Homeಅಂಕಣಗಳುಬೀದಿಗೆ ಬಿದ್ದ ತೊಗಲುಗೊಂಬೆ ಕಲಾವಿದೆ ಗೌರಮ್ಮ

ಬೀದಿಗೆ ಬಿದ್ದ ತೊಗಲುಗೊಂಬೆ ಕಲಾವಿದೆ ಗೌರಮ್ಮ

- Advertisement -
- Advertisement -
ಎಲೆಮರೆ-32

ಊರಿಂದ ಊರಿಗೆ ಸಂಚರಿಸಿ ಸಾರ್ವಜನಿಕ ಕಾರ್ಯಕ್ರಮ ಕೊಡುತ್ತಾ ಜೀವನ ನಡೆಸುತ್ತಿದ್ದ ರಾಜ್ಯದ ಸಾವಿರಾರು ಜನಪದ ಮತ್ತು ರಂಗಭೂಮಿ ಕಲಾವಿದರು ಕೋರೋನ ಲಾಕ್‍ಡೌನ್ ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಲಾವಿದರಿಗೆ ಸಂಸ್ಕೃತಿ ಇಲಾಖೆ ಎರಡು ಸಾವಿರ ಧನ ಸಹಾಯ ಘೋಷಿಸಿ ಅರ್ಜಿ ಆಹ್ವಾನಿಸಿದರೂ ಆ ಹಣವಿನ್ನು ಕಲಾವಿದರಿಗೆ ತಲುಪಿಲ್ಲ. ಅಷ್ಟಕ್ಕೂ ಈ ಅರ್ಜಿ ಹಾಕಲೂ ಗೊತ್ತಾಗದ, ಗೊತ್ತಾದರೂ ಅದಕ್ಕೆ ಬೇಕಾದ ದಾಖಲಾತಿಗಳಿಲ್ಲದ ಸಾವಿರಾರು ಕಲಾವಿದರಿಗೆ ನಿತ್ಯದ ಊಟಕ್ಕೂ ಪರದಾಡುವ ಸ್ಥಿತಿ ಬಂದಿದೆ. ಹೀಗೆ ಹುಡುಕುತ್ತಾ ಹೋದರೆ ನೂರಾರು ಕಲಾವಿದರ ಗೋಳಿನ ಕಥೆಗಳನ್ನು ಕೇಳಬಹುದಾಗಿದೆ. ಅಂತಹ ಕಲಾವಿದರಲ್ಲಿ ರಾಮನಗರದ ಚಿತ್ತಂಗ್‍ವಾಡಿಯ ಅಂಚಿನಲ್ಲಿ ಪುಟ್ಟ ಗುಡಿಸಲು ಹಾಕಿಕೊಂಡು ಒಪ್ಪತ್ತಿನ ಊಟಕ್ಕೂ ಪರದಾಡುತ್ತಾ ಸಂಕಷ್ಟಕ್ಕೆ ಸಿಲುಕಿರುವವರು ಕಲಾವಿದೆ ತೊಗಲುಗೊಂಬೆ ಗೌರಮ್ಮ.

ಈ ಪುಟ್ಟ ಗುಡಿಸಲಲ್ಲಿ ಕೂತು ಗೌರಮ್ಮನ ಕಲಾ ಬದುಕಿನ ಬಗ್ಗೆ ಕೇಳಿದರೆ, ಎಲ್ಲಾ ಸಂಕಷ್ಟಗಳನ್ನು ಮರೆತು ಚೈತನ್ಯ ಮೂಡಿದಂತೆ ಗಡುಸು ಧ್ವನಿಯಲ್ಲಿ ತನ್ನ ಕಲಾ ಬದುಕಿನ ವಿವಿಧ ಘಟ್ಟಗಳನ್ನು ಹೇಳತೊಡಗುತ್ತಾರೆ. ತನ್ನ ತಂದೆ ತಾಯಿ ಇಬ್ಬರೂ ರಂಗಭೂಮಿ ಮತ್ತು ತೊಗಲುಗೊಂಬೆ ಕಲಾವಿದರು. ತೊಗಲುಗೊಂಬೆ ಚಿತ್ರಪಟಗಳ ಜತೆ ಆಟವಾಡುತ್ತಲೇ ಗೌರಮ್ಮ ಬೆಳೆಯುತ್ತಾರೆ. ಇದು ಸಹಜವಾಗಿ ಕಲಾ ಪರಂಪರೆಯ ಕೊಂಡಿಯಂತೆ ಗೌರಮ್ಮ ಬಾಲ್ಯದಲ್ಲೆ ಪುಟ್ಟಪುಟ್ಟ ಪಾತ್ರಗಳನ್ನು ಮಾಡುತ್ತಾಳೆ. ಜಗತ್ತಿನಾದ್ಯಾಂತ ಪ್ರಚಲಿತದಲ್ಲಿರುವ ತೊಗಲುಗೊಂಬೆ ಕಲೆ ಭಾರತದ ಒಂದು ಪ್ರಾಚೀನ ಕಲೆ. ಕ್ರಿ.ಪೂ ಮೂರು ಸಾವಿರದಷ್ಟು ಹಿಂದಿನದೆಂದು ಊಹಿಸಲಾಗಿದೆ. ಕಿಳ್ಳೆಕ್ಯಾತರ ಸಮುದಾಯ ಮೂಲಪುರುಷ ಮಹಾಭಾರತದ ವನವಾಸದಲ್ಲಿ ಪಾಂಡವರನ್ನು ತೊಗಲುಗೊಂಬೆ ಆಡಿಸಿ ಮನರಂಜಿಸಿದ್ದ ಎನ್ನುವ ದಂತಕತೆಗಳಿವೆ. ಕನ್ನಡದ ಪ್ರಾಚೀನ ಪಠ್ಯಗಳಲ್ಲಿಯೂ ತೊಗಲುಗೊಂಬೆಯಾಟದ ಉಲ್ಲೇಖಗಳಿವೆ. ಕಿಳ್ಳೇಕ್ಯಾತ ಸಮುದಾಯಕ್ಕೆ ಸೇರಿದ ಕಲಕೇತ ಬೊಮ್ಮಯ್ಯ ಎಂಬ ವಚನಕಾರ 12 ನೇ ಶತಮಾನದಲ್ಲಿದ್ದ ಎನ್ನುವ ಚರ್ಚೆಗಳಿವೆ.

ಕರ್ನಾಟಕದ ಬೇರೆ ಬೇರೆ ಕಡೆಗಳಲ್ಲಿ ತೊಗಲುಗೊಂಬೆಯಾಟವನ್ನು ಬೇರೆ ಬೇರೆ ಪ್ರಾದೇಶಿಕ ಹೆಸರುಗಳಿಂದ ಕರೆಯುತ್ತಾರೆ. ಹಗರಿಬೊಮ್ಮನಹಳ್ಳಿಯ ಪಕ್ಕದ ಯಡ್ರಾಮನಹಳ್ಳಿ ದೊಡ್ಡಭರಮಪ್ಪ, ಬೆಳಗಲ್ ವೀರಣ್ಣನಂತವರು ತೊಗಲುಗೊಂಬೆಯಾಟವನ್ನು ವಿದೇಶಗಳಲ್ಲಿಯೂ ಜನಪ್ರಿಯಗೊಳಿಸಿದ್ದಾರೆ. ಇಂತಹ ಕಿಳ್ಳೇಕ್ಯಾತರ ತೊಗಲುಗೊಂಬೆಯಾಟದಲ್ಲಿ ಗಂಡಸರು ಹೆಚ್ಚು ಪ್ರಸಿದ್ಧಿಗೆ ಬಂದಿದ್ದಾರೆ. ಆದರೆ ತೆರೆಮರೆಯಲ್ಲಿ ತೊಗಲುಗೊಂಬೆಯಾಡಿಸುವ ಮಹಿಳೆಯರು ಹೆಚ್ಚು ಪ್ರಚಾರಕ್ಕೆ ಬಂದಿಲ್ಲ. ರಾಮನಗರ ಭಾಗದಲ್ಲಿ ಗೌರಮ್ಮ ತೊಗಲು ಗೊಂಬೆ ಕಲೆಯನ್ನು ಜನಪ್ರಿಯಗೊಳಿಸಿದ್ದಾರೆ. ಮುಖ್ಯವಾಗಿ ಚರ್ಮ ಹದ ಮಾಡಿ, ಬಣ್ಣ ಹೊಂದಿಸಿ, ತೊಗಲುಗೊಂಬೆ ರಚಿಸಿವುದರಿಂದ ಹಿಡಿದು ಮೂವತ್ತಕ್ಕೂ ಹೆಚ್ಚು ಕಥೆಗಳನ್ನು ತೊಗಲುಗೊಂಬೆಯಲ್ಲಿ ಪ್ರದರ್ಶನ ಮಾಡುವಷ್ಟು ಗೌರಮ್ಮ ಕಲಾ ಪ್ರವೀಣೆಯಾಗಿದ್ದಾರೆ. ಮುಖ್ಯವಾಗಿ ಗೌರಮ್ಮ ಹರಿಕಥೆಯನ್ನೂ ಹೇಳುವ ರಂಗ ಕಲಾವಿದೆ ಕೂಡ. ಈ ಕಾರಣ ಗೌರಮ್ಮನ ತೊಗಲುಗೊಂಬೆಯಾಟಕ್ಕೆ ಒಂದು ವಿಶೇಷ ಚಹರೆ ಬಂದಿದೆ.

`ನಾನು ರಂಗಭೂಮಿ ಕಲಾವಿದೆ ಕೂಡ. ಹರಿಕಥೆಯಲ್ಲಿ ಮಾತಾಡಿ ಮಾತಾಡಿ ಗಂಟಲು ಸ್ವಲ್ಪ ಒರಟಾಗಿ ಗಂಡಸಿನ ಧ್ವನಿ ಆದಂಗೆ ಆಗಿದೆ. ಹೀಗಾಗಿ ನನ್ನ ಧ್ವನಿ ಹೆಣ್ಣು ಪಾತ್ರಗಳಿಗೆ ಸರಿ ಹೋಗಲ್ಲ. ಹಂಗಾಗಿ ಹೆಣ್ಣು ಪಾತ್ರಗಳನ್ನು ನಾನು ಮಾಡೋಲ್ಲ. ಕೇವಲ ಗಂಡು ಪಾತ್ರಗಳನ್ನು ಮಾತ್ರ ಮಾಡ್ತೀನಿ. ರಾಮಾಯಣದಲ್ಲಿ ದಶರಥ, ಕುರುಕ್ಷೇತ್ರದಲ್ಲಿ ಭೀಮ, ರಾಜಾ ಸತ್ಯವ್ರತದಲ್ಲಿ ದೇವೇಂದ್ರ, ಸಾವಿತ್ರಿಯಲ್ಲಿ ಸತ್ಯವಂತ, ಸದಾರಮೆಯಲ್ಲಿ ರಾಜ ಮಾರ್ತಾಂಡ, ಆಂಜನೇಯ ಮುಂತಾದ ಬರೀ ಗಂಡು ಪಾತ್ರಗಳನ್ನು ಮಾಡುವೆ’ ಎಂದು ತನ್ನ ರಂಗಭೂಮಿ ನಂಟನ್ನು ಹಂಚಿಕೊಳ್ಳುತ್ತಾರೆ.

ಗೌರಮ್ಮನಿಗೆ ಇಬ್ಬರು ಮಕ್ಕಳು, ಒಬ್ಬರು ತಬಲಾ ಸಾತಿ, ಮತ್ತೊಬ್ಬರು ಡ್ರಾಮಾ ಮೇಷ್ಟ್ರು. ಇಬ್ಬರೂ ನಾಟಕ ಕಲಿಸುವ ಕಲಾವಿದರು. ಗೌರಮ್ಮ ಇಬ್ಬರ ಬಳಿಯೂ ಇಲ್ಲ. `ಈಗಿನ ಕಾಲದ್ ಸೊಸೆಯಂದ್ರತ್ರ ಹೆಚ್ಚು ಮಾತಾಡಿದ್ರೆ ಮನೆ ಹೊಡೆದೋಗುತ್ತೆ. ಹೆಂಗೋ ಬದುಕೊಳ್ರೀ ಅಂತ ಬಿಟ್ ಬಿಟ್ಟಿದಿನಿ. ನನ್ನ ಪಾಡಿಗೆ ನಾನಿದಿನಿ, ಎಸ್ಸಿ ಜನ ಹನುಮಂತು ಅನ್ನೋರ ಹೊಲದಲ್ಲಿ ಕೇಳಿಕೊಂಡ್ ಒಂದ್ ಸಣ್ಣ ಸೊಪ್ಪಿನ ಗುಡ್ಲು ಹಾಕೊಂಡು ಕಾಲ ಕಳಿತಿದೀನಿ. ಮೂರು ದೊಡ್ ದೊಡ್ ಆಪರೇಷನ್ ಆಗಿವೆ. ನಡೆದಾಡೋಕೆ ಆಗಲ್ಲ. ಕೂತಲ್ಲೆ ಎಲೆ ಅಡಿಕೆ ಖರ್ಚಿಗೆ ಬಳೆ ಯಾಪಾರ ಮಾಡ್ತಿದ್ದೆ. ಈ ಕೊರೋನ ಅಡ್ಡ ಬಂದು ಅದೂನು ನಿಂತೋಗಿದೆ, ಈಗ ಉಣ್ಣೋಕು ಕಷ್ಟ ಆಗೇತಿ’ ಎನ್ನುತ್ತಾರೆ.

ಇದೀಗ 66 ವರ್ಷದ ಗೌರಮ್ಮ ಈತನಕ ಎರಡು ಮೂರು ಬಾರಿ ಸಂಸ್ಕೃತಿ ಇಲಾಖೆಗೆ ಅರ್ಜಿ ಸಲ್ಲಿಸಿದರೂ ಕಲಾವಿದರ ಮಾಶಾಸನ ಈ ತನಕವೂ ಬಂದಿಲ್ಲ. ತನ್ನ ಆರೋಗ್ಯವೂ ಸರಿ ಇಲ್ಲದ ಕಾರಣ `ಏನಾದ್ರೂ ಮಾಡಾಣ ಅಂದ್ರೆ ಬದುಕಿನ ದೋಣಿನೇ ಮುರುಕಲು ಆಗೋಗಿದೆ’ ಎಂದು ಒಗಟಾಗಿ ನೋವಿನಿಂದ ನುಡಿಯುತ್ತಾರೆ. ಈಗಲೂ ಆಡ್ಸೋರು ಈಳ್ಯೆ ಕೊಟ್ರೆ ತನ್ನ ಶಿಷ್ಯರ ತಂಡಗಳನ್ನು ಕರೆಸಿ ತೊಗಲುಗೊಂಬೆಯಾಟ ಆಡಿಸುವ ಗೌರಮ್ಮ ಯಾರಾದರೂ ಕಲಿಯುವ ಆಸಕ್ತಿ ಇದ್ದವರು ಬಂದರೆ ಕಲಿಸಿಕೊಡುವೆ, ಯಾರಿಗಾದರೂ ಗೊಂಬೆಗಳು ಬೇಕಾದರೆ ಮಾಡಿಕೊಡುವೆ, ಒಟ್ನಲ್ಲಿ ಕಲೆ ಉಳಿದ್ರೆ ಸಾಕು, ಸ್ಕೂಲ್ ಮಕ್ಕಳಿಗೆ ಕಲಿ-ನಲಿ ಕಾರ್ಯಕ್ರಮದಲ್ಲಿ ಸ್ಕೂಲಲ್ಲಿ ಇರೋ ಪಾಠಗಳನ್ನೆ ಗೊಂಬೆ ಮಾಡಿ ಗೊಂಬೆಯಾಟ ಆಡ್ಸಿದಿವಿ’ ಎನ್ನುತ್ತಾರೆ.

ನಾವು ಪ್ರಾಣ ಹೋದ್ರೂನು ಗೊಂಬೆಗಳನ್ನು ಕಳೆಯೋದಿಲ್ಲ ಎನ್ನುವ ಗೌರಮ್ಮ ತಾನಿರುವ ಗುಡಿಸಲಲ್ಲಿ ಗೊಂಬೆ ಮಡಗೋಕೆ ಜಾಗ ಇಲ್ಲದ್ದಕ್ಕೆ, ಒಂದಕ್ಕೊಂಡು ಕಚ್‍ಕೊಂಡು ಬಣ್ಣನೆಲ್ಲ ಬಿಟ್ಟು ಕೆಟ್ಟೋಗತ್ತೆ ಅಂತ ಗೊಂಬೆಗಳನ್ನು ತನ್ನ ತವರು ಮನೆ ಬೆಳ್ಳೂರು ಪಕ್ಕ ಬೆಟ್ಟುಕೊಂಡನಹಳ್ಳಿಯಲ್ಲಿ ಇಟ್ಟಿದ್ದಾರೆ. `ನನ್ನ ಶಿಷ್ಯರೆಲ್ಲಾ ಬೆಳ್ಳೂರು ನಾಗಮಂಗಲ, ಕಲ್ಲೂರು ಭಾಗದಲ್ಲೆ ಇದಾರೆ. ಒಟ್ಟು ಅವರ 13 ತಂಡಗಳಿವೆ’ ಎನ್ನುವ ಗೌರಮ್ಮ, `ಈ ಸರಕಾರಕ್ಕೆ ಕಣ್ಣಿಲ್ಲ ಸರ್ ಗೋರ್ಮೆಂಟಿನೋರು ಒಂದು ಮನೆ ಕೊಟ್ರೆ, ಕಲಾವಿದರ ಮಾಶಾಸನ ಮುಂಜೂರು ಮಾಡಿದ್ರೆ ಸಾಕು ಸಾಯೋ ಕಾಲದಲ್ಲಿ ನಾಕು ದಿನನಾದ್ರೂ ನೆಮ್ಮದೀಲಿ ಬದುಕಿ ಸಾಯ್ತೀನಿ ಇದೊಂದೆ ಸರ್ ನನ್ನ ಆಸೆ’ ಎನ್ನುತ್ತಾರೆ.

ರಾಮನಗರ ಭಾಗದಲ್ಲಿ ಇಂತಹ ಜನಪದ ಕಲಾವಿದರನ್ನು ಹುಡುಕಿ, ಅವರುಗಳ ಸಂದರ್ಶನ ಮಾಡಿ ಪತ್ರಿಕೆಗಳಿಗೆ ಬರೆದು, ಸಂಬಂಧಿಸಿದ ಅಧಿಕಾರಿಗಳ ಗಮನ ಸೆಳೆದು ಕಲಾವಿದರಿಗೆ ನೆರವಾಗುವ ಕೆಲಸವನ್ನು ಯುವ ಪತ್ರಕರ್ತ ರುದ್ರೇಶ್ ಮಾಡುತ್ತಿದ್ದಾರೆ. ಹಿಂದೊಮ್ಮೆ ಗುಬ್ಬಿವೀರಣ್ಣನ ಸೊಸೆ ಶಾಂತಮ್ಮನ ಬಗ್ಗೆ ಬರೆದಾಗಲೂ ರುದ್ರೇಶ್ ಪರಿಚಯಿಸಿದ್ದರು. ಈ ಗೌರಮ್ಮನ ಬಗ್ಗೆ ಗಮನಸೆಳೆದವರೂ ಕೂಡ ರುದ್ರೇಶ್ ಅವರೆ. ಗೌರಮ್ಮನ ಕುರಿತು ಹಿಂದೆ ಪ್ರಜಾವಾಣಿಯ ಪ್ರಾದೇಶಿಕ ಪುಟದಲ್ಲಿ ಬರೆದಿದ್ದರು. ರುದ್ರೇಶ್ ಹೇಳುವಂತೆ `ಗೌರಮ್ಮನಂಥಹ ದೊಡ್ಡ ಕಲಾವಿದರಿಗೆ ಸರಕಾರ ಮಾಶಾಸನವನ್ನೂ ಕೊಡದಿರುವುದು ದುರಂತ. ಈ ಭಾಗದ ಜನಪ್ರತಿನಿಧಿಗಳು ಇಂತಹ ಕಲಾವಿದರನ್ನು ಪ್ರೋತ್ಸಾಹಿಸಬೇಕು. ನಾನೊಬ್ಬ ಪತ್ರಕರ್ತನಾಗಿ ಕಲಾವಿದರನ್ನು ಪರಿಚಯಿಸಬಹುದು, ಸಣ್ಣಪುಟ್ಟ ನೆರವು ನೀಡಬಹುದು. ಆದರೆ ಸರಕಾರ ನೆರವಿನ ಅಗತ್ಯವಿದೆ’ ಎನ್ನುತ್ತಾರೆ. ಕೊರೋನ ಲಾಕ್‍ಡೌನ ಪರಿಣಾಮ ಗೌರಮ್ಮನಂತಹ ಸಾವಿರಾರು ರಂಗಭೂಮಿ ಮತ್ತು ಜನಪದ ಕಲಾವಿದರು ಇಂದು ಬೀದಿಗೆ ಬಿದ್ದಿದ್ದಾರೆ. ಅವರ ಚೇತರಿಕೆಗೆ ಸರಕಾರದ ಯೋಜನೆಗಳು ಕಣ್ಣುಬಿಟ್ಟು ನೋಡಬೇಕಾಗಿದೆ. ಅಂತೆಯೇ ವಯಕ್ತಿಕ ನೆಲೆಯಲ್ಲಿ ಇಂತಹವರನ್ನು ಗುರುತಿಸಿ ಕೈಲಾದಷ್ಟು ನೆರವು ನೀಡಬೇಕಾಗಿದೆ.

ಈ ಬರಹ ಓದಿದವರು, ಗೌರಮ್ಮನಿಗೆ ನೆರವಾಗುವ ಮನಸ್ಸಿದ್ದರೆ ಈ ನಂಬರಿಗೆ ಸಂಪರ್ಕಿಸಿ. 9731049042.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾಚಿಕೆಯಾಗಬೇಕು, ಕರೋನ ಕರಾಳತೆಯಲ್ಲೂ ಹಣ ಲೂಟಿ ಮಾಡುವ ಈ ಕಡು ಭ್ರಷ್ಟರಿಗೆ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...