Homeಮುಖಪುಟಖಾಸಗಿ ಸಿಮೆಂಟ್ ಕಂಪನಿಗೆ 1 ಸಾವಿರ ಎಕರೆ ಭೂಮಿ ಕೊಡಲು ಮುಂದಾದ ಅಸ್ಸಾಂ ಸರ್ಕಾರ: ಹೈಕೋರ್ಟ್...

ಖಾಸಗಿ ಸಿಮೆಂಟ್ ಕಂಪನಿಗೆ 1 ಸಾವಿರ ಎಕರೆ ಭೂಮಿ ಕೊಡಲು ಮುಂದಾದ ಅಸ್ಸಾಂ ಸರ್ಕಾರ: ಹೈಕೋರ್ಟ್ ತರಾಟೆ

- Advertisement -
- Advertisement -

ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿ 3,000 ಬಿಘಾ ಅಥವಾ ಸುಮಾರು 1 ಸಾವಿರ ಎಕರೆ ಭೂಮಿಯನ್ನು ಖಾಸಗಿ ಸಿಮೆಂಟ್ ಕಾರ್ಖಾನೆಗೆ ಮಂಜೂರು ಮಾಡಿದ್ದಕ್ಕೆ ಗುವಾಹಟಿ ಹೈಕೋರ್ಟ್ ಆಶ್ಚರ್ಯ ವ್ಯಕ್ತಪಡಿಸಿದ್ದು, ಯಾವ ನಿಯಮದಡಿ ಇಷ್ಟು ದೊಡ್ಡ ಪ್ರಮಾಣದ ಭೂಮಿ ನೀಡಲಾಗಿದೆ ಎಂದು ಉತ್ತರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಒಂದು ಸಾವಿರ ಎಕರೆ ಭೂಮಿಯನ್ನು ಒಂದು ಸಿಮೆಂಟ್ ಕಾರ್ಖಾನೆಗೆ ಧಾರೆ ಎರೆದಿರುವುದು ಕೇವಲ ಒಂದು ವ್ಯವಹಾರವಾಗಿ ಉಳಿದಿಲ್ಲ, ಇದು ಪ್ರಜಾಪ್ರಭುತ್ವದ ಅಣಕವಾಗಿದೆ ಎಂದ ಹೈಕೋರ್ಟ್ ನ್ಯಾಯಾಧೀಶ ಸಂಜಯ್ ಕುಮಾರ್ ಮೇಧಿ ಅವರು, “ಇದೇನು ತಮಾಷೆಯೇ?” ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಏನಿದು ಪ್ರಕರಣ?

2024ರ ಅಕ್ಟೋಬರ್‌ನಲ್ಲಿ ಮಹಾಬಲ್ ಸಿಮೆಂಟ್ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ದಿಮಾ ಹಸಾವೊ ಜಿಲ್ಲೆಯಲ್ಲಿ 2,000 ಬಿಘಾ ಅಥವಾ ಸುಮಾರು 650ಕ್ಕೂ ಹೆಚ್ಚು ಎಕರೆ ಭೂಮಿಯನ್ನು ಸರ್ಕಾರ ಮಂಜೂರು ಮಾಡಿತ್ತು. ಬಳಿಕ ಅದೇ ವರ್ಷ ನವೆಂಬರ್‌ನಲ್ಲಿ ಮತ್ತೆ 1000 ಸಾವಿರ ಬಿಘಾ ಅಥವಾ ಸುಮಾರು 330 ಎಕರೆ ಭೂಮಿ ಹೆಚ್ಚುವರಿಯಾಗಿದೆ ನೀಡಿದೆ.

ದಿಮಾ ಹಸಾವೊ ಅಸ್ಸಾಂನಲ್ಲಿರುವ ಬುಡಕಟ್ಟು ಜನಾಂಗದವರು ಬಹುಸಂಖ್ಯಾತರಾಗಿರುವ ಗುಡ್ಡಗಾಡು ಜಿಲ್ಲೆಯಾಗಿದೆ. ಇದನ್ನು ಸಂವಿಧಾನದ ಆರನೇ ಶೆಡ್ಯೂಲ್‌ನ ನಿಬಂಧನೆಗಳ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾದ ಉತ್ತರ ಕ್ಯಾಚರ್ ಹಿಲ್ಸ್ ಸ್ವಾಯತ್ತ ಮಂಡಳಿಯ ಮೂಲಕ ನಿರ್ವಹಿಸಲಾಗುತ್ತದೆ.

ಸಂವಿಧಾನದ ಆರನೇ ಶೆಡ್ಯೂಲ್ ಅಸ್ಸಾಂ, ಮೇಘಾಲಯ, ತ್ರಿಪುರ ಮತ್ತು ಮಿಜೋರಾಂನಲ್ಲಿನ ಬುಡಕಟ್ಟು ಪ್ರದೇಶಗಳ ಆಡಳಿತವನ್ನು ನಿಯಂತ್ರಿಸುತ್ತದೆ.

ಅಕ್ಟೋಬರ್ 2024ರಲ್ಲಿ ಸಿಮೆಂಟ್ ಕಾರ್ಖಾನೆಗೆ ಭೂಮಿ ಮಂಜೂರು ಮಾಡುವ ಆದೇಶವನ್ನು ಉತ್ತರ ಕ್ಯಾಚರ್ ಹಿಲ್ಸ್ ಸ್ವಾಯತ್ತ ಮಂಡಳಿಯ ಹೆಚ್ಚುವರಿ ಕಾರ್ಯದರ್ಶಿ (ಕಂದಾಯ) ಹೊರಡಿಸಿದ್ದರು. ಹಂಚಿಕೆಯ ಉದ್ದೇಶ ಸಿಮೆಂಟ್ ಕಾರ್ಖಾನೆ ಸ್ಥಾಪಿಸುವುದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಭೂಮಿ ಮಂಜೂರಾತಿ ವಿರುದ್ದ ಸಲ್ಲಿಸಿರುವ ಎರಡು ಅರ್ಜಿಗಳ ವಿಚಾರಣೆ ಕಳೆದವಾರ ಗುವಾಹಟಿ ಹೈಕೋರ್ಟ್‌ನಲ್ಲಿ ನಡೆದಿದೆ.

ಸಿಮೆಂಟ್ ಕಾರ್ಖಾನೆಗೆ ಕೊಡಲು ನಮ್ಮ ಭೂಮಿಯನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ದಿಮಾ ಹಸಾವೊನ ಸ್ಥಳೀಯರ ಗುಂಪೊಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.

ಈ ವರ್ಷದ ಆರಂಭದಲ್ಲಿ ಮಹಾಬಲ್ ಸಿಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯು, ನಿರ್ಮಾಣ ಕಾರ್ಯಗಳಲ್ಲಿ ‘ಸ್ಥಳೀಯ ಗ್ರಾಮಸ್ಥರು ಸೃಷ್ಟಿಸುವ ಅಡಚಣೆಗಳಿಂದ’ ರಕ್ಷಣೆ ಕೋರಿ ಆರಂಭಿಕ ಅರ್ಜಿಯನ್ನು ಸಲ್ಲಿಸಿತ್ತು.

ಆಗಸ್ಟ್ 12ರಂದು ತನ್ನ ಆದೇಶದಲ್ಲಿ ನ್ಯಾಯಾಲಯವು “ಪ್ರಕರಣದ ಸತ್ಯಾಸತ್ಯತೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಮಂಜೂರು ಮಾಡಲು ಕೋರಿರುವ ಭೂಮಿ ಸುಮಾರು 3,000 ಬಿಘಾಗಳಾಗಿದ್ದು, ಅದು ಅಸಾಧಾರಣವೆಂದು ತೋರುತ್ತದೆ” ಎಂದು ಹೇಳಿದೆ.

“3,000 ಬಿಘಾ ಅಳತೆಯ ಇಷ್ಟು ದೊಡ್ಡ ಭೂಮಿಯನ್ನು ಕಾರ್ಖಾನೆಗೆ ಹಂಚಿಕೆ ಮಾಡುವ” ನೀತಿಯನ್ನು ಒಳಗೊಂಡಿರುವ ದಾಖಲೆಗಳನ್ನು ಪಡೆಯುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಜಿಲ್ಲೆಯ ಉಮ್ರಾಂಗ್ಸೊ ಪ್ರದೇಶವು “ವಲಸೆ ಹಕ್ಕಿಗಳು, ವನ್ಯಜೀವಿಗಳು ಇತ್ಯಾದಿಗಳಿಗೆ ಬಿಸಿನೀರಿನ ಬುಗ್ಗೆ, ನಿಲುಗಡೆ ಸ್ಥಳಗಳನ್ನು ಹೊಂದಿರುವ ಪರಿಸರ ತಾಣ” ಎಂಬುವುದನ್ನೂ ನ್ಯಾಯಾಲಯ ಗಮನಿಸಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ನಿಗದಿಪಡಿಸಿದೆ.

ವಿಚಾರಣೆ ವೇಳೆ, ನ್ಯಾಯಮೂರ್ತಿಗಳು ಸರ್ಕಾರದ ನಿರ್ಧಾರವನ್ನು ಕಂಡು ದಂಗಾಗಿದ್ದಾರೆ. ನ್ಯಾಯಾಧೀಶರು ಸರ್ಕಾರದ ವಕೀಲರನ್ನು ಕೇಳಿದ ಪ್ರಶ್ನೆಯ ವೀಡಿಯೊ ಈಗ ದೇಶಾದ್ಯಂತ ವೈರಲ್ ಆಗಿದೆ.

ನ್ಯಾಯಾಧೀಶರು ಆಶ್ಚರ್ಯ ಮತ್ತು ಆಕ್ರೋಶದಿಂದ, “ಇದೇನು ತಮಾಷೆಯೇ? ನೀವು ಇಡೀ ಜಿಲ್ಲೆಯನ್ನೇ ಕೊಡುತ್ತಿದ್ದೀರಿ. ನಿಮ್ಮ ಅಗತ್ಯ ಮುಖ್ಯವಲ್ಲ, ಸಾರ್ವಜನಿಕ ಹಿತಾಸಕ್ತಿಯೇ ಇಲ್ಲಿ ಮುಖ್ಯ,” ಎಂದು ಖಡಕ್ ಮಾತುಗಳಲ್ಲಿ ಹೇಳಿದ್ದಾರೆ.

ರಾಜ್ಯಕ್ಕೆ ಮರಳುವ ಬಂಗಾಳಿ ವಲಸೆ ಕಾರ್ಮಿಕರಿಗೆ ಮಾಸಿಕ ರೂ. 5000 ಧನ ಸಹಾಯ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...