Homeಗೌರಿ ಲಂಕೇಶ್ವಿದ್ಯಾರ್ಥಿ ಮಿತ್ರರಾಗಿ ಸ್ಫೂರ್ತಿ ತುಂಬುತ್ತಿದ್ದ ಗೌರಿ ಮೇಡಂ

ವಿದ್ಯಾರ್ಥಿ ಮಿತ್ರರಾಗಿ ಸ್ಫೂರ್ತಿ ತುಂಬುತ್ತಿದ್ದ ಗೌರಿ ಮೇಡಂ

ಮೋದಿಯನ್ನು ವಿರೋಧಿಸಲಿಕ್ಕೆ ನೂರಾರು ವಿಷಯಗಳಿವೆ. ಆದರೆ ಇಂಗ್ಲಿಷ್ ಬಾರದ ವಿಚಾರಕ್ಕೆ ಅವರನ್ನು ಟ್ರೋಲ್ ಮಾಡುವುದು ಸರಿಯಲ್ಲ ಎಂದು ಗೌರಿ ಮೇಡಂ ನಮಗೆ ತಿಳಿಹೇಳಿದ್ದರು.

- Advertisement -
- Advertisement -

2007ರಲ್ಲಿ ನನಗೆ ಗೌರಿ ಲಂಕೇಶ್ ಪತ್ರಿಕೆ ಎಂದರೆ ಶಿವಸುಂದರ್ ಬರೆಯುತ್ತಿದ್ದ ಚಾರ್ವಾಕ ಅಂಕಣ ಎಂದಷ್ಟೇ ಗೊತ್ತಿತ್ತು. 2009ರ ಮಾರ್ಚ್ 08ರಂದು ಬೆಂಗಳೂರಿನಲ್ಲಿ ಪಿ.ಲಂಕೇಶ್‍ರವರ ಜನ್ಮದಿನ ಕಾರ್ಯಕ್ರಮದಲ್ಲಿ ಗೌರಿ ಮೇಡಂರವರನ್ನು ಮೊದಲ ಸಾರಿ ನೋಡಿದ್ದೆ. ಅಳುತ್ತಲೇ ಲಂಕೇಶ್‍ರವರನ್ನು ಕುರಿತು ಅವರು ಮಾತನಾಡಿದ್ದರು. ಅಲ್ಲಿಂದ ನಿಧಾನವಾಗಿ ಇಡೀ ಪತ್ರಿಕೆ ಇಷ್ಟವಾಗತೊಡಗಿತ್ತು. ಆದರೆ 2013ರ ಒಂದು ಸಂಚಿಕೆಯಲ್ಲಿ ‘ಪತ್ನಿ ಪೀಡಿತರ ಕಥೆ ವ್ಯಥೆ’ ಎಂಬ ಅಂಕಣ ಆರಂಭವಾಯ್ತು. ಮುಂದಿನ ವಾರಕ್ಕೆ ‘ಆ ಅಂಕಣ ಆರಂಭಿಸಿರುವುದರಿಂದ ದೊಡ್ಡ ಆಘಾತವಾಯಿತು’ ಎಂದು ಪತ್ರ ಬರೆದೆ. ಅದನ್ನು ಗೌರಿ ಮೇಡಂ ಪೂರ್ತಿಯಾಗಿ ಪ್ರಕಟಿಸಿದರು. ಏನಪ್ಪ ಮರಿ ಆಘಾತವಾಯ್ತ ಎಂದು ನಗುತ್ತಲೇ ಪ್ರಶ್ನಿಸಿದ ಅವರು ಆನಂತರ ಆ ಅಂಕಣ ನಿಲ್ಲಿಸಿದ್ದು ಸಮಾಧಾನ ತಂದಿತ್ತು.

ಗೌರಿ ಮೇಡಂ ಮತ್ತು ಪತ್ರಿಕೆ ಎಂದರೆ, ಅದು ನಮ್ಮದು ಎಂಬ ಸಲಿಗೆ ನನಗಿತ್ತು. ನಾನು ವಿದ್ಯಾರ್ಥಿ ಕಾರ್ಯಕರ್ತನಾಗಿದ್ದಾಗ ಎಷ್ಟೋ ಬಾರಿ ನಮ್ಮ ಹೋರಾಟಗಳಿಗೆ ಗೌರಿ ಮೇಡಂ ದೇಣಿಗೆ ನೀಡಿದ್ದಾರೆ. ಅವರು ಕಷ್ಟದಲ್ಲಿದ್ದರೂ ಸಹ ನಮಗೆಂದು ಹಣ ಇಲ್ಲ ಎಂದು ಹೇಳಿದ ನೆನಪಿಲ್ಲ.

2013-14 ರಲ್ಲಿ ಮೋದಿ ಹವಾ ಜೋರಾಗುತ್ತಿತ್ತು. ಬಿಜೆಪಿಯ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಮೋದಿ ಘೋಷಣೆಯಾದ ನಂತರವಂತೂ ಸಾಮಾಜಿಕ ಜಾಲತಾಣದಲ್ಲಿ ಮೋದಿ ಮತ್ತು ಅವರು ಪ್ರತಿನಿಧಿಸುತ್ತಿದ್ದ ಸಿದ್ಧಾಂತದ ವಿರೋಧಿಗಳಾದ ನಮ್ಮನ್ನು ಟ್ರೋಲ್ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿ ನಾವು ಕೂಡ ಮೋದಿಯವರಿಗೆ ಇಂಗ್ಲಿಷ್ ಬರುವುದಿಲ್ಲ ಎಂಬ ವಿಷಯವಾಗಿ ವಿಡಿಯೋವೊಂದನ್ನು ಷೇರ್ ಮಾಡಿ ಟ್ರೋಲ್ ಮಾಡಲು ಮುಂದಾದಾಗ ಗೌರಿ ಮೇಡಂ ಅದನ್ನು ತಡೆದಿದ್ದರು. ಮೋದಿಯನ್ನು ವಿರೋಧಿಸಲಿಕ್ಕೆ ನೂರಾರು ವಿಷಯಗಳಿವೆ. ಆದರೆ ಇಂಗ್ಲಿಷ್ ಬಾರದ ವಿಚಾರಕ್ಕೆ ಅವರನ್ನು ಟ್ರೋಲ್ ಮಾಡುವುದು ಸರಿಯಲ್ಲ ಎಂದು ಗೌರಿ ಮೇಡಂ ನಮಗೆ ತಿಳಿಹೇಳಿದ್ದರು. ಆಗ ಅವರ ಮೇಲಿನ ನಮ್ಮ ಗೌರವ ಇಮ್ಮಡಿಯಾಗಿತ್ತು.

2016ರ ಜನವರಿ 16 ಈ ದೇಶದ ಯುವ ಪ್ರತಿಭಾವಂತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾರವರು ಸಾಂಸ್ಥಿಕ ಹತ್ಯೆಯಾದ ದಿನ. ಆಗ ಗೌರಿ ಮೇಡಂ ತುಂಬಾ ನೊಂದುಕೊಂಡಿದ್ದರು. ಆನಂತರ ಅವರು ಯುವ ಹೋರಾಟಗಾರ ಕನ್ಹಯ್ಯ ಕುಮಾರ್, ಉಮರ್ ಖಾಲಿದ್, ಜಿಗ್ನೇಶ್ ಮೇವಾನಿಯವರನ್ನು ತನ್ನ ಮಕ್ಕಳೆಂದು ಭಾವಿಸಿದರು. ಆಗ ಗೌರಿ ಮೇಡಂ ಜೊತೆಗಿನ ನನ್ನ ಒಡನಾಟ ಕೂಡ ಹೆಚ್ಚಾಯಿತು. ಹೀಗೆ ಒಮ್ಮೆ ಗೌರಿ ಮೇಡಂ ಆಫೀಸ್‍ಗೆ ಹೋಗಿದ್ದಾಗ ಅವರು ಬಾ ಮರಿ ಇಲ್ಲಿ ಎಂದು ಕರೆದು, ರೋಹಿತ್ ವೇಮುಲಾನ ಸ್ನೇಹಿತ ವಿ.ಸುಂಕಣ್ಣ ಪ್ರತಿರೋಧದ ಸಂಕೇತವಾಗಿ ಹೈದರಾಬಾದ್ ಕೇಂದ್ರೀಯ ವಿವಿಯ ಕುಲಪತಿ ಅಪ್ಪರಾವ್‍ರಿಂದ ತನ್ನ ಪಿಎಚ್‍ಡಿ ಪ್ರಮಾಣ ಪತ್ರ ಪಡೆಯಲು ನಿರಾಕರಿಸಿದ್ದ ವಿಡಿಯೋವನ್ನು ನಾಲ್ಕೈದು ಬಾರಿ ತೋರಿಸಿ ಸಮಾಧಾನಪಟ್ಟಿದ್ದರು.

ನಕ್ಸಲ್ ಚಳವಳಿಯಿಂದ ನೂರ್ ಶ್ರೀಧರ್ ಮತ್ತು ಸಿರಿಮನೆ ನಾಗರಾಜ್‍ರವರು ಮುಖ್ಯವಾಹಿನಿಗೆ ಬರುವುದರಲ್ಲಿ, ಭೂಮಿ ಮತ್ತು ವಸತಿ ಹೋರಾಟವನ್ನು ಸರ್ಕಾರದ ಗಮನಕ್ಕೆ ತರುವುದರಲ್ಲಿ ಗೌರಿ ಮೇಡಂ ಶ್ರಮವಿತ್ತು. ನಂತರ ನಡೆದ ಉಡುಪಿ ಚಲೋ, ತುಮಕೂರು ಚಲೋ ಹೋರಾಟಗಳಲ್ಲಿ ಕೂಡ ಅವರು ಸಕ್ರಿಯವಾಗಿ ತೊಡಗಿಸಿಕೊಂಡು ನಮಗೆ ಸ್ಫೂರ್ತಿ ನೀಡಿದರು.

ನಂತರ ನಾನು ಗಂಗಾವತಿಯಲ್ಲಿದ್ದುಕೊಂಡು ವಿದ್ಯಾರ್ಥಿ ಚಳವಳಿಯಲ್ಲಿ ತೊಡಗಿಕೊಳ್ಳುತ್ತಲೇ ಬಳ್ಳಾರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಕುರಿತು ‘ಗೌರಿ ಲಂಕೇಶ್’ ಪತ್ರಿಕೆಗೆ ವರದಿ ಮಾಡುತ್ತಿದ್ದೆ. ಆಗ ಒಂದು ತಿಂಗಳು ಪೂರ್ತಿ ಬಳ್ಳಾರಿಯ ಶಾಸಕ ಅನಿಲ್ ಲಾಡ್‍ರವರ ಅಕ್ರಮ ಗಣಿಗಾರಿಕೆ, ಜಿಂದಾಲ್ ಕಂಪನಿಯ ಪರಿಸರ ನಾಶದ ವಿರುದ್ಧ ವರದಿ ಮಾಡಿದ್ದೆ. ಆಗೊಮ್ಮೆ ಬೆಂಗಳೂರಿನಲ್ಲಿ ಸಿಕ್ಕಿದ ಮೇಡಂ, ಅನಿಲ್ ಲಾಡ್ ನನ್ ಫ್ರೆಂಡು ಕಣಪ್ಪ ಅನ್ನುತ್ತಿರುವಾಗಲೇ ಮಧ್ಯೆ ಬಾಯಿ ಹಾಕಿದ ನಾನು ‘ನಿಮ್ ಫ್ರೆಂಡ್ ಆದರೆ ಬಿಟ್ಟುಬಿಡಬೇಕಾ?’ ಎಂದು ಪ್ರಶ್ನಿಸಿದೆ. ಆಗ ಅವರು ಇಲ್ಲ, ಇಲ್ಲ ಬರಿ ಸುಮ್ನೆ ಹೇಳಿದೆ ಅಷ್ಟೇ ಎಂದರು.

2017ರ ಆಗಸ್ಟ್ 5-6 ರಂದು ಬೆಂಗಳೂರಿನಲ್ಲಿ “ಹೋರಾಟನಿರತ ವಿದ್ಯಾರ್ಥಿ ಸಂಘಟನೆಗಳ ರಾಷ್ಟ್ರೀಯ ಸಮಾವೇಶ” ಹಮ್ಮಿಕೊಂಡಿದ್ದವು. ವಿವಿಧ ರಾಜ್ಯಗಳ ನೂರಾರು ವಿದ್ಯಾರ್ಥಿ ಮುಖಂಡರು ಬೆಂಗಳೂರಿಗೆ ಆಗಮಿಸಿದ್ದರು. ಆಗ ಗೌರಿ ಮೇಡಂ ಸಂತೋಷಕ್ಕೆ ಪಾರವೇ ಇರಲಿಲ್ಲ. ಈ ವಿದ್ಯಾರ್ಥಿಗಳೇ ದೇಶದ ಭವಿಷ್ಯ ಎಂದು ಗೌರಿ ಮೇಡಂ ನಂಬಿದ್ದರು.

ಈಗ ನಾನ್ಯಾಕೆ ಅವರ ಮೇಲೆ ಅಷ್ಟು ಜೋರು ಮಾಡುತ್ತಿದ್ದೆ ಅನಿಸುತ್ತದೆ. ಅವರ ಜೊತೆ ಸಾಕಷ್ಟು ಜಗಳವಾಡುವ ಅವಕಾಶ ನಮಗಿತ್ತು. ಅವರು ಪತ್ರಿಕೆ ನಡೆಸುವುದನ್ನೇ ಸಾಮಾಜಿಕ ಹೋರಾಟ ಅಂದುಕೊಂಡಿದ್ದಾರೆ, ಬೀದಿಗೆ ಬರಲಿ ಅವರಿಗೆ ಗೊತ್ತಾಗುತ್ತದೆ ಎಂದು ನಾನು ಕೆಲವೊಮ್ಮೆ ಗೊಣಗಿದುಂಟು. ಈಗ ಅವರಿಲ್ಲದಾಗ, ಮುಖ್ಯವಾಹಿನಿ ಮಾಧ್ಯಮಗಳು ಮಾರಿಕೊಂಡಿರುವಾಗಿ, ಒಂದು ಸ್ವತಂತ್ರ ಪತ್ರಿಕೆ ನಡೆಸುವುದು ಎಷ್ಟು ಕಷ್ಟ ಎಂದು ಅರಿವಿಗೆ ಬರುತ್ತಿದೆ.

  • ಮುತ್ತುರಾಜು

ಇದನ್ನೂ ಓದಿ: ಗೌರಿ ಕಾರ್ನರ್: ಗೌರಿ ಲಂಕೇಶರ ಮೇಲೆ ಮತ್ತೆ ನೀಚಮಟ್ಟದ ದಾಳಿ- ನಾವು ಪ್ರತಿಕ್ರಿಯೆ ನೀಡುವುದು ಸರಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...