Homeಮುಖಪುಟಖಾಸಗಿ ಸಿಮೆಂಟ್ ಕಂಪನಿಗೆ 1 ಸಾವಿರ ಎಕರೆ ಭೂಮಿ ಕೊಡಲು ಮುಂದಾದ ಅಸ್ಸಾಂ ಸರ್ಕಾರ: ಹೈಕೋರ್ಟ್...

ಖಾಸಗಿ ಸಿಮೆಂಟ್ ಕಂಪನಿಗೆ 1 ಸಾವಿರ ಎಕರೆ ಭೂಮಿ ಕೊಡಲು ಮುಂದಾದ ಅಸ್ಸಾಂ ಸರ್ಕಾರ: ಹೈಕೋರ್ಟ್ ತರಾಟೆ

- Advertisement -
- Advertisement -

ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿ 3,000 ಬಿಘಾ ಅಥವಾ ಸುಮಾರು 1 ಸಾವಿರ ಎಕರೆ ಭೂಮಿಯನ್ನು ಖಾಸಗಿ ಸಿಮೆಂಟ್ ಕಾರ್ಖಾನೆಗೆ ಮಂಜೂರು ಮಾಡಿದ್ದಕ್ಕೆ ಗುವಾಹಟಿ ಹೈಕೋರ್ಟ್ ಆಶ್ಚರ್ಯ ವ್ಯಕ್ತಪಡಿಸಿದ್ದು, ಯಾವ ನಿಯಮದಡಿ ಇಷ್ಟು ದೊಡ್ಡ ಪ್ರಮಾಣದ ಭೂಮಿ ನೀಡಲಾಗಿದೆ ಎಂದು ಉತ್ತರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಒಂದು ಸಾವಿರ ಎಕರೆ ಭೂಮಿಯನ್ನು ಒಂದು ಸಿಮೆಂಟ್ ಕಾರ್ಖಾನೆಗೆ ಧಾರೆ ಎರೆದಿರುವುದು ಕೇವಲ ಒಂದು ವ್ಯವಹಾರವಾಗಿ ಉಳಿದಿಲ್ಲ, ಇದು ಪ್ರಜಾಪ್ರಭುತ್ವದ ಅಣಕವಾಗಿದೆ ಎಂದ ಹೈಕೋರ್ಟ್ ನ್ಯಾಯಾಧೀಶ ಸಂಜಯ್ ಕುಮಾರ್ ಮೇಧಿ ಅವರು, “ಇದೇನು ತಮಾಷೆಯೇ?” ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಏನಿದು ಪ್ರಕರಣ?

2024ರ ಅಕ್ಟೋಬರ್‌ನಲ್ಲಿ ಮಹಾಬಲ್ ಸಿಮೆಂಟ್ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ದಿಮಾ ಹಸಾವೊ ಜಿಲ್ಲೆಯಲ್ಲಿ 2,000 ಬಿಘಾ ಅಥವಾ ಸುಮಾರು 650ಕ್ಕೂ ಹೆಚ್ಚು ಎಕರೆ ಭೂಮಿಯನ್ನು ಸರ್ಕಾರ ಮಂಜೂರು ಮಾಡಿತ್ತು. ಬಳಿಕ ಅದೇ ವರ್ಷ ನವೆಂಬರ್‌ನಲ್ಲಿ ಮತ್ತೆ 1000 ಸಾವಿರ ಬಿಘಾ ಅಥವಾ ಸುಮಾರು 330 ಎಕರೆ ಭೂಮಿ ಹೆಚ್ಚುವರಿಯಾಗಿದೆ ನೀಡಿದೆ.

ದಿಮಾ ಹಸಾವೊ ಅಸ್ಸಾಂನಲ್ಲಿರುವ ಬುಡಕಟ್ಟು ಜನಾಂಗದವರು ಬಹುಸಂಖ್ಯಾತರಾಗಿರುವ ಗುಡ್ಡಗಾಡು ಜಿಲ್ಲೆಯಾಗಿದೆ. ಇದನ್ನು ಸಂವಿಧಾನದ ಆರನೇ ಶೆಡ್ಯೂಲ್‌ನ ನಿಬಂಧನೆಗಳ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾದ ಉತ್ತರ ಕ್ಯಾಚರ್ ಹಿಲ್ಸ್ ಸ್ವಾಯತ್ತ ಮಂಡಳಿಯ ಮೂಲಕ ನಿರ್ವಹಿಸಲಾಗುತ್ತದೆ.

ಸಂವಿಧಾನದ ಆರನೇ ಶೆಡ್ಯೂಲ್ ಅಸ್ಸಾಂ, ಮೇಘಾಲಯ, ತ್ರಿಪುರ ಮತ್ತು ಮಿಜೋರಾಂನಲ್ಲಿನ ಬುಡಕಟ್ಟು ಪ್ರದೇಶಗಳ ಆಡಳಿತವನ್ನು ನಿಯಂತ್ರಿಸುತ್ತದೆ.

ಅಕ್ಟೋಬರ್ 2024ರಲ್ಲಿ ಸಿಮೆಂಟ್ ಕಾರ್ಖಾನೆಗೆ ಭೂಮಿ ಮಂಜೂರು ಮಾಡುವ ಆದೇಶವನ್ನು ಉತ್ತರ ಕ್ಯಾಚರ್ ಹಿಲ್ಸ್ ಸ್ವಾಯತ್ತ ಮಂಡಳಿಯ ಹೆಚ್ಚುವರಿ ಕಾರ್ಯದರ್ಶಿ (ಕಂದಾಯ) ಹೊರಡಿಸಿದ್ದರು. ಹಂಚಿಕೆಯ ಉದ್ದೇಶ ಸಿಮೆಂಟ್ ಕಾರ್ಖಾನೆ ಸ್ಥಾಪಿಸುವುದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಭೂಮಿ ಮಂಜೂರಾತಿ ವಿರುದ್ದ ಸಲ್ಲಿಸಿರುವ ಎರಡು ಅರ್ಜಿಗಳ ವಿಚಾರಣೆ ಕಳೆದವಾರ ಗುವಾಹಟಿ ಹೈಕೋರ್ಟ್‌ನಲ್ಲಿ ನಡೆದಿದೆ.

ಸಿಮೆಂಟ್ ಕಾರ್ಖಾನೆಗೆ ಕೊಡಲು ನಮ್ಮ ಭೂಮಿಯನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ದಿಮಾ ಹಸಾವೊನ ಸ್ಥಳೀಯರ ಗುಂಪೊಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.

ಈ ವರ್ಷದ ಆರಂಭದಲ್ಲಿ ಮಹಾಬಲ್ ಸಿಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯು, ನಿರ್ಮಾಣ ಕಾರ್ಯಗಳಲ್ಲಿ ‘ಸ್ಥಳೀಯ ಗ್ರಾಮಸ್ಥರು ಸೃಷ್ಟಿಸುವ ಅಡಚಣೆಗಳಿಂದ’ ರಕ್ಷಣೆ ಕೋರಿ ಆರಂಭಿಕ ಅರ್ಜಿಯನ್ನು ಸಲ್ಲಿಸಿತ್ತು.

ಆಗಸ್ಟ್ 12ರಂದು ತನ್ನ ಆದೇಶದಲ್ಲಿ ನ್ಯಾಯಾಲಯವು “ಪ್ರಕರಣದ ಸತ್ಯಾಸತ್ಯತೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಮಂಜೂರು ಮಾಡಲು ಕೋರಿರುವ ಭೂಮಿ ಸುಮಾರು 3,000 ಬಿಘಾಗಳಾಗಿದ್ದು, ಅದು ಅಸಾಧಾರಣವೆಂದು ತೋರುತ್ತದೆ” ಎಂದು ಹೇಳಿದೆ.

“3,000 ಬಿಘಾ ಅಳತೆಯ ಇಷ್ಟು ದೊಡ್ಡ ಭೂಮಿಯನ್ನು ಕಾರ್ಖಾನೆಗೆ ಹಂಚಿಕೆ ಮಾಡುವ” ನೀತಿಯನ್ನು ಒಳಗೊಂಡಿರುವ ದಾಖಲೆಗಳನ್ನು ಪಡೆಯುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಜಿಲ್ಲೆಯ ಉಮ್ರಾಂಗ್ಸೊ ಪ್ರದೇಶವು “ವಲಸೆ ಹಕ್ಕಿಗಳು, ವನ್ಯಜೀವಿಗಳು ಇತ್ಯಾದಿಗಳಿಗೆ ಬಿಸಿನೀರಿನ ಬುಗ್ಗೆ, ನಿಲುಗಡೆ ಸ್ಥಳಗಳನ್ನು ಹೊಂದಿರುವ ಪರಿಸರ ತಾಣ” ಎಂಬುವುದನ್ನೂ ನ್ಯಾಯಾಲಯ ಗಮನಿಸಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ನಿಗದಿಪಡಿಸಿದೆ.

ವಿಚಾರಣೆ ವೇಳೆ, ನ್ಯಾಯಮೂರ್ತಿಗಳು ಸರ್ಕಾರದ ನಿರ್ಧಾರವನ್ನು ಕಂಡು ದಂಗಾಗಿದ್ದಾರೆ. ನ್ಯಾಯಾಧೀಶರು ಸರ್ಕಾರದ ವಕೀಲರನ್ನು ಕೇಳಿದ ಪ್ರಶ್ನೆಯ ವೀಡಿಯೊ ಈಗ ದೇಶಾದ್ಯಂತ ವೈರಲ್ ಆಗಿದೆ.

ನ್ಯಾಯಾಧೀಶರು ಆಶ್ಚರ್ಯ ಮತ್ತು ಆಕ್ರೋಶದಿಂದ, “ಇದೇನು ತಮಾಷೆಯೇ? ನೀವು ಇಡೀ ಜಿಲ್ಲೆಯನ್ನೇ ಕೊಡುತ್ತಿದ್ದೀರಿ. ನಿಮ್ಮ ಅಗತ್ಯ ಮುಖ್ಯವಲ್ಲ, ಸಾರ್ವಜನಿಕ ಹಿತಾಸಕ್ತಿಯೇ ಇಲ್ಲಿ ಮುಖ್ಯ,” ಎಂದು ಖಡಕ್ ಮಾತುಗಳಲ್ಲಿ ಹೇಳಿದ್ದಾರೆ.

ರಾಜ್ಯಕ್ಕೆ ಮರಳುವ ಬಂಗಾಳಿ ವಲಸೆ ಕಾರ್ಮಿಕರಿಗೆ ಮಾಸಿಕ ರೂ. 5000 ಧನ ಸಹಾಯ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...