Homeಕರ್ನಾಟಕ‘ಗೌರಿ ದಿನ’ ಕಾರ್ಯಕ್ರಮ:  ಹಲವು ಕಥೆ ಹೇಳುವ ಸಾಕ್ಷ್ಯಚಿತ್ರ ‘ಸೈಕಲ್‌ ಮಹೇಶ್‌’: ನಿರ್ದೇಶಕ ಸುಹೇಲ್‌ ಬ್ಯಾನರ್ಜಿ

‘ಗೌರಿ ದಿನ’ ಕಾರ್ಯಕ್ರಮ:  ಹಲವು ಕಥೆ ಹೇಳುವ ಸಾಕ್ಷ್ಯಚಿತ್ರ ‘ಸೈಕಲ್‌ ಮಹೇಶ್‌’: ನಿರ್ದೇಶಕ ಸುಹೇಲ್‌ ಬ್ಯಾನರ್ಜಿ

- Advertisement -
- Advertisement -

ಬೆಂಗಳೂರು: ಕೋವಿಡ್‌ ಕಾಲದಲ್ಲಿ ವಲಸೆ ಕಾರ್ಮಿಕನೊಬ್ಬ ಸೈಕಲ್‌ನಲ್ಲಿ ಸತತ ಏಳು ದಿನ 1,700 ಕಿಲೋಮೀಟರ್‌ ಸಂಚರಿಸಿದ ಕಥೆಯನ್ನು ಇಟ್ಟುಕೊಂಡು ನಿರ್ಮಿಸಿರುವ ‘ಸೈಕಲ್‌ ಮಹೇಶ್‌’ ಚಿತ್ರವು ಹಲವು ಕಥೆಗಳನ್ನು ಹೇಳುತ್ತದೆ ಎಂದು ಸಾಕ್ಷ್ಯಚಿತ್ರ ನಿರ್ದೇಶಕ ಸುಹೇಲ್‌ ಬ್ಯಾನರ್ಜಿ ತಿಳಿಸಿದರು.

ಗೌರಿ ಲಂಕೇಶ್ ಅವರ ಜನ್ಮ ದಿನ ‘ಗೌರಿ ದಿನ’ ಕಾರ್ಯಕ್ರಮದ ಪ್ರಯುಕ್ತ ಗೌರಿ ಸ್ಮಾರಕ ಟ್ರಸ್ಟ್‌ ಬುಧವಾರ ನಗರದಲ್ಲಿ ಹಮ್ಮಿಕೊಂಡಿದ್ದ ‘ಸೈಕಲ್‌ ಮಹೇಶ್‌’ ಸಾಕ್ಷ್ಯಚಿತ್ರ ಪ್ರದರ್ಶನದ ಬಳಿಕ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ದೇಶದಾದ್ಯಂತ ಲಾಕ್‌ಡೌನ್‌ ಮಾಡಿದಾಗ ವಲಸೆ ಕಾರ್ಮಿಕರು ಕೆಲಸ ಇಲ್ಲದೇ, ಊರಿಗೂ ಮರಳಲಾರದೇ ಸಂಕಷ್ಟಕ್ಕೆ ಸಿಲುಕಿದ್ದರು. ಹಲವರು ನಡೆದುಕೊಂಡೇ ಹೊರಟಿದ್ದರು. ಮಹೇಶ್‌ ಎಂಬ ಯುವ ಕಾರ್ಮಿಕನೊಬ್ಬ ಸೈಕಲ್‌ನಲ್ಲಿ ತನ್ನೂರಿಗೆ ಹೊರಟು ಏಳು ದಿನಗಳಲ್ಲಿ ತಲುಪಿದ. ಅದು ಮಾಧ್ಯಮಗಳಲ್ಲಿ ಆಗ ದೊಡ್ಡ ಸುದ್ದಿಯಾಗಿತ್ತು. ಈ ನಿಜ ಘಟನೆಯನ್ನು ಇಟ್ಟುಕೊಂಡು ಕಥೆ ಹೆಣೆಯಲಾಗಿದೆ. ನಾವು ಇಲ್ಲಿ ಆಡಳಿತದ ವೈಫಲ್ಯವನ್ನು ತೋರಿಸದೇ ಇದ್ದರೂ ಕಥೆಯೇ ಅದನ್ನು ಹೇಳುತ್ತದೆ’ ಎಂದು ಹೇಳಿದರು.

ಭಾರತೀಯ ಸಿನಿಮಾ ಮಾಧ್ಯಮವು ಕಾರ್ಮಿಕ ವರ್ಗವನ್ನು ಅಲಕ್ಷಿಸಿದೆ. ಸಣ್ಣ ಚಿತ್ರಗಳ ಮೂಲಕ ಕಾರ್ಮಿಕರ ಸಂಕಷ್ಟ, ಹೋರಾಟವನ್ನು ತೋರಿಸುವ ಪ್ರಯತ್ನ ಇದು ಎಂದರು.

ಅಂತರರಾಷ್ಟ್ರೀಯ ಡಾಕ್ಯುಮೆಂಟರಿ ಚಲನಚಿತ್ರೋತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಈ ಚಿತ್ರವು 60 ನಿಮಿಷದ್ದಾಗಿದೆ. ಒಡಿಶಾ, ಮರಾಠಿ ಮತ್ತು ಹಿಂದಿ ಮಿಶ್ರಿತ ಭಾಷೆಯಲ್ಲಿರುವ ಚಿತ್ರವು ಮಹೇಶನ ಪ್ರಯಾಣದ ವೇಳೆ ದಾರಿ ತಪ್ಪುವುದು, ಸೈಕಲ್‌ ಹಾಳಾಗುವುದು, ಗುಡ್ಡ ಏರುವುದು, ರಾತ್ರಿ ಪ್ರಯಾಣ, ಸ್ನೇಹಿತರೊಂದಿಗೆ ಚರ್ಚೆಗಳನ್ನು ಕಟ್ಟಿಕೊಡುತ್ತದೆ.

ಸಂವಾದ ಕಾರ್ಯಕ್ರಮದಲ್ಲಿ ಚಳವಳಿಗಾರ ವಿ.ಎಸ್‌. ಶ್ರೀಧರ್‌, ಗೌರಿ ಸ್ಮಾರಕ ಟ್ರಸ್ಟ್‌ ಅಧ್ಯಕ್ಷೆ ತೀಸ್ತಾ ಸೆಟಲ್ವಾಡ್‌, ಉಪಾಧ್ಯಕ್ಷೆ ಕವಿತಾ ಲಂಕೇಶ್‌, ಕಾರ್ಯದರ್ಶಿ ಪ್ರದೀಪ್‌, ಸಂಭಾಷಣೆಗಾರ್ತಿ ಗುರ್ಲನ್‌ ಜಡ್ಜ್‌ ಉಪಸ್ಥಿತರಿದ್ದರು.

ಮರ್ಯಾದೆಗೇಡು ಹತ್ಯೆ| ಸಹೋದರ ಮತ್ತು ಆತನ ದಲಿತ ಪತ್ನಿಯನ್ನು ಕೊಂದ ವ್ಯಕ್ತಿಗೆ ಮರಣದಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...