Homeಅಂಕಣಗಳುಗೌರಿ ಕಾರ್ನರ್: ಆಲ್ ಗೋರ್ ಎಂಬ ವಿಭಿನ್ನ ವ್ಯಕ್ತಿ

ಗೌರಿ ಕಾರ್ನರ್: ಆಲ್ ಗೋರ್ ಎಂಬ ವಿಭಿನ್ನ ವ್ಯಕ್ತಿ

- Advertisement -
- Advertisement -

ಅಮೆರಿಕದ ಮಾಜಿ ಉಪಾಧ್ಯಕ್ಷನಾಗಿದ್ದ, ‘An Inconvent Truth’ ಎಂಬ ಸಾಕ್ಷ್ಯ ಚಿತ್ರದಲ್ಲಿ ಭಾಗವಹಿಸಿ ಜಾಗತಿಕ ತಾಪಮಾನದ ಏರುವಿಕೆಯ ಬಗ್ಗೆ ಎಲ್ಲೆಡೆ ಎಚ್ಚರ ಮೂಡಿಸಿದ, ಅದಕ್ಕಾಗಿಯೇ ಶಾಂತಿಗಾಗಿ ನೊಬೆಲ್ ಪ್ರಶಸ್ತಿ ಪಡೆದ ಮನುಷ್ಯ ಗೋರ್.

PC : 500 Days Of Film

ಹಾಗೆ ನೋಡಿದರೆ ಗೋರ್ ಕೂಡ ಅದೆಷ್ಟೋ ಅಮೆರಿಕನ್ನರಂತೆ ಸಾಮಾನ್ಯ ಮನುಷ್ಯನಾಗುವ, ಅದನ್ನೇ ಇನ್ನೊಂದು ರೀತಿಯಲ್ಲಿ ಹೇಳುವುದಾದರೆ, ಅಮೆರಿಕದ ಹಾಲಿ ಅಧ್ಯಕ್ಷ ಜಾರ್ಜ್ ಬುಷ್‌ನಂತೆ ಯುದ್ಧಕೋರನೂ, ಅತಾರ್ಕಿಕ ವಾದಗಾರನೂ, ಆಸಂಬದ್ಧ ಚಿಂತನೆಯವನೂ ಆಗುವ ಅಪಾಯವಿತ್ತು. ಯಾಕೆಂದರೆ ಬುಷ್‌ನಂತೆ ಗೋರ್ ಕೂಡ ಹಣ ಮತ್ತು ರಾಜಕೀಯ ಹಿರಿಮೆ ಹೊಂದಿದ್ದ ವಂಶದಲ್ಲಿ ಜನಿಸಿದ್ದ, ಆತನಂತೆ ಖ್ಯಾತ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಪಡೆದ, ಕೊನೆಗೆ ಸಕ್ರಿಯ ರಾಜಕೀಯಕ್ಕೂ ಕಾಲಿಟ್ಟಿದ್ದ.

ಆದರೆ ಪ್ರತಿಯೊಬ್ಬರ ವ್ಯಕ್ತಿತ್ವವನ್ನು ರೂಪಿಸುವುದು ಅವರ ಅನುಭವಗಳು. ಉದಾಹರಣೆಗೆ ಜಾರ್ಜ್ ಬುಷ್ ತನ್ನ ವಂಶದ ಬಲ ಉಪಯೋಗಿಸಿಕೊಂಡು ವಿಯಟ್ನಾಮ್ ಯುದ್ಧದಲ್ಲಿ ’ಪಾಲ್ಗೊಂಡರು’ ಎಂದೂ ಯುದ್ಧಭೂಮಿಯಲ್ಲಿ ಕಾಲಿಡದಂತೆ ಎಚ್ಚರ ವಹಿಸಿದ. ಇಂತಹದೇ ನಕಲಿ ಪಾಲ್ಗೊಳ್ಳುವಿಕೆಯ ಅವಕಾಶ ಆಲ್ ಗೋರ್‌ಗೂ ಒದಗಿ ಬಂದಿತ್ತು. ಆದರೆ ಆ ಅವಕಾಶವನ್ನು ನಿರಾಕರಿಸಿದ್ದ ಗೋರ್. ಈ ಕಾರಣಕ್ಕೆ ಮಾತ್ರ ವಿಚಿತ್ರವಾಗಿಯೂ, ವಿಭಿನ್ನವಾಗಿಯೂ ಕಾಣಿಸುತ್ತಿದ್ದ ಮೊದಲೇ, ಆತ ನೈತಿಕ ಕಾರಣಗಳಿಗಾಗಿ ವಿಯಟ್ನಾಮ್ ಯುದ್ಧವನ್ನು ಗೋರ್ ವಿರೋಧಿಸಿದ್ದರೂ ತನ್ನ ನಾಗರಿಕ ಜವಾಬ್ದಾರಿಗಳಿಂದ ಹಿಂಜರಿಯಬಾರದೆಂದು ಸೈನ್ಯವನ್ನು ಸೇರಿದ್ದ.

PC : Wikipedia (ಜಾರ್ಜ್ ಬುಷ್)

ಆ ಯುದ್ಧದಲ್ಲಿ ತಾನು ಕಂಡದ್ದನ್ನು ಗೋರ್ ಹೀಗೆ ವಿವರಿಸುತ್ತಾನೆ: “ಆ ಯುದ್ಧ ಒಂದು ದೊಡ್ಡ ತಪ್ಪು ಎಂಬ ನನ್ನ ಅಭಿಪ್ರಾಯದಲ್ಲಿ ಯಾವ ಬದಲಾವಣೆಗಳೂ ಆಗಲಿಲ್ಲ. ಆದರೆ ಅದನ್ನು ವಿರೋಧಿಸುತ್ತಿದ್ದ ನನ್ನಂತಹವರನ್ನೂ ಅಚ್ಚರಿಗೊಳಿಸಿದ ಅಂಶ ಯಾವುದೆಂದರೆ ಅಲ್ಲಿನ ಜನ ತಮ್ಮ ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳಬೇಕೆಂದು ತೀವ್ರವಾಗಿ ಹೋರಾಟ ಮಾಡುತ್ತಿದ್ದದ್ದು.”

ಯುದ್ಧದಿಂದ ಹಿಂದಿರುಗಿದ ಗೋರ್ ತನ್ನ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿ ಐದು ವರ್ಷಗಳ ಕಾಲ ತನ್ನ ರಾಜ್ಯದಲ್ಲಿನ ಪತ್ರಿಕೆಯೊಂದರಲ್ಲಿ ವರದಿಗಾರನಾಗಿ ಕೆಲಸ ಮಾಡಿದ. ಆಗ ಆತ ಬರೆದ ತನಿಖಾ ವರದಿಗಳಿಂದಾಗಿ ಅಲ್ಲಿನ ಪೌರಾಡಳಿತದಲ್ಲಿನ ಭ್ರಷ್ಟಾಚಾರ ಬಹಿರಂಗಗೊಂಡು ಇಬ್ಬರು ಅಧಿಕಾರಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿತು. ಆದರೆ ಅದು ಗೋರ್‌ಗೆ ಸಮಾಧಾನ ತರಲಿಲ್ಲ. ಭ್ರಷ್ಟಾಚಾರವನ್ನು ಬಹಿರಂಗಗೊಳಿಸುವ ಬದಲಾಗಿ ಅದನ್ನು ತಡೆಯಬಹುದಾದ ಸ್ಥಾನದಲ್ಲಿದ್ದರೆ ವಾಸಿ ಎಂದು ನಿರ್ಧರಿಸಿದ. ಆ ನಿಟ್ಟಿನಲ್ಲಿ ವಕೀಲನಾಗಬೇಕೆಂದು ಕಾನೂನು ವಿದ್ಯಾಲಯವನ್ನು ಸೇರಿದ.

ಆದರೆ ಅದನ್ನು ಸಂಪೂರ್ಣಗೊಳಿಸುವ ಮುನ್ನ ಆತನ ಕ್ಷೇತ್ರದ ರಾಜಕೀಯ ನಾಯಕ ನಿವೃತ್ತಿ ಘೋಷಿಸಿದ. ಆ ಸ್ಥಾನಕ್ಕೆ ತಾನೇಕೆ ಸ್ಪರ್ಧಿಸಬಾರದೆಂದು ಚಿಂತಿಸಿ, ಸಕ್ರಿಯ ರಾಜಕೀಯವನ್ನು ಗೋರ್ ಪ್ರವೇಶಿಸಿದ. ಸ್ಥಳೀಯ ಚುನಾವಣೆಗಳಲ್ಲಿ ಗೆದ್ದು ರಾಜಕಾರಣಿ ಆದ. ಗೋರ್ ಅನಂತರ ಹಲವು ಬಾರಿ ಸೆನೆಟರ್ ಆಗಿಯೂ ಆಯ್ಕೆಯಾದ.

ಆದರೆ ಅಲ್ಲೂ ಗೋರ್‌ನದ್ದು ವಿಶಿಷ್ಟ ನಿಲುವುಗಳು. ಯಾವ ಸದ್ದಾಂ ಹುಸೇನನು ಸಾಮೂಹಿಕ ವಿನಾಶಕಾರಿ ಆಸ್ತ್ರಗಳನ್ನು ಹೊಂದಿದ್ದನೆಂದೂ, ಇರಾಕಿನಲ್ಲಿನ ಕುರ್ದ್ ಸಮುದಾಯದ ಜನಾಂಗೀಯ ಹತ್ಯೆ ನಡೆಸಿದ್ದನೆಂದೂ ಆತನಿಗೆ ಮೊನ್ನೆ ಅಮೆರಿಕ ಗಲ್ಲುಶಿಕ್ಷೆ ವಿಧಿಸಿತ್ತೋ, ಅದೇ ಆಮೆರಿಕ 60 ದಶಕದಲ್ಲಿ ಆದೇ ಸದ್ದಾಂನಿಗೆ ಆರ್ಥಿಕ ಮತ್ತು ಶಸ್ತ್ರಾಸ್ತ್ರಗಳ ನೆರವನ್ನು ನೀಡುತ್ತಿದ್ದನ್ನು ಆಗಲೇ ಗೋರ್ ವಿರೋಧಿಸಿದ್ದ.

PC : Wikipedia, (ರೋನಾಲ್ಡ್ ರೇಗನ್)

ಆಗ ಗೋರ್, ಸದ್ದಾಂನ ಕೃತ್ಯಗಳನ್ನು ತಡೆಯಬೇಕಾದರೆ ಆತನಿಗೆ ಅಮೆರಿಕ ಯಾವುದೇ ರೀತಿಯ ಸಹಾಯ ಮಾಡಬಾರದೆಂಬ ಕಾಯಿದೆಯನ್ನು ಸೆನೆಟ್‌ನಲ್ಲಿ ಜಾರಿಗೆ ತರಲು ಎರಡು ಬಾರಿ ಪ್ರಯತ್ನಿಸಿದ್ದ. ಆಗ ಗೋರ್‌ನನ್ನು ವಿರೋಧಿಸಿ ಆತ ರೂಪಿಸಿದ್ದ ಕಾಯಿದೆ ಅನುಷ್ಠಾನಕ್ಕೆ ಬಾರದಂತೆ ಅಂದಿನ ಅಧ್ಯಕ್ಷ ರೋನಾಲ್ಡ್ ರೇಗನ್ ಮತ್ತು ಉಪಾಧ್ಯಕ್ಷ ಜಾರ್ಜ್ ಬುಷ್‌ರ (ಹಾಲಿ ಅಧ್ಯಕ್ಷನ ತಂದೆ) ಸರ್ಕಾರ ತಡೆದಿತ್ತು. ಈ ವಿರೋಧದ ನಡುವೆಯೂ ಮತ್ತೆ 1988ರಲ್ಲಿ ಸಾಮೂಹಿಕ ಹತ್ಯಾವಿರೋಧಿ ಕಾಯಿದೆಯನ್ನು ಗೋರ್ ಸೆನೆಟ್‌ಗಳಲ್ಲಿ ಮಂಡಿಸಿದ್ದ. ಆಗ ರೇಗನ್‌ಗೆ ಗೋರ್ ಮೇಲೆ ಎಷ್ಟು ಕೋಪ ಬಂದಿತ್ತೆಂದರೆ, ತನ್ನ ಅಧ್ಯಕ್ಷ ಸ್ಥಾನ ನೀಡಿದ ವೀಟೋ ಹಕ್ಕನ್ನು ಜಾರಿಗೊಳಿಸುವುದಾಗಿ ಬೆದರಿಸಿದ್ದ.

ಇದಕ್ಕೆ ಉತ್ತರವಾಗಿ ತಾನೇ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಗೋರ್ ನಿರ್ಧರಿಸಿದ. ಅದಕ್ಕೆಂದು ಎಲ್ಲಾ ತಯಾರಿಗಳೂ ನಡೆಯುತ್ತಿದ್ದಾಗಲೇ ಅಪಘಾತವೊಂದರಲ್ಲಿ ಆತನ ಮಗನಿಗೆ ಮಾರಣಾಂತಿಕ ಗಾಯಗಳಾದವು. ತನ್ನ ಅಧ್ಯಕ್ಷ ಕನಸುಗಳನ್ನು ಬದಿಗೊತ್ತಿ ಮಗನ ಶುಶ್ರೂಷೆಗೆ ತಂದೆ ಗೋರ್ ನಿಂತ. ಹಾಗೆ ಮಗನನ್ನು ನೋಡಿಕೊಳ್ಳುತ್ತಿದ್ದಾಗಲೇ ಪರಿಸರ ರಕ್ಷಣೆಯನ್ನು ಕುರಿತು ‘Earth in the Balance’ ಎಂಬ ಪುಸ್ತಕವನ್ನು ಬರೆದ. ಇದು ಅತ್ಯಂತ ಜನಪ್ರಿಯವಾಗಿ ಅಪಾರ ಸಂಖ್ಯೆಯಲ್ಲಿ ಮಾರಾಟವಾಯಿತು. 1992ರಲ್ಲಿ ಡೆಮಾಕ್ರಾಟ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಬಿಲ್ ಕ್ಲಿಂಟನ್, ತನ್ನೊಂದಿಗೆ ಉಪಾಧ್ಯಕ್ಷ ಸ್ಥಾನದ ಸ್ಪರ್ಧಿಯಾಗಿ ಆಲ್ ಗೋರ್‌ನನ್ನು ಆಯ್ಕೆ ಮಾಡಿಕೊಂಡ. ಆ ಚುನಾವಣೆಯಲ್ಲಿ ಅವರಿಬ್ಬರೂ ಗೆದ್ದರು. ಮಾತ್ರವಲ್ಲ; ಉಪಾಧ್ಯಕ್ಷನಾಗಿ ಪರಿಸರ ರಕ್ಷಣೆಯ ನಿಟ್ಟಿನಲ್ಲಿ ಹಲವು ಕಾನೂನುಗಳು ಜಾರಿಗೆ ಬರುವಂತೆ ಗೋರ್ ನೋಡಿಕೊಂಡ.

ಎಂಟು ವರ್ಷಗಳ ಕಾಲ ಉಪಾಧ್ಯಕ್ಷನಾದ ಗೋರ್ 2000ರಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ. ಆ ಚುನಾವಣೆಯಲ್ಲಿ ಮತಚೀಟಿಗಳಲ್ಲಿ ಗೊಂದಲ ಸೃಷ್ಟಿಯಾಗಿ ಅಮೆರಿಕದ ಸರ್ವೋಚ್ಚ ನ್ಯಾಯಾಲಯ ಗೋರ್‌ನ ಪ್ರತಿಸ್ಪರ್ಧಿ ಜಾರ್ಜ್ ಬುಷ್ ಗೆದ್ದಿದ್ದಾನೆಂದು ಘೋಷಿಸಿತು. ಈ ತೀರ್ಪನ್ನು ಗೋರ್ ಪ್ರಶ್ನಿಸಬಹುದಿತ್ತು. ಆದರೆ ಆತ ಹಾಗೆ ಮಾಡಲಿಲ್ಲ. ಬದಲಾಗಿ, “ನಮ್ಮ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಮತ್ತು ಜನರ ಐಕ್ಯತೆಯನ್ನು ಕಾಪಾಡಲು ಈ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ” ಎಂದು ಹೇಳಿ ತನ್ನ ಸಜ್ಜನಿಕೆಯನ್ನು ಮೆರೆದ. ವಾಸ್ತವವಾಗಿ ಆ ಚುನಾವಣೆಗಳಲ್ಲಿ ಬುಷ್‌ಗಿಂತಲೂ ಗೋರ್‌ಗೆ ಐವತ್ತು ಲಕ್ಷ ಹೆಚ್ಚು ಜನಪ್ರಿಯ ಮತಗಳು ಬಂದಿದ್ದವು! ಆದ್ದರಿಂದ ಆತ ಮತ್ತೆ 2004ರಲ್ಲಿ ಬುಷ್ ವಿರುದ್ಧ ಸ್ಪರ್ಧಿಸಬೇಕೆಂಬ ಒತ್ತಡ ಪ್ರಾರಂಭವಾಯಿತು. ಇದಕ್ಕೆ ಮಣಿಯದ ಗೋರ್ ’ನಾನು ಸ್ಪರ್ಧಿಸುವುದಿಲ್ಲ, ಬದಲಾಗಿ ಹೊಸ ಮುಖಗಳು ಬರಲಿ’ ಎಂದು ಹೇಳಿ ಸುಮ್ಮನಾದ.

PC : Wikipedia

ಗೋರ್‌ನ ಭಾಷಣಗಳು ಎಷ್ಟು ಜನಪ್ರಿಯತೆ ಪಡೆದವೆಂದರೆ ಅದಕ್ಕೆಂದು ನೀಡುತ್ತಿದ್ದ ಟಿಕೆಟ್‌ಗಳು ಕ್ಷಣಾರ್ಧದಲ್ಲಿ ಮಾರಾಟವಾಗುತ್ತಿದ್ದವು. ಇದು ಹಲವಾರು ಕಡೆ ನಡೆದಾಗ ಗೋರ್‌ರವರ ಈ ಭಾಷಣವನ್ನೆ ಯಾಕೆ ಒಂದು ಸಾಕ್ಷ್ಯ ಚಿತ್ರವನ್ನಾಗಿಸಬಾರದು ಎಂಬ ಚಿಂತನೆ ಡೇವಿಸ್ ಗುಗನ್‌ಹೈಮ್ ಎಂಬುವವರಲ್ಲಿ ಮೂಡಿತು. ಅದರ ಪರಿಣಾಮವೇ ‘An Inconvenient Truth’ ಎಂಬ ಚಿತ್ರ. ಅದಕ್ಕೆ ಸಾಕ್ಷ್ಯ ಚಿತ್ರಗಳ ವಿಭಾಗದಲ್ಲಿ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯೂ ಲಭಿಸಿತು.

ಇದೆಲ್ಲದರ ಮಧ್ಯೆ ಗೋರ್ ಬುಷ್‌ರವರ ಯುದ್ಧಕೋರತನವನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಸೆಪ್ಟೆಂಬರ್ 11ರಂದು ಅಮೆರಿಕದ ಮೇಲೆ ನಡೆದ ದಾಳಿಯನ್ನೇ ನೆಪವಾಗಿಟ್ಟುಕೊಂಡು ಇರಾಕಿನ ಮೇಲೆ ನಡೆಸಿದ ದಾಳಿಯನ್ನು ಕಟುವಾಗಿ ಟೀಕಿಸಿರುವ ಗೋರ್ ಬುಷ್‌ನ ಈ ನೀತಿಯನ್ನು ವಿರೋಧಿಸುವವರಿಗೆ ಧನಸಹಾಯ ಮಾಡುತ್ತಾ ಬಂದಿದ್ದಾರೆ.

ಅಲ್ ಗೋರ್ ನಿಜವಾಗಲೂ ವಿಭಿನ್ನ ವ್ಯಕ್ತಿತ್ವದ ಮನುಷ್ಯ. ನಮ್ಮ ಭೂಮಿಯನ್ನು ನಮ್ಮ ಮಕ್ಕಳಿಗಾಗಿ ಮೊಮ್ಮಕ್ಕಳಿಗಾಗಿ ಉಳಿಸಬೇಕೆಂಬುದರ ಬಗ್ಗೆ ಜಾಗತಿಕ ಎಚ್ಚರಿಕೆಯನ್ನು ನೀಡಿದ ವ್ಯಕ್ತಿ. ಇಂತಹ ವ್ಯಕ್ತಿಗೆ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿದೆ. ಹಾಗೆ ನೋಡಿದರೆ ರಕ್ತಸಿಕ್ತ ಯುದ್ಧಗಳನ್ನು ನಿಲ್ಲಿಸಿದ್ದಕ್ಕೆ ಅಥವಾ ತಡೆದಿದ್ದಕ್ಕೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈಗ ಪ್ರಕೃತಿಯೊಂದಿಗೆ ಮಾನವ ನಡೆಸುತ್ತಿರುವ ವಿನಾಶಕಾರಿ ಯುದ್ಧವನ್ನು ತುರ್ತಾಗಿ ತಡೆಯಬೇಕು ಎಂದಿದ್ದಕ್ಕೆ ಗೋರ್‌ಗೆ ಇದನ್ನು ನೀಡಲಾಗಿದೆ.

(ಅಕ್ಟೋಬರ್ 24, 2007ರಂದು ಬರೆದಿದ್ದ ಗೌರಿಯವರ ಕಂಡಹಾಗೆ ಅಂಕಣದ ಸಂಗ್ರಹ ಭಾಗ ಇದು)


ಇದನ್ನೂ ಓದಿ: ಕ್ಯಾಪಿಟಲ್ ಮೇಲೆ ದಾಳಿ – ಟ್ರಂಪ್ ಪದಚ್ಯುತಿಗೆ ಮುಂದಾದ ಅಮೆರಿಕ ಸಂಸತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...