Homeಗೌರಿ ಲಂಕೇಶ್ವಿದ್ಯಾರ್ಥಿ ಮಿತ್ರರಾಗಿ ಸ್ಫೂರ್ತಿ ತುಂಬುತ್ತಿದ್ದ ಗೌರಿ ಮೇಡಂ

ವಿದ್ಯಾರ್ಥಿ ಮಿತ್ರರಾಗಿ ಸ್ಫೂರ್ತಿ ತುಂಬುತ್ತಿದ್ದ ಗೌರಿ ಮೇಡಂ

ಮೋದಿಯನ್ನು ವಿರೋಧಿಸಲಿಕ್ಕೆ ನೂರಾರು ವಿಷಯಗಳಿವೆ. ಆದರೆ ಇಂಗ್ಲಿಷ್ ಬಾರದ ವಿಚಾರಕ್ಕೆ ಅವರನ್ನು ಟ್ರೋಲ್ ಮಾಡುವುದು ಸರಿಯಲ್ಲ ಎಂದು ಗೌರಿ ಮೇಡಂ ನಮಗೆ ತಿಳಿಹೇಳಿದ್ದರು.

- Advertisement -
- Advertisement -

2007ರಲ್ಲಿ ನನಗೆ ಗೌರಿ ಲಂಕೇಶ್ ಪತ್ರಿಕೆ ಎಂದರೆ ಶಿವಸುಂದರ್ ಬರೆಯುತ್ತಿದ್ದ ಚಾರ್ವಾಕ ಅಂಕಣ ಎಂದಷ್ಟೇ ಗೊತ್ತಿತ್ತು. 2009ರ ಮಾರ್ಚ್ 08ರಂದು ಬೆಂಗಳೂರಿನಲ್ಲಿ ಪಿ.ಲಂಕೇಶ್‍ರವರ ಜನ್ಮದಿನ ಕಾರ್ಯಕ್ರಮದಲ್ಲಿ ಗೌರಿ ಮೇಡಂರವರನ್ನು ಮೊದಲ ಸಾರಿ ನೋಡಿದ್ದೆ. ಅಳುತ್ತಲೇ ಲಂಕೇಶ್‍ರವರನ್ನು ಕುರಿತು ಅವರು ಮಾತನಾಡಿದ್ದರು. ಅಲ್ಲಿಂದ ನಿಧಾನವಾಗಿ ಇಡೀ ಪತ್ರಿಕೆ ಇಷ್ಟವಾಗತೊಡಗಿತ್ತು. ಆದರೆ 2013ರ ಒಂದು ಸಂಚಿಕೆಯಲ್ಲಿ ‘ಪತ್ನಿ ಪೀಡಿತರ ಕಥೆ ವ್ಯಥೆ’ ಎಂಬ ಅಂಕಣ ಆರಂಭವಾಯ್ತು. ಮುಂದಿನ ವಾರಕ್ಕೆ ‘ಆ ಅಂಕಣ ಆರಂಭಿಸಿರುವುದರಿಂದ ದೊಡ್ಡ ಆಘಾತವಾಯಿತು’ ಎಂದು ಪತ್ರ ಬರೆದೆ. ಅದನ್ನು ಗೌರಿ ಮೇಡಂ ಪೂರ್ತಿಯಾಗಿ ಪ್ರಕಟಿಸಿದರು. ಏನಪ್ಪ ಮರಿ ಆಘಾತವಾಯ್ತ ಎಂದು ನಗುತ್ತಲೇ ಪ್ರಶ್ನಿಸಿದ ಅವರು ಆನಂತರ ಆ ಅಂಕಣ ನಿಲ್ಲಿಸಿದ್ದು ಸಮಾಧಾನ ತಂದಿತ್ತು.

ಗೌರಿ ಮೇಡಂ ಮತ್ತು ಪತ್ರಿಕೆ ಎಂದರೆ, ಅದು ನಮ್ಮದು ಎಂಬ ಸಲಿಗೆ ನನಗಿತ್ತು. ನಾನು ವಿದ್ಯಾರ್ಥಿ ಕಾರ್ಯಕರ್ತನಾಗಿದ್ದಾಗ ಎಷ್ಟೋ ಬಾರಿ ನಮ್ಮ ಹೋರಾಟಗಳಿಗೆ ಗೌರಿ ಮೇಡಂ ದೇಣಿಗೆ ನೀಡಿದ್ದಾರೆ. ಅವರು ಕಷ್ಟದಲ್ಲಿದ್ದರೂ ಸಹ ನಮಗೆಂದು ಹಣ ಇಲ್ಲ ಎಂದು ಹೇಳಿದ ನೆನಪಿಲ್ಲ.

2013-14 ರಲ್ಲಿ ಮೋದಿ ಹವಾ ಜೋರಾಗುತ್ತಿತ್ತು. ಬಿಜೆಪಿಯ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಮೋದಿ ಘೋಷಣೆಯಾದ ನಂತರವಂತೂ ಸಾಮಾಜಿಕ ಜಾಲತಾಣದಲ್ಲಿ ಮೋದಿ ಮತ್ತು ಅವರು ಪ್ರತಿನಿಧಿಸುತ್ತಿದ್ದ ಸಿದ್ಧಾಂತದ ವಿರೋಧಿಗಳಾದ ನಮ್ಮನ್ನು ಟ್ರೋಲ್ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿ ನಾವು ಕೂಡ ಮೋದಿಯವರಿಗೆ ಇಂಗ್ಲಿಷ್ ಬರುವುದಿಲ್ಲ ಎಂಬ ವಿಷಯವಾಗಿ ವಿಡಿಯೋವೊಂದನ್ನು ಷೇರ್ ಮಾಡಿ ಟ್ರೋಲ್ ಮಾಡಲು ಮುಂದಾದಾಗ ಗೌರಿ ಮೇಡಂ ಅದನ್ನು ತಡೆದಿದ್ದರು. ಮೋದಿಯನ್ನು ವಿರೋಧಿಸಲಿಕ್ಕೆ ನೂರಾರು ವಿಷಯಗಳಿವೆ. ಆದರೆ ಇಂಗ್ಲಿಷ್ ಬಾರದ ವಿಚಾರಕ್ಕೆ ಅವರನ್ನು ಟ್ರೋಲ್ ಮಾಡುವುದು ಸರಿಯಲ್ಲ ಎಂದು ಗೌರಿ ಮೇಡಂ ನಮಗೆ ತಿಳಿಹೇಳಿದ್ದರು. ಆಗ ಅವರ ಮೇಲಿನ ನಮ್ಮ ಗೌರವ ಇಮ್ಮಡಿಯಾಗಿತ್ತು.

2016ರ ಜನವರಿ 16 ಈ ದೇಶದ ಯುವ ಪ್ರತಿಭಾವಂತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾರವರು ಸಾಂಸ್ಥಿಕ ಹತ್ಯೆಯಾದ ದಿನ. ಆಗ ಗೌರಿ ಮೇಡಂ ತುಂಬಾ ನೊಂದುಕೊಂಡಿದ್ದರು. ಆನಂತರ ಅವರು ಯುವ ಹೋರಾಟಗಾರ ಕನ್ಹಯ್ಯ ಕುಮಾರ್, ಉಮರ್ ಖಾಲಿದ್, ಜಿಗ್ನೇಶ್ ಮೇವಾನಿಯವರನ್ನು ತನ್ನ ಮಕ್ಕಳೆಂದು ಭಾವಿಸಿದರು. ಆಗ ಗೌರಿ ಮೇಡಂ ಜೊತೆಗಿನ ನನ್ನ ಒಡನಾಟ ಕೂಡ ಹೆಚ್ಚಾಯಿತು. ಹೀಗೆ ಒಮ್ಮೆ ಗೌರಿ ಮೇಡಂ ಆಫೀಸ್‍ಗೆ ಹೋಗಿದ್ದಾಗ ಅವರು ಬಾ ಮರಿ ಇಲ್ಲಿ ಎಂದು ಕರೆದು, ರೋಹಿತ್ ವೇಮುಲಾನ ಸ್ನೇಹಿತ ವಿ.ಸುಂಕಣ್ಣ ಪ್ರತಿರೋಧದ ಸಂಕೇತವಾಗಿ ಹೈದರಾಬಾದ್ ಕೇಂದ್ರೀಯ ವಿವಿಯ ಕುಲಪತಿ ಅಪ್ಪರಾವ್‍ರಿಂದ ತನ್ನ ಪಿಎಚ್‍ಡಿ ಪ್ರಮಾಣ ಪತ್ರ ಪಡೆಯಲು ನಿರಾಕರಿಸಿದ್ದ ವಿಡಿಯೋವನ್ನು ನಾಲ್ಕೈದು ಬಾರಿ ತೋರಿಸಿ ಸಮಾಧಾನಪಟ್ಟಿದ್ದರು.

ನಕ್ಸಲ್ ಚಳವಳಿಯಿಂದ ನೂರ್ ಶ್ರೀಧರ್ ಮತ್ತು ಸಿರಿಮನೆ ನಾಗರಾಜ್‍ರವರು ಮುಖ್ಯವಾಹಿನಿಗೆ ಬರುವುದರಲ್ಲಿ, ಭೂಮಿ ಮತ್ತು ವಸತಿ ಹೋರಾಟವನ್ನು ಸರ್ಕಾರದ ಗಮನಕ್ಕೆ ತರುವುದರಲ್ಲಿ ಗೌರಿ ಮೇಡಂ ಶ್ರಮವಿತ್ತು. ನಂತರ ನಡೆದ ಉಡುಪಿ ಚಲೋ, ತುಮಕೂರು ಚಲೋ ಹೋರಾಟಗಳಲ್ಲಿ ಕೂಡ ಅವರು ಸಕ್ರಿಯವಾಗಿ ತೊಡಗಿಸಿಕೊಂಡು ನಮಗೆ ಸ್ಫೂರ್ತಿ ನೀಡಿದರು.

ನಂತರ ನಾನು ಗಂಗಾವತಿಯಲ್ಲಿದ್ದುಕೊಂಡು ವಿದ್ಯಾರ್ಥಿ ಚಳವಳಿಯಲ್ಲಿ ತೊಡಗಿಕೊಳ್ಳುತ್ತಲೇ ಬಳ್ಳಾರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಕುರಿತು ‘ಗೌರಿ ಲಂಕೇಶ್’ ಪತ್ರಿಕೆಗೆ ವರದಿ ಮಾಡುತ್ತಿದ್ದೆ. ಆಗ ಒಂದು ತಿಂಗಳು ಪೂರ್ತಿ ಬಳ್ಳಾರಿಯ ಶಾಸಕ ಅನಿಲ್ ಲಾಡ್‍ರವರ ಅಕ್ರಮ ಗಣಿಗಾರಿಕೆ, ಜಿಂದಾಲ್ ಕಂಪನಿಯ ಪರಿಸರ ನಾಶದ ವಿರುದ್ಧ ವರದಿ ಮಾಡಿದ್ದೆ. ಆಗೊಮ್ಮೆ ಬೆಂಗಳೂರಿನಲ್ಲಿ ಸಿಕ್ಕಿದ ಮೇಡಂ, ಅನಿಲ್ ಲಾಡ್ ನನ್ ಫ್ರೆಂಡು ಕಣಪ್ಪ ಅನ್ನುತ್ತಿರುವಾಗಲೇ ಮಧ್ಯೆ ಬಾಯಿ ಹಾಕಿದ ನಾನು ‘ನಿಮ್ ಫ್ರೆಂಡ್ ಆದರೆ ಬಿಟ್ಟುಬಿಡಬೇಕಾ?’ ಎಂದು ಪ್ರಶ್ನಿಸಿದೆ. ಆಗ ಅವರು ಇಲ್ಲ, ಇಲ್ಲ ಬರಿ ಸುಮ್ನೆ ಹೇಳಿದೆ ಅಷ್ಟೇ ಎಂದರು.

2017ರ ಆಗಸ್ಟ್ 5-6 ರಂದು ಬೆಂಗಳೂರಿನಲ್ಲಿ “ಹೋರಾಟನಿರತ ವಿದ್ಯಾರ್ಥಿ ಸಂಘಟನೆಗಳ ರಾಷ್ಟ್ರೀಯ ಸಮಾವೇಶ” ಹಮ್ಮಿಕೊಂಡಿದ್ದವು. ವಿವಿಧ ರಾಜ್ಯಗಳ ನೂರಾರು ವಿದ್ಯಾರ್ಥಿ ಮುಖಂಡರು ಬೆಂಗಳೂರಿಗೆ ಆಗಮಿಸಿದ್ದರು. ಆಗ ಗೌರಿ ಮೇಡಂ ಸಂತೋಷಕ್ಕೆ ಪಾರವೇ ಇರಲಿಲ್ಲ. ಈ ವಿದ್ಯಾರ್ಥಿಗಳೇ ದೇಶದ ಭವಿಷ್ಯ ಎಂದು ಗೌರಿ ಮೇಡಂ ನಂಬಿದ್ದರು.

ಈಗ ನಾನ್ಯಾಕೆ ಅವರ ಮೇಲೆ ಅಷ್ಟು ಜೋರು ಮಾಡುತ್ತಿದ್ದೆ ಅನಿಸುತ್ತದೆ. ಅವರ ಜೊತೆ ಸಾಕಷ್ಟು ಜಗಳವಾಡುವ ಅವಕಾಶ ನಮಗಿತ್ತು. ಅವರು ಪತ್ರಿಕೆ ನಡೆಸುವುದನ್ನೇ ಸಾಮಾಜಿಕ ಹೋರಾಟ ಅಂದುಕೊಂಡಿದ್ದಾರೆ, ಬೀದಿಗೆ ಬರಲಿ ಅವರಿಗೆ ಗೊತ್ತಾಗುತ್ತದೆ ಎಂದು ನಾನು ಕೆಲವೊಮ್ಮೆ ಗೊಣಗಿದುಂಟು. ಈಗ ಅವರಿಲ್ಲದಾಗ, ಮುಖ್ಯವಾಹಿನಿ ಮಾಧ್ಯಮಗಳು ಮಾರಿಕೊಂಡಿರುವಾಗಿ, ಒಂದು ಸ್ವತಂತ್ರ ಪತ್ರಿಕೆ ನಡೆಸುವುದು ಎಷ್ಟು ಕಷ್ಟ ಎಂದು ಅರಿವಿಗೆ ಬರುತ್ತಿದೆ.

  • ಮುತ್ತುರಾಜು

ಇದನ್ನೂ ಓದಿ: ಗೌರಿ ಕಾರ್ನರ್: ಗೌರಿ ಲಂಕೇಶರ ಮೇಲೆ ಮತ್ತೆ ನೀಚಮಟ್ಟದ ದಾಳಿ- ನಾವು ಪ್ರತಿಕ್ರಿಯೆ ನೀಡುವುದು ಸರಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...