Homeಚಳವಳಿ‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

ತಮ್ಮ ಸಿದ್ಧಾಂತಕ್ಕೆ ವಿರುದ್ಧವಾದವರನ್ನು ಹತ್ಯೆ ಮಾಡಲು ಮುಗ್ಧ ಯುವಕರನ್ನು ಆಯ್ಕೆ ಮಾಡುತ್ತಿದ್ದ ತಾವಡೆ ಅವರಿಗೆ ಪಿಸ್ತೂಲ್ ಬಳಸುವ ತರಬೇತಿ ಕೊಟ್ಟು ಬ್ರೈನ್‌ವಾಶ್ ಮಾಡುತ್ತಿದ್ದ

- Advertisement -
- Advertisement -

ಆರು ವರ್ಷಗಳ ಹಿಂದೆ ವಿಚಾರವಾದಿ ನರೇಂದ್ರ ದಾಬೋಲ್ಕರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪ ಹೊತ್ತಿರುವ ಶರದ್ ಕಲಾಸ್ಕರ್, ಕರ್ನಾಟಕ ಪೊಲೀಸರ ಮುಂದೆ ಶಾಕಿಂಗ್ ಸತ್ಯಗಳನ್ನು ಹೊರಗೆಡವಿದ್ದಾನೆ. ‘ನಾನು ಎರಡು ಗುಂಡು ಹಾರಿಸಿ ಅವರನ್ನು ಕೊಂದೆ, ಒಂದು ತಲೆಯ ಹಿಂಬದಿಯಿಂದ ಮತ್ತೊಂದು ಅವರ ಬಲಗಣ್ಣಿನ ಮೇಲೆ’ ಎಂದು ತನ್ನ ಹದಿನಾಲ್ಕು ಪುಟಗಳ ತಪ್ಪೊಪ್ಪಿಗೆಯಲ್ಲಿ ತಿಳಿಸಿರುವುದಾಗಿ ಎನ್‌ಡಿಟಿವಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಗೋವಿಂದ ಪನ್ಸಾರೆ ಮತ್ತು ಪತ್ರಕರ್ತೆ ಗೌರಿ ಲಂಕೇಶ್‌ರ ಹತ್ಯೆಯಲ್ಲೂ ಈತನ ಕೈವಾಡವಿರುವ ಕುರಿತು ತನಿಖೆ ನಡೆಯುತ್ತಿದೆ.

ಗೌರಿ ಲಂಕೇಶರ ಹತ್ಯೆಯ ಸಂಚಿನಲ್ಲಿ ಭಾಗಿಯಾದ ಆರೋಪದ ಮೇಲೆ ಒಂದು ವರ್ಷದಿಂದ ಈತನ ವಿಚಾರಣೆ ನಡೆಸಲಾಗುತ್ತಿದೆ. ಅದಕ್ಕೂ ಮೊದಲು ಮಾಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳವು ಪಾಲ್ಗರ್ ಜಿಲ್ಲೆಯಲ್ಲಿರುವ ನರಸೋಪುರ್‌ನ ಅಕ್ರಮ ಪಿಸ್ತೂಲ್ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ ಆ ಪ್ರಕರಣದಲ್ಲಿ ಶರದ್ ಕಲಾಸ್ಕರ್‌ನನ್ನು ಬಂಧಿಸಿದ್ದರು. ಗೌರಿ ಹತ್ಯೆಯ ವಿಚಾರಣೆ ಸಮಯದಲ್ಲಿ ಆತ ದಾಬೋಲ್ಕರ್ ಹತ್ಯೆಯ ಗುಟ್ಟು ಬಿಚ್ಚಿಟ್ಟಿದ್ದಾನೆ.

ಆಗಸ್ಟ್ 2013ರಲ್ಲಿ ಪುಣೆಯಲ್ಲಿ ಬೆಳಗಿನ ವಾಕಿಂಗ್ ವೇಳೆ ದಾಬೋಲ್ಕರ್ ಹತ್ಯೆ ಮಾಡಲಾಗಿತ್ತು. ಅದಾದ ನಂತರ ಗೋವಿಂದ ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಮತ್ತು ಗೌರಿ ಲಂಕೇಶರ ಹತ್ಯೆಗಳಾಗಿದ್ದವು.

ಮಹಾರಾಷ್ಟ್ರ ಪೊಲೀಸರು ಆತ ಹೇಳಿದ ಗೌರಿ ಹತ್ಯೆ ಕುರಿಯ ಮಾಹಿತಿಗಳನ್ನು ಕರ್ನಾಟಕ ಪೊಲೀಸರ ಜೊತೆ ಹಂಚಿಕೊಂಡ ನಂತರ ಅವನನ್ನು ವಶಕ್ಕೆ ಪಡೆದ ರಾಜ್ಯದ ಎಸ್‌ಐಟಿ ತಂಡ ವಿಚಾರಣೆ ನಡೆಸುತ್ತಿದೆ.

ದಾಬೋಲ್ಕರ್ ಹತ್ಯೆಯ ಕುರಿತ ಘಟನೆಯನ್ನು ಮೆಲುಕು ಹಾಕಿರುವ ಆತ ಕೆಲ ಬಲಪಂಥೀಯ ನಾಯಕರು ತನ್ನನ್ನು ಸಂಪರ್ಕಿಸಿ ಸನಾತನ ಸಿದ್ಧಾಂತ, ಪಿಸ್ತೂಲಿನ ಬಳಕೆ ಮತ್ತು ಬಾಂಬ್ ತಯಾರಿಕೆಯ ತರಬೇತಿ ನೀಡಿದ್ದರು ಎಂದಿದ್ದಾನೆ. ವೀರೇಂದ್ರ ತಾವಡೆ (ಪ್ರಧಾನ ಸಂಚುಗಾರ ಆರೋಪ ಹೊತ್ತಿರುವವನು) ಎಂಬಾತ ನಾವು ಕೆಲ ದುಷ್ಟರಿಗೆ ಅಂತ್ಯ ಹಾಡಬೇಕಿದೆ ಎಂದು ತನ್ನ ಬಳಿ ಹೇಳಿ, ಹತ್ಯೆ ಮಾಡಲು ನನ್ನ ಬ್ರೈನ್‌ವಾಶ್ ಮಾಡಿದ ಎಂಬುದಾಗಿ ಶರದ್ ತಪ್ಪೊಪ್ಪಿಗೆಯಲ್ಲಿ ಹೇಳಿಕೊಂಡಿರುವುದಾಗಿ ವರದಿಯಾಗಿದೆ. ಸದ್ಯ ತಾವಡೆ ಸಿಬಿಐ ಪೊಲೀಸರ ಕಸ್ಟಡಿಯಲ್ಲಿದ್ದಾನೆ.

ದಾಬೋಲ್ಕರ್‌ಗೆ ತಲೆಗೆ ಗುರಿಯಿಟ್ಟು ಗುಂಡು ಹಾರಿಸು, ಅವನು ಅಲ್ಲೇ ಬಿದ್ದು ಸಾಯಬೇಕು ಎಂಬ ಸೂಚನೆಯನ್ನು ತಾವಡೆ, ಶರದ್‌ಗೆ ಕೊಟ್ಟಿದ್ದನಂತೆ. ಆತ ಕೊಟ್ಟ ಸೂಚನೆಗಳಂತೆ ದಾಬೋಲ್ಕರ್ ಬೆಳಗಿನ ವಾಕಿಂಗ್‌ಗೆಂದು ಪುಣೆಯ ಓಂಕಾರೇಶ್ವರ್ ಸೇತುವೆ ಬಳಿ ಬಂದಾಗ ಶರದ್ ಕಲಾಸ್ಕರ್ ಗುಂಡು ಹಾರಿಸಿ ಹತ್ಯೆ ಮಾಡಿದ್ದ.

ತಪ್ಪೊಪ್ಪಿಗೆಯಲ್ಲಿ ತಿಳಿಸಿರುವಂತೆ ಶರದ್ ಕಲಾಸ್ಕರ್ ದಾಬೋಲ್ಕರ್‌ಗೆ ಹಿಂಬದಿಯಿಂದ ತಲೆಗೆ ಗುಂಡು ಹಾರಿಸಿದ್ದ. ಅವರು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿರುವಂತೆಯೇ ಅವರ ಮೇಲೆ ಇನ್ನೊಂದು ಗುಂಡು ಹಾರಿಸಿದ್ದ. ಆದರೆ ಆ ಗುಂಡು ಹೊರಗೆ ಸಿಡಿಯದೆ ಪಿಸ್ತೂಲಿನೊಳಗೇ ಸ್ಟ್ರಕ್ ಆಗಿದ್ದರಿಂದ, ಗುಂಡನ್ನು ಹೊರತೆಗೆದು, ಮತ್ತೊಮ್ಮೆ ಅವರ ಬಲಗಣ್ಣಿನ ಮೇಲೆ ಹಣೆಗೆ ಗುಂಡು ಹಾರಿಸಿದ್ದ. ಆನಂತರ ಎರಡನೇ ಹಂತಕ ಸಚಿನ್ ಅಂಡುರೆ ಕೂಡಾ ಗುಂಡು ಹಾರಿಸಿದ್ದ ಎಂದು ತಪ್ಪೊಪ್ಪಿಗೆಯಲ್ಲಿ ಇರುವುದಾಗಿ ವರದಿ ಹೇಳುತ್ತಿದೆ.
ವೀರೇಂದ್ರ ತಾವಡೆಯೇ ನಂತರ ಶರದ್ ಕಲಾಸ್ಕರ್‌ನನ್ನು, ಗೌರಿ ಲಂಕೇಶ್ ಹತ್ಯೆಯಲ್ಲಿ ಭಾಗಿಯಾದ ಆರೋಪ ಹೊತ್ತು ಜೈಲಿನಲ್ಲಿರುವ ಅಮೋಲ್ ಕಾಳೆಗೆ ಪರಿಚಯ ಮಾಡಿಕೊಟ್ಟಿದ್ದ ಎಂಬ ಅಂಶವೂ ತಪ್ಪೊಪ್ಪಿಗೆಯಲ್ಲಿದೆ. ಗೌರಿ ಲಂಕೇಶ್‌ರ ಹತ್ಯೆ ಕುರಿತ ಪ್ಲ್ಯಾನ್ ಮಾಡಲಾದ ಹಲವು ಸಭೆಗಳಲ್ಲಿ ಭಾಗಿಯಾಗಿದ್ದಾಗಿ ಕಲಾಸ್ಕರ್ ಒಪ್ಪಿಕೊಂಡಿದ್ದಾನೆ.

2016ರ ಆಗಸ್ಟ್‌ನಲ್ಲಿ ಬೆಳಗಾಂನಲ್ಲಿ ಒಂದು ಸಭೆ ನಡೆಯಿತು. ಅಲ್ಲಿ ನಮ್ಮ ಸಿದ್ಧಾಂತಕ್ಕೆ ವಿರುದ್ಧವಾಗಿರುವವರು ಯಾರ್ಯಾಲರು ಎಂದು ಪಟ್ಟಿ ಮಾಡಲಾಯ್ತು. ಆ ಪಟ್ಟಿಯಲ್ಲಿ ಗೌರಿ ಲಂಕೇಶರ ಹೆಸರು ಮೊದಲ ಸ್ಥಾನ ಪಡೆದು, ಅವರನ್ನು ಕೊಲೆ ಮಾಡಲು ತೀರ್ಮಾನಿಸಲಾಯಿತು ಎಂದು ತಪ್ಪೊಪ್ಪಿಗೆಯಲ್ಲಿ ಆತ ಹೇಳಿದ್ದಾನೆ. ಒಂದು ವರ್ಷದ ನಂತರ 2017ರ ಆಗಸ್ಟನಲ್ಲಿ ಮತ್ತೊಂದು ಸಭೆ ನಡೆದು, ಅಲ್ಲಿ ಹತ್ಯೆಯ ಯೋಜನೆ ಅಂತಿಮಗೊಂಡಿತ್ತು. ಅದಾದ ಒಂದು ತಿಂಗಳಿಗೆ, ಸೆಪ್ಟಂಬರ್ ೫ರ ರಾತ್ರಿ ಅವರ ಮನೆಯ ಮುಂದೆಯೇ ಗೌರಿ ಲಂಕೇಶರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

ಈ ಬಂಧನಗಳು ನಡೆಯದಿದ್ದರೆ, ಬಾಂಬೆ ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ಬಿ.ಜಿ.ಖೋಲ್ಸೆ ಪಾಟೀಲರನ್ನು ಹತ್ಯೆ ಮಾಡಲು ಯೋಜನೆ ರೂಪಿಸಲಾಗಿತ್ತು ಎಂಬ ಶಾಕಿಂಗ್ ಅಂಶವನ್ನೂ ತನ್ನ ತಪ್ಪೊಪ್ಪಿಗೆಯಲ್ಲಿ ಕಲಾಸ್ಕರ್ ಹೊರಗೆಡವಿದ್ದಾನೆ. 14 ಪುಟಗಳ ಆತನ ತಪ್ಪೊಪ್ಪಿಗೆ ತನಗೆ ಲಭ್ಯವಾಗಿದೆ ಎಂದು ಎನ್‌ಡಿಟಿವಿ ವರದಿ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...