Homeಮುಖಪುಟಗರುಡ ಗಮನ ವೃಷಭ ವಾಹನ: ಶತಮಾನಗಳ ಜಾನಪದ ಹಾಡಿನ ಸಾಂಸ್ಕೃತಿಕ ಮೌಲ್ಯವನ್ನು ಹಿಂಸೆಯ ಸಂಭ್ರಮಕ್ಕೆ ಬದಲಾಯಿಸುವುದು...

ಗರುಡ ಗಮನ ವೃಷಭ ವಾಹನ: ಶತಮಾನಗಳ ಜಾನಪದ ಹಾಡಿನ ಸಾಂಸ್ಕೃತಿಕ ಮೌಲ್ಯವನ್ನು ಹಿಂಸೆಯ ಸಂಭ್ರಮಕ್ಕೆ ಬದಲಾಯಿಸುವುದು ಸರಿಯೆ?

- Advertisement -

(ಗಗವೃವಾ ಸಿನಿಮಾದಲ್ಲಿನ ಮಹದೇಶ್ವರ ಸ್ವಾಮಿಯ ಹಾಡು ಬಳಸಿರುವ ಹಿನ್ನೆಲೆ ಕುರಿತು ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು ಬರೆದ ಬರಹವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾನುಗೌರಿ ಓದುಗರಿಗಾಗಿ ಅದನ್ನು ಇಲ್ಲಿ ಪ್ರಕಟಿಸುತ್ತಿದ್ದೇವೆ)

- Advertisement -

ಇತ್ತೀಚೆಗೆ ಬಿಡುಗಡೆಯಾದ ಕನ್ನಡ ಚಲನಚಿತ್ರ ‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ಪುರಾಣದ ಐತಿಹ್ಯಗಳನ್ನು ಹೋಲಿಸಿ ಚಿತ್ರಕಥೆಯನ್ನು ರೂಪಿಸಲಾಗಿದೆ ಎಂದು ಕೇಳಿ ತಿಳಿದಿದ್ದೇವೆ. ಸಿನೆಮಾ ರಂಗಕ್ಕೆ ಇದೇನೂ ಹೊಸತಲ್ಲ. ಆದರೆ ಈ ಸಿನೆಮಾದ ಒಂದು ಕೊಲೆಯ ನಂತರದ ದೃಶ್ಯದ ಹಿನ್ನೆಲೆಯಾಗಿ ಕೊಲೆಗಾರನು ನರ್ತಿಸುವಾಗ “ಸೋಜುಗಾದ ಸೂಜು ಮಲ್ಲಿಗೆ” ಎಂಬ ಮಲೈ ಮಹದೇಶ್ವರ ಸ್ವಾಮಿ ಕುರಿತಾದ ಜಾನಪದ ಗೀತೆಯನ್ನು ಹೊಸದಾಗಿ ಸಂಯೋಜಿಸಿದ ಸಂಗೀತದ ಮೂಲಕ ಹಾಡಿಸಲಾಗಿದೆ.

ಯಾವುದೇ ಕಲಾತ್ಮಕ ಕೃತಿಗಳ ಹಾಗೆಯೇ ಸಿನೆಮಾ ರಂಗವೂ ರಚನಾತ್ಮಕವಾಗಿ ಮತ್ತು ಸಮಾಜಮುಖಿಯಾಗಿ ನಡೆದುಕೊಳ್ಳಬೇಕಾಗಿರುವುದು ಈ ಕಾಲದ ಅಗತ್ಯ. ಹೀಗೆ ಮಾಡುವಾಗ ಸೃಜನಶೀಲತೆಯು ಹಲವು ರೂಪಗಳನ್ನು ಪಡೆದುಕೊಳ್ಳುತ್ತದೆ. ಇದಕ್ಕೆ ಯಾರ ವಿರೋಧವೂ ಇರಕೂಡದು.

