Homeಗೌರಿ ಕಾರ್ನರ್ಗೌರಿ ಇಲ್ಲದಿದ್ದರೆ ನಾವು ಸುಲಭವಾಗಿ ಮುಖ್ಯವಾಹಿನಿಗೆ ಬರುತ್ತಿರಲಿಲ್ಲವೇನೋ? : ಸಿರಿಮನೆ ನಾಗರಾಜ್

ಗೌರಿ ಇಲ್ಲದಿದ್ದರೆ ನಾವು ಸುಲಭವಾಗಿ ಮುಖ್ಯವಾಹಿನಿಗೆ ಬರುತ್ತಿರಲಿಲ್ಲವೇನೋ? : ಸಿರಿಮನೆ ನಾಗರಾಜ್

ಅಜ್ಞಾತವಾಸದಲ್ಲಿದ್ದಾಗ ಗೌರಿ ನಮ್ಮನ್ನು ಸುಮಾರು ಮೂರು ಗಂಟೆಗೂ ಹೆಚ್ಚು ಹೊತ್ತು ತೀಕ್ಷ್ಣವಾದ ‘ಪಾಟಿಸವಾಲಿಗೆ’ ಒಳಪಡಿಸಿದ್ದರು.

- Advertisement -
- Advertisement -

ಗೌರಿ ಲಂಕೇಶ್ ಜೊತೆಗೆ ನನ್ನ ಮುಖಾಮುಖಿ ಒಡನಾಟ ಶುರುವಾಗಿದ್ದು ನಾನು ಮತ್ತು ನೂರ್ ಶ್ರೀಧರ್ ಅಜ್ಞಾತವಾಸದಿಂದ (‘ಅಂಡರ್‌ಗ್ರೌಂಡ್’ನಿಂದ) ಮುಖ್ಯವಾಹಿನಿಗೆ ಮರಳುವ ಪ್ರಕ್ರಿಯೆಯ ಸಂದರ್ಭದಲ್ಲಿ – ಅಂದರೆ ಸುಮಾರು 2014ರ ಕೊನೆಯ ಭಾಗದಲ್ಲಿ. ಅಲ್ಲಿಯವರೆಗೂ ಇಬ್ಬರಿಗೂ ಮತ್ತೊಬ್ಬರ ಬಗೆಗೆ ಗೊತ್ತಿತ್ತೇ ಹೊರತು ಮುಖತಃ ಭೇಟಿ ಆಗಿರಲಿಲ್ಲ. 2012ರಲ್ಲಿ ಪತ್ರಿಕೆಯ ಉಳಿವು ಮತ್ತು ಬೆಳವಣಿಗೆಗೆ ಸಂಬಂಧಿಸಿದಂತೆ ಅವರಿಗೊಂದು ದೀರ್ಘ ಪತ್ರ ಬರೆದಿದ್ದೆ. ಅವರು ಕೂಡಲೇ ಸ್ಪಂದಿಸಿದ್ದರು. ಅಷ್ಟೇ.

2013-14ರಲ್ಲಿ ಶ್ರೀ ಎಚ್.ಎಸ್.ದೊರೆಸ್ವಾಮಿಯವರ ಮುಂದಾಳ್ತನದಲ್ಲಿ ‘ಶಾಂತಿಗಾಗಿ ನಾಗರಿಕರ ವೇದಿಕೆ’ಯಡಿ ಎ.ಕೆ.ಸುಬ್ಬಯ್ಯ, ದೇವನೂರು ಮಹಾದೇವ, ಇಂದೂಧರ ಹೊನ್ನಾಪುರ, ಗೌರಿ ಇನ್ನೂ ಮುಂತಾದ ಸಹೃದಯರು ನಮ್ಮಗಳನ್ನು ಮುಖ್ಯವಾಹಿನಿಗೆ ಕರೆತರುವ ಪ್ರಯತ್ನವನ್ನು ಗಂಭೀರವಾಗಿ ಕೈಗೆತ್ತಿಕೊಂಡರಷ್ಟೆ. ಅದರ ಕೊನೆಯ ಹಂತದಲ್ಲಿ, ಈ ತಂಡದವರು ಸರ್ಕಾರದ ಜೊತೆ ಕೊನೆಯ ಸುತ್ತಿನ ಮಾತುಕತೆಗಳಿಗೆ ಮುಂದಾಗುವ ಮೊದಲು ನಮ್ಮ ಜೊತೆ ನೇರವಾಗಿ ಚರ್ಚಿಸಬೇಕು ಎಂಬ ಪ್ರಸ್ತಾಪ ಬಂದು, ಅದಕ್ಕಾಗಿ ಯಾರೋ ಒಬ್ಬರ ಸ್ನೇಹಿತರ ತೋಟದ ಮನೆಯಲ್ಲಿ ಭೇಟಿ ವ್ಯವಸ್ಥೆಯಾಗಿತ್ತು. ಅಲ್ಲಿ ಅವರುಗಳು ನಮ್ಮನ್ನು ಸುಮಾರು ಮೂರು ಗಂಟೆಗೂ ಹೆಚ್ಚು ಹೊತ್ತು ತೀಕ್ಷ್ಣವಾದ ‘ಪಾಟಿಸವಾಲಿಗೆ’ ಒಳಪಡಿಸಿದರು.

ನಾವು ಅಜ್ಞಾತವಾಸದಿಂದ ಹೊರಬರುತ್ತಿರುವುದು ಒಂದು ತಾತ್ಕಾಲಿಕ ಕಾರ್ಯತಂತ್ರದ, ‘ಹಿಡನ್ ಅಜೆಂಡಾ’ದ ಭಾಗವಾಗಿ ಅಲ್ಲ; ಬದಲಿಗೆ, ಸಂವಿಧಾನದ ಚೌಕಟ್ಟಿನಲ್ಲಿ ಬಹಿರಂಗವಾದ ಸಮೂಹ ಹೋರಾಟ ಕಟ್ಟದೆ, ದೇಶವ್ಯಾಪಿಯಾಗಿ ಎಲ್ಲ ಜನಸಮುದಾಯಗಳನ್ನು ಒಳಗೊಂಡ ಬೃಹತ್ ಸಮೂಹ ಚಳವಳಿ ಎದ್ದುನಿಲ್ಲದೆ ಈ ದೇಶದಲ್ಲಿ ಕ್ರಾಂತಿ ಅಥವಾ ಯಾವುದೇ ಮೂಲಭೂತ ಸಾಮಾಜಿಕ-ಆರ್ಥಿಕ-ರಾಜಕೀಯ ಪರಿವರ್ತನೆ ಸಾಧ್ಯವಿಲ್ಲ ಎನ್ನುವುದು ಈ ಮೂರು ದಶಕಕ್ಕೂ ಹೆಚ್ಚು ಕಾಲದ ಹೋರಾಟದಲ್ಲಿ ನಮಗೆ ದೃಢವಾಗಿ ಮನವರಿಕೆಯಾಗಿದೆ; ಆದ್ದರಿಂದ ನಾವು ನಮ್ಮ ಹಳೆಯ ನಿಲುವುಗಳಿಗೆ ಅಂಟಿಕೂರದೆ, ದೇಶದ ಈ ಕಾಲಘಟ್ಟದ ವಾಸ್ತವಕ್ಕೆ ಹೊಂದುವಂತಹ ಸಮೂಹ ಚಳವಳಿ-ಹೋರಾಟಗಳನ್ನು ರೂಪಿಸಬೇಕು, ಸಮಾಜದೊಳಗಿನ ಎಲ್ಲ ಬಗೆಯ ಅಸಮಾನತೆ-ತಾರತಮ್ಯಗಳ ವಿರುದ್ಧವೂ ಸಂಘಟನೆ-ಹೋರಾಟಗಳನ್ನು ಕಟ್ಟಬೇಕು; ಅದರಲ್ಲಿ ಎಲ್ಲ ಶೋಷಿತ-ದಮನಿತ ಸಮುದಾಯಗಳನ್ನೂ ಒಳಗೊಳ್ಳಬೇಕು, ಎಲ್ಲಾ ಜನಪರ-ಪ್ರಜಾಪ್ರಭುತ್ವವಾದಿ-ದೇಶಪ್ರೇಮಿ ಪ್ರಜ್ಞಾವಂತರನ್ನೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂಬ ನಮ್ಮ ಮೂಲಭೂತ ಪರಿಕಲ್ಪನೆಗಳನ್ನು ಅವರ ಮುಂದಿಟ್ಟೆವು.

ಅಷ್ಟೇ ಅಲ್ಲದೆ, ಅವರುಗಳು ನಮ್ಮ ಮೇಲೆ ಇಡುತ್ತಿರುವ ವಿಶ್ವಾಸಕ್ಕೆ ನಾವು ಖಂಡಿತಾ ಎರಡು ಬಗೆಯುವುದಿಲ್ಲ ಎಂಬುದನ್ನೂ ಮನವರಿಕೆ ಮಾಡಿಕೊಟ್ಟೆವು; ಇದರಿಂದ ಅವರುಗಳಿಗೆ ನಮ್ಮ ಪ್ರಾಮಾಣಿಕತೆಯ ಬಗ್ಗೆ ಪೂರ್ತಿ ನಂಬಿಕೆ ಉಂಟಾಯಿತೆನ್ನಿಸುತ್ತೆ. ನಮ್ಮನ್ನು ಮುಖ್ಯವಾಹಿನಿಗೆ ಕರೆತರುವ ಕೊನೇ ಹಂತದ ಪ್ರಯತ್ನವನ್ನು ದೃಢವಾಗಿ ಪೂರ್ಣ ಆತ್ಮವಿಶ್ವಾಸದೊಂದಿಗೆ ಕೈಗೊಳ್ಳಲು ಅವರು ತೀರ್ಮಾನ ಮಾಡಿದರು. ಮುಂದೆ ನಡೆದದ್ದೆಲ್ಲ ಎಲ್ಲರಿಗೂ ತಿಳಿದೇ ಇದೆ.

ಅಂದು ಈ ಎಲ್ಲ ಚರ್ಚೆ ನಡೆದ ನಂತರ, ಅವರುಗಳು ‘ಮೈಚಳಿ ಬಿಟ್ಟು’ ನಮ್ಮೊಂದಿಗೆ ಒಂದಷ್ಟು ಹೊತ್ತು ಲೋಕಾಭಿರಾಮವಾಗಿ, ತಮಾಷೆಯಾಗಿ ಮಾತಾಡುತ್ತ ಕಳೆದರು. ಪರಸ್ಪರ ವಿಶ್ವಾಸ, ಆತ್ಮೀಯತೆಯ ಭಾವನೆಯೊಂದಿಗೆ ನಾವಿಬ್ಬರೂ ವಾಪಸ್ ಹೊರಟೆವು. ಗೌರಿ ಈ ಇಡೀ ಪ್ರಕ್ರಿಯೆಯಲ್ಲಿ ಎಷ್ಟೊಂದು ಕಕ್ಕುಲಾತಿಯಿಂದ, ಉತ್ಕಟತೆಯಿಂದ ತೊಡಗಿಸಿಕೊಂಡರೆಂದರೆ, ಅವರು ಇರದಿದ್ದರೆ ನಾವು ಬಹಿರಂಗಕ್ಕೆ ಬರುವ ಪ್ರಕ್ರಿಯೆ ಇಷ್ಟು ಸುಮುಖವಾಗಿ ಪೂರ್ಣಗೊಳ್ಳಲು ಸಾಧ್ಯವಿತ್ತಾ ಎಂದು ಒಮ್ಮೊಮ್ಮೆ ಅನ್ನಿಸುತ್ತದೆ. ಅಷ್ಟೇ ಅಲ್ಲ, ಆ ನಂತರವೂ ಸಹ ಕಳೆದ ಐದೂಮುಕ್ಕಾಲು ವರ್ಷಗಳಲ್ಲಿ ದೊರೆಸ್ವಾಮಿಯವರ ಜೊತೆ ನಿಂತು, ಇನ್ನೂ ಹಲವಾರು ಸಮಾನ ಮನಸ್ಕ ಹೋರಾಟ ನಿರತ ಸಂಘನೆಗಳನ್ನೂ, ಮುಂದಾಳುಗಳನ್ನೂ ಜೊತೆಗೂಡಿಕೊಂಡು ನಾವು ಏನೇನು ಜನಪರ ಕೆಲಸಗಳನ್ನು ಮಾಡುತ್ತ ಬರಲು ಸಾಧ್ಯವಾಯಿತೋ, ಅದೆಲ್ಲದರಲ್ಲೂ ಗೌರಿಯವರ ಪಾತ್ರ ಅಚ್ಚಳಿಯದೆ ಬೆಸೆದುಕೊಂಡಿದೆ. ಅವರ ಹತ್ಯೆಯೊಂದು ಹೇಗೆ ಇಡೀ ನಾಡಿನ ಜನಪರ ಹೋರಾಟ-ಚಳವಳಿಗಳಿಗೆ ಉಂಟಾದ ಮರ್ಮಾಘಾತವೋ ಹಾಗೆಯೇ ನಮ್ಮ ಎಲ್ಲಾ ಸಮಾಜಮುಖಿ ಕೆಲಸಗಳಿಗೂ ಉಂಟಾದ ಗಂಭೀರ ನಷ್ಟ ಎಂದರೆ ಉತ್ಪ್ರೇಕ್ಷೆಯಲ್ಲ.


ಇದಮ್ಮೂ ಓದಿ: ವಿದ್ಯಾರ್ಥಿ ಮಿತ್ರರಾಗಿ ಸ್ಫೂರ್ತಿ ತುಂಬುತ್ತಿದ್ದ ಗೌರಿ ಮೇಡಂ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮಾತಾಡುವಾಗ “ಹತ್ಯೆ” ಎಂಬ ಪದವನ್ನು ಕನ್ನಡಿಗರು ಬಳಸುವುದನ್ನು ಕೇಳಿದ್ದೀರಾ?

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...