿ ಆರೋಪಿಯಾಗಿ ಅಭಿನಯಿಸಿರುವ ಆರ್‌.ಎಸ್‌.ಶಿವಾಜಿ, ತಣ್ಣನೆಯ ಕ್ರೌರ್ಯವನ್ನು ಪರಿಚಯಿಸುತ್ತಾರೆ. ವಕೀಲನಾಗಿ ಕಾಳಿ ವೆಂಕಟ್‌, ಪತ್ರಕರ್ತೆಯಾಗಿ ಐಶ್ವರ್ಯ ಲಕ್ಷ್ಮಿ, ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ತಂದೆಯ ಪಾತ್ರದಲ್ಲಿ ಸರವಣ್‌ ಅಭಿನಯಿಸಿದ್ದಾರೆ.

ಹಿನ್ನೆಲೆ ಸಂಗೀತ ಮತ್ತಷ್ಟು ತೀವ್ರವಾಗಿಸಬಹುದಿತ್ತು ಎನಿಸುತ್ತದೆ. ಸಿನಿಮಾದಲ್ಲಿ ಬಳಸಿರುವ ಬಿಟ್ ಸಾಂಗ್‌ಗಳು ಅಷ್ಟಾಗಿ ನೆನಪಿನಲ್ಲಿ ಉಳಿಯುವುದಿಲ್ಲ. ‘ಗಾರ್ಗಿ’ಯ ಪ್ರಿಯಕರನ ಪಾತ್ರ- ಹಾಗೆ ಬಂದು ಹೀಗೆ ಹೋದಂತೆ ಭಾಸವಾಗುತ್ತದೆ. ಕಾನೂನು ಸೇವೆಗಳ ಪ್ರಾಧಿಕಾರದಂತಹ ವ್ಯವಸ್ಥೆಯನ್ನು ಅತ್ಯಂತ ಬಾಲಿಷವಾಗಿ ತೋರಿಸಿದ್ದಾರೆನಿಸುತ್ತದೆ. ಇಂತಹ ದೃಶ್ಯಗಳಿಂದಾಗಿ ನ್ಯಾಯಾಂಗದ ನೆರವಿನ ಕುರಿತು ಜನರಲ್ಲಿ ಕೆಟ್ಟ ಅಭಿಪ್ರಾಯವೂ ಮೂಡಿಬಿಡಬಹುದು. ಇಂತಹ ಕೆಲವು ಕೊರತೆ ಬಿಟ್ಟರೆ ‘ಗಾರ್ಗಿ’, ಚರ್ಚೆಗೊಳಪಡಬೇಕಾದ ಸಿನಿಮಾ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...