Homeಅಂಕಣಗಳುನಾನೂ ಗೋವುಗಳನ್ನು ಸಾಕಿದೆ, ಮಾರಿದೆ

ನಾನೂ ಗೋವುಗಳನ್ನು ಸಾಕಿದೆ, ಮಾರಿದೆ

- Advertisement -
- Advertisement -

| ಗೌರಿ ಲಂಕೇಶ್ |
10 ಮಾರ್ಚ್, 2010 (ಸಂಪಾದಕೀಯದಿಂದ)

ಯಡಿಯೂರಪ್ಪನ ‘ಬ್ರಾಹ್ಮಣಶಾಹಿ’ ಸರ್ಕಾರ ಜಾರಿಗೆ ತರಲು ಇಚ್ಛಿಸಿರುವ ಗೋಹತ್ಯೆ ನಿಷೇಧ ಕಾನೂನನ್ನು ಕುರಿತಂತೆ ನಿಮ್ಮ ಈ ಪತ್ರಿಕೆ ಮತ್ತು ಇತರೆ ಮಾಧ್ಯಮಗಳು ಬಹಳಷ್ಟು ಚರ್ಚಿಸಿವೆ. ಆದರೆ ಎಲ್ಲ ಚರ್ಚೆಗಳೂ ಆಹಾರ ಸಂಸ್ಕೃತಿ, ಸಂವಿಧಾನ, ಆರ್ಥಿಕ ಪರಿಸ್ಥಿತಿ, ವೈಯಕ್ತಿಕ ಆಯ್ಕೆ ಇತ್ಯಾದಿಗಳ ಸುತ್ತ ನಡೆದಿದೆ.

ಆದ್ದರಿಂದ ನಾನಿಲ್ಲಿ ರೈತರ ದೃಷ್ಟಿಕೋನದಿಂದ ಮತ್ತು ವೈಯಕ್ತಿಕ ಅನುಭವದಿಂದ ಹತ್ತಿರವಿರುವ ಅಮ್ಮನ ತೋಟದ ಜವಾಬ್ದಾರಿಯನ್ನು ಐದಾರು ವರ್ಷಗಳ ಹಿಂದೆ ವಹಿಸಿಕೊಂಡಾಗ ತೋಟದೊಂದಿಗೆ ಒಂದು ಜೊತೆ ಎತ್ತು ಬಂದಿದ್ದವು.

ಎರಡು ವರ್ಷಗಳ ಹಿಂದೆ ತೋಟವನ್ನು ನೋಡಿಕೊಳ್ಳಲು ಬಂದ ನಮ್ಮ ಲಿಂಗರಾಜು ಆ ಎರಡೂ ಎತ್ತುಗಳು ಮುದಿ ಆಗಿವೆ ಎಂದೂ, ಅವುಗಳನ್ನು ಮಾರಿ ಬೇರೆ ಜೋಡಿಯನ್ನು ಖರೀದಿಸಿದರೆ ಉತ್ತಮ ಎಂದೂ ಹೇಳಿದ. ಆ ಎತ್ತುಗಳಿಗೆ ಎಷ್ಟು ವಯಸ್ಸಾಗಿತ್ತೆಂದರೆ ಅವುಗಳಿಂದ ಯಾವ ಕೆಲಸವೂ ಸಾಧ್ಯವಾಗುತ್ತಿರಲಿಲ್ಲ. ಆದರೆ ಅವುಗಳನ್ನು ಮಾರದೆ ಹಾಗೆ ಇಟ್ಟುಕೊಳ್ಳುವುದೂ ಸುಲಭವಾಗಿರಲಿಲ್ಲ. ಅದಕ್ಕೆ ಮುಖ್ಯ ಕಾರಣ ಮೇವಿನ ಸಮಸ್ಯೆ.

ಇವತ್ತು ನೆಲಮಂಗಲದ ಸುತ್ತಮುತ್ತ ಕೃಷಿ ಚಟುವಟಿಕೆ ಸ್ಥಗಿತಗೊಳ್ಳುತ್ತಿದೆ; ಹೊಲಗಳಿದ್ದ ಜಾಗಗಳಲ್ಲಿ ಫ್ಯಾಕ್ಟರಿಗಳು ತಲೆ ಎತ್ತುತ್ತಿವೆ; ಗೋಮಾಳಗಳು ಸೈಟುಗಳಾಗಿ ಪರಿವರ್ತನೆಗೊಂಡಿವೆ. ಇಂತಹ ಪರಿಸ್ಥಿತಿಯಲ್ಲಿ ಆ ಎತ್ತುಗಳಿಗೆ ಎಲ್ಲಿಂದ ಮೇವು ತರುವುದು? ಹಿಂಡಿ, ಬೂಸಾ ಮಾತು ಬದಿಗಿರಲಿ, ಒಣಹುಲ್ಲು ಕೂಡ ಎಷ್ಟು ದುಬಾರಿ ಆಗಿದೆ ಎಂದರೆ ಒಂದು ಮೆದೆ ಹುಲ್ಲಿಗೆ ಇವತ್ತು ಕನಿಷ್ಠ ಆರು ಸಾವಿರ ರೂಪಾಯಿಗಳನ್ನು ತೆರಬೇಕು. ಇವತ್ತು ಹಲವಾರು ಚೆಡ್ಡಿಗಳು “ಗೋವು ಸಗಣಿ ಕೊಡುತ್ತದಲ್ಲ” ಎಂದೆಲ್ಲ ವಾದಿಸುತ್ತಿದ್ದಾರೆ. ಆದರೆ ಒಂದು ಸಾವಿರ ರೂಪಾಯಿ ಬೆಲೆಬಾಳುವ ಸಗಣಿಗಾಗಿ ಹತ್ತಾರು ಸಾವಿರಾರು ರೂಪಾಯಿಗಳನ್ನು ವೆಚ್ಚ ಮಾಡಿ ಹುಲ್ಲು ಖರೀದಿಸುವುದು ಎಷ್ಟು ಸಮಂಜಸ? ಅಷ್ಟು ಆರ್ಥಿಕ ಶಕ್ತಿ ಅದೆಷ್ಟು ರೈತರಿಗೆ ಇರುತ್ತದೆ? ಈಗಾಗಲೇ ಸಾಲ-ನಷ್ಟಗಳಡಿ ತತ್ತರಿಸುತ್ತಿರುವ ರೈತರ ಮೇಲೆ ಇಂತಹ ಇನ್ನೊಂದು ಆರ್ಥಿಕ ಹೊರೆಯನ್ನು ಹೊರಿಸುವಷ್ಟು ಅಮಾನವೀಯರಾಗಿದ್ದೇವೆಯೇ ನಾವು?

ತೋಟದ ಮುದಿ ಎತ್ತುಗಳನ್ನು ಮಾರಲು ಲಿಂಗರಾಜುವಿಗೆ ಹೇಳಿದೆ. ಅವುಗಳನ್ನು ಕೊಂಡವರು ಅವುಗಳನ್ನು ಸಾಕಿದರೋ ಅಥವಾ ಕಸಾಯಿಖಾನೆಗೆ ಮಾರಿದರೋ, ಅದರ ಬಗ್ಗೆ ನಾನು ಯೋಚಿಸಲಿಲ್ಲ. ಆದರೆ ಅವುಗಳನ್ನು ಮಾರಿ ಬಂದ 10,500 ರೂಪಾಯಿಗಳೊಂದಿಗೆ ಇನ್ನೂ ನಾಲ್ಕು ಸಾವಿರ ಸೇರಿಸಿ ಎರಡು ನಾಟಿ ಹಸುಗಳನ್ನು ಕೊಂಡುಕೊಂಡೆ. ಈ ಎರಡೂ ಹಸುಗಳು ಈಗ ಎರಡು ಗಂಡು ಕರುಗಳನ್ನು ಈದಿವೆ. ನನ್ನ ಈ ನಾಲ್ಕು ಗೋವುಗಳಲ್ಲದೆ ಲಿಂಗರಾಜು ಕೂಡ ಎರಡು ಹಸುಗಳನ್ನು ಸಾಕಿದ್ದಾನೆ. ಆದರೆ ಆ ಹಸುಗಳನ್ನು ಕೊಂಡ ವರ್ಷ ಮಳೆ ಮತ್ತು ನಮ್ಮ ಬೋರ್‍ವೆಲ್ ಕೈಕೊಟ್ಟಿದ್ದರಿಂದ ಮೇವಿಗಾಗಿ ನಾನು ಮತ್ತು ಲಿಂಗರಾಜು ಪಟ್ಟ ಪಾಡು ಅಷ್ಟಿಷ್ಟಲ್ಲ. ಕೊನೆಗೆ ನಮ್ಮ ಚಂದ್ರೇಗೌಡರ ಬಿದಿರಿನ ಕೆರೆಯಿಂದ ಏಳು ಸಾವಿರ ರೂಪಾಯಿ ಕೊಟ್ಟು ಒಣಹುಲ್ಲು ತರಿಸಿದ್ದಾಯಿತು. ಆದೂ ಸಾಕಾಗದೆ ಹತ್ತಿರದಿಂದಲೇ ಮತ್ತೆ ಐದು ಸಾವಿರ ರೂಪಾಯಿ ಕೊಟ್ಟು ಕೊಂಡುಕೊಳ್ಳಬೇಕಾಯಿತು. ಇನ್ನು ಎರಡೂ ಹಸುಗಳು ಗಬ್ಬ ಆಗಿದ್ದಾಗ ಹಿಂಡಿ, ಬೂಸಾ ಅಂತ ಮತ್ತಷ್ಟು ಸಾವಿರ ರೂಪಾಯಿಗಳು ಕೈಬಿಟ್ಟವು. ಹೀಗೆ ಲೆಕ್ಕ ಹಾಕಿದರೆ ಆ ಎರಡು ಹಸು ಮತ್ತು ಅವುಗಳ ಕರುಗಳಿಗೆಂದು ಈಗಾಗಲೇ 30,000 ರೂಪಾಯಿಗಳು ವೆಚ್ಚವಾಗಿವೆ.

ಈ ವೆಚ್ಚದೊಂದಿಗೆ ಆ ಗೋವುಗಳಿಂದ ಆದ ಉಳಿತಾಯ ಯಾವ ಲೆಕ್ಕಕ್ಕೂ ಆಗುವುದಿಲ್ಲ. ಆದರೆ ತೋಟದಲ್ಲಿ ಗೋವುಗಳಿದ್ದರೆ ಚಂದ ಎಂಬ ನಂಬಿಕೆ ಮತ್ತು ಆ ಕರುಗಳಿಂದ ನಮ್ಮ ಇಶಾಳಿಗೆ ಆಗುವ ಆನಂದ(ಅವುಗಳಿಗೆ ಶಿವ ಮತ್ತು ಬಸವ ಎಂದು ಹೆಸರಿಟ್ಟಿದ್ದಾಳೆ)ಕ್ಕೆ ಹೋಲಿಸಿದರೆ ವೆಚ್ಚವೆಲ್ಲ ಗೌಣ. ಹವ್ಯಾಸಿ ರೈತ ಮಹಿಳೆಯಾದ ನನಗೆ ಆ ಆರ್ಥಿಕ ಭಾರವನ್ನು ಹೊರುವ ಶಕ್ತಿ ಮತ್ತು ಹುಮ್ಮಸ್ಸು ಇರಬಹುದು, ಆದರೆ ಅದು ಎಲ್ಲ ರೈತರಿಂದ ನಿರೀಕ್ಷಿಸುವುದು ತಪ್ಪು ಮಾತ್ರವಲ್ಲ ದೊಡ್ಡ ಅನ್ಯಾಯವಾಗುತ್ತದೆ.

ಅಂದಹಾಗೆ, ಈಗಿರುವ ಹಸುಗಳೂ ಮುದಿ ಆದಾಗ ಅವುಗಳನ್ನೂ ಮಾರುತ್ತೇನೆ. ಕರುಗಳು ಬೆಳೆದಾಗ ಅವುಗಳನ್ನು ಇತರೆ ರೈತರಿಗೆ ಮಾರುತ್ತೇನೆ. ಬಂದ ಹಣದಲ್ಲಿ ಹೊಸ ಹಸುಗಳನ್ನು, ಹೊಸ ಎತ್ತುಗಳನ್ನು ಕೊಂಡು ಸಾಕುತ್ತೇನೆ. ಬುದ್ದಿ ಇರುವ ಎಲ್ಲಾ ಕೃಷಿಕರೂ ಮಾಡುವುದು ಇದನ್ನೇ.

ಆದರೆ ಬುದ್ದಿ ಇಲ್ಲದ, ಗೋವನ್ನು ಸಾಕದ ಅವುಗಳಿಗಾಗಿ ಪರದಾಡುವ, ಅವುಗಳನ್ನು ಆರ್ಥಿಕ ಲಾಭ-ನಷ್ಟದ ಲೆಕ್ಕದಲ್ಲಿ ನೋಡದ ಯಡಿಯೂರಪ್ಪನಂತಹ ಬುದ್ಧಿಹೀನರು ಮಾತ್ರ ಗೋಹತ್ಯೆ ಮತ್ತು ಗೋಮಾಂಸ ಮಾರಾಟವನ್ನು ನಿಷೇಧಿಸಲು ಹೊರಡುತ್ತಾರೆ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...