Homeಕರ್ನಾಟಕ‘ಗೌರಿ ದಿನ’ ಕಾರ್ಯಕ್ರಮ:  ಹಲವು ಕಥೆ ಹೇಳುವ ಸಾಕ್ಷ್ಯಚಿತ್ರ ‘ಸೈಕಲ್‌ ಮಹೇಶ್‌’: ನಿರ್ದೇಶಕ ಸುಹೇಲ್‌ ಬ್ಯಾನರ್ಜಿ

‘ಗೌರಿ ದಿನ’ ಕಾರ್ಯಕ್ರಮ:  ಹಲವು ಕಥೆ ಹೇಳುವ ಸಾಕ್ಷ್ಯಚಿತ್ರ ‘ಸೈಕಲ್‌ ಮಹೇಶ್‌’: ನಿರ್ದೇಶಕ ಸುಹೇಲ್‌ ಬ್ಯಾನರ್ಜಿ

- Advertisement -
- Advertisement -

ಬೆಂಗಳೂರು: ಕೋವಿಡ್‌ ಕಾಲದಲ್ಲಿ ವಲಸೆ ಕಾರ್ಮಿಕನೊಬ್ಬ ಸೈಕಲ್‌ನಲ್ಲಿ ಸತತ ಏಳು ದಿನ 1,700 ಕಿಲೋಮೀಟರ್‌ ಸಂಚರಿಸಿದ ಕಥೆಯನ್ನು ಇಟ್ಟುಕೊಂಡು ನಿರ್ಮಿಸಿರುವ ‘ಸೈಕಲ್‌ ಮಹೇಶ್‌’ ಚಿತ್ರವು ಹಲವು ಕಥೆಗಳನ್ನು ಹೇಳುತ್ತದೆ ಎಂದು ಸಾಕ್ಷ್ಯಚಿತ್ರ ನಿರ್ದೇಶಕ ಸುಹೇಲ್‌ ಬ್ಯಾನರ್ಜಿ ತಿಳಿಸಿದರು.

ಗೌರಿ ಲಂಕೇಶ್ ಅವರ ಜನ್ಮ ದಿನ ‘ಗೌರಿ ದಿನ’ ಕಾರ್ಯಕ್ರಮದ ಪ್ರಯುಕ್ತ ಗೌರಿ ಸ್ಮಾರಕ ಟ್ರಸ್ಟ್‌ ಬುಧವಾರ ನಗರದಲ್ಲಿ ಹಮ್ಮಿಕೊಂಡಿದ್ದ ‘ಸೈಕಲ್‌ ಮಹೇಶ್‌’ ಸಾಕ್ಷ್ಯಚಿತ್ರ ಪ್ರದರ್ಶನದ ಬಳಿಕ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ದೇಶದಾದ್ಯಂತ ಲಾಕ್‌ಡೌನ್‌ ಮಾಡಿದಾಗ ವಲಸೆ ಕಾರ್ಮಿಕರು ಕೆಲಸ ಇಲ್ಲದೇ, ಊರಿಗೂ ಮರಳಲಾರದೇ ಸಂಕಷ್ಟಕ್ಕೆ ಸಿಲುಕಿದ್ದರು. ಹಲವರು ನಡೆದುಕೊಂಡೇ ಹೊರಟಿದ್ದರು. ಮಹೇಶ್‌ ಎಂಬ ಯುವ ಕಾರ್ಮಿಕನೊಬ್ಬ ಸೈಕಲ್‌ನಲ್ಲಿ ತನ್ನೂರಿಗೆ ಹೊರಟು ಏಳು ದಿನಗಳಲ್ಲಿ ತಲುಪಿದ. ಅದು ಮಾಧ್ಯಮಗಳಲ್ಲಿ ಆಗ ದೊಡ್ಡ ಸುದ್ದಿಯಾಗಿತ್ತು. ಈ ನಿಜ ಘಟನೆಯನ್ನು ಇಟ್ಟುಕೊಂಡು ಕಥೆ ಹೆಣೆಯಲಾಗಿದೆ. ನಾವು ಇಲ್ಲಿ ಆಡಳಿತದ ವೈಫಲ್ಯವನ್ನು ತೋರಿಸದೇ ಇದ್ದರೂ ಕಥೆಯೇ ಅದನ್ನು ಹೇಳುತ್ತದೆ’ ಎಂದು ಹೇಳಿದರು.

ಭಾರತೀಯ ಸಿನಿಮಾ ಮಾಧ್ಯಮವು ಕಾರ್ಮಿಕ ವರ್ಗವನ್ನು ಅಲಕ್ಷಿಸಿದೆ. ಸಣ್ಣ ಚಿತ್ರಗಳ ಮೂಲಕ ಕಾರ್ಮಿಕರ ಸಂಕಷ್ಟ, ಹೋರಾಟವನ್ನು ತೋರಿಸುವ ಪ್ರಯತ್ನ ಇದು ಎಂದರು.

ಅಂತರರಾಷ್ಟ್ರೀಯ ಡಾಕ್ಯುಮೆಂಟರಿ ಚಲನಚಿತ್ರೋತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಈ ಚಿತ್ರವು 60 ನಿಮಿಷದ್ದಾಗಿದೆ. ಒಡಿಶಾ, ಮರಾಠಿ ಮತ್ತು ಹಿಂದಿ ಮಿಶ್ರಿತ ಭಾಷೆಯಲ್ಲಿರುವ ಚಿತ್ರವು ಮಹೇಶನ ಪ್ರಯಾಣದ ವೇಳೆ ದಾರಿ ತಪ್ಪುವುದು, ಸೈಕಲ್‌ ಹಾಳಾಗುವುದು, ಗುಡ್ಡ ಏರುವುದು, ರಾತ್ರಿ ಪ್ರಯಾಣ, ಸ್ನೇಹಿತರೊಂದಿಗೆ ಚರ್ಚೆಗಳನ್ನು ಕಟ್ಟಿಕೊಡುತ್ತದೆ.

ಸಂವಾದ ಕಾರ್ಯಕ್ರಮದಲ್ಲಿ ಚಳವಳಿಗಾರ ವಿ.ಎಸ್‌. ಶ್ರೀಧರ್‌, ಗೌರಿ ಸ್ಮಾರಕ ಟ್ರಸ್ಟ್‌ ಅಧ್ಯಕ್ಷೆ ತೀಸ್ತಾ ಸೆಟಲ್ವಾಡ್‌, ಉಪಾಧ್ಯಕ್ಷೆ ಕವಿತಾ ಲಂಕೇಶ್‌, ಕಾರ್ಯದರ್ಶಿ ಪ್ರದೀಪ್‌, ಸಂಭಾಷಣೆಗಾರ್ತಿ ಗುರ್ಲನ್‌ ಜಡ್ಜ್‌ ಉಪಸ್ಥಿತರಿದ್ದರು.

ಮರ್ಯಾದೆಗೇಡು ಹತ್ಯೆ| ಸಹೋದರ ಮತ್ತು ಆತನ ದಲಿತ ಪತ್ನಿಯನ್ನು ಕೊಂದ ವ್ಯಕ್ತಿಗೆ ಮರಣದಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...