Homeಚಳವಳಿ‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

ತಮ್ಮ ಸಿದ್ಧಾಂತಕ್ಕೆ ವಿರುದ್ಧವಾದವರನ್ನು ಹತ್ಯೆ ಮಾಡಲು ಮುಗ್ಧ ಯುವಕರನ್ನು ಆಯ್ಕೆ ಮಾಡುತ್ತಿದ್ದ ತಾವಡೆ ಅವರಿಗೆ ಪಿಸ್ತೂಲ್ ಬಳಸುವ ತರಬೇತಿ ಕೊಟ್ಟು ಬ್ರೈನ್‌ವಾಶ್ ಮಾಡುತ್ತಿದ್ದ

- Advertisement -
- Advertisement -

ಆರು ವರ್ಷಗಳ ಹಿಂದೆ ವಿಚಾರವಾದಿ ನರೇಂದ್ರ ದಾಬೋಲ್ಕರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪ ಹೊತ್ತಿರುವ ಶರದ್ ಕಲಾಸ್ಕರ್, ಕರ್ನಾಟಕ ಪೊಲೀಸರ ಮುಂದೆ ಶಾಕಿಂಗ್ ಸತ್ಯಗಳನ್ನು ಹೊರಗೆಡವಿದ್ದಾನೆ. ‘ನಾನು ಎರಡು ಗುಂಡು ಹಾರಿಸಿ ಅವರನ್ನು ಕೊಂದೆ, ಒಂದು ತಲೆಯ ಹಿಂಬದಿಯಿಂದ ಮತ್ತೊಂದು ಅವರ ಬಲಗಣ್ಣಿನ ಮೇಲೆ’ ಎಂದು ತನ್ನ ಹದಿನಾಲ್ಕು ಪುಟಗಳ ತಪ್ಪೊಪ್ಪಿಗೆಯಲ್ಲಿ ತಿಳಿಸಿರುವುದಾಗಿ ಎನ್‌ಡಿಟಿವಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಗೋವಿಂದ ಪನ್ಸಾರೆ ಮತ್ತು ಪತ್ರಕರ್ತೆ ಗೌರಿ ಲಂಕೇಶ್‌ರ ಹತ್ಯೆಯಲ್ಲೂ ಈತನ ಕೈವಾಡವಿರುವ ಕುರಿತು ತನಿಖೆ ನಡೆಯುತ್ತಿದೆ.

ಗೌರಿ ಲಂಕೇಶರ ಹತ್ಯೆಯ ಸಂಚಿನಲ್ಲಿ ಭಾಗಿಯಾದ ಆರೋಪದ ಮೇಲೆ ಒಂದು ವರ್ಷದಿಂದ ಈತನ ವಿಚಾರಣೆ ನಡೆಸಲಾಗುತ್ತಿದೆ. ಅದಕ್ಕೂ ಮೊದಲು ಮಾಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳವು ಪಾಲ್ಗರ್ ಜಿಲ್ಲೆಯಲ್ಲಿರುವ ನರಸೋಪುರ್‌ನ ಅಕ್ರಮ ಪಿಸ್ತೂಲ್ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ ಆ ಪ್ರಕರಣದಲ್ಲಿ ಶರದ್ ಕಲಾಸ್ಕರ್‌ನನ್ನು ಬಂಧಿಸಿದ್ದರು. ಗೌರಿ ಹತ್ಯೆಯ ವಿಚಾರಣೆ ಸಮಯದಲ್ಲಿ ಆತ ದಾಬೋಲ್ಕರ್ ಹತ್ಯೆಯ ಗುಟ್ಟು ಬಿಚ್ಚಿಟ್ಟಿದ್ದಾನೆ.

ಆಗಸ್ಟ್ 2013ರಲ್ಲಿ ಪುಣೆಯಲ್ಲಿ ಬೆಳಗಿನ ವಾಕಿಂಗ್ ವೇಳೆ ದಾಬೋಲ್ಕರ್ ಹತ್ಯೆ ಮಾಡಲಾಗಿತ್ತು. ಅದಾದ ನಂತರ ಗೋವಿಂದ ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಮತ್ತು ಗೌರಿ ಲಂಕೇಶರ ಹತ್ಯೆಗಳಾಗಿದ್ದವು.

ಮಹಾರಾಷ್ಟ್ರ ಪೊಲೀಸರು ಆತ ಹೇಳಿದ ಗೌರಿ ಹತ್ಯೆ ಕುರಿಯ ಮಾಹಿತಿಗಳನ್ನು ಕರ್ನಾಟಕ ಪೊಲೀಸರ ಜೊತೆ ಹಂಚಿಕೊಂಡ ನಂತರ ಅವನನ್ನು ವಶಕ್ಕೆ ಪಡೆದ ರಾಜ್ಯದ ಎಸ್‌ಐಟಿ ತಂಡ ವಿಚಾರಣೆ ನಡೆಸುತ್ತಿದೆ.

ದಾಬೋಲ್ಕರ್ ಹತ್ಯೆಯ ಕುರಿತ ಘಟನೆಯನ್ನು ಮೆಲುಕು ಹಾಕಿರುವ ಆತ ಕೆಲ ಬಲಪಂಥೀಯ ನಾಯಕರು ತನ್ನನ್ನು ಸಂಪರ್ಕಿಸಿ ಸನಾತನ ಸಿದ್ಧಾಂತ, ಪಿಸ್ತೂಲಿನ ಬಳಕೆ ಮತ್ತು ಬಾಂಬ್ ತಯಾರಿಕೆಯ ತರಬೇತಿ ನೀಡಿದ್ದರು ಎಂದಿದ್ದಾನೆ. ವೀರೇಂದ್ರ ತಾವಡೆ (ಪ್ರಧಾನ ಸಂಚುಗಾರ ಆರೋಪ ಹೊತ್ತಿರುವವನು) ಎಂಬಾತ ನಾವು ಕೆಲ ದುಷ್ಟರಿಗೆ ಅಂತ್ಯ ಹಾಡಬೇಕಿದೆ ಎಂದು ತನ್ನ ಬಳಿ ಹೇಳಿ, ಹತ್ಯೆ ಮಾಡಲು ನನ್ನ ಬ್ರೈನ್‌ವಾಶ್ ಮಾಡಿದ ಎಂಬುದಾಗಿ ಶರದ್ ತಪ್ಪೊಪ್ಪಿಗೆಯಲ್ಲಿ ಹೇಳಿಕೊಂಡಿರುವುದಾಗಿ ವರದಿಯಾಗಿದೆ. ಸದ್ಯ ತಾವಡೆ ಸಿಬಿಐ ಪೊಲೀಸರ ಕಸ್ಟಡಿಯಲ್ಲಿದ್ದಾನೆ.

ದಾಬೋಲ್ಕರ್‌ಗೆ ತಲೆಗೆ ಗುರಿಯಿಟ್ಟು ಗುಂಡು ಹಾರಿಸು, ಅವನು ಅಲ್ಲೇ ಬಿದ್ದು ಸಾಯಬೇಕು ಎಂಬ ಸೂಚನೆಯನ್ನು ತಾವಡೆ, ಶರದ್‌ಗೆ ಕೊಟ್ಟಿದ್ದನಂತೆ. ಆತ ಕೊಟ್ಟ ಸೂಚನೆಗಳಂತೆ ದಾಬೋಲ್ಕರ್ ಬೆಳಗಿನ ವಾಕಿಂಗ್‌ಗೆಂದು ಪುಣೆಯ ಓಂಕಾರೇಶ್ವರ್ ಸೇತುವೆ ಬಳಿ ಬಂದಾಗ ಶರದ್ ಕಲಾಸ್ಕರ್ ಗುಂಡು ಹಾರಿಸಿ ಹತ್ಯೆ ಮಾಡಿದ್ದ.

ತಪ್ಪೊಪ್ಪಿಗೆಯಲ್ಲಿ ತಿಳಿಸಿರುವಂತೆ ಶರದ್ ಕಲಾಸ್ಕರ್ ದಾಬೋಲ್ಕರ್‌ಗೆ ಹಿಂಬದಿಯಿಂದ ತಲೆಗೆ ಗುಂಡು ಹಾರಿಸಿದ್ದ. ಅವರು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿರುವಂತೆಯೇ ಅವರ ಮೇಲೆ ಇನ್ನೊಂದು ಗುಂಡು ಹಾರಿಸಿದ್ದ. ಆದರೆ ಆ ಗುಂಡು ಹೊರಗೆ ಸಿಡಿಯದೆ ಪಿಸ್ತೂಲಿನೊಳಗೇ ಸ್ಟ್ರಕ್ ಆಗಿದ್ದರಿಂದ, ಗುಂಡನ್ನು ಹೊರತೆಗೆದು, ಮತ್ತೊಮ್ಮೆ ಅವರ ಬಲಗಣ್ಣಿನ ಮೇಲೆ ಹಣೆಗೆ ಗುಂಡು ಹಾರಿಸಿದ್ದ. ಆನಂತರ ಎರಡನೇ ಹಂತಕ ಸಚಿನ್ ಅಂಡುರೆ ಕೂಡಾ ಗುಂಡು ಹಾರಿಸಿದ್ದ ಎಂದು ತಪ್ಪೊಪ್ಪಿಗೆಯಲ್ಲಿ ಇರುವುದಾಗಿ ವರದಿ ಹೇಳುತ್ತಿದೆ.
ವೀರೇಂದ್ರ ತಾವಡೆಯೇ ನಂತರ ಶರದ್ ಕಲಾಸ್ಕರ್‌ನನ್ನು, ಗೌರಿ ಲಂಕೇಶ್ ಹತ್ಯೆಯಲ್ಲಿ ಭಾಗಿಯಾದ ಆರೋಪ ಹೊತ್ತು ಜೈಲಿನಲ್ಲಿರುವ ಅಮೋಲ್ ಕಾಳೆಗೆ ಪರಿಚಯ ಮಾಡಿಕೊಟ್ಟಿದ್ದ ಎಂಬ ಅಂಶವೂ ತಪ್ಪೊಪ್ಪಿಗೆಯಲ್ಲಿದೆ. ಗೌರಿ ಲಂಕೇಶ್‌ರ ಹತ್ಯೆ ಕುರಿತ ಪ್ಲ್ಯಾನ್ ಮಾಡಲಾದ ಹಲವು ಸಭೆಗಳಲ್ಲಿ ಭಾಗಿಯಾಗಿದ್ದಾಗಿ ಕಲಾಸ್ಕರ್ ಒಪ್ಪಿಕೊಂಡಿದ್ದಾನೆ.

2016ರ ಆಗಸ್ಟ್‌ನಲ್ಲಿ ಬೆಳಗಾಂನಲ್ಲಿ ಒಂದು ಸಭೆ ನಡೆಯಿತು. ಅಲ್ಲಿ ನಮ್ಮ ಸಿದ್ಧಾಂತಕ್ಕೆ ವಿರುದ್ಧವಾಗಿರುವವರು ಯಾರ್ಯಾಲರು ಎಂದು ಪಟ್ಟಿ ಮಾಡಲಾಯ್ತು. ಆ ಪಟ್ಟಿಯಲ್ಲಿ ಗೌರಿ ಲಂಕೇಶರ ಹೆಸರು ಮೊದಲ ಸ್ಥಾನ ಪಡೆದು, ಅವರನ್ನು ಕೊಲೆ ಮಾಡಲು ತೀರ್ಮಾನಿಸಲಾಯಿತು ಎಂದು ತಪ್ಪೊಪ್ಪಿಗೆಯಲ್ಲಿ ಆತ ಹೇಳಿದ್ದಾನೆ. ಒಂದು ವರ್ಷದ ನಂತರ 2017ರ ಆಗಸ್ಟನಲ್ಲಿ ಮತ್ತೊಂದು ಸಭೆ ನಡೆದು, ಅಲ್ಲಿ ಹತ್ಯೆಯ ಯೋಜನೆ ಅಂತಿಮಗೊಂಡಿತ್ತು. ಅದಾದ ಒಂದು ತಿಂಗಳಿಗೆ, ಸೆಪ್ಟಂಬರ್ ೫ರ ರಾತ್ರಿ ಅವರ ಮನೆಯ ಮುಂದೆಯೇ ಗೌರಿ ಲಂಕೇಶರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

ಈ ಬಂಧನಗಳು ನಡೆಯದಿದ್ದರೆ, ಬಾಂಬೆ ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ಬಿ.ಜಿ.ಖೋಲ್ಸೆ ಪಾಟೀಲರನ್ನು ಹತ್ಯೆ ಮಾಡಲು ಯೋಜನೆ ರೂಪಿಸಲಾಗಿತ್ತು ಎಂಬ ಶಾಕಿಂಗ್ ಅಂಶವನ್ನೂ ತನ್ನ ತಪ್ಪೊಪ್ಪಿಗೆಯಲ್ಲಿ ಕಲಾಸ್ಕರ್ ಹೊರಗೆಡವಿದ್ದಾನೆ. 14 ಪುಟಗಳ ಆತನ ತಪ್ಪೊಪ್ಪಿಗೆ ತನಗೆ ಲಭ್ಯವಾಗಿದೆ ಎಂದು ಎನ್‌ಡಿಟಿವಿ ವರದಿ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...