Homeಮುಖಪುಟಖಾಸಗಿ ಸಿಮೆಂಟ್ ಕಂಪನಿಗೆ 1 ಸಾವಿರ ಎಕರೆ ಭೂಮಿ ಕೊಡಲು ಮುಂದಾದ ಅಸ್ಸಾಂ ಸರ್ಕಾರ: ಹೈಕೋರ್ಟ್...

ಖಾಸಗಿ ಸಿಮೆಂಟ್ ಕಂಪನಿಗೆ 1 ಸಾವಿರ ಎಕರೆ ಭೂಮಿ ಕೊಡಲು ಮುಂದಾದ ಅಸ್ಸಾಂ ಸರ್ಕಾರ: ಹೈಕೋರ್ಟ್ ತರಾಟೆ

- Advertisement -
- Advertisement -

ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿ 3,000 ಬಿಘಾ ಅಥವಾ ಸುಮಾರು 1 ಸಾವಿರ ಎಕರೆ ಭೂಮಿಯನ್ನು ಖಾಸಗಿ ಸಿಮೆಂಟ್ ಕಾರ್ಖಾನೆಗೆ ಮಂಜೂರು ಮಾಡಿದ್ದಕ್ಕೆ ಗುವಾಹಟಿ ಹೈಕೋರ್ಟ್ ಆಶ್ಚರ್ಯ ವ್ಯಕ್ತಪಡಿಸಿದ್ದು, ಯಾವ ನಿಯಮದಡಿ ಇಷ್ಟು ದೊಡ್ಡ ಪ್ರಮಾಣದ ಭೂಮಿ ನೀಡಲಾಗಿದೆ ಎಂದು ಉತ್ತರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಒಂದು ಸಾವಿರ ಎಕರೆ ಭೂಮಿಯನ್ನು ಒಂದು ಸಿಮೆಂಟ್ ಕಾರ್ಖಾನೆಗೆ ಧಾರೆ ಎರೆದಿರುವುದು ಕೇವಲ ಒಂದು ವ್ಯವಹಾರವಾಗಿ ಉಳಿದಿಲ್ಲ, ಇದು ಪ್ರಜಾಪ್ರಭುತ್ವದ ಅಣಕವಾಗಿದೆ ಎಂದ ಹೈಕೋರ್ಟ್ ನ್ಯಾಯಾಧೀಶ ಸಂಜಯ್ ಕುಮಾರ್ ಮೇಧಿ ಅವರು, “ಇದೇನು ತಮಾಷೆಯೇ?” ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಏನಿದು ಪ್ರಕರಣ?

2024ರ ಅಕ್ಟೋಬರ್‌ನಲ್ಲಿ ಮಹಾಬಲ್ ಸಿಮೆಂಟ್ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ದಿಮಾ ಹಸಾವೊ ಜಿಲ್ಲೆಯಲ್ಲಿ 2,000 ಬಿಘಾ ಅಥವಾ ಸುಮಾರು 650ಕ್ಕೂ ಹೆಚ್ಚು ಎಕರೆ ಭೂಮಿಯನ್ನು ಸರ್ಕಾರ ಮಂಜೂರು ಮಾಡಿತ್ತು. ಬಳಿಕ ಅದೇ ವರ್ಷ ನವೆಂಬರ್‌ನಲ್ಲಿ ಮತ್ತೆ 1000 ಸಾವಿರ ಬಿಘಾ ಅಥವಾ ಸುಮಾರು 330 ಎಕರೆ ಭೂಮಿ ಹೆಚ್ಚುವರಿಯಾಗಿದೆ ನೀಡಿದೆ.

ದಿಮಾ ಹಸಾವೊ ಅಸ್ಸಾಂನಲ್ಲಿರುವ ಬುಡಕಟ್ಟು ಜನಾಂಗದವರು ಬಹುಸಂಖ್ಯಾತರಾಗಿರುವ ಗುಡ್ಡಗಾಡು ಜಿಲ್ಲೆಯಾಗಿದೆ. ಇದನ್ನು ಸಂವಿಧಾನದ ಆರನೇ ಶೆಡ್ಯೂಲ್‌ನ ನಿಬಂಧನೆಗಳ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾದ ಉತ್ತರ ಕ್ಯಾಚರ್ ಹಿಲ್ಸ್ ಸ್ವಾಯತ್ತ ಮಂಡಳಿಯ ಮೂಲಕ ನಿರ್ವಹಿಸಲಾಗುತ್ತದೆ.

ಸಂವಿಧಾನದ ಆರನೇ ಶೆಡ್ಯೂಲ್ ಅಸ್ಸಾಂ, ಮೇಘಾಲಯ, ತ್ರಿಪುರ ಮತ್ತು ಮಿಜೋರಾಂನಲ್ಲಿನ ಬುಡಕಟ್ಟು ಪ್ರದೇಶಗಳ ಆಡಳಿತವನ್ನು ನಿಯಂತ್ರಿಸುತ್ತದೆ.