ಆದರೆ ಪ್ರಸ್ತುತ ಪ್ರಕರಣದಲ್ಲಿ ಸಿನೆಮಾ ನಿರ್ದೇಶಕರು ಮಂಗಳೂರಿನ ಸುತ್ತಮುತ್ತಲ ಸಾಂಸ್ಕೃತಿಕ ಹಿನ್ನೆಲೆಯಲ್ಲಿ ಒಂದು ಕ್ರೌರ್ಯದತ್ತ ವಾಲುವ ಕಥಾಹಂದರವನ್ನು ರೂಪಿಸಿ ಅದರಲ್ಲಿ ನಡೆಯುವ ಕೊಲೆಯೆಂಬ ಹೀನಕೃತ್ಯ ಮಾಡಿ ಸಂಭ್ರಮಿಸುವ ದೃಶ್ಯದ ಹಿನ್ನೆಲೆಯಾಗಿ ಮಾದೇವನನ್ನು ಪೂಜಿಸುವ, ಆರಾಧಿಸುವ ಜಾನಪದ ಹಾಡನ್ನು ಬಳಸಿರುವುದನ್ನು ನೋಡಿದಾಗ ನಿರ್ದೇಶಕರ ಮಾರುಕಟ್ಟೆ ಆಧಾರಿತ ಚಿಂತನೆಯ ಬಗ್ಗೆ ಅನುಕಂಪ ಮೂಡುತ್ತದೆ. ಮಂಗಳೂರಿನ ದಟ್ಟ ಅನುಭವ ಕೊಡುವ ಚಿತ್ರದಲ್ಲಿ ಮೈಸೂರು ಸೀಮೆಯಲ್ಲಿ ಅತಿಹೆಚ್ಚು ಜನಪ್ರಿಯವಾಗಿರುವ ಮಾದೇವನ ಸ್ತುತಿಸುವ, ಈಗ ಹಠಾತ್ತಾಗಿ ಜನಪ್ರಿಯವಾಗಿರುವ ಗೀತೆಯನ್ನು ಯಾವುದೇ ಕಾರಣವಿಲ್ಲದೆ ಸೃಜನಶೀಲತೆ ಎಂಬ ಕಾರಣ ನೀಡಿ ಬಳಸಿರುವುದು ಏಕೆ ಎಂಬುದನ್ನು ಕನ್ನಡ ನಾಡಿನ ಜನರೇ ನಿರ್ಧರಿಸಬೇಕು. ಮಂಗಳೂರು ಸೀಮೆಯಲ್ಲೂ ನೂರಾರು ಶೈವ ಸ್ಥಾನಗಳಿವೆ; ಶಿವನನ್ನು ಸ್ತುತಿಸುವ ನೂರಾರು ಜನಪ್ರಿಯ ಹಾಡುಗಳಿವೆ. ಹೀಗಿದ್ದೂ ದೂರದ ಮಲೈ ಮಹದೇಶ್ವರನ ಕುರಿತ ಹಾಡನ್ನು ಬಳಸುವ ಅನಿವಾರ್ಯತೆ ಅವರಿಗೆ ಏಕೆ ಬಂತು ಎಂಬುದನ್ನು ಕರ್ನಾಟಕದ ಜನತೆಯೇ ಪ್ರಶ್ನಿಸಿ ಉತ್ತರ ಕಂಡುಕೊಳ್ಳಬೇಕಿದೆ.

ಈ ಹಾಡಲ್ಲದೆ ದಾಸಶ್ರೇಷ್ಠ ಪುರಂದರದಾಸರ “ಚಂದ್ರಚೂಡ ಶಿವಶಂಕರ ಪಾರ್ವತಿ” ಹಾಡನ್ನೂ ಇದೇ ಸಿನೆಮಾದಲ್ಲಿ ಇನ್ನೊಂದು ಸನ್ನಿವೇಶಕ್ಕೆ ಬಳಸಿಕೊಂಡಿದ್ದಾರೆ ಎಂಬುದನ್ನೂ ತಿಳಿದಿದ್ದೇವೆ. ಪುರಂದರ ದಾಸರಾಗಲೀ, ಮನುಷ್ಯತ್ವದಿಂದ ದೈವತ್ವಕ್ಕೇರಿದ ಮಹಾಮಹಿಮ ಮಲೈ ಮಹದೇಶ್ವರ ಸ್ವಾಮಿಗಳಾಗಲೀ, ಭಕ್ತಿ ಪರವಶತೆಯಿಂದ ಪದ್ಯಗಳನ್ನು ರಚಿಸಿದ ಜನಪದರಾಗಲೀ ಈ ಹಾಡುಗಳ ಮೇಲೆ ಯಾವ ಹಕ್ಕುಗಳನ್ನೂ ಇಟ್ಟುಕೊಂಡಿಲ್ಲ. ತಮ್ಮ ಹಾಡುಗಳೆಲ್ಲವೂ ಸಮಾಜದ ಅಭ್ಯುದಯಕ್ಕಾಗಿ ಎಂದೇ ಅವರೆಲ್ಲ ಭಾವಿಸಿದ್ದರು; ಇಂದೇನಾದರೂ ಈ ಹಾಡುಗಳು ಕೃತಿಸ್ವಾಮ್ಯದಡಿ ಇದ್ದ ಪಕ್ಷದಲ್ಲಿ ಏನಾಗುತ್ತಿತ್ತು ಎಂಬುದನ್ನೂ ಈ ನಾಡಿನ ಚಿಂತಕರು, ಸಿನೆಮಾ ರಂಗದ ಅನುಭವಿಗಳು ಯೋಚಿಸಬೇಕಲ್ಲವೆ? ಶತಮಾನಗಳ ಕಾಲ ಉಳ್ಳವರು – ಬಡವರು ಎಂಬ ಭೇದ ಭಾವವಿಲ್ಲದೆ ಈ ಹಾಡುಗಳನ್ನು ಭಜಿಸುತ್ತ ಶಿವನ ಸಾನಿಧ್ಯ ಬಯಸುತ್ತ ಮೈಲುಗಟ್ಟಲೆ ಪಾದಯಾತ್ರೆ ಮಾಡಿ ಬರುವ ಅಸಂಖ್ಯ ಭಕ್ತರು ಮಹದೇಶ್ವರ ಬೆಟ್ಟವನ್ನು ಹತ್ತುವುದು ತಮ್ಮಲ್ಲಿರುವ ಎಲ್ಲ ಬಗೆಯ ಅರಿ ಷಡ್ವರ್ಗಗಳು ನಾಶವಾಗಲಿ ಎಂದೇ ಹೊರತು ಕ್ರೌರ್ಯದ ಮಾನಸಿಕತೆ ಬೆಳೆಯಲಿ ಎಂದು ಅಲ್ಲವೇ ಅಲ್ಲ.

