Homeಮುಖಪುಟಖಾಸಗಿ ಸಿಮೆಂಟ್ ಕಂಪನಿಗೆ 1 ಸಾವಿರ ಎಕರೆ ಭೂಮಿ ಕೊಡಲು ಮುಂದಾದ ಅಸ್ಸಾಂ ಸರ್ಕಾರ: ಹೈಕೋರ್ಟ್...

ಖಾಸಗಿ ಸಿಮೆಂಟ್ ಕಂಪನಿಗೆ 1 ಸಾವಿರ ಎಕರೆ ಭೂಮಿ ಕೊಡಲು ಮುಂದಾದ ಅಸ್ಸಾಂ ಸರ್ಕಾರ: ಹೈಕೋರ್ಟ್ ತರಾಟೆ

- Advertisement -
- Advertisement -

ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿ 3,000 ಬಿಘಾ ಅಥವಾ ಸುಮಾರು 1 ಸಾವಿರ ಎಕರೆ ಭೂಮಿಯನ್ನು ಖಾಸಗಿ ಸಿಮೆಂಟ್ ಕಾರ್ಖಾನೆಗೆ ಮಂಜೂರು ಮಾಡಿದ್ದಕ್ಕೆ ಗುವಾಹಟಿ ಹೈಕೋರ್ಟ್ ಆಶ್ಚರ್ಯ ವ್ಯಕ್ತಪಡಿಸಿದ್ದು, ಯಾವ ನಿಯಮದಡಿ ಇಷ್ಟು ದೊಡ್ಡ ಪ್ರಮಾಣದ ಭೂಮಿ ನೀಡಲಾಗಿದೆ ಎಂದು ಉತ್ತರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಒಂದು ಸಾವಿರ ಎಕರೆ ಭೂಮಿಯನ್ನು ಒಂದು ಸಿಮೆಂಟ್ ಕಾರ್ಖಾನೆಗೆ ಧಾರೆ ಎರೆದಿರುವುದು ಕೇವಲ ಒಂದು ವ್ಯವಹಾರವಾಗಿ ಉಳಿದಿಲ್ಲ, ಇದು ಪ್ರಜಾಪ್ರಭುತ್ವದ ಅಣಕವಾಗಿದೆ ಎಂದ ಹೈಕೋರ್ಟ್ ನ್ಯಾಯಾಧೀಶ ಸಂಜಯ್ ಕುಮಾರ್ ಮೇಧಿ ಅವರು, “ಇದೇನು ತಮಾಷೆಯೇ?” ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಏನಿದು ಪ್ರಕರಣ?

2024ರ ಅಕ್ಟೋಬರ್‌ನಲ್ಲಿ ಮಹಾಬಲ್ ಸಿಮೆಂಟ್ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ದಿಮಾ ಹಸಾವೊ ಜಿಲ್ಲೆಯಲ್ಲಿ 2,000 ಬಿಘಾ ಅಥವಾ ಸುಮಾರು 650ಕ್ಕೂ ಹೆಚ್ಚು ಎಕರೆ ಭೂಮಿಯನ್ನು ಸರ್ಕಾರ ಮಂಜೂರು ಮಾಡಿತ್ತು. ಬಳಿಕ ಅದೇ ವರ್ಷ ನವೆಂಬರ್‌ನಲ್ಲಿ ಮತ್ತೆ 1000 ಸಾವಿರ ಬಿಘಾ ಅಥವಾ ಸುಮಾರು 330 ಎಕರೆ ಭೂಮಿ ಹೆಚ್ಚುವರಿಯಾಗಿದೆ ನೀಡಿದೆ.

ದಿಮಾ ಹಸಾವೊ ಅಸ್ಸಾಂನಲ್ಲಿರುವ ಬುಡಕಟ್ಟು ಜನಾಂಗದವರು ಬಹುಸಂಖ್ಯಾತರಾಗಿರುವ ಗುಡ್ಡಗಾಡು ಜಿಲ್ಲೆಯಾಗಿದೆ. ಇದನ್ನು ಸಂವಿಧಾನದ ಆರನೇ ಶೆಡ್ಯೂಲ್‌ನ ನಿಬಂಧನೆಗಳ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾದ ಉತ್ತರ ಕ್ಯಾಚರ್ ಹಿಲ್ಸ್ ಸ್ವಾಯತ್ತ ಮಂಡಳಿಯ ಮೂಲಕ ನಿರ್ವಹಿಸಲಾಗುತ್ತದೆ.

ಸಂವಿಧಾನದ ಆರನೇ ಶೆಡ್ಯೂಲ್ ಅಸ್ಸಾಂ, ಮೇಘಾಲಯ, ತ್ರಿಪುರ ಮತ್ತು ಮಿಜೋರಾಂನಲ್ಲಿನ ಬುಡಕಟ್ಟು ಪ್ರದೇಶಗಳ ಆಡಳಿತವನ್ನು ನಿಯಂತ್ರಿಸುತ್ತದೆ.