ಅಕ್ಟೋಬರ್ 2024ರಲ್ಲಿ ಸಿಮೆಂಟ್ ಕಾರ್ಖಾನೆಗೆ ಭೂಮಿ ಮಂಜೂರು ಮಾಡುವ ಆದೇಶವನ್ನು ಉತ್ತರ ಕ್ಯಾಚರ್ ಹಿಲ್ಸ್ ಸ್ವಾಯತ್ತ ಮಂಡಳಿಯ ಹೆಚ್ಚುವರಿ ಕಾರ್ಯದರ್ಶಿ (ಕಂದಾಯ) ಹೊರಡಿಸಿದ್ದರು. ಹಂಚಿಕೆಯ ಉದ್ದೇಶ ಸಿಮೆಂಟ್ ಕಾರ್ಖಾನೆ ಸ್ಥಾಪಿಸುವುದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಭೂಮಿ ಮಂಜೂರಾತಿ ವಿರುದ್ದ ಸಲ್ಲಿಸಿರುವ ಎರಡು ಅರ್ಜಿಗಳ ವಿಚಾರಣೆ ಕಳೆದವಾರ ಗುವಾಹಟಿ ಹೈಕೋರ್ಟ್‌ನಲ್ಲಿ ನಡೆದಿದೆ.

ಸಿಮೆಂಟ್ ಕಾರ್ಖಾನೆಗೆ ಕೊಡಲು ನಮ್ಮ ಭೂಮಿಯನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ದಿಮಾ ಹಸಾವೊನ ಸ್ಥಳೀಯರ ಗುಂಪೊಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.

ಈ ವರ್ಷದ ಆರಂಭದಲ್ಲಿ ಮಹಾಬಲ್ ಸಿಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯು, ನಿರ್ಮಾಣ ಕಾರ್ಯಗಳಲ್ಲಿ ‘ಸ್ಥಳೀಯ ಗ್ರಾಮಸ್ಥರು ಸೃಷ್ಟಿಸುವ ಅಡಚಣೆಗಳಿಂದ’ ರಕ್ಷಣೆ ಕೋರಿ ಆರಂಭಿಕ ಅರ್ಜಿಯನ್ನು ಸಲ್ಲಿಸಿತ್ತು.

ಆಗಸ್ಟ್ 12ರಂದು ತನ್ನ ಆದೇಶದಲ್ಲಿ ನ್ಯಾಯಾಲಯವು “ಪ್ರಕರಣದ ಸತ್ಯಾಸತ್ಯತೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಮಂಜೂರು ಮಾಡಲು ಕೋರಿರುವ ಭೂಮಿ ಸುಮಾರು 3,000 ಬಿಘಾಗಳಾಗಿದ್ದು, ಅದು ಅಸಾಧಾರಣವೆಂದು ತೋರುತ್ತದೆ” ಎಂದು ಹೇಳಿದೆ.

“3,000 ಬಿಘಾ ಅಳತೆಯ ಇಷ್ಟು ದೊಡ್ಡ ಭೂಮಿಯನ್ನು ಕಾರ್ಖಾನೆಗೆ ಹಂಚಿಕೆ ಮಾಡುವ” ನೀತಿಯನ್ನು ಒಳಗೊಂಡಿರುವ ದಾಖಲೆಗಳನ್ನು ಪಡೆಯುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಜಿಲ್ಲೆಯ ಉಮ್ರಾಂಗ್ಸೊ ಪ್ರದೇಶವು “ವಲಸೆ ಹಕ್ಕಿಗಳು, ವನ್ಯಜೀವಿಗಳು ಇತ್ಯಾದಿಗಳಿಗೆ ಬಿಸಿನೀರಿನ ಬುಗ್ಗೆ, ನಿಲುಗಡೆ ಸ್ಥಳಗಳನ್ನು ಹೊಂದಿರುವ ಪರಿಸರ ತಾಣ” ಎಂಬುವುದನ್ನೂ ನ್ಯಾಯಾಲಯ ಗಮನಿಸಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ನಿಗದಿಪಡಿಸಿದೆ.

ವಿಚಾರಣೆ ವೇಳೆ, ನ್ಯಾಯಮೂರ್ತಿಗಳು ಸರ್ಕಾರದ ನಿರ್ಧಾರವನ್ನು ಕಂಡು ದಂಗಾಗಿದ್ದಾರೆ. ನ್ಯಾಯಾಧೀಶರು ಸರ್ಕಾರದ ವಕೀಲರನ್ನು ಕೇಳಿದ ಪ್ರಶ್ನೆಯ ವೀಡಿಯೊ ಈಗ ದೇಶಾದ್ಯಂತ ವೈರಲ್ ಆಗಿದೆ.

ನ್ಯಾಯಾಧೀಶರು ಆಶ್ಚರ್ಯ ಮತ್ತು ಆಕ್ರೋಶದಿಂದ, “ಇದೇನು ತಮಾಷೆಯೇ? ನೀವು ಇಡೀ ಜಿಲ್ಲೆಯನ್ನೇ ಕೊಡುತ್ತಿದ್ದೀರಿ. ನಿಮ್ಮ ಅಗತ್ಯ ಮುಖ್ಯವಲ್ಲ, ಸಾರ್ವಜನಿಕ ಹಿತಾಸಕ್ತಿಯೇ ಇಲ್ಲಿ ಮುಖ್ಯ,” ಎಂದು ಖಡಕ್ ಮಾತುಗಳಲ್ಲಿ ಹೇಳಿದ್ದಾರೆ.

ರಾಜ್ಯಕ್ಕೆ ಮರಳುವ ಬಂಗಾಳಿ ವಲಸೆ ಕಾರ್ಮಿಕರಿಗೆ ಮಾಸಿಕ ರೂ. 5000 ಧನ ಸಹಾಯ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...