ಶತಮಾನಗಳ ಕಾಲ ಬಾಳಿದ ಈ ಹಾಡುಗಳು, ಭಗವದ್ಗೀತೆ, ಶಿವಶರಣರ ವಚನಗಳು ಮುಂತಾದ ಸಂತ ಸಾಹಿತ್ಯ, ಜನಪದ ಸಾಹಿತ್ಯದ ಕೃತಿಗಳು ಈ ಎಲ್ಲ ಘಟನೆಗಳನ್ನೂ ಮೀರಿ ಇನ್ನೂ ನೂರಾರು ವರ್ಷಗಳ ಕಾಲ ಜನರ ಮನದಾಳದಲ್ಲಿ ಇದ್ದೇ ಇರುತ್ತವೆ. ಅದರೆ ಡಿಜಿಟಲ್‌ ವೇದಿಕೆಗಳಲ್ಲಿ ಹೆಚ್ಚು ಕಾಲ ಬಾಳುವ ಸಿನೆಮಾಗಳಲ್ಲಿ ಹೀಗೆ ಸಂಬಂಧವಿಲ್ಲದೆ, ಸತರ್ಕವಿಲ್ಲದೆ ಸೃಜನಶೀಲತೆಯ ಹೆಸರಿನಲ್ಲಿ ಹಾಡುಗಳನ್ನು ಬಳಸಿ, ಇನ್ನೊಬ್ಬರು ಹಾಡುವಾಗ ಈ ಕ್ರೌರ್ಯದ ಸನ್ನಿವೇಶಗಳೇ ನೆನಪಾಗುವ ಹಾಗೆ ಮಾಡುವ ಮಾನಸಿಕತೆಗೆ ಏನೆನ್ನಬೇಕು? ಜಾನಪದ, ತಾತ್ವಿಕ ಹಾಡುಗಳ ಸಾಂಸ್ಕೃತಿಕ ಮೌಲ್ಯವನ್ನು ಉಳಿಸಿ ಬೆಳೆಸುವುದು ಮುಖ್ಯವೋ, ಅವುಗಳನ್ನು ವಾಣಿಜ್ಯ ಉದ್ದೇಶದ ರೂಪಕಗಳನ್ನಾಗಿ ರೂಪಾಂತರಿಸುವುದು ಮುಖ್ಯವೋ? ಇದನ್ನೂ ಜನರೇ ತೀರ್ಮಾನಿಸಬೇಕು. ಸೃಜನಶೀಲತೆ ಎಂಬುದು ಸಾಂಸ್ಕೃತಿಕ ಪತನಕ್ಕೆ ಕಾರಣವಾಗದೆ, ಸಮಾಜದ ಉನ್ನತಿಗೆ ಬಳಕೆಯಾಗಲಿ ಎಂದಷ್ಟೆ ಅಂತಿಮವಾಗಿ ಹೇಳಬಹುದಾದ ಮಾತು.

ಅದ್ಭುತ ಪ್ರತಿಭೆಗಳ ಸಂಗಮ ಎಂದೇ ಸುದ್ದಿಯಾಗಿರುವ ಸಿನೆಮಾ ನಿರ್ಮಾಣ ತಂಡದ ಯಾರೊಬ್ಬರ ಕ್ಷಮೆ ಕೇಳಿ ಆಗಬೇಕಾದ್ದೇನೂ ಇಲ್ಲ. ಕ್ಷಮಾಭಾವವು ವ್ಯಕ್ತಿಯ ಅಂತರಂಗದಲ್ಲಿ ಅದಾಗೇ ಮೂಡಬೇಕೇ ವಿನಃ ಯಾವುದೇ ಒತ್ತಡಕ್ಕೆ ಕೃತಕವಾಗಿ ಹುಟ್ಟಬಾರದು. ಆತ್ಮಸಾಕ್ಷಿ ಇದ್ದವರಿಗೆ ಕ್ಷಮೆ ಕೇಳಬೇಕೇ ಬೇಡವೆ ಎಂದು ನಿರ್ಧರಿಸುವುದೂ ಕಷ್ಟವಾಗುವುದಿಲ್ಲ! ಕೊಲೆಗೆ ರೂಪಕವಾಗಿ ದೇವರ ಹಾಡನ್ನು, ದುರ್ಗಾಸ್ತುತಿಯನ್ನು ಬಳಸುವುದು ತುಂಬ ಹಳೆಯ ತಂತ್ರ. ಹಲವು ಟಿವಿ ಸೀರಿಯಲ್‌ಗಳಲ್ಲೂ ಹೀಗೆ ಮಾಡಿದ್ದಾರೆ ಎಂದು ಕೇಳಿದ್ದೇವೆ. ಇಂತಹ ಚರ್ವಿತಚರ್ವಣ ಸಿದ್ಧ ಮಾದರಿಗಳನ್ನು ಮೀರುವ ಸೃಜನಶೀಲತೆ ಇವರಿಗೆಲ್ಲ ಒದಗಲಿ ಎಂದು ಹಾರೈಸುತ್ತೇವೆ. ಶತಮಾನಗಳಿಂದ ಅರಳಿದ ಜನಪದ ಸೊಗಡಿನ ಹಾಡೊಂದರ ಮೌಲ್ಯವನ್ನು, ಅದರಿಂದ ದೊರಕುವ ಅಮೂಲ್ಯ ದೈವಿಕ ರೂಪಕಗಳನ್ನು ಒಂದು ಸಿನೆಮಾದ ವಾಣಿಜ್ಯ ಉದ್ದೇಶದ ರೂಪಕಕ್ಕಾಗಿ ಬಲಿ ಕೊಡುವುದು ಎಷ್ಟು ಸರಿ?

ಮಹದೇಶ್ವರರು ನೈಜ ವ್ಯಕ್ತಿಯಾಗಿದ್ದು ದೈವತ್ವಕ್ಕೆ ಬೆಳೆದವರು. ಅವರು ಜಾತಿ – ಪಂಥ ಭೇದವಿಲ್ಲದೆ ಲಕ್ಷಾಂತರ ಭಕ್ತರನ್ನು ಹೊಂದಿದ್ದಾರೆ. ಅವರು ಸಕಲಜೀವಿಗಳಿಗೂ ಲೇಸನ್ನೇ ಬಯಸುವವರು; ಅಲ್ಪಮತಿಗಳಿಗೆ ಜ್ಞಾನ ನೀಡಿ, ಅಂತಹವರ ಅಪಸವ್ಯಗಳನ್ನು ಕ್ಷಮಿಸಿ ನಸುನಗು ಬೀರಿದ ಮಹಾಯೋಗಿ. ಇಂತಹ ಮಹಾಮಹಿಮರ ಬಗ್ಗೆ ಇದ್ದ ಅದ್ಭುತ ಗೀತೆಯೊಂದನ್ನು ಹಾಡುವಾಗ ಯಾವುದೋ ಲೌಕಿಕ ಜಗತ್ತಿಗೆ ಸೇರಿದ ಹಿಂಸಾತ್ಮಕ ಕಥೆಯೊಳಗಿನ ಕ್ರೌರ್ಯವು ನೆನಪಾಗುವಂತೆ ಮಾಡಿದ ನಿರ್ದೇಶಕರನ್ನೂ ಮಹದೇಶ್ವರರು ಹರಸಲಿ; ಅವರಿಗೆ ಮುಂದೆಂದೂ ಇಂತಹ ಚಿಂತನೆಗಳು ಬರದಂತೆ ಸದ್ಬುದ್ಧಿ ನೀಡಲಿ.

ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು
ಪೀಠಾಧಿಪತಿಗಳು
ಶ್ರೀ ಸಾಲೂರು ಬೃಹನ್ಮಠ
ಶ್ರೀ ಮಲೆ ಮಹದೇಶ್ವರ ಬೆಟ್ಟ


ಇದನ್ನೂ ಓದಿ: ಕಾಣೆಯಾದ ಸಂಕೀರ್ಣತೆ, ವಿವರಗಳ ಕೊರತೆ, ಗ.ಗ.ವೃ.ವಾ.ದಲ್ಲಿ ಹಿಂಸೆಯೇ ಬಂಡವಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...