Homeಗೌರಿ ಕಾರ್ನರ್ಗೌರಿ ಇಲ್ಲದಿದ್ದರೆ ನಾವು ಸುಲಭವಾಗಿ ಮುಖ್ಯವಾಹಿನಿಗೆ ಬರುತ್ತಿರಲಿಲ್ಲವೇನೋ? : ಸಿರಿಮನೆ ನಾಗರಾಜ್

ಗೌರಿ ಇಲ್ಲದಿದ್ದರೆ ನಾವು ಸುಲಭವಾಗಿ ಮುಖ್ಯವಾಹಿನಿಗೆ ಬರುತ್ತಿರಲಿಲ್ಲವೇನೋ? : ಸಿರಿಮನೆ ನಾಗರಾಜ್

ಅಜ್ಞಾತವಾಸದಲ್ಲಿದ್ದಾಗ ಗೌರಿ ನಮ್ಮನ್ನು ಸುಮಾರು ಮೂರು ಗಂಟೆಗೂ ಹೆಚ್ಚು ಹೊತ್ತು ತೀಕ್ಷ್ಣವಾದ ‘ಪಾಟಿಸವಾಲಿಗೆ’ ಒಳಪಡಿಸಿದ್ದರು.

- Advertisement -
- Advertisement -

ಗೌರಿ ಲಂಕೇಶ್ ಜೊತೆಗೆ ನನ್ನ ಮುಖಾಮುಖಿ ಒಡನಾಟ ಶುರುವಾಗಿದ್ದು ನಾನು ಮತ್ತು ನೂರ್ ಶ್ರೀಧರ್ ಅಜ್ಞಾತವಾಸದಿಂದ (‘ಅಂಡರ್‌ಗ್ರೌಂಡ್’ನಿಂದ) ಮುಖ್ಯವಾಹಿನಿಗೆ ಮರಳುವ ಪ್ರಕ್ರಿಯೆಯ ಸಂದರ್ಭದಲ್ಲಿ – ಅಂದರೆ ಸುಮಾರು 2014ರ ಕೊನೆಯ ಭಾಗದಲ್ಲಿ. ಅಲ್ಲಿಯವರೆಗೂ ಇಬ್ಬರಿಗೂ ಮತ್ತೊಬ್ಬರ ಬಗೆಗೆ ಗೊತ್ತಿತ್ತೇ ಹೊರತು ಮುಖತಃ ಭೇಟಿ ಆಗಿರಲಿಲ್ಲ. 2012ರಲ್ಲಿ ಪತ್ರಿಕೆಯ ಉಳಿವು ಮತ್ತು ಬೆಳವಣಿಗೆಗೆ ಸಂಬಂಧಿಸಿದಂತೆ ಅವರಿಗೊಂದು ದೀರ್ಘ ಪತ್ರ ಬರೆದಿದ್ದೆ. ಅವರು ಕೂಡಲೇ ಸ್ಪಂದಿಸಿದ್ದರು. ಅಷ್ಟೇ.

2013-14ರಲ್ಲಿ ಶ್ರೀ ಎಚ್.ಎಸ್.ದೊರೆಸ್ವಾಮಿಯವರ ಮುಂದಾಳ್ತನದಲ್ಲಿ ‘ಶಾಂತಿಗಾಗಿ ನಾಗರಿಕರ ವೇದಿಕೆ’ಯಡಿ ಎ.ಕೆ.ಸುಬ್ಬಯ್ಯ, ದೇವನೂರು ಮಹಾದೇವ, ಇಂದೂಧರ ಹೊನ್ನಾಪುರ, ಗೌರಿ ಇನ್ನೂ ಮುಂತಾದ ಸಹೃದಯರು ನಮ್ಮಗಳನ್ನು ಮುಖ್ಯವಾಹಿನಿಗೆ ಕರೆತರುವ ಪ್ರಯತ್ನವನ್ನು ಗಂಭೀರವಾಗಿ ಕೈಗೆತ್ತಿಕೊಂಡರಷ್ಟೆ. ಅದರ ಕೊನೆಯ ಹಂತದಲ್ಲಿ, ಈ ತಂಡದವರು ಸರ್ಕಾರದ ಜೊತೆ ಕೊನೆಯ ಸುತ್ತಿನ ಮಾತುಕತೆಗಳಿಗೆ ಮುಂದಾಗುವ ಮೊದಲು ನಮ್ಮ ಜೊತೆ ನೇರವಾಗಿ ಚರ್ಚಿಸಬೇಕು ಎಂಬ ಪ್ರಸ್ತಾಪ ಬಂದು, ಅದಕ್ಕಾಗಿ ಯಾರೋ ಒಬ್ಬರ ಸ್ನೇಹಿತರ ತೋಟದ ಮನೆಯಲ್ಲಿ ಭೇಟಿ ವ್ಯವಸ್ಥೆಯಾಗಿತ್ತು. ಅಲ್ಲಿ ಅವರುಗಳು ನಮ್ಮನ್ನು ಸುಮಾರು ಮೂರು ಗಂಟೆಗೂ ಹೆಚ್ಚು ಹೊತ್ತು ತೀಕ್ಷ್ಣವಾದ ‘ಪಾಟಿಸವಾಲಿಗೆ’ ಒಳಪಡಿಸಿದರು.

ನಾವು ಅಜ್ಞಾತವಾಸದಿಂದ ಹೊರಬರುತ್ತಿರುವುದು ಒಂದು ತಾತ್ಕಾಲಿಕ ಕಾರ್ಯತಂತ್ರದ, ‘ಹಿಡನ್ ಅಜೆಂಡಾ’ದ ಭಾಗವಾಗಿ ಅಲ್ಲ; ಬದಲಿಗೆ, ಸಂವಿಧಾನದ ಚೌಕಟ್ಟಿನಲ್ಲಿ ಬಹಿರಂಗವಾದ ಸಮೂಹ ಹೋರಾಟ ಕಟ್ಟದೆ, ದೇಶವ್ಯಾಪಿಯಾಗಿ ಎಲ್ಲ ಜನಸಮುದಾಯಗಳನ್ನು ಒಳಗೊಂಡ ಬೃಹತ್ ಸಮೂಹ ಚಳವಳಿ ಎದ್ದುನಿಲ್ಲದೆ ಈ ದೇಶದಲ್ಲಿ ಕ್ರಾಂತಿ ಅಥವಾ ಯಾವುದೇ ಮೂಲಭೂತ ಸಾಮಾಜಿಕ-ಆರ್ಥಿಕ-ರಾಜಕೀಯ ಪರಿವರ್ತನೆ ಸಾಧ್ಯವಿಲ್ಲ ಎನ್ನುವುದು ಈ ಮೂರು ದಶಕಕ್ಕೂ ಹೆಚ್ಚು ಕಾಲದ ಹೋರಾಟದಲ್ಲಿ ನಮಗೆ ದೃಢವಾಗಿ ಮನವರಿಕೆಯಾಗಿದೆ; ಆದ್ದರಿಂದ ನಾವು ನಮ್ಮ ಹಳೆಯ ನಿಲುವುಗಳಿಗೆ ಅಂಟಿಕೂರದೆ, ದೇಶದ ಈ ಕಾಲಘಟ್ಟದ ವಾಸ್ತವಕ್ಕೆ ಹೊಂದುವಂತಹ ಸಮೂಹ ಚಳವಳಿ-ಹೋರಾಟಗಳನ್ನು ರೂಪಿಸಬೇಕು, ಸಮಾಜದೊಳಗಿನ ಎಲ್ಲ ಬಗೆಯ ಅಸಮಾನತೆ-ತಾರತಮ್ಯಗಳ ವಿರುದ್ಧವೂ ಸಂಘಟನೆ-ಹೋರಾಟಗಳನ್ನು ಕಟ್ಟಬೇಕು; ಅದರಲ್ಲಿ ಎಲ್ಲ ಶೋಷಿತ-ದಮನಿತ ಸಮುದಾಯಗಳನ್ನೂ ಒಳಗೊಳ್ಳಬೇಕು, ಎಲ್ಲಾ ಜನಪರ-ಪ್ರಜಾಪ್ರಭುತ್ವವಾದಿ-ದೇಶಪ್ರೇಮಿ ಪ್ರಜ್ಞಾವಂತರನ್ನೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂಬ ನಮ್ಮ ಮೂಲಭೂತ ಪರಿಕಲ್ಪನೆಗಳನ್ನು ಅವರ ಮುಂದಿಟ್ಟೆವು.

ಅಷ್ಟೇ ಅಲ್ಲದೆ, ಅವರುಗಳು ನಮ್ಮ ಮೇಲೆ ಇಡುತ್ತಿರುವ ವಿಶ್ವಾಸಕ್ಕೆ ನಾವು ಖಂಡಿತಾ ಎರಡು ಬಗೆಯುವುದಿಲ್ಲ ಎಂಬುದನ್ನೂ ಮನವರಿಕೆ ಮಾಡಿಕೊಟ್ಟೆವು; ಇದರಿಂದ ಅವರುಗಳಿಗೆ ನಮ್ಮ ಪ್ರಾಮಾಣಿಕತೆಯ ಬಗ್ಗೆ ಪೂರ್ತಿ ನಂಬಿಕೆ ಉಂಟಾಯಿತೆನ್ನಿಸುತ್ತೆ. ನಮ್ಮನ್ನು ಮುಖ್ಯವಾಹಿನಿಗೆ ಕರೆತರುವ ಕೊನೇ ಹಂತದ ಪ್ರಯತ್ನವನ್ನು ದೃಢವಾಗಿ ಪೂರ್ಣ ಆತ್ಮವಿಶ್ವಾಸದೊಂದಿಗೆ ಕೈಗೊಳ್ಳಲು ಅವರು ತೀರ್ಮಾನ ಮಾಡಿದರು. ಮುಂದೆ ನಡೆದದ್ದೆಲ್ಲ ಎಲ್ಲರಿಗೂ ತಿಳಿದೇ ಇದೆ.

ಅಂದು ಈ ಎಲ್ಲ ಚರ್ಚೆ ನಡೆದ ನಂತರ, ಅವರುಗಳು ‘ಮೈಚಳಿ ಬಿಟ್ಟು’ ನಮ್ಮೊಂದಿಗೆ ಒಂದಷ್ಟು ಹೊತ್ತು ಲೋಕಾಭಿರಾಮವಾಗಿ, ತಮಾಷೆಯಾಗಿ ಮಾತಾಡುತ್ತ ಕಳೆದರು. ಪರಸ್ಪರ ವಿಶ್ವಾಸ, ಆತ್ಮೀಯತೆಯ ಭಾವನೆಯೊಂದಿಗೆ ನಾವಿಬ್ಬರೂ ವಾಪಸ್ ಹೊರಟೆವು. ಗೌರಿ ಈ ಇಡೀ ಪ್ರಕ್ರಿಯೆಯಲ್ಲಿ ಎಷ್ಟೊಂದು ಕಕ್ಕುಲಾತಿಯಿಂದ, ಉತ್ಕಟತೆಯಿಂದ ತೊಡಗಿಸಿಕೊಂಡರೆಂದರೆ, ಅವರು ಇರದಿದ್ದರೆ ನಾವು ಬಹಿರಂಗಕ್ಕೆ ಬರುವ ಪ್ರಕ್ರಿಯೆ ಇಷ್ಟು ಸುಮುಖವಾಗಿ ಪೂರ್ಣಗೊಳ್ಳಲು ಸಾಧ್ಯವಿತ್ತಾ ಎಂದು ಒಮ್ಮೊಮ್ಮೆ ಅನ್ನಿಸುತ್ತದೆ. ಅಷ್ಟೇ ಅಲ್ಲ, ಆ ನಂತರವೂ ಸಹ ಕಳೆದ ಐದೂಮುಕ್ಕಾಲು ವರ್ಷಗಳಲ್ಲಿ ದೊರೆಸ್ವಾಮಿಯವರ ಜೊತೆ ನಿಂತು, ಇನ್ನೂ ಹಲವಾರು ಸಮಾನ ಮನಸ್ಕ ಹೋರಾಟ ನಿರತ ಸಂಘನೆಗಳನ್ನೂ, ಮುಂದಾಳುಗಳನ್ನೂ ಜೊತೆಗೂಡಿಕೊಂಡು ನಾವು ಏನೇನು ಜನಪರ ಕೆಲಸಗಳನ್ನು ಮಾಡುತ್ತ ಬರಲು ಸಾಧ್ಯವಾಯಿತೋ, ಅದೆಲ್ಲದರಲ್ಲೂ ಗೌರಿಯವರ ಪಾತ್ರ ಅಚ್ಚಳಿಯದೆ ಬೆಸೆದುಕೊಂಡಿದೆ. ಅವರ ಹತ್ಯೆಯೊಂದು ಹೇಗೆ ಇಡೀ ನಾಡಿನ ಜನಪರ ಹೋರಾಟ-ಚಳವಳಿಗಳಿಗೆ ಉಂಟಾದ ಮರ್ಮಾಘಾತವೋ ಹಾಗೆಯೇ ನಮ್ಮ ಎಲ್ಲಾ ಸಮಾಜಮುಖಿ ಕೆಲಸಗಳಿಗೂ ಉಂಟಾದ ಗಂಭೀರ ನಷ್ಟ ಎಂದರೆ ಉತ್ಪ್ರೇಕ್ಷೆಯಲ್ಲ.


ಇದಮ್ಮೂ ಓದಿ: ವಿದ್ಯಾರ್ಥಿ ಮಿತ್ರರಾಗಿ ಸ್ಫೂರ್ತಿ ತುಂಬುತ್ತಿದ್ದ ಗೌರಿ ಮೇಡಂ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮಾತಾಡುವಾಗ “ಹತ್ಯೆ” ಎಂಬ ಪದವನ್ನು ಕನ್ನಡಿಗರು ಬಳಸುವುದನ್ನು ಕೇಳಿದ್ದೀರಾ?

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...