Homeಅಂಕಣಗಳುಗೌರಿ ಕಾರ್ನರ್: ನಮ್ಮನ್ನೆಲ್ಲ ತಿದ್ದಿ ಗೆಳೆಯರಂತೆ ನೋಡಿಕೊಳ್ಳುತ್ತಿದ್ದರು...

ಗೌರಿ ಕಾರ್ನರ್: ನಮ್ಮನ್ನೆಲ್ಲ ತಿದ್ದಿ ಗೆಳೆಯರಂತೆ ನೋಡಿಕೊಳ್ಳುತ್ತಿದ್ದರು…

ಅವರು ಬಿಸಿ ರಕ್ತದ ಯುವಜನರಿಗೆ ಸೈದ್ಧಾಂತಿಕವಾಗಿ ಇರಬೇಕಾದ ಸ್ಪಷ್ಟತೆಯ ಬಗ್ಗೆ ತಿಳಿಹೇಳಿದ್ದರು. ಅಲ್ಲದೇ ತಮ್ಮದೇ ಉದಾಹರಣೆಯನ್ನು ನೀಡುತ್ತಾ ತಮಗೆ ಗೊತ್ತಿಲ್ಲದ್ದನ್ನು ಗೊತ್ತಿಲ್ಲ ಎಂದು ಧೈರ್ಯವಾಗಿಯೇ ದಾಖಲಿಸುತ್ತಿದ್ದರು.

- Advertisement -
- Advertisement -

ಬಲಪಂಥೀಯವಾದವನ್ನು ವಿರೋಧಿಸುವ ಭರದಲ್ಲಿ ಒಮ್ಮೊಮ್ಮೆ ನಾವು ಕುರುಡಾಗುವುದುಂಟು. ಮೋದಿ ಮಾಡಿದ್ದೆವೂ ತಪ್ಪು, ಆತನ ಕುರಿತು ಏನಾದರು ಸಿಕ್ಕರೆ ಸಾಕು ತಮಾಷೆ ಮಾಡಲು ಕಾಯುತ್ತಿದ್ದ ನಮ್ಮಂಥ ಯುವಕರಿಗೆ ಗೌರಿ ಮೇಡಂ ನಮ್ಮ ವಿರೋಧ ಏನಿದ್ದರೂ ಸೈದ್ಧಾಂತಿಕವಾದದ್ದು ಎನ್ನುವ ಪಾಠ ಕಲಿಸಿದ್ದರು! ’ಬೂಸಿ ಬಸ್ಯಾ ಮೋದಿ’ ಎನ್ನುವ ಕಾಲಂಅನ್ನು 50 ವಾರದ ಗಡಿಯವರೆಗೂ ಪ್ರಕಟಿಸಿದ್ದ ಗೌರಿ ಮೇಡಂ, ನರೇಂದ್ರ ಮೋದಿ ಒಮ್ಮೆ ಶ್ರೀಲಂಕಾ ಪ್ರವಾಸದಲ್ಲಿ ಇಂಗ್ಲಿಷ್‌ನಲ್ಲಿ ಮಾತನಾಡುತ್ತಾ ಮಾಡಿದ ಯಡವಟ್ಟಿನ ಭಾಷಣದ ತುಣುಕು ಹಿಡಿದುಕೊಂಡು ನಾವೆಲ್ಲ ತಮಾಷೆ ಮಾಡುವಾಗ, “ಭಾಷೆ ಬರಲ್ಲ ಅನ್ನುವ ಕಾರಣಕ್ಕೆ ಹಾಗೆಲ್ಲ ಆಡಿಕೊಳ್ಳಬಾರದು ಮರಿ” ಎಂದು ಎಚ್ಚರಿಸಿದ್ದರು. ಅಲ್ಲದೆ ಅವರು ಈ ಕುರಿತ ತಮಾಷೆಯನ್ನು ತಮ್ಮ ಫೇಸ್ಬುಕ್ ವಾಲ್ ಹಾಗೂ ಅಂಕಣದಲ್ಲಿಯೂ ದಾಖಲಿಸಿ ಗಟ್ಟಿದನಿಯಲ್ಲಿಯೇ ವಿರೋಧಿಸಿದ್ದರು. “ತಾವು ಬೆಳೆದಿರುವ ವಾತಾವರಣ ಮತ್ತು ಅವಕಾಶಗಳ ಕಾರಣಕ್ಕಾಗಿ ವ್ಯಕ್ತಿಯ ಭಾಷೆಯು ವಿಕಾಸವಾಗುತ್ತದೆ. ನಾನು ಕನ್ನಡ ಪತ್ರಿಕೋದ್ಯಮಕ್ಕೆ ಕಾಲಿಟ್ಟಾಗ ಕಾಗುಣಿತ ತಪ್ಪುಗಳನ್ನು ಮಾಡುತ್ತಿದ್ದೆ. ಇಂದಿಗೂ ನನಗೆ ಕನ್ನಡ ಇಂಗ್ಲಿಷ್‌ನಷ್ಟು ಸುಲಭವಲ್ಲ ಎನ್ನುವುದು ಅವರ ಅಭಿಪ್ರಾಯವಾಗಿತ್ತು.

ಹೀಗೆ ಹೇಳುತ್ತಾ ಅವರು ಬಿಸಿ ರಕ್ತದ ಯುವಜನರಿಗೆ ಸೈದ್ಧಾಂತಿಕವಾಗಿ ಇರಬೇಕಾದ ಸ್ಪಷ್ಟತೆಯ ಬಗ್ಗೆ ತಿಳಿಹೇಳಿದ್ದರು. ಅಲ್ಲದೇ ತಮ್ಮದೇ ಉದಾಹರಣೆಯನ್ನು ನೀಡುತ್ತಾ ತಮಗೆ ಗೊತ್ತಿಲ್ಲದ್ದನ್ನು ಗೊತ್ತಿಲ್ಲ ಎಂದು ಧೈರ್ಯವಾಗಿಯೇ ದಾಖಲಿಸುತ್ತಿದ್ದರು. ರೋಹಿತ್ ವೇಮುಲಾನ ಸಾಂಸ್ಥಿಕ ಹತ್ಯೆಯ ಘಟನೆಗೆ ಸಂಬಂಧಿಸಿದಂತೆ ಗೌರಿ ಮೇಡಂ ದಲಿತ ಯುವ ಹೋರಾಟಗಾರರನ್ನು ಒಂದು ಕಡೆ ಸೇರಿಸಿ ಸಭೆ ಕರೆದಿದ್ದರು. ಸಭೆಯಲ್ಲಿ ಮುಂದಿನ ನಮ್ಮ ಹೋರಾಟದ ಕುರಿತು ಒಂದು ನೋಟ್ ಬರೆಯಬೇಕು ಎಂದು ತೀರ್ಮಾನವಾದಾಗ ಗೌರಿ ಮೇಡಂ ಬರಿಯಬೇಕು ಎನ್ನುವುದು ಎಲ್ಲರ ಅಭಿಪ್ರಾಯವಾಗಿತ್ತು. ಆಗ ಗೌರಿ ಮೇಡಂ “ಹೇಯ್ ಇಲ್ಲಪ್ಪ ಅದೆಲ್ಲ ನನಿಗೆ ಬರಿಯೋಕೆ ಬರಲ್ಲ. ನನ್ನ ಕೈಲಿ ಆಗಲ್ಲ, ಸರೋವರ್ ಅಥವಾ ಹುಲಿಕುಂಟೆ ಮೂರ್ತಿ ಬರೆಯಲಿ” ಎಂದರು.

ಸಂಘಟನೆ ಹೋರಾಟಗಳಿಗೆ ಹೊಸಬನಾಗಿದ್ದ ನನಗೂ ಏನು ಬರೆಯುವುದೆಂದು ತಿಳಿದಿರಲಿಲ್ಲ. ಒಳಗೆ ಪುಕಪುಕ ಎನ್ನುತ್ತಿದ್ದರೂ ಬರಿಯೋಕೆ ಬರಲ್ಲ ಎನ್ನುವ ಧೈರ್ಯ ನಾನು ಮಾಡಲಿಲ್ಲ. ಅಷ್ಟರಲ್ಲಿ ಹುಲಿಕುಂಟೆ ಮೂರ್ತಿ ಅವರು ಬರೆಯಲು ಒಪ್ಪಿಕೊಂಡಾಗ ಸಮಾಧಾನವಾಯಿತು. ಆದರೆ ಗೌರಿ ಮೇಡಂನಿಂದಾಗಿ ಅಂದು ನಾನು ಗೊತ್ತಿಲ್ಲದ್ದನ್ನು ಗೊತ್ತಿಲ್ಲ ಎಂದು ಹೇಳುವ ಧೈರ್ಯವನ್ನು ತೋರಿಸಬೇಕು ಎನ್ನುವುದನ್ನು ಕಲಿತುಕೊಂಡೆ. ಅಷ್ಟೇ ಅಲ್ಲದೆ ಯುವ ಬರಹಗಾರರಿಗೆ ಅವಕಾಶ ನೀಡುವುದು ಅವರ ಉದ್ದೇಶವಾಗಿತ್ತು ಎನ್ನುವುದನ್ನೂ.

ಇನ್ನು ಅವರು ತಮ್ಮ ಮೇಲೆ ಬರುವ ವಿಮರ್ಶೆಯನ್ನು ಬಹಳ ಸ್ಪೋರ್ಟಿವ್ ಆಗಿ ತಗೆದುಕೊಳ್ಳುತ್ತಿದ್ದರು. ಪತ್ರಿಕೆಯಲ್ಲಿ ತಪ್ಪಾದಾಗ ’ತಪ್ಪಾಯಿತು ತಿದ್ಕೋತೀವಿ’ ಎನ್ನುವ ತಲೆಬರಹದಲ್ಲಿಯೇ ಪ್ರಕಟಣೆ ಮಾಡುತ್ತಿದ್ದದ್ದು ನಮಗೆಲ್ಲಾ ತಿಳಿದೇ ಇದೆ. ಹೆಚ್.ಎಲ್.ಕೆ ಅವರ ನೆನಪಿನಲ್ಲಿ ಫೇಸ್ಬುಕ್‌ನಲ್ಲಿ ಅವರ ಕುರಿತು ಟಿಪ್ಪಣಿ ಬರೆದು ಹಂಚಿಕೊಂಡಿದ್ದೆ. ಅದರಲ್ಲಿ ನಾನು “ಗೆಳೆಯರು ಗೌರಿ ಲಂಕೇಶ್ ಪತ್ರಿಕೆಯನ್ನು ನಿಯತವಾಗಿ ಓದಬೇಕು ಎನ್ನುವ ಸಲುವಾಗಿ ಪತ್ರಿಕೆ ಕೊಂಡುಕೊಂಡು ಓದಲು ಪ್ರಯತ್ನಿಸುತ್ತಿದ್ದೆ. ಆದರೆ ಶಿವಸುಂದರ್, ಗೌರಿ ಲಂಕೇಶರ ಲೇಖನಗಳು ತಲೆಬುಡ ಅರ್ಥವಾಗುತ್ತಿರಲಿಲ್ಲ. ವ್ಯಂಗ್ಯ ಮತ್ತು ಆಡುಭಾಷೆಯಲ್ಲಿ ನಮಗೆ ರಾಜಕೀಯವನ್ನು ಅರ್ಥ ಮಾಡಿಕೊಳ್ಳಲು ಕಾರಣವಾಗಿದ್ದು ಎಚ್.ಎಲ್.ಕೆ ಅವರಿಂದ” ಎಂದು ಬರೆದಿದ್ದೆ. ಅದನ್ನು ಓದಿದ ಗೌರಿ ಮೇಡಂ ಶಿವಸುಂದರ್ ಅವರ ಫೋನಿನಿಂದ ಕಾಲ್ ಮಾಡಿಸಿ, “ಏನೋ ನಾನು ಬರಿಯೋದು ತಲೆಬುಡ ಅರ್ಥವಾಗಲ್ವ, ನನ್ನ ಕೈಗೆ ಸಿಗು ನಿನ್ನ ಕೈಕಾಲು ಮುರೀತೀನಿ ಮಗನೆ” ಎಂದು ಹೇಳಿ ನಕ್ಕರು. ಓದು ನನಗೆ ಹೊಸದಾಗಿದ್ದರಿಂದ ಹಾಗೆ ಅನ್ನಿಸಿತ್ತೇ ಹೊರತು ಗೌರಿ ಮೇಡಂ ಕೂಡ ಎಲ್ಲರಿಗೂ ಅರ್ಥವಾಗುವಂತೆ ಅತ್ಯಂತ ಸರಳವಾಗಿ ಬರೆಯುತ್ತಿದ್ದರು ಮತ್ತು ಅದನ್ನು ಅವರು ಭೇಟಿಯಾದಾಗ ಹೇಳಿದೆ ಕೂಡ. ಹೀಗೆ ಅವರು ತಮಗೆ ಬರುತ್ತಿದ್ದ ವಿಮರ್ಶೆಯನ್ನು ಮುಕ್ತವಾಗಿ ತೆಗೆದುಕೊಳ್ಳುತ್ತಿದ್ದರು ಮತ್ತು ಅದರ ಕುರಿತು ಗಂಭೀರವಾಗಿ ಯೋಚಿಸುತ್ತಿದ್ದರೂ ಕೂಡ.

ದಾವಣಗೆರೆಯ ಕಾರ್ಯಕ್ರಮವೊಂದರಲ್ಲಿ ಯೋಗೇಶ್ ಮಾಸ್ಟರ್ ಅವರ ಮೇಲೆ ಕೆಲ ಕಿಡಿಗೇಡಿಗಳು ಮಸಿ ಎರಚಿ ದಾಳಿ ಮಾಡಲು ಮುಂದಾಗಿದ್ದರು. ಅವರನ್ನು ಬಂಧಿಸಿದ ನಂತರ ಗೌರಿ ಮೇಡಂ ಆ ದಾಳಿಕೋರ ಹುಡುಗರನ್ನು ನೋಡಿಕೊಂಡು ಹೊರಗೆ ಬಂದಾಗ “ಛೇ ಪಾಪ ಎಲ್ಲಾ ಎಳೆ ಮಕ್ಕಳು. ಬಡವರು. ಆಟೋ ಓಡಿಸಿಕೊಂಡು ಜೀವನ ಮಾಡುವ ಹುಡುಗರು ಇದ್ದಾರೆ. ಕೋಮುವಾದಿ ರಾಜಕಾರಣಿಗಳು ಧರ್ಮದ ಅಮಲು ತುಂಬಿಸಿ ಈ ಹುಡುಗರ ಭವಿಷ್ಯ ಹಾಳು ಮಾಡುತ್ತಿದ್ದಾರಲ್ಲ ಎಂದು ಮರುಕಪಟ್ಟರು.

ಕಾರ್ಯಕ್ರಮ ಮುಗಿಸಿಕೊಂಡು ದಾವಣಗೆರೆಯಿಂದ ಬೆಂಗಳೂರಿಗೆ ಕಾರಿನಲ್ಲಿ ವಾಪಸ್ಸಾಗುವಾಗ ಟಿ.ಕೆ.ದಯಾನಂದ್ ಅವರು ಮಾಡಿದ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಶುರುವಾಯಿತು. ಯೋಗೇಶ್ ಮಾಸ್ಟರ್ ಅವರ ಫೋಟೋದೊಂದಿಗೆ ಬಲಪಂಥೀಯರಿಗೆ ಕೌಂಟರ್ ಕೊಡುವ ಪೋಸ್ಟರ್ ಆಗಿತ್ತು ಮತ್ತು ತುಂಬಾ ತಮಾಷೆಯಾಗಿಯೂ ಇತ್ತು. ಇದನ್ನು ನೋಡಿ ಗೌರಿ ಮೇಡಂ ಜೋರಾಗಿ ನಗುತ್ತಲೇ ಇದ್ದರು. ನಗುತ್ತಾ ನಗುತ್ತಾ ವಾಂತಿಯೇ ಮಾಡಿಕೊಂಡರು! (ಸ್ವಲ್ಪ ಆರೋಗ್ಯವೂ ಕೆಟ್ಟಿತ್ತು). ಆ ದಯಂಗೆ ಕಾಲ್ ಮಾಡಿ ಅವನ ಪೋಸ್ಟರ್ ಇಂದ ನಕ್ಕು ನಾನು ವಾಂತಿ ಮಾಡಿಕೊಂಡೆ ಅಂತ ಹೇಳಿ, ನಾನು ಚನ್ನಾಗಿ ಬೈದೆ ಅಂತ ಅವನಿಗೆ ಹೇಳು ಎಂದರು. ನಂತರ “ಅಲ್ಲೋ ಸರೋವರ ನೀನು ಮತ್ತು ದಯಾ ಊರೋರಿಂದೆಲ್ಲಾ ಫೋಟೋ ಹಾಕಿ ಪೋಸ್ಟರ್ ಮಾಡ್ತೀರ ನಂದು ಒಂದಾದ್ರೂ ಮಾಡಿದ್ದೀರೇನೋ?” ಎಂದು ಕೇಳಿದರು. ನಾನು ಆಗ “ಓಕೆ ಬಿಡಿ ಮೇಡಂ ನಿಮ್ಮದೂ ಒಂದು ಮಾಡ್ತೀನಿ” ಎಂದಿದ್ದೆ.

ಆದರೆ ಅವರ ಪೋಸ್ಟರ್ ಮಾಡಲು ಸಾಧ್ಯವಾಗಿದ್ದು ಯಾವಾಗ?!! ಸೆಪ್ಟೆಂಬರ್ 5 ರಂದು! ಗೌರಿ ಮೇಡಂ ಹತ್ಯೆಯಾದ ಮರು ದಿನ ಟೌನ್‌ಹಾಲ್ ಮುಂದೆ ಜನರು ತಮ್ಮ ಕೈಗಳಲ್ಲಿ ಹಿಡಿದಿದ್ದ ಪೋಸ್ಟರ್‌ಗಳು ಬ್ಯಾನರ್‌ಗಳು ಬಹುತೇಕ ಎಲ್ಲವನ್ನೂ ನಾನು ಅಂದು ಡಿಸೈನ್ ಮಾಡಬೇಕಾಗಿ ಬಂತು. ಆವತ್ತು ನನ್ನದೂ ಪೋಸ್ಟರ್ ಮಾಡ್ರೋ ಎಂದು ಕೇಳಿದ್ರಲ್ಲ ನೋಡಿ ಇಲ್ಲಿ ಎಂದು ಮನಸ್ಸಿನಲ್ಲೇ ಹೇಳಿಕೊಂಡೆನು. ಅದೇ ಪ್ರತಿಭಟನೆಯಲ್ಲಿ ಗೌರಿ ಮೇಡಂ ಟೌನ್‌ಹಾಲ್‌ನ ಮೆಟ್ಟಿಲಿನ ಮೇಲೆ ಮುಂದಿನ ಸಾಲಿನಲ್ಲಿ ಕೂತಿರುತ್ತಾರೆ ಬಿಡು ಎಂದು ನನ್ನಂತೆಯೇ ನೂರಾರು ಜನಕ್ಕೆ ಅಂದು ಅನಿಸಿರಲು ಸಾಧ್ಯ. ಇಂದಿಗೂ ಅವರು ನಮ್ಮ ಎಲ್ಲಾ ಪ್ರತಿಭಟನೆಯಲ್ಲಿ ಮುಂದಿನ ಸಾಲಿನಲ್ಲಿ ಮತ್ತು ಕಾರ್ಯಕ್ರಮಗಳಲ್ಲಿ ಅದೆಲ್ಲೋ ಮೂಲೆಯಲ್ಲಿ ಕುರ್ಚಿಯ ಮೇಲೆ ಕೂತು ಎಲ್ಲವನ್ನೂ ಆಲಿಸುತ್ತಿರುತ್ತಾರೆ.

  • ಸರೋವರ್ ಬೆಂಕಿಕೆರೆ

ಇದನ್ನೂ ಓದಿ: ವಿದ್ಯಾರ್ಥಿ ಮಿತ್ರರಾಗಿ ಸ್ಫೂರ್ತಿ ತುಂಬುತ್ತಿದ್ದ ಗೌರಿ ಮೇಡಂ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...