ಅಕ್ಟೋಬರ್ 2024ರಲ್ಲಿ ಸಿಮೆಂಟ್ ಕಾರ್ಖಾನೆಗೆ ಭೂಮಿ ಮಂಜೂರು ಮಾಡುವ ಆದೇಶವನ್ನು ಉತ್ತರ ಕ್ಯಾಚರ್ ಹಿಲ್ಸ್ ಸ್ವಾಯತ್ತ ಮಂಡಳಿಯ ಹೆಚ್ಚುವರಿ ಕಾರ್ಯದರ್ಶಿ (ಕಂದಾಯ) ಹೊರಡಿಸಿದ್ದರು. ಹಂಚಿಕೆಯ ಉದ್ದೇಶ ಸಿಮೆಂಟ್ ಕಾರ್ಖಾನೆ ಸ್ಥಾಪಿಸುವುದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಭೂಮಿ ಮಂಜೂರಾತಿ ವಿರುದ್ದ ಸಲ್ಲಿಸಿರುವ ಎರಡು ಅರ್ಜಿಗಳ ವಿಚಾರಣೆ ಕಳೆದವಾರ ಗುವಾಹಟಿ ಹೈಕೋರ್ಟ್‌ನಲ್ಲಿ ನಡೆದಿದೆ.

ಸಿಮೆಂಟ್ ಕಾರ್ಖಾನೆಗೆ ಕೊಡಲು ನಮ್ಮ ಭೂಮಿಯನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ದಿಮಾ ಹಸಾವೊನ ಸ್ಥಳೀಯರ ಗುಂಪೊಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.

ಈ ವರ್ಷದ ಆರಂಭದಲ್ಲಿ ಮಹಾಬಲ್ ಸಿಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯು, ನಿರ್ಮಾಣ ಕಾರ್ಯಗಳಲ್ಲಿ ‘ಸ್ಥಳೀಯ ಗ್ರಾಮಸ್ಥರು ಸೃಷ್ಟಿಸುವ ಅಡಚಣೆಗಳಿಂದ’ ರಕ್ಷಣೆ ಕೋರಿ ಆರಂಭಿಕ ಅರ್ಜಿಯನ್ನು ಸಲ್ಲಿಸಿತ್ತು.

ಆಗಸ್ಟ್ 12ರಂದು ತನ್ನ ಆದೇಶದಲ್ಲಿ ನ್ಯಾಯಾಲಯವು “ಪ್ರಕರಣದ ಸತ್ಯಾಸತ್ಯತೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಮಂಜೂರು ಮಾಡಲು ಕೋರಿರುವ ಭೂಮಿ ಸುಮಾರು 3,000 ಬಿಘಾಗಳಾಗಿದ್ದು, ಅದು ಅಸಾಧಾರಣವೆಂದು ತೋರುತ್ತದೆ” ಎಂದು ಹೇಳಿದೆ.

“3,000 ಬಿಘಾ ಅಳತೆಯ ಇಷ್ಟು ದೊಡ್ಡ ಭೂಮಿಯನ್ನು ಕಾರ್ಖಾನೆಗೆ ಹಂಚಿಕೆ ಮಾಡುವ” ನೀತಿಯನ್ನು ಒಳಗೊಂಡಿರುವ ದಾಖಲೆಗಳನ್ನು ಪಡೆಯುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಜಿಲ್ಲೆಯ ಉಮ್ರಾಂಗ್ಸೊ ಪ್ರದೇಶವು “ವಲಸೆ ಹಕ್ಕಿಗಳು, ವನ್ಯಜೀವಿಗಳು ಇತ್ಯಾದಿಗಳಿಗೆ ಬಿಸಿನೀರಿನ ಬುಗ್ಗೆ, ನಿಲುಗಡೆ ಸ್ಥಳಗಳನ್ನು ಹೊಂದಿರುವ ಪರಿಸರ ತಾಣ” ಎಂಬುವುದನ್ನೂ ನ್ಯಾಯಾಲಯ ಗಮನಿಸಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ನಿಗದಿಪಡಿಸಿದೆ.

ವಿಚಾರಣೆ ವೇಳೆ, ನ್ಯಾಯಮೂರ್ತಿಗಳು ಸರ್ಕಾರದ ನಿರ್ಧಾರವನ್ನು ಕಂಡು ದಂಗಾಗಿದ್ದಾರೆ. ನ್ಯಾಯಾಧೀಶರು ಸರ್ಕಾರದ ವಕೀಲರನ್ನು ಕೇಳಿದ ಪ್ರಶ್ನೆಯ ವೀಡಿಯೊ ಈಗ ದೇಶಾದ್ಯಂತ ವೈರಲ್ ಆಗಿದೆ.

ನ್ಯಾಯಾಧೀಶರು ಆಶ್ಚರ್ಯ ಮತ್ತು ಆಕ್ರೋಶದಿಂದ, “ಇದೇನು ತಮಾಷೆಯೇ? ನೀವು ಇಡೀ ಜಿಲ್ಲೆಯನ್ನೇ ಕೊಡುತ್ತಿದ್ದೀರಿ. ನಿಮ್ಮ ಅಗತ್ಯ ಮುಖ್ಯವಲ್ಲ, ಸಾರ್ವಜನಿಕ ಹಿತಾಸಕ್ತಿಯೇ ಇಲ್ಲಿ ಮುಖ್ಯ,” ಎಂದು ಖಡಕ್ ಮಾತುಗಳಲ್ಲಿ ಹೇಳಿದ್ದಾರೆ.

ರಾಜ್ಯಕ್ಕೆ ಮರಳುವ ಬಂಗಾಳಿ ವಲಸೆ ಕಾರ್ಮಿಕರಿಗೆ ಮಾಸಿಕ ರೂ. 5000 ಧನ ಸಹಾಯ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...