Homeಅಂಕಣಗಳುನಾನೂ ಗೋವುಗಳನ್ನು ಸಾಕಿದೆ, ಮಾರಿದೆ

ನಾನೂ ಗೋವುಗಳನ್ನು ಸಾಕಿದೆ, ಮಾರಿದೆ

- Advertisement -
- Advertisement -

| ಗೌರಿ ಲಂಕೇಶ್ |
10 ಮಾರ್ಚ್, 2010 (ಸಂಪಾದಕೀಯದಿಂದ)

ಯಡಿಯೂರಪ್ಪನ ‘ಬ್ರಾಹ್ಮಣಶಾಹಿ’ ಸರ್ಕಾರ ಜಾರಿಗೆ ತರಲು ಇಚ್ಛಿಸಿರುವ ಗೋಹತ್ಯೆ ನಿಷೇಧ ಕಾನೂನನ್ನು ಕುರಿತಂತೆ ನಿಮ್ಮ ಈ ಪತ್ರಿಕೆ ಮತ್ತು ಇತರೆ ಮಾಧ್ಯಮಗಳು ಬಹಳಷ್ಟು ಚರ್ಚಿಸಿವೆ. ಆದರೆ ಎಲ್ಲ ಚರ್ಚೆಗಳೂ ಆಹಾರ ಸಂಸ್ಕೃತಿ, ಸಂವಿಧಾನ, ಆರ್ಥಿಕ ಪರಿಸ್ಥಿತಿ, ವೈಯಕ್ತಿಕ ಆಯ್ಕೆ ಇತ್ಯಾದಿಗಳ ಸುತ್ತ ನಡೆದಿದೆ.

ಆದ್ದರಿಂದ ನಾನಿಲ್ಲಿ ರೈತರ ದೃಷ್ಟಿಕೋನದಿಂದ ಮತ್ತು ವೈಯಕ್ತಿಕ ಅನುಭವದಿಂದ ಹತ್ತಿರವಿರುವ ಅಮ್ಮನ ತೋಟದ ಜವಾಬ್ದಾರಿಯನ್ನು ಐದಾರು ವರ್ಷಗಳ ಹಿಂದೆ ವಹಿಸಿಕೊಂಡಾಗ ತೋಟದೊಂದಿಗೆ ಒಂದು ಜೊತೆ ಎತ್ತು ಬಂದಿದ್ದವು.

ಎರಡು ವರ್ಷಗಳ ಹಿಂದೆ ತೋಟವನ್ನು ನೋಡಿಕೊಳ್ಳಲು ಬಂದ ನಮ್ಮ ಲಿಂಗರಾಜು ಆ ಎರಡೂ ಎತ್ತುಗಳು ಮುದಿ ಆಗಿವೆ ಎಂದೂ, ಅವುಗಳನ್ನು ಮಾರಿ ಬೇರೆ ಜೋಡಿಯನ್ನು ಖರೀದಿಸಿದರೆ ಉತ್ತಮ ಎಂದೂ ಹೇಳಿದ. ಆ ಎತ್ತುಗಳಿಗೆ ಎಷ್ಟು ವಯಸ್ಸಾಗಿತ್ತೆಂದರೆ ಅವುಗಳಿಂದ ಯಾವ ಕೆಲಸವೂ ಸಾಧ್ಯವಾಗುತ್ತಿರಲಿಲ್ಲ. ಆದರೆ ಅವುಗಳನ್ನು ಮಾರದೆ ಹಾಗೆ ಇಟ್ಟುಕೊಳ್ಳುವುದೂ ಸುಲಭವಾಗಿರಲಿಲ್ಲ. ಅದಕ್ಕೆ ಮುಖ್ಯ ಕಾರಣ ಮೇವಿನ ಸಮಸ್ಯೆ.

ಇವತ್ತು ನೆಲಮಂಗಲದ ಸುತ್ತಮುತ್ತ ಕೃಷಿ ಚಟುವಟಿಕೆ ಸ್ಥಗಿತಗೊಳ್ಳುತ್ತಿದೆ; ಹೊಲಗಳಿದ್ದ ಜಾಗಗಳಲ್ಲಿ ಫ್ಯಾಕ್ಟರಿಗಳು ತಲೆ ಎತ್ತುತ್ತಿವೆ; ಗೋಮಾಳಗಳು ಸೈಟುಗಳಾಗಿ ಪರಿವರ್ತನೆಗೊಂಡಿವೆ. ಇಂತಹ ಪರಿಸ್ಥಿತಿಯಲ್ಲಿ ಆ ಎತ್ತುಗಳಿಗೆ ಎಲ್ಲಿಂದ ಮೇವು ತರುವುದು? ಹಿಂಡಿ, ಬೂಸಾ ಮಾತು ಬದಿಗಿರಲಿ, ಒಣಹುಲ್ಲು ಕೂಡ ಎಷ್ಟು ದುಬಾರಿ ಆಗಿದೆ ಎಂದರೆ ಒಂದು ಮೆದೆ ಹುಲ್ಲಿಗೆ ಇವತ್ತು ಕನಿಷ್ಠ ಆರು ಸಾವಿರ ರೂಪಾಯಿಗಳನ್ನು ತೆರಬೇಕು. ಇವತ್ತು ಹಲವಾರು ಚೆಡ್ಡಿಗಳು “ಗೋವು ಸಗಣಿ ಕೊಡುತ್ತದಲ್ಲ” ಎಂದೆಲ್ಲ ವಾದಿಸುತ್ತಿದ್ದಾರೆ. ಆದರೆ ಒಂದು ಸಾವಿರ ರೂಪಾಯಿ ಬೆಲೆಬಾಳುವ ಸಗಣಿಗಾಗಿ ಹತ್ತಾರು ಸಾವಿರಾರು ರೂಪಾಯಿಗಳನ್ನು ವೆಚ್ಚ ಮಾಡಿ ಹುಲ್ಲು ಖರೀದಿಸುವುದು ಎಷ್ಟು ಸಮಂಜಸ? ಅಷ್ಟು ಆರ್ಥಿಕ ಶಕ್ತಿ ಅದೆಷ್ಟು ರೈತರಿಗೆ ಇರುತ್ತದೆ? ಈಗಾಗಲೇ ಸಾಲ-ನಷ್ಟಗಳಡಿ ತತ್ತರಿಸುತ್ತಿರುವ ರೈತರ ಮೇಲೆ ಇಂತಹ ಇನ್ನೊಂದು ಆರ್ಥಿಕ ಹೊರೆಯನ್ನು ಹೊರಿಸುವಷ್ಟು ಅಮಾನವೀಯರಾಗಿದ್ದೇವೆಯೇ ನಾವು?

ತೋಟದ ಮುದಿ ಎತ್ತುಗಳನ್ನು ಮಾರಲು ಲಿಂಗರಾಜುವಿಗೆ ಹೇಳಿದೆ. ಅವುಗಳನ್ನು ಕೊಂಡವರು ಅವುಗಳನ್ನು ಸಾಕಿದರೋ ಅಥವಾ ಕಸಾಯಿಖಾನೆಗೆ ಮಾರಿದರೋ, ಅದರ ಬಗ್ಗೆ ನಾನು ಯೋಚಿಸಲಿಲ್ಲ. ಆದರೆ ಅವುಗಳನ್ನು ಮಾರಿ ಬಂದ 10,500 ರೂಪಾಯಿಗಳೊಂದಿಗೆ ಇನ್ನೂ ನಾಲ್ಕು ಸಾವಿರ ಸೇರಿಸಿ ಎರಡು ನಾಟಿ ಹಸುಗಳನ್ನು ಕೊಂಡುಕೊಂಡೆ. ಈ ಎರಡೂ ಹಸುಗಳು ಈಗ ಎರಡು ಗಂಡು ಕರುಗಳನ್ನು ಈದಿವೆ. ನನ್ನ ಈ ನಾಲ್ಕು ಗೋವುಗಳಲ್ಲದೆ ಲಿಂಗರಾಜು ಕೂಡ ಎರಡು ಹಸುಗಳನ್ನು ಸಾಕಿದ್ದಾನೆ. ಆದರೆ ಆ ಹಸುಗಳನ್ನು ಕೊಂಡ ವರ್ಷ ಮಳೆ ಮತ್ತು ನಮ್ಮ ಬೋರ್‍ವೆಲ್ ಕೈಕೊಟ್ಟಿದ್ದರಿಂದ ಮೇವಿಗಾಗಿ ನಾನು ಮತ್ತು ಲಿಂಗರಾಜು ಪಟ್ಟ ಪಾಡು ಅಷ್ಟಿಷ್ಟಲ್ಲ. ಕೊನೆಗೆ ನಮ್ಮ ಚಂದ್ರೇಗೌಡರ ಬಿದಿರಿನ ಕೆರೆಯಿಂದ ಏಳು ಸಾವಿರ ರೂಪಾಯಿ ಕೊಟ್ಟು ಒಣಹುಲ್ಲು ತರಿಸಿದ್ದಾಯಿತು. ಆದೂ ಸಾಕಾಗದೆ ಹತ್ತಿರದಿಂದಲೇ ಮತ್ತೆ ಐದು ಸಾವಿರ ರೂಪಾಯಿ ಕೊಟ್ಟು ಕೊಂಡುಕೊಳ್ಳಬೇಕಾಯಿತು. ಇನ್ನು ಎರಡೂ ಹಸುಗಳು ಗಬ್ಬ ಆಗಿದ್ದಾಗ ಹಿಂಡಿ, ಬೂಸಾ ಅಂತ ಮತ್ತಷ್ಟು ಸಾವಿರ ರೂಪಾಯಿಗಳು ಕೈಬಿಟ್ಟವು. ಹೀಗೆ ಲೆಕ್ಕ ಹಾಕಿದರೆ ಆ ಎರಡು ಹಸು ಮತ್ತು ಅವುಗಳ ಕರುಗಳಿಗೆಂದು ಈಗಾಗಲೇ 30,000 ರೂಪಾಯಿಗಳು ವೆಚ್ಚವಾಗಿವೆ.

ಈ ವೆಚ್ಚದೊಂದಿಗೆ ಆ ಗೋವುಗಳಿಂದ ಆದ ಉಳಿತಾಯ ಯಾವ ಲೆಕ್ಕಕ್ಕೂ ಆಗುವುದಿಲ್ಲ. ಆದರೆ ತೋಟದಲ್ಲಿ ಗೋವುಗಳಿದ್ದರೆ ಚಂದ ಎಂಬ ನಂಬಿಕೆ ಮತ್ತು ಆ ಕರುಗಳಿಂದ ನಮ್ಮ ಇಶಾಳಿಗೆ ಆಗುವ ಆನಂದ(ಅವುಗಳಿಗೆ ಶಿವ ಮತ್ತು ಬಸವ ಎಂದು ಹೆಸರಿಟ್ಟಿದ್ದಾಳೆ)ಕ್ಕೆ ಹೋಲಿಸಿದರೆ ವೆಚ್ಚವೆಲ್ಲ ಗೌಣ. ಹವ್ಯಾಸಿ ರೈತ ಮಹಿಳೆಯಾದ ನನಗೆ ಆ ಆರ್ಥಿಕ ಭಾರವನ್ನು ಹೊರುವ ಶಕ್ತಿ ಮತ್ತು ಹುಮ್ಮಸ್ಸು ಇರಬಹುದು, ಆದರೆ ಅದು ಎಲ್ಲ ರೈತರಿಂದ ನಿರೀಕ್ಷಿಸುವುದು ತಪ್ಪು ಮಾತ್ರವಲ್ಲ ದೊಡ್ಡ ಅನ್ಯಾಯವಾಗುತ್ತದೆ.

ಅಂದಹಾಗೆ, ಈಗಿರುವ ಹಸುಗಳೂ ಮುದಿ ಆದಾಗ ಅವುಗಳನ್ನೂ ಮಾರುತ್ತೇನೆ. ಕರುಗಳು ಬೆಳೆದಾಗ ಅವುಗಳನ್ನು ಇತರೆ ರೈತರಿಗೆ ಮಾರುತ್ತೇನೆ. ಬಂದ ಹಣದಲ್ಲಿ ಹೊಸ ಹಸುಗಳನ್ನು, ಹೊಸ ಎತ್ತುಗಳನ್ನು ಕೊಂಡು ಸಾಕುತ್ತೇನೆ. ಬುದ್ದಿ ಇರುವ ಎಲ್ಲಾ ಕೃಷಿಕರೂ ಮಾಡುವುದು ಇದನ್ನೇ.

ಆದರೆ ಬುದ್ದಿ ಇಲ್ಲದ, ಗೋವನ್ನು ಸಾಕದ ಅವುಗಳಿಗಾಗಿ ಪರದಾಡುವ, ಅವುಗಳನ್ನು ಆರ್ಥಿಕ ಲಾಭ-ನಷ್ಟದ ಲೆಕ್ಕದಲ್ಲಿ ನೋಡದ ಯಡಿಯೂರಪ್ಪನಂತಹ ಬುದ್ಧಿಹೀನರು ಮಾತ್ರ ಗೋಹತ್ಯೆ ಮತ್ತು ಗೋಮಾಂಸ ಮಾರಾಟವನ್ನು ನಿಷೇಧಿಸಲು ಹೊರಡುತ್ತಾರೆ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...