Homeಚಳವಳಿ‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

ತಮ್ಮ ಸಿದ್ಧಾಂತಕ್ಕೆ ವಿರುದ್ಧವಾದವರನ್ನು ಹತ್ಯೆ ಮಾಡಲು ಮುಗ್ಧ ಯುವಕರನ್ನು ಆಯ್ಕೆ ಮಾಡುತ್ತಿದ್ದ ತಾವಡೆ ಅವರಿಗೆ ಪಿಸ್ತೂಲ್ ಬಳಸುವ ತರಬೇತಿ ಕೊಟ್ಟು ಬ್ರೈನ್‌ವಾಶ್ ಮಾಡುತ್ತಿದ್ದ

- Advertisement -
- Advertisement -

ಆರು ವರ್ಷಗಳ ಹಿಂದೆ ವಿಚಾರವಾದಿ ನರೇಂದ್ರ ದಾಬೋಲ್ಕರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪ ಹೊತ್ತಿರುವ ಶರದ್ ಕಲಾಸ್ಕರ್, ಕರ್ನಾಟಕ ಪೊಲೀಸರ ಮುಂದೆ ಶಾಕಿಂಗ್ ಸತ್ಯಗಳನ್ನು ಹೊರಗೆಡವಿದ್ದಾನೆ. ‘ನಾನು ಎರಡು ಗುಂಡು ಹಾರಿಸಿ ಅವರನ್ನು ಕೊಂದೆ, ಒಂದು ತಲೆಯ ಹಿಂಬದಿಯಿಂದ ಮತ್ತೊಂದು ಅವರ ಬಲಗಣ್ಣಿನ ಮೇಲೆ’ ಎಂದು ತನ್ನ ಹದಿನಾಲ್ಕು ಪುಟಗಳ ತಪ್ಪೊಪ್ಪಿಗೆಯಲ್ಲಿ ತಿಳಿಸಿರುವುದಾಗಿ ಎನ್‌ಡಿಟಿವಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಗೋವಿಂದ ಪನ್ಸಾರೆ ಮತ್ತು ಪತ್ರಕರ್ತೆ ಗೌರಿ ಲಂಕೇಶ್‌ರ ಹತ್ಯೆಯಲ್ಲೂ ಈತನ ಕೈವಾಡವಿರುವ ಕುರಿತು ತನಿಖೆ ನಡೆಯುತ್ತಿದೆ.

ಗೌರಿ ಲಂಕೇಶರ ಹತ್ಯೆಯ ಸಂಚಿನಲ್ಲಿ ಭಾಗಿಯಾದ ಆರೋಪದ ಮೇಲೆ ಒಂದು ವರ್ಷದಿಂದ ಈತನ ವಿಚಾರಣೆ ನಡೆಸಲಾಗುತ್ತಿದೆ. ಅದಕ್ಕೂ ಮೊದಲು ಮಾಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳವು ಪಾಲ್ಗರ್ ಜಿಲ್ಲೆಯಲ್ಲಿರುವ ನರಸೋಪುರ್‌ನ ಅಕ್ರಮ ಪಿಸ್ತೂಲ್ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ ಆ ಪ್ರಕರಣದಲ್ಲಿ ಶರದ್ ಕಲಾಸ್ಕರ್‌ನನ್ನು ಬಂಧಿಸಿದ್ದರು. ಗೌರಿ ಹತ್ಯೆಯ ವಿಚಾರಣೆ ಸಮಯದಲ್ಲಿ ಆತ ದಾಬೋಲ್ಕರ್ ಹತ್ಯೆಯ ಗುಟ್ಟು ಬಿಚ್ಚಿಟ್ಟಿದ್ದಾನೆ.

ಆಗಸ್ಟ್ 2013ರಲ್ಲಿ ಪುಣೆಯಲ್ಲಿ ಬೆಳಗಿನ ವಾಕಿಂಗ್ ವೇಳೆ ದಾಬೋಲ್ಕರ್ ಹತ್ಯೆ ಮಾಡಲಾಗಿತ್ತು. ಅದಾದ ನಂತರ ಗೋವಿಂದ ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಮತ್ತು ಗೌರಿ ಲಂಕೇಶರ ಹತ್ಯೆಗಳಾಗಿದ್ದವು.

ಮಹಾರಾಷ್ಟ್ರ ಪೊಲೀಸರು ಆತ ಹೇಳಿದ ಗೌರಿ ಹತ್ಯೆ ಕುರಿಯ ಮಾಹಿತಿಗಳನ್ನು ಕರ್ನಾಟಕ ಪೊಲೀಸರ ಜೊತೆ ಹಂಚಿಕೊಂಡ ನಂತರ ಅವನನ್ನು ವಶಕ್ಕೆ ಪಡೆದ ರಾಜ್ಯದ ಎಸ್‌ಐಟಿ ತಂಡ ವಿಚಾರಣೆ ನಡೆಸುತ್ತಿದೆ.

ದಾಬೋಲ್ಕರ್ ಹತ್ಯೆಯ ಕುರಿತ ಘಟನೆಯನ್ನು ಮೆಲುಕು ಹಾಕಿರುವ ಆತ ಕೆಲ ಬಲಪಂಥೀಯ ನಾಯಕರು ತನ್ನನ್ನು ಸಂಪರ್ಕಿಸಿ ಸನಾತನ ಸಿದ್ಧಾಂತ, ಪಿಸ್ತೂಲಿನ ಬಳಕೆ ಮತ್ತು ಬಾಂಬ್ ತಯಾರಿಕೆಯ ತರಬೇತಿ ನೀಡಿದ್ದರು ಎಂದಿದ್ದಾನೆ. ವೀರೇಂದ್ರ ತಾವಡೆ (ಪ್ರಧಾನ ಸಂಚುಗಾರ ಆರೋಪ ಹೊತ್ತಿರುವವನು) ಎಂಬಾತ ನಾವು ಕೆಲ ದುಷ್ಟರಿಗೆ ಅಂತ್ಯ ಹಾಡಬೇಕಿದೆ ಎಂದು ತನ್ನ ಬಳಿ ಹೇಳಿ, ಹತ್ಯೆ ಮಾಡಲು ನನ್ನ ಬ್ರೈನ್‌ವಾಶ್ ಮಾಡಿದ ಎಂಬುದಾಗಿ ಶರದ್ ತಪ್ಪೊಪ್ಪಿಗೆಯಲ್ಲಿ ಹೇಳಿಕೊಂಡಿರುವುದಾಗಿ ವರದಿಯಾಗಿದೆ. ಸದ್ಯ ತಾವಡೆ ಸಿಬಿಐ ಪೊಲೀಸರ ಕಸ್ಟಡಿಯಲ್ಲಿದ್ದಾನೆ.

ದಾಬೋಲ್ಕರ್‌ಗೆ ತಲೆಗೆ ಗುರಿಯಿಟ್ಟು ಗುಂಡು ಹಾರಿಸು, ಅವನು ಅಲ್ಲೇ ಬಿದ್ದು ಸಾಯಬೇಕು ಎಂಬ ಸೂಚನೆಯನ್ನು ತಾವಡೆ, ಶರದ್‌ಗೆ ಕೊಟ್ಟಿದ್ದನಂತೆ. ಆತ ಕೊಟ್ಟ ಸೂಚನೆಗಳಂತೆ ದಾಬೋಲ್ಕರ್ ಬೆಳಗಿನ ವಾಕಿಂಗ್‌ಗೆಂದು ಪುಣೆಯ ಓಂಕಾರೇಶ್ವರ್ ಸೇತುವೆ ಬಳಿ ಬಂದಾಗ ಶರದ್ ಕಲಾಸ್ಕರ್ ಗುಂಡು ಹಾರಿಸಿ ಹತ್ಯೆ ಮಾಡಿದ್ದ.

ತಪ್ಪೊಪ್ಪಿಗೆಯಲ್ಲಿ ತಿಳಿಸಿರುವಂತೆ ಶರದ್ ಕಲಾಸ್ಕರ್ ದಾಬೋಲ್ಕರ್‌ಗೆ ಹಿಂಬದಿಯಿಂದ ತಲೆಗೆ ಗುಂಡು ಹಾರಿಸಿದ್ದ. ಅವರು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿರುವಂತೆಯೇ ಅವರ ಮೇಲೆ ಇನ್ನೊಂದು ಗುಂಡು ಹಾರಿಸಿದ್ದ. ಆದರೆ ಆ ಗುಂಡು ಹೊರಗೆ ಸಿಡಿಯದೆ ಪಿಸ್ತೂಲಿನೊಳಗೇ ಸ್ಟ್ರಕ್ ಆಗಿದ್ದರಿಂದ, ಗುಂಡನ್ನು ಹೊರತೆಗೆದು, ಮತ್ತೊಮ್ಮೆ ಅವರ ಬಲಗಣ್ಣಿನ ಮೇಲೆ ಹಣೆಗೆ ಗುಂಡು ಹಾರಿಸಿದ್ದ. ಆನಂತರ ಎರಡನೇ ಹಂತಕ ಸಚಿನ್ ಅಂಡುರೆ ಕೂಡಾ ಗುಂಡು ಹಾರಿಸಿದ್ದ ಎಂದು ತಪ್ಪೊಪ್ಪಿಗೆಯಲ್ಲಿ ಇರುವುದಾಗಿ ವರದಿ ಹೇಳುತ್ತಿದೆ.
ವೀರೇಂದ್ರ ತಾವಡೆಯೇ ನಂತರ ಶರದ್ ಕಲಾಸ್ಕರ್‌ನನ್ನು, ಗೌರಿ ಲಂಕೇಶ್ ಹತ್ಯೆಯಲ್ಲಿ ಭಾಗಿಯಾದ ಆರೋಪ ಹೊತ್ತು ಜೈಲಿನಲ್ಲಿರುವ ಅಮೋಲ್ ಕಾಳೆಗೆ ಪರಿಚಯ ಮಾಡಿಕೊಟ್ಟಿದ್ದ ಎಂಬ ಅಂಶವೂ ತಪ್ಪೊಪ್ಪಿಗೆಯಲ್ಲಿದೆ. ಗೌರಿ ಲಂಕೇಶ್‌ರ ಹತ್ಯೆ ಕುರಿತ ಪ್ಲ್ಯಾನ್ ಮಾಡಲಾದ ಹಲವು ಸಭೆಗಳಲ್ಲಿ ಭಾಗಿಯಾಗಿದ್ದಾಗಿ ಕಲಾಸ್ಕರ್ ಒಪ್ಪಿಕೊಂಡಿದ್ದಾನೆ.

2016ರ ಆಗಸ್ಟ್‌ನಲ್ಲಿ ಬೆಳಗಾಂನಲ್ಲಿ ಒಂದು ಸಭೆ ನಡೆಯಿತು. ಅಲ್ಲಿ ನಮ್ಮ ಸಿದ್ಧಾಂತಕ್ಕೆ ವಿರುದ್ಧವಾಗಿರುವವರು ಯಾರ್ಯಾಲರು ಎಂದು ಪಟ್ಟಿ ಮಾಡಲಾಯ್ತು. ಆ ಪಟ್ಟಿಯಲ್ಲಿ ಗೌರಿ ಲಂಕೇಶರ ಹೆಸರು ಮೊದಲ ಸ್ಥಾನ ಪಡೆದು, ಅವರನ್ನು ಕೊಲೆ ಮಾಡಲು ತೀರ್ಮಾನಿಸಲಾಯಿತು ಎಂದು ತಪ್ಪೊಪ್ಪಿಗೆಯಲ್ಲಿ ಆತ ಹೇಳಿದ್ದಾನೆ. ಒಂದು ವರ್ಷದ ನಂತರ 2017ರ ಆಗಸ್ಟನಲ್ಲಿ ಮತ್ತೊಂದು ಸಭೆ ನಡೆದು, ಅಲ್ಲಿ ಹತ್ಯೆಯ ಯೋಜನೆ ಅಂತಿಮಗೊಂಡಿತ್ತು. ಅದಾದ ಒಂದು ತಿಂಗಳಿಗೆ, ಸೆಪ್ಟಂಬರ್ ೫ರ ರಾತ್ರಿ ಅವರ ಮನೆಯ ಮುಂದೆಯೇ ಗೌರಿ ಲಂಕೇಶರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

ಈ ಬಂಧನಗಳು ನಡೆಯದಿದ್ದರೆ, ಬಾಂಬೆ ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ಬಿ.ಜಿ.ಖೋಲ್ಸೆ ಪಾಟೀಲರನ್ನು ಹತ್ಯೆ ಮಾಡಲು ಯೋಜನೆ ರೂಪಿಸಲಾಗಿತ್ತು ಎಂಬ ಶಾಕಿಂಗ್ ಅಂಶವನ್ನೂ ತನ್ನ ತಪ್ಪೊಪ್ಪಿಗೆಯಲ್ಲಿ ಕಲಾಸ್ಕರ್ ಹೊರಗೆಡವಿದ್ದಾನೆ. 14 ಪುಟಗಳ ಆತನ ತಪ್ಪೊಪ್ಪಿಗೆ ತನಗೆ ಲಭ್ಯವಾಗಿದೆ ಎಂದು ಎನ್‌ಡಿಟಿವಿ ವರದಿ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...