Homeಚಳವಳಿ‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

ತಮ್ಮ ಸಿದ್ಧಾಂತಕ್ಕೆ ವಿರುದ್ಧವಾದವರನ್ನು ಹತ್ಯೆ ಮಾಡಲು ಮುಗ್ಧ ಯುವಕರನ್ನು ಆಯ್ಕೆ ಮಾಡುತ್ತಿದ್ದ ತಾವಡೆ ಅವರಿಗೆ ಪಿಸ್ತೂಲ್ ಬಳಸುವ ತರಬೇತಿ ಕೊಟ್ಟು ಬ್ರೈನ್‌ವಾಶ್ ಮಾಡುತ್ತಿದ್ದ

- Advertisement -
- Advertisement -

ಆರು ವರ್ಷಗಳ ಹಿಂದೆ ವಿಚಾರವಾದಿ ನರೇಂದ್ರ ದಾಬೋಲ್ಕರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪ ಹೊತ್ತಿರುವ ಶರದ್ ಕಲಾಸ್ಕರ್, ಕರ್ನಾಟಕ ಪೊಲೀಸರ ಮುಂದೆ ಶಾಕಿಂಗ್ ಸತ್ಯಗಳನ್ನು ಹೊರಗೆಡವಿದ್ದಾನೆ. ‘ನಾನು ಎರಡು ಗುಂಡು ಹಾರಿಸಿ ಅವರನ್ನು ಕೊಂದೆ, ಒಂದು ತಲೆಯ ಹಿಂಬದಿಯಿಂದ ಮತ್ತೊಂದು ಅವರ ಬಲಗಣ್ಣಿನ ಮೇಲೆ’ ಎಂದು ತನ್ನ ಹದಿನಾಲ್ಕು ಪುಟಗಳ ತಪ್ಪೊಪ್ಪಿಗೆಯಲ್ಲಿ ತಿಳಿಸಿರುವುದಾಗಿ ಎನ್‌ಡಿಟಿವಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಗೋವಿಂದ ಪನ್ಸಾರೆ ಮತ್ತು ಪತ್ರಕರ್ತೆ ಗೌರಿ ಲಂಕೇಶ್‌ರ ಹತ್ಯೆಯಲ್ಲೂ ಈತನ ಕೈವಾಡವಿರುವ ಕುರಿತು ತನಿಖೆ ನಡೆಯುತ್ತಿದೆ.

ಗೌರಿ ಲಂಕೇಶರ ಹತ್ಯೆಯ ಸಂಚಿನಲ್ಲಿ ಭಾಗಿಯಾದ ಆರೋಪದ ಮೇಲೆ ಒಂದು ವರ್ಷದಿಂದ ಈತನ ವಿಚಾರಣೆ ನಡೆಸಲಾಗುತ್ತಿದೆ. ಅದಕ್ಕೂ ಮೊದಲು ಮಾಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳವು ಪಾಲ್ಗರ್ ಜಿಲ್ಲೆಯಲ್ಲಿರುವ ನರಸೋಪುರ್‌ನ ಅಕ್ರಮ ಪಿಸ್ತೂಲ್ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ ಆ ಪ್ರಕರಣದಲ್ಲಿ ಶರದ್ ಕಲಾಸ್ಕರ್‌ನನ್ನು ಬಂಧಿಸಿದ್ದರು. ಗೌರಿ ಹತ್ಯೆಯ ವಿಚಾರಣೆ ಸಮಯದಲ್ಲಿ ಆತ ದಾಬೋಲ್ಕರ್ ಹತ್ಯೆಯ ಗುಟ್ಟು ಬಿಚ್ಚಿಟ್ಟಿದ್ದಾನೆ.

ಆಗಸ್ಟ್ 2013ರಲ್ಲಿ ಪುಣೆಯಲ್ಲಿ ಬೆಳಗಿನ ವಾಕಿಂಗ್ ವೇಳೆ ದಾಬೋಲ್ಕರ್ ಹತ್ಯೆ ಮಾಡಲಾಗಿತ್ತು. ಅದಾದ ನಂತರ ಗೋವಿಂದ ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಮತ್ತು ಗೌರಿ ಲಂಕೇಶರ ಹತ್ಯೆಗಳಾಗಿದ್ದವು.

ಮಹಾರಾಷ್ಟ್ರ ಪೊಲೀಸರು ಆತ ಹೇಳಿದ ಗೌರಿ ಹತ್ಯೆ ಕುರಿಯ ಮಾಹಿತಿಗಳನ್ನು ಕರ್ನಾಟಕ ಪೊಲೀಸರ ಜೊತೆ ಹಂಚಿಕೊಂಡ ನಂತರ ಅವನನ್ನು ವಶಕ್ಕೆ ಪಡೆದ ರಾಜ್ಯದ ಎಸ್‌ಐಟಿ ತಂಡ ವಿಚಾರಣೆ ನಡೆಸುತ್ತಿದೆ.

ದಾಬೋಲ್ಕರ್ ಹತ್ಯೆಯ ಕುರಿತ ಘಟನೆಯನ್ನು ಮೆಲುಕು ಹಾಕಿರುವ ಆತ ಕೆಲ ಬಲಪಂಥೀಯ ನಾಯಕರು ತನ್ನನ್ನು ಸಂಪರ್ಕಿಸಿ ಸನಾತನ ಸಿದ್ಧಾಂತ, ಪಿಸ್ತೂಲಿನ ಬಳಕೆ ಮತ್ತು ಬಾಂಬ್ ತಯಾರಿಕೆಯ ತರಬೇತಿ ನೀಡಿದ್ದರು ಎಂದಿದ್ದಾನೆ. ವೀರೇಂದ್ರ ತಾವಡೆ (ಪ್ರಧಾನ ಸಂಚುಗಾರ ಆರೋಪ ಹೊತ್ತಿರುವವನು) ಎಂಬಾತ ನಾವು ಕೆಲ ದುಷ್ಟರಿಗೆ ಅಂತ್ಯ ಹಾಡಬೇಕಿದೆ ಎಂದು ತನ್ನ ಬಳಿ ಹೇಳಿ, ಹತ್ಯೆ ಮಾಡಲು ನನ್ನ ಬ್ರೈನ್‌ವಾಶ್ ಮಾಡಿದ ಎಂಬುದಾಗಿ ಶರದ್ ತಪ್ಪೊಪ್ಪಿಗೆಯಲ್ಲಿ ಹೇಳಿಕೊಂಡಿರುವುದಾಗಿ ವರದಿಯಾಗಿದೆ. ಸದ್ಯ ತಾವಡೆ ಸಿಬಿಐ ಪೊಲೀಸರ ಕಸ್ಟಡಿಯಲ್ಲಿದ್ದಾನೆ.

ದಾಬೋಲ್ಕರ್‌ಗೆ ತಲೆಗೆ ಗುರಿಯಿಟ್ಟು ಗುಂಡು ಹಾರಿಸು, ಅವನು ಅಲ್ಲೇ ಬಿದ್ದು ಸಾಯಬೇಕು ಎಂಬ ಸೂಚನೆಯನ್ನು ತಾವಡೆ, ಶರದ್‌ಗೆ ಕೊಟ್ಟಿದ್ದನಂತೆ. ಆತ ಕೊಟ್ಟ ಸೂಚನೆಗಳಂತೆ ದಾಬೋಲ್ಕರ್ ಬೆಳಗಿನ ವಾಕಿಂಗ್‌ಗೆಂದು ಪುಣೆಯ ಓಂಕಾರೇಶ್ವರ್ ಸೇತುವೆ ಬಳಿ ಬಂದಾಗ ಶರದ್ ಕಲಾಸ್ಕರ್ ಗುಂಡು ಹಾರಿಸಿ ಹತ್ಯೆ ಮಾಡಿದ್ದ.

ತಪ್ಪೊಪ್ಪಿಗೆಯಲ್ಲಿ ತಿಳಿಸಿರುವಂತೆ ಶರದ್ ಕಲಾಸ್ಕರ್ ದಾಬೋಲ್ಕರ್‌ಗೆ ಹಿಂಬದಿಯಿಂದ ತಲೆಗೆ ಗುಂಡು ಹಾರಿಸಿದ್ದ. ಅವರು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿರುವಂತೆಯೇ ಅವರ ಮೇಲೆ ಇನ್ನೊಂದು ಗುಂಡು ಹಾರಿಸಿದ್ದ. ಆದರೆ ಆ ಗುಂಡು ಹೊರಗೆ ಸಿಡಿಯದೆ ಪಿಸ್ತೂಲಿನೊಳಗೇ ಸ್ಟ್ರಕ್ ಆಗಿದ್ದರಿಂದ, ಗುಂಡನ್ನು ಹೊರತೆಗೆದು, ಮತ್ತೊಮ್ಮೆ ಅವರ ಬಲಗಣ್ಣಿನ ಮೇಲೆ ಹಣೆಗೆ ಗುಂಡು ಹಾರಿಸಿದ್ದ. ಆನಂತರ ಎರಡನೇ ಹಂತಕ ಸಚಿನ್ ಅಂಡುರೆ ಕೂಡಾ ಗುಂಡು ಹಾರಿಸಿದ್ದ ಎಂದು ತಪ್ಪೊಪ್ಪಿಗೆಯಲ್ಲಿ ಇರುವುದಾಗಿ ವರದಿ ಹೇಳುತ್ತಿದೆ.
ವೀರೇಂದ್ರ ತಾವಡೆಯೇ ನಂತರ ಶರದ್ ಕಲಾಸ್ಕರ್‌ನನ್ನು, ಗೌರಿ ಲಂಕೇಶ್ ಹತ್ಯೆಯಲ್ಲಿ ಭಾಗಿಯಾದ ಆರೋಪ ಹೊತ್ತು ಜೈಲಿನಲ್ಲಿರುವ ಅಮೋಲ್ ಕಾಳೆಗೆ ಪರಿಚಯ ಮಾಡಿಕೊಟ್ಟಿದ್ದ ಎಂಬ ಅಂಶವೂ ತಪ್ಪೊಪ್ಪಿಗೆಯಲ್ಲಿದೆ. ಗೌರಿ ಲಂಕೇಶ್‌ರ ಹತ್ಯೆ ಕುರಿತ ಪ್ಲ್ಯಾನ್ ಮಾಡಲಾದ ಹಲವು ಸಭೆಗಳಲ್ಲಿ ಭಾಗಿಯಾಗಿದ್ದಾಗಿ ಕಲಾಸ್ಕರ್ ಒಪ್ಪಿಕೊಂಡಿದ್ದಾನೆ.

2016ರ ಆಗಸ್ಟ್‌ನಲ್ಲಿ ಬೆಳಗಾಂನಲ್ಲಿ ಒಂದು ಸಭೆ ನಡೆಯಿತು. ಅಲ್ಲಿ ನಮ್ಮ ಸಿದ್ಧಾಂತಕ್ಕೆ ವಿರುದ್ಧವಾಗಿರುವವರು ಯಾರ್ಯಾಲರು ಎಂದು ಪಟ್ಟಿ ಮಾಡಲಾಯ್ತು. ಆ ಪಟ್ಟಿಯಲ್ಲಿ ಗೌರಿ ಲಂಕೇಶರ ಹೆಸರು ಮೊದಲ ಸ್ಥಾನ ಪಡೆದು, ಅವರನ್ನು ಕೊಲೆ ಮಾಡಲು ತೀರ್ಮಾನಿಸಲಾಯಿತು ಎಂದು ತಪ್ಪೊಪ್ಪಿಗೆಯಲ್ಲಿ ಆತ ಹೇಳಿದ್ದಾನೆ. ಒಂದು ವರ್ಷದ ನಂತರ 2017ರ ಆಗಸ್ಟನಲ್ಲಿ ಮತ್ತೊಂದು ಸಭೆ ನಡೆದು, ಅಲ್ಲಿ ಹತ್ಯೆಯ ಯೋಜನೆ ಅಂತಿಮಗೊಂಡಿತ್ತು. ಅದಾದ ಒಂದು ತಿಂಗಳಿಗೆ, ಸೆಪ್ಟಂಬರ್ ೫ರ ರಾತ್ರಿ ಅವರ ಮನೆಯ ಮುಂದೆಯೇ ಗೌರಿ ಲಂಕೇಶರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

ಈ ಬಂಧನಗಳು ನಡೆಯದಿದ್ದರೆ, ಬಾಂಬೆ ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ಬಿ.ಜಿ.ಖೋಲ್ಸೆ ಪಾಟೀಲರನ್ನು ಹತ್ಯೆ ಮಾಡಲು ಯೋಜನೆ ರೂಪಿಸಲಾಗಿತ್ತು ಎಂಬ ಶಾಕಿಂಗ್ ಅಂಶವನ್ನೂ ತನ್ನ ತಪ್ಪೊಪ್ಪಿಗೆಯಲ್ಲಿ ಕಲಾಸ್ಕರ್ ಹೊರಗೆಡವಿದ್ದಾನೆ. 14 ಪುಟಗಳ ಆತನ ತಪ್ಪೊಪ್ಪಿಗೆ ತನಗೆ ಲಭ್ಯವಾಗಿದೆ ಎಂದು ಎನ್‌ಡಿಟಿವಿ ವರದಿ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...