Homeಚಳವಳಿ‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

ತಮ್ಮ ಸಿದ್ಧಾಂತಕ್ಕೆ ವಿರುದ್ಧವಾದವರನ್ನು ಹತ್ಯೆ ಮಾಡಲು ಮುಗ್ಧ ಯುವಕರನ್ನು ಆಯ್ಕೆ ಮಾಡುತ್ತಿದ್ದ ತಾವಡೆ ಅವರಿಗೆ ಪಿಸ್ತೂಲ್ ