Homeಅಂಕಣಗಳುನಾನೂ ಗೋವುಗಳನ್ನು ಸಾಕಿದೆ, ಮಾರಿದೆ

ನಾನೂ ಗೋವುಗಳನ್ನು ಸಾಕಿದೆ, ಮಾರಿದೆ

- Advertisement -
- Advertisement -

| ಗೌರಿ ಲಂಕೇಶ್ |
10 ಮಾರ್ಚ್, 2010 (ಸಂಪಾದಕೀಯದಿಂದ)

ಯಡಿಯೂರಪ್ಪನ ‘ಬ್ರಾಹ್ಮಣಶಾಹಿ’ ಸರ್ಕಾರ ಜಾರಿಗೆ ತರಲು ಇಚ್ಛಿಸಿರುವ ಗೋಹತ್ಯೆ ನಿಷೇಧ ಕಾನೂನನ್ನು ಕುರಿತಂತೆ ನಿಮ್ಮ ಈ ಪತ್ರಿಕೆ ಮತ್ತು ಇತರೆ ಮಾಧ್ಯಮಗಳು ಬಹಳಷ್ಟು ಚರ್ಚಿಸಿವೆ. ಆದರೆ ಎಲ್ಲ ಚರ್ಚೆಗಳೂ ಆಹಾರ ಸಂಸ್ಕೃತಿ, ಸಂವಿಧಾನ, ಆರ್ಥಿಕ ಪರಿಸ್ಥಿತಿ, ವೈಯಕ್ತಿಕ ಆಯ್ಕೆ ಇತ್ಯಾದಿಗಳ ಸುತ್ತ ನಡೆದಿದೆ.

ಆದ್ದರಿಂದ ನಾನಿಲ್ಲಿ ರೈತರ ದೃಷ್ಟಿಕೋನದಿಂದ ಮತ್ತು ವೈಯಕ್ತಿಕ ಅನುಭವದಿಂದ ಹತ್ತಿರವಿರುವ ಅಮ್ಮನ ತೋಟದ ಜವಾಬ್ದಾರಿಯನ್ನು ಐದಾರು ವರ್ಷಗಳ ಹಿಂದೆ ವಹಿಸಿಕೊಂಡಾಗ ತೋಟದೊಂದಿಗೆ ಒಂದು ಜೊತೆ ಎತ್ತು ಬಂದಿದ್ದವು.

ಎರಡು ವರ್ಷಗಳ ಹಿಂದೆ ತೋಟವನ್ನು ನೋಡಿಕೊಳ್ಳಲು ಬಂದ ನಮ್ಮ ಲಿಂಗರಾಜು ಆ ಎರಡೂ ಎತ್ತುಗಳು ಮುದಿ ಆಗಿವೆ ಎಂದೂ, ಅವುಗಳನ್ನು ಮಾರಿ ಬೇರೆ ಜೋಡಿಯನ್ನು ಖರೀದಿಸಿದರೆ ಉತ್ತಮ ಎಂದೂ ಹೇಳಿದ. ಆ ಎತ್ತುಗಳಿಗೆ ಎಷ್ಟು ವಯಸ್ಸಾಗಿತ್ತೆಂದರೆ ಅವುಗಳಿಂದ ಯಾವ ಕೆಲಸವೂ ಸಾಧ್ಯವಾಗುತ್ತಿರಲಿಲ್ಲ. ಆದರೆ ಅವುಗಳನ್ನು ಮಾರದೆ ಹಾಗೆ ಇಟ್ಟುಕೊಳ್ಳುವುದೂ ಸುಲಭವಾಗಿರಲಿಲ್ಲ. ಅದಕ್ಕೆ ಮುಖ್ಯ ಕಾರಣ ಮೇವಿನ ಸಮಸ್ಯೆ.

ಇವತ್ತು ನೆಲಮಂಗಲದ ಸುತ್ತಮುತ್ತ ಕೃಷಿ ಚಟುವಟಿಕೆ ಸ್ಥಗಿತಗೊಳ್ಳುತ್ತಿದೆ; ಹೊಲಗಳಿದ್ದ ಜಾಗಗಳಲ್ಲಿ ಫ್ಯಾಕ್ಟರಿಗಳು ತಲೆ ಎತ್ತುತ್ತಿವೆ; ಗೋಮಾಳಗಳು ಸೈಟುಗಳಾಗಿ ಪರಿವರ್ತನೆಗೊಂಡಿವೆ. ಇಂತಹ ಪರಿಸ್ಥಿತಿಯಲ್ಲಿ ಆ ಎತ್ತುಗಳಿಗೆ ಎಲ್ಲಿಂದ ಮೇವು ತರುವುದು? ಹಿಂಡಿ, ಬೂಸಾ ಮಾತು ಬದಿಗಿರಲಿ, ಒಣಹುಲ್ಲು ಕೂಡ ಎಷ್ಟು ದುಬಾರಿ ಆಗಿದೆ ಎಂದರೆ ಒಂದು ಮೆದೆ ಹುಲ್ಲಿಗೆ ಇವತ್ತು ಕನಿಷ್ಠ ಆರು ಸಾವಿರ ರೂಪಾಯಿಗಳನ್ನು ತೆರಬೇಕು. ಇವತ್ತು ಹಲವಾರು ಚೆಡ್ಡಿಗಳು “ಗೋವು ಸಗಣಿ ಕೊಡುತ್ತದಲ್ಲ” ಎಂದೆಲ್ಲ ವಾದಿಸುತ್ತಿದ್ದಾರೆ. ಆದರೆ ಒಂದು ಸಾವಿರ ರೂಪಾಯಿ ಬೆಲೆಬಾಳುವ ಸಗಣಿಗಾಗಿ ಹತ್ತಾರು ಸಾವಿರಾರು ರೂಪಾಯಿಗಳನ್ನು ವೆಚ್ಚ ಮಾಡಿ ಹುಲ್ಲು ಖರೀದಿಸುವುದು ಎಷ್ಟು ಸಮಂಜಸ? ಅಷ್ಟು ಆರ್ಥಿಕ ಶಕ್ತಿ ಅದೆಷ್ಟು ರೈತರಿಗೆ ಇರುತ್ತದೆ? ಈಗಾಗಲೇ ಸಾಲ-ನಷ್ಟಗಳಡಿ ತತ್ತರಿಸುತ್ತಿರುವ ರೈತರ ಮೇಲೆ ಇಂತಹ ಇನ್ನೊಂದು ಆರ್ಥಿಕ ಹೊರೆಯನ್ನು ಹೊರಿಸುವಷ್ಟು ಅಮಾನವೀಯರಾಗಿದ್ದೇವೆಯೇ ನಾವು?

ತೋಟದ ಮುದಿ ಎತ್ತುಗಳನ್ನು ಮಾರಲು ಲಿಂಗರಾಜುವಿಗೆ ಹೇಳಿದೆ. ಅವುಗಳನ್ನು ಕೊಂಡವರು ಅವುಗಳನ್ನು ಸಾಕಿದರೋ ಅಥವಾ ಕಸಾಯಿಖಾನೆಗೆ ಮಾರಿದರೋ, ಅದರ ಬಗ್ಗೆ ನಾನು ಯೋಚಿಸಲಿಲ್ಲ. ಆದರೆ ಅವುಗಳನ್ನು ಮಾರಿ ಬಂದ 10,500 ರೂಪಾಯಿಗಳೊಂದಿಗೆ ಇನ್ನೂ ನಾಲ್ಕು ಸಾವಿರ ಸೇರಿಸಿ ಎರಡು ನಾಟಿ ಹಸುಗಳನ್ನು ಕೊಂಡುಕೊಂಡೆ. ಈ ಎರಡೂ ಹಸುಗಳು ಈಗ ಎರಡು ಗಂಡು ಕರುಗಳನ್ನು ಈದಿವೆ. ನನ್ನ ಈ ನಾಲ್ಕು ಗೋವುಗಳಲ್ಲದೆ ಲಿಂಗರಾಜು ಕೂಡ ಎರಡು ಹಸುಗಳನ್ನು ಸಾಕಿದ್ದಾನೆ. ಆದರೆ ಆ ಹಸುಗಳನ್ನು ಕೊಂಡ ವರ್ಷ ಮಳೆ ಮತ್ತು ನಮ್ಮ ಬೋರ್‍ವೆಲ್ ಕೈಕೊಟ್ಟಿದ್ದರಿಂದ ಮೇವಿಗಾಗಿ ನಾನು ಮತ್ತು ಲಿಂಗರಾಜು ಪಟ್ಟ ಪಾಡು ಅಷ್ಟಿಷ್ಟಲ್ಲ. ಕೊನೆಗೆ ನಮ್ಮ ಚಂದ್ರೇಗೌಡರ ಬಿದಿರಿನ ಕೆರೆಯಿಂದ ಏಳು ಸಾವಿರ ರೂಪಾಯಿ ಕೊಟ್ಟು ಒಣಹುಲ್ಲು ತರಿಸಿದ್ದಾಯಿತು. ಆದೂ ಸಾಕಾಗದೆ ಹತ್ತಿರದಿಂದಲೇ ಮತ್ತೆ ಐದು ಸಾವಿರ ರೂಪಾಯಿ ಕೊಟ್ಟು ಕೊಂಡುಕೊಳ್ಳಬೇಕಾಯಿತು. ಇನ್ನು ಎರಡೂ ಹಸುಗಳು ಗಬ್ಬ ಆಗಿದ್ದಾಗ ಹಿಂಡಿ, ಬೂಸಾ ಅಂತ ಮತ್ತಷ್ಟು ಸಾವಿರ ರೂಪಾಯಿಗಳು ಕೈಬಿಟ್ಟವು. ಹೀಗೆ ಲೆಕ್ಕ ಹಾಕಿದರೆ ಆ ಎರಡು ಹಸು ಮತ್ತು ಅವುಗಳ ಕರುಗಳಿಗೆಂದು ಈಗಾಗಲೇ 30,000 ರೂಪಾಯಿಗಳು ವೆಚ್ಚವಾಗಿವೆ.

ಈ ವೆಚ್ಚದೊಂದಿಗೆ ಆ ಗೋವುಗಳಿಂದ ಆದ ಉಳಿತಾಯ ಯಾವ ಲೆಕ್ಕಕ್ಕೂ ಆಗುವುದಿಲ್ಲ. ಆದರೆ ತೋಟದಲ್ಲಿ ಗೋವುಗಳಿದ್ದರೆ ಚಂದ ಎಂಬ ನಂಬಿಕೆ ಮತ್ತು ಆ ಕರುಗಳಿಂದ ನಮ್ಮ ಇಶಾಳಿಗೆ ಆಗುವ ಆನಂದ(ಅವುಗಳಿಗೆ ಶಿವ ಮತ್ತು ಬಸವ ಎಂದು ಹೆಸರಿಟ್ಟಿದ್ದಾಳೆ)ಕ್ಕೆ ಹೋಲಿಸಿದರೆ ವೆಚ್ಚವೆಲ್ಲ ಗೌಣ. ಹವ್ಯಾಸಿ ರೈತ ಮಹಿಳೆಯಾದ ನನಗೆ ಆ ಆರ್ಥಿಕ ಭಾರವನ್ನು ಹೊರುವ ಶಕ್ತಿ ಮತ್ತು ಹುಮ್ಮಸ್ಸು ಇರಬಹುದು, ಆದರೆ ಅದು ಎಲ್ಲ ರೈತರಿಂದ ನಿರೀಕ್ಷಿಸುವುದು ತಪ್ಪು ಮಾತ್ರವಲ್ಲ ದೊಡ್ಡ ಅನ್ಯಾಯವಾಗುತ್ತದೆ.

ಅಂದಹಾಗೆ, ಈಗಿರುವ ಹಸುಗಳೂ ಮುದಿ ಆದಾಗ ಅವುಗಳನ್ನೂ ಮಾರುತ್ತೇನೆ. ಕರುಗಳು ಬೆಳೆದಾಗ ಅವುಗಳನ್ನು ಇತರೆ ರೈತರಿಗೆ ಮಾರುತ್ತೇನೆ. ಬಂದ ಹಣದಲ್ಲಿ ಹೊಸ ಹಸುಗಳನ್ನು, ಹೊಸ ಎತ್ತುಗಳನ್ನು ಕೊಂಡು ಸಾಕುತ್ತೇನೆ. ಬುದ್ದಿ ಇರುವ ಎಲ್ಲಾ ಕೃಷಿಕರೂ ಮಾಡುವುದು ಇದನ್ನೇ.

ಆದರೆ ಬುದ್ದಿ ಇಲ್ಲದ, ಗೋವನ್ನು ಸಾಕದ ಅವುಗಳಿಗಾಗಿ ಪರದಾಡುವ, ಅವುಗಳನ್ನು ಆರ್ಥಿಕ ಲಾಭ-ನಷ್ಟದ ಲೆಕ್ಕದಲ್ಲಿ ನೋಡದ ಯಡಿಯೂರಪ್ಪನಂತಹ ಬುದ್ಧಿಹೀನರು ಮಾತ್ರ ಗೋಹತ್ಯೆ ಮತ್ತು ಗೋಮಾಂಸ ಮಾರಾಟವನ್ನು ನಿಷೇಧಿಸಲು ಹೊರಡುತ್ತಾರೆ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...