Homeಮುಖಪುಟಖಾಸಗಿ ಸಿಮೆಂಟ್ ಕಂಪನಿಗೆ 1 ಸಾವಿರ ಎಕರೆ ಭೂಮಿ ಕೊಡಲು ಮುಂದಾದ ಅಸ್ಸಾಂ ಸರ್ಕಾರ: ಹೈಕೋರ್ಟ್...

ಖಾಸಗಿ ಸಿಮೆಂಟ್ ಕಂಪನಿಗೆ 1 ಸಾವಿರ ಎಕರೆ ಭೂಮಿ ಕೊಡಲು ಮುಂದಾದ ಅಸ್ಸಾಂ ಸರ್ಕಾರ: ಹೈಕೋರ್ಟ್ ತರಾಟೆ

- Advertisement -
- Advertisement -

ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿ 3,000 ಬಿಘಾ ಅಥವಾ ಸುಮಾರು 1 ಸಾವಿರ ಎಕರೆ ಭೂಮಿಯನ್ನು ಖಾಸಗಿ ಸಿಮೆಂಟ್ ಕಾರ್ಖಾನೆಗೆ ಮಂಜೂರು ಮಾಡಿದ್ದಕ್ಕೆ ಗುವಾಹಟಿ ಹೈಕೋರ್ಟ್ ಆಶ್ಚರ್ಯ ವ್ಯಕ್ತಪಡಿಸಿದ್ದು, ಯಾವ ನಿಯಮದಡಿ ಇಷ್ಟು ದೊಡ್ಡ ಪ್ರಮಾಣದ ಭೂಮಿ ನೀಡಲಾಗಿದೆ ಎಂದು ಉತ್ತರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಒಂದು ಸಾವಿರ ಎಕರೆ ಭೂಮಿಯನ್ನು ಒಂದು ಸಿಮೆಂಟ್ ಕಾರ್ಖಾನೆಗೆ ಧಾರೆ ಎರೆದಿರುವುದು ಕೇವಲ ಒಂದು ವ್ಯವಹಾರವಾಗಿ ಉಳಿದಿಲ್ಲ, ಇದು ಪ್ರಜಾಪ್ರಭುತ್ವದ ಅಣಕವಾಗಿದೆ ಎಂದ ಹೈಕೋರ್ಟ್ ನ್ಯಾಯಾಧೀಶ ಸಂಜಯ್ ಕುಮಾರ್ ಮೇಧಿ ಅವರು, “ಇದೇನು ತಮಾಷೆಯೇ?” ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಏನಿದು ಪ್ರಕರಣ?

2024ರ ಅಕ್ಟೋಬರ್‌ನಲ್ಲಿ ಮಹಾಬಲ್ ಸಿಮೆಂಟ್ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ದಿಮಾ ಹಸಾವೊ ಜಿಲ್ಲೆಯಲ್ಲಿ 2,000 ಬಿಘಾ ಅಥವಾ ಸುಮಾರು 650ಕ್ಕೂ ಹೆಚ್ಚು ಎಕರೆ ಭೂಮಿಯನ್ನು ಸರ್ಕಾರ ಮಂಜೂರು ಮಾಡಿತ್ತು. ಬಳಿಕ ಅದೇ ವರ್ಷ ನವೆಂಬರ್‌ನಲ್ಲಿ ಮತ್ತೆ 1000 ಸಾವಿರ ಬಿಘಾ ಅಥವಾ ಸುಮಾರು 330 ಎಕರೆ ಭೂಮಿ ಹೆಚ್ಚುವರಿಯಾಗಿದೆ ನೀಡಿದೆ.

ದಿಮಾ ಹಸಾವೊ ಅಸ್ಸಾಂನಲ್ಲಿರುವ ಬುಡಕಟ್ಟು ಜನಾಂಗದವರು ಬಹುಸಂಖ್ಯಾತರಾಗಿರುವ ಗುಡ್ಡಗಾಡು ಜಿಲ್ಲೆಯಾಗಿದೆ. ಇದನ್ನು ಸಂವಿಧಾನದ ಆರನೇ ಶೆಡ್ಯೂಲ್‌ನ ನಿಬಂಧನೆಗಳ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾದ ಉತ್ತರ ಕ್ಯಾಚರ್ ಹಿಲ್ಸ್ ಸ್ವಾಯತ್ತ ಮಂಡಳಿಯ ಮೂಲಕ ನಿರ್ವಹಿಸಲಾಗುತ್ತದೆ.

ಸಂವಿಧಾನದ ಆರನೇ ಶೆಡ್ಯೂಲ್ ಅಸ್ಸಾಂ, ಮೇಘಾಲಯ, ತ್ರಿಪುರ ಮತ್ತು ಮಿಜೋರಾಂನಲ್ಲಿನ ಬುಡಕಟ್ಟು ಪ್ರದೇಶಗಳ ಆಡಳಿತವನ್ನು ನಿಯಂತ್ರಿಸುತ್ತದೆ.

ಅಕ್ಟೋಬರ್ 2024ರಲ್ಲಿ ಸಿಮೆಂಟ್ ಕಾರ್ಖಾನೆಗೆ ಭೂಮಿ ಮಂಜೂರು ಮಾಡುವ ಆದೇಶವನ್ನು ಉತ್ತರ ಕ್ಯಾಚರ್ ಹಿಲ್ಸ್ ಸ್ವಾಯತ್ತ ಮಂಡಳಿಯ ಹೆಚ್ಚುವರಿ ಕಾರ್ಯದರ್ಶಿ (ಕಂದಾಯ) ಹೊರಡಿಸಿದ್ದರು. ಹಂಚಿಕೆಯ ಉದ್ದೇಶ ಸಿಮೆಂಟ್ ಕಾರ್ಖಾನೆ ಸ್ಥಾಪಿಸುವುದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಭೂಮಿ ಮಂಜೂರಾತಿ ವಿರುದ್ದ ಸಲ್ಲಿಸಿರುವ ಎರಡು ಅರ್ಜಿಗಳ ವಿಚಾರಣೆ ಕಳೆದವಾರ ಗುವಾಹಟಿ ಹೈಕೋರ್ಟ್‌ನಲ್ಲಿ ನಡೆದಿದೆ.

ಸಿಮೆಂಟ್ ಕಾರ್ಖಾನೆಗೆ ಕೊಡಲು ನಮ್ಮ ಭೂಮಿಯನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ದಿಮಾ ಹಸಾವೊನ ಸ್ಥಳೀಯರ ಗುಂಪೊಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.

ಈ ವರ್ಷದ ಆರಂಭದಲ್ಲಿ ಮಹಾಬಲ್ ಸಿಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯು, ನಿರ್ಮಾಣ ಕಾರ್ಯಗಳಲ್ಲಿ ‘ಸ್ಥಳೀಯ ಗ್ರಾಮಸ್ಥರು ಸೃಷ್ಟಿಸುವ ಅಡಚಣೆಗಳಿಂದ’ ರಕ್ಷಣೆ ಕೋರಿ ಆರಂಭಿಕ ಅರ್ಜಿಯನ್ನು ಸಲ್ಲಿಸಿತ್ತು.

ಆಗಸ್ಟ್ 12ರಂದು ತನ್ನ ಆದೇಶದಲ್ಲಿ ನ್ಯಾಯಾಲಯವು “ಪ್ರಕರಣದ ಸತ್ಯಾಸತ್ಯತೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಮಂಜೂರು ಮಾಡಲು ಕೋರಿರುವ ಭೂಮಿ ಸುಮಾರು 3,000 ಬಿಘಾಗಳಾಗಿದ್ದು, ಅದು ಅಸಾಧಾರಣವೆಂದು ತೋರುತ್ತದೆ” ಎಂದು ಹೇಳಿದೆ.

“3,000 ಬಿಘಾ ಅಳತೆಯ ಇಷ್ಟು ದೊಡ್ಡ ಭೂಮಿಯನ್ನು ಕಾರ್ಖಾನೆಗೆ ಹಂಚಿಕೆ ಮಾಡುವ” ನೀತಿಯನ್ನು ಒಳಗೊಂಡಿರುವ ದಾಖಲೆಗಳನ್ನು ಪಡೆಯುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಜಿಲ್ಲೆಯ ಉಮ್ರಾಂಗ್ಸೊ ಪ್ರದೇಶವು “ವಲಸೆ ಹಕ್ಕಿಗಳು, ವನ್ಯಜೀವಿಗಳು ಇತ್ಯಾದಿಗಳಿಗೆ ಬಿಸಿನೀರಿನ ಬುಗ್ಗೆ, ನಿಲುಗಡೆ ಸ್ಥಳಗಳನ್ನು ಹೊಂದಿರುವ ಪರಿಸರ ತಾಣ” ಎಂಬುವುದನ್ನೂ ನ್ಯಾಯಾಲಯ ಗಮನಿಸಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ನಿಗದಿಪಡಿಸಿದೆ.

ವಿಚಾರಣೆ ವೇಳೆ, ನ್ಯಾಯಮೂರ್ತಿಗಳು ಸರ್ಕಾರದ ನಿರ್ಧಾರವನ್ನು ಕಂಡು ದಂಗಾಗಿದ್ದಾರೆ. ನ್ಯಾಯಾಧೀಶರು ಸರ್ಕಾರದ ವಕೀಲರನ್ನು ಕೇಳಿದ ಪ್ರಶ್ನೆಯ ವೀಡಿಯೊ ಈಗ ದೇಶಾದ್ಯಂತ ವೈರಲ್ ಆಗಿದೆ.

ನ್ಯಾಯಾಧೀಶರು ಆಶ್ಚರ್ಯ ಮತ್ತು ಆಕ್ರೋಶದಿಂದ, “ಇದೇನು ತಮಾಷೆಯೇ? ನೀವು ಇಡೀ ಜಿಲ್ಲೆಯನ್ನೇ ಕೊಡುತ್ತಿದ್ದೀರಿ. ನಿಮ್ಮ ಅಗತ್ಯ ಮುಖ್ಯವಲ್ಲ, ಸಾರ್ವಜನಿಕ ಹಿತಾಸಕ್ತಿಯೇ ಇಲ್ಲಿ ಮುಖ್ಯ,” ಎಂದು ಖಡಕ್ ಮಾತುಗಳಲ್ಲಿ ಹೇಳಿದ್ದಾರೆ.

ರಾಜ್ಯಕ್ಕೆ ಮರಳುವ ಬಂಗಾಳಿ ವಲಸೆ ಕಾರ್ಮಿಕರಿಗೆ ಮಾಸಿಕ ರೂ. 5000 ಧನ ಸಹಾಯ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...