Homeಗೌರಿ ಲಂಕೇಶ್ವಿದ್ಯಾರ್ಥಿ ಮಿತ್ರರಾಗಿ ಸ್ಫೂರ್ತಿ ತುಂಬುತ್ತಿದ್ದ ಗೌರಿ ಮೇಡಂ

ವಿದ್ಯಾರ್ಥಿ ಮಿತ್ರರಾಗಿ ಸ್ಫೂರ್ತಿ ತುಂಬುತ್ತಿದ್ದ ಗೌರಿ ಮೇಡಂ

ಮೋದಿಯನ್ನು ವಿರೋಧಿಸಲಿಕ್ಕೆ ನೂರಾರು ವಿಷಯಗಳಿವೆ. ಆದರೆ ಇಂಗ್ಲಿಷ್ ಬಾರದ ವಿಚಾರಕ್ಕೆ ಅವರನ್ನು ಟ್ರೋಲ್ ಮಾಡುವುದು ಸರಿಯಲ್ಲ ಎಂದು ಗೌರಿ ಮೇಡಂ ನಮಗೆ ತಿಳಿಹೇಳಿದ್ದರು.

- Advertisement -
- Advertisement -

2007ರಲ್ಲಿ ನನಗೆ ಗೌರಿ ಲಂಕೇಶ್ ಪತ್ರಿಕೆ ಎಂದರೆ ಶಿವಸುಂದರ್ ಬರೆಯುತ್ತಿದ್ದ ಚಾರ್ವಾಕ ಅಂಕಣ ಎಂದಷ್ಟೇ ಗೊತ್ತಿತ್ತು. 2009ರ ಮಾರ್ಚ್ 08ರಂದು ಬೆಂಗಳೂರಿನಲ್ಲಿ ಪಿ.ಲಂಕೇಶ್‍ರವರ ಜನ್ಮದಿನ ಕಾರ್ಯಕ್ರಮದಲ್ಲಿ ಗೌರಿ ಮೇಡಂರವರನ್ನು ಮೊದಲ ಸಾರಿ ನೋಡಿದ್ದೆ. ಅಳುತ್ತಲೇ ಲಂಕೇಶ್‍ರವರನ್ನು ಕುರಿತು ಅವರು ಮಾತನಾಡಿದ್ದರು. ಅಲ್ಲಿಂದ ನಿಧಾನವಾಗಿ ಇಡೀ ಪತ್ರಿಕೆ ಇಷ್ಟವಾಗತೊಡಗಿತ್ತು. ಆದರೆ 2013ರ ಒಂದು ಸಂಚಿಕೆಯಲ್ಲಿ ‘ಪತ್ನಿ ಪೀಡಿತರ ಕಥೆ ವ್ಯಥೆ’ ಎಂಬ ಅಂಕಣ ಆರಂಭವಾಯ್ತು. ಮುಂದಿನ ವಾರಕ್ಕೆ ‘ಆ ಅಂಕಣ ಆರಂಭಿಸಿರುವುದರಿಂದ ದೊಡ್ಡ ಆಘಾತವಾಯಿತು’ ಎಂದು ಪತ್ರ ಬರೆದೆ. ಅದನ್ನು ಗೌರಿ ಮೇಡಂ ಪೂರ್ತಿಯಾಗಿ ಪ್ರಕಟಿಸಿದರು. ಏನಪ್ಪ ಮರಿ ಆಘಾತವಾಯ್ತ ಎಂದು ನಗುತ್ತಲೇ ಪ್ರಶ್ನಿಸಿದ ಅವರು ಆನಂತರ ಆ ಅಂಕಣ ನಿಲ್ಲಿಸಿದ್ದು ಸಮಾಧಾನ ತಂದಿತ್ತು.

ಗೌರಿ ಮೇಡಂ ಮತ್ತು ಪತ್ರಿಕೆ ಎಂದರೆ, ಅದು ನಮ್ಮದು ಎಂಬ ಸಲಿಗೆ ನನಗಿತ್ತು. ನಾನು ವಿದ್ಯಾರ್ಥಿ ಕಾರ್ಯಕರ್ತನಾಗಿದ್ದಾಗ ಎಷ್ಟೋ ಬಾರಿ ನಮ್ಮ ಹೋರಾಟಗಳಿಗೆ ಗೌರಿ ಮೇಡಂ ದೇಣಿಗೆ ನೀಡಿದ್ದಾರೆ. ಅವರು ಕಷ್ಟದಲ್ಲಿದ್ದರೂ ಸಹ ನಮಗೆಂದು ಹಣ ಇಲ್ಲ ಎಂದು ಹೇಳಿದ ನೆನಪಿಲ್ಲ.

2013-14 ರಲ್ಲಿ ಮೋದಿ ಹವಾ ಜೋರಾಗುತ್ತಿತ್ತು. ಬಿಜೆಪಿಯ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಮೋದಿ ಘೋಷಣೆಯಾದ ನಂತರವಂತೂ ಸಾಮಾಜಿಕ ಜಾಲತಾಣದಲ್ಲಿ ಮೋದಿ ಮತ್ತು ಅವರು ಪ್ರತಿನಿಧಿಸುತ್ತಿದ್ದ ಸಿದ್ಧಾಂತದ ವಿರೋಧಿಗಳಾದ ನಮ್ಮನ್ನು ಟ್ರೋಲ್ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿ ನಾವು ಕೂಡ ಮೋದಿಯವರಿಗೆ ಇಂಗ್ಲಿಷ್ ಬರುವುದಿಲ್ಲ ಎಂಬ ವಿಷಯವಾಗಿ ವಿಡಿಯೋವೊಂದನ್ನು ಷೇರ್ ಮಾಡಿ ಟ್ರೋಲ್ ಮಾಡಲು ಮುಂದಾದಾಗ ಗೌರಿ ಮೇಡಂ ಅದನ್ನು ತಡೆದಿದ್ದರು. ಮೋದಿಯನ್ನು ವಿರೋಧಿಸಲಿಕ್ಕೆ ನೂರಾರು ವಿಷಯಗಳಿವೆ. ಆದರೆ ಇಂಗ್ಲಿಷ್ ಬಾರದ ವಿಚಾರಕ್ಕೆ ಅವರನ್ನು ಟ್ರೋಲ್ ಮಾಡುವುದು ಸರಿಯಲ್ಲ ಎಂದು ಗೌರಿ ಮೇಡಂ ನಮಗೆ ತಿಳಿಹೇಳಿದ್ದರು. ಆಗ ಅವರ ಮೇಲಿನ ನಮ್ಮ ಗೌರವ ಇಮ್ಮಡಿಯಾಗಿತ್ತು.

2016ರ ಜನವರಿ 16 ಈ ದೇಶದ ಯುವ ಪ್ರತಿಭಾವಂತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾರವರು ಸಾಂಸ್ಥಿಕ ಹತ್ಯೆಯಾದ ದಿನ. ಆಗ ಗೌರಿ ಮೇಡಂ ತುಂಬಾ ನೊಂದುಕೊಂಡಿದ್ದರು. ಆನಂತರ ಅವರು ಯುವ ಹೋರಾಟಗಾರ ಕನ್ಹಯ್ಯ ಕುಮಾರ್, ಉಮರ್ ಖಾಲಿದ್, ಜಿಗ್ನೇಶ್ ಮೇವಾನಿಯವರನ್ನು ತನ್ನ ಮಕ್ಕಳೆಂದು ಭಾವಿಸಿದರು. ಆಗ ಗೌರಿ ಮೇಡಂ ಜೊತೆಗಿನ ನನ್ನ ಒಡನಾಟ ಕೂಡ ಹೆಚ್ಚಾಯಿತು. ಹೀಗೆ ಒಮ್ಮೆ ಗೌರಿ ಮೇಡಂ ಆಫೀಸ್‍ಗೆ ಹೋಗಿದ್ದಾಗ ಅವರು ಬಾ ಮರಿ ಇಲ್ಲಿ ಎಂದು ಕರೆದು, ರೋಹಿತ್ ವೇಮುಲಾನ ಸ್ನೇಹಿತ ವಿ.ಸುಂಕಣ್ಣ ಪ್ರತಿರೋಧದ ಸಂಕೇತವಾಗಿ ಹೈದರಾಬಾದ್ ಕೇಂದ್ರೀಯ ವಿವಿಯ ಕುಲಪತಿ ಅಪ್ಪರಾವ್‍ರಿಂದ ತನ್ನ ಪಿಎಚ್‍ಡಿ ಪ್ರಮಾಣ ಪತ್ರ ಪಡೆಯಲು ನಿರಾಕರಿಸಿದ್ದ ವಿಡಿಯೋವನ್ನು ನಾಲ್ಕೈದು ಬಾರಿ ತೋರಿಸಿ ಸಮಾಧಾನಪಟ್ಟಿದ್ದರು.

ನಕ್ಸಲ್ ಚಳವಳಿಯಿಂದ ನೂರ್ ಶ್ರೀಧರ್ ಮತ್ತು ಸಿರಿಮನೆ ನಾಗರಾಜ್‍ರವರು ಮುಖ್ಯವಾಹಿನಿಗೆ ಬರುವುದರಲ್ಲಿ, ಭೂಮಿ ಮತ್ತು ವಸತಿ ಹೋರಾಟವನ್ನು ಸರ್ಕಾರದ ಗಮನಕ್ಕೆ ತರುವುದರಲ್ಲಿ ಗೌರಿ ಮೇಡಂ ಶ್ರಮವಿತ್ತು. ನಂತರ ನಡೆದ ಉಡುಪಿ ಚಲೋ, ತುಮಕೂರು ಚಲೋ ಹೋರಾಟಗಳಲ್ಲಿ ಕೂಡ ಅವರು ಸಕ್ರಿಯವಾಗಿ ತೊಡಗಿಸಿಕೊಂಡು ನಮಗೆ ಸ್ಫೂರ್ತಿ ನೀಡಿದರು.

ನಂತರ ನಾನು ಗಂಗಾವತಿಯಲ್ಲಿದ್ದುಕೊಂಡು ವಿದ್ಯಾರ್ಥಿ ಚಳವಳಿಯಲ್ಲಿ ತೊಡಗಿಕೊಳ್ಳುತ್ತಲೇ ಬಳ್ಳಾರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಕುರಿತು ‘ಗೌರಿ ಲಂಕೇಶ್’ ಪತ್ರಿಕೆಗೆ ವರದಿ ಮಾಡುತ್ತಿದ್ದೆ. ಆಗ ಒಂದು ತಿಂಗಳು ಪೂರ್ತಿ ಬಳ್ಳಾರಿಯ ಶಾಸಕ ಅನಿಲ್ ಲಾಡ್‍ರವರ ಅಕ್ರಮ ಗಣಿಗಾರಿಕೆ, ಜಿಂದಾಲ್ ಕಂಪನಿಯ ಪರಿಸರ ನಾಶದ ವಿರುದ್ಧ ವರದಿ ಮಾಡಿದ್ದೆ. ಆಗೊಮ್ಮೆ ಬೆಂಗಳೂರಿನಲ್ಲಿ ಸಿಕ್ಕಿದ ಮೇಡಂ, ಅನಿಲ್ ಲಾಡ್ ನನ್ ಫ್ರೆಂಡು ಕಣಪ್ಪ ಅನ್ನುತ್ತಿರುವಾಗಲೇ ಮಧ್ಯೆ ಬಾಯಿ ಹಾಕಿದ ನಾನು ‘ನಿಮ್ ಫ್ರೆಂಡ್ ಆದರೆ ಬಿಟ್ಟುಬಿಡಬೇಕಾ?’ ಎಂದು ಪ್ರಶ್ನಿಸಿದೆ. ಆಗ ಅವರು ಇಲ್ಲ, ಇಲ್ಲ ಬರಿ ಸುಮ್ನೆ ಹೇಳಿದೆ ಅಷ್ಟೇ ಎಂದರು.

2017ರ ಆಗಸ್ಟ್ 5-6 ರಂದು ಬೆಂಗಳೂರಿನಲ್ಲಿ “ಹೋರಾಟನಿರತ ವಿದ್ಯಾರ್ಥಿ ಸಂಘಟನೆಗಳ ರಾಷ್ಟ್ರೀಯ ಸಮಾವೇಶ” ಹಮ್ಮಿಕೊಂಡಿದ್ದವು. ವಿವಿಧ ರಾಜ್ಯಗಳ ನೂರಾರು ವಿದ್ಯಾರ್ಥಿ ಮುಖಂಡರು ಬೆಂಗಳೂರಿಗೆ ಆಗಮಿಸಿದ್ದರು. ಆಗ ಗೌರಿ ಮೇಡಂ ಸಂತೋಷಕ್ಕೆ ಪಾರವೇ ಇರಲಿಲ್ಲ. ಈ ವಿದ್ಯಾರ್ಥಿಗಳೇ ದೇಶದ ಭವಿಷ್ಯ ಎಂದು ಗೌರಿ ಮೇಡಂ ನಂಬಿದ್ದರು.

ಈಗ ನಾನ್ಯಾಕೆ ಅವರ ಮೇಲೆ ಅಷ್ಟು ಜೋರು ಮಾಡುತ್ತಿದ್ದೆ ಅನಿಸುತ್ತದೆ. ಅವರ ಜೊತೆ ಸಾಕಷ್ಟು ಜಗಳವಾಡುವ ಅವಕಾಶ ನಮಗಿತ್ತು. ಅವರು ಪತ್ರಿಕೆ ನಡೆಸುವುದನ್ನೇ ಸಾಮಾಜಿಕ ಹೋರಾಟ ಅಂದುಕೊಂಡಿದ್ದಾರೆ, ಬೀದಿಗೆ ಬರಲಿ ಅವರಿಗೆ ಗೊತ್ತಾಗುತ್ತದೆ ಎಂದು ನಾನು ಕೆಲವೊಮ್ಮೆ ಗೊಣಗಿದುಂಟು. ಈಗ ಅವರಿಲ್ಲದಾಗ, ಮುಖ್ಯವಾಹಿನಿ ಮಾಧ್ಯಮಗಳು ಮಾರಿಕೊಂಡಿರುವಾಗಿ, ಒಂದು ಸ್ವತಂತ್ರ ಪತ್ರಿಕೆ ನಡೆಸುವುದು ಎಷ್ಟು ಕಷ್ಟ ಎಂದು ಅರಿವಿಗೆ ಬರುತ್ತಿದೆ.

  • ಮುತ್ತುರಾಜು

ಇದನ್ನೂ ಓದಿ: ಗೌರಿ ಕಾರ್ನರ್: ಗೌರಿ ಲಂಕೇಶರ ಮೇಲೆ ಮತ್ತೆ ನೀಚಮಟ್ಟದ ದಾಳಿ- ನಾವು ಪ್ರತಿಕ್ರಿಯೆ ನೀಡುವುದು ಸರಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...