ಸಂಸದ ಗೌರವ್ ಗೊಗೊಯ್ ಅವರನ್ನು ಲೋಕಸಭೆಯಲ್ಲಿ ಪಕ್ಷದ ಉಪನಾಯಕರನ್ನಾಗಿ ಕಾಂಗ್ರೆಸ್ ನೇಮಕ ಮಾಡಿದೆ ಎಂದು ಕೆಸಿ ವೇಣುಗೋಪಾಲ್ ಭಾನುವಾರ (ಜುಲೈ 14) ಮಾಹಿತಿ ನೀಡಿದ್ದಾರೆ.
ಸಂಸದ ಕೋಡಿಕುನ್ನಿಲ್ ಸುರೇಶ್ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಿರುವ ಇತ್ತೀಚಿನ ನೇಮಕಾತಿಗಳ ಬಗ್ಗೆ ಸೋನಿಯಾ ಗಾಂಧಿ ಅವರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಸಂಸದರಾದ ಮಾಣಿಕ್ಕಂ ಟ್ಯಾಗೋರ್ ಮತ್ತು ಡಾ ಎಂಡಿ ಜವೈದ್ ಅವರನ್ನು ವಿಪ್ಗಳಾಗಿ ನೇಮಿಸಲಾಗಿದೆ.
“ಗೌರವಾನ್ವಿತ ಸಿಪಿಪಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಪನಾಯಕ, ಮುಖ್ಯ ಸಚೇತಕ ಮತ್ತು ಇಬ್ಬರು ಸಚೇತಕರ ನೇಮಕದ ಬಗ್ಗೆ ಮಾನ್ಯ ಲೋಕಸಭಾ ಸ್ಪೀಕರ್ ಅವರಿಗೆ ಪತ್ರ ಬರೆದಿದ್ದಾರೆ” ಎಂದು ವೇಣುಗೋಪಾಲ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
Hon'ble CPP Chairperson Smt. Sonia Gandhi ji has written to the Hon'ble Lok Sabha Speaker informing him about the appointment of the Deputy Leader, Chief Whip, and two Whips for the Congress Party in the Lok Sabha.
Deputy Leader – Shri @GauravGogoiAsm
Chief Whip – Shri…
— K C Venugopal (@kcvenugopalmp) July 14, 2024
ಲೋಕಸಭೆಯಲ್ಲಿ ಪ್ರತಿಪಕ್ಷಗಳ ಜತೆಗೂಡಿ ಕಾಂಗ್ರೆಸ್ ಜನಪರ ಹೋರಾಟ ನಡೆಸಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ.
“ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ, ಕಾಂಗ್ರೆಸ್ ಮತ್ತು ಇಂಡಿಯಾ ಬಣದ ಪಕ್ಷಗಳು ಲೋಕಸಭೆಯಲ್ಲಿ ಜನರ ಸಮಸ್ಯೆಗಳಿಗೆ ಶಕ್ತಿಯುತವಾಗಿ ಹೋರಾಡುತ್ತವೆ” ಎಂದು ಅವರು ಹೇಳಿದರು. ಇದಕ್ಕೂ ಮುನ್ನ ಪಕ್ಷವು ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕ ಎಂದು ಹೆಸರಿಸಿತ್ತು.
ಇದನ್ನೂ ಓದಿ; ರಾಜ್ಯಗಳ ವಿಶೇಷ ಸ್ಥಾನಮಾನವನ್ನು ನೀತಿ ಆಯೋಗ ಸ್ಪಷ್ಟವಾಗಿ ನಿರಾಕರಿಸಿದೆ: ಕೇಂದ್ರ ಸಚಿವ ಮಾಂಝಿ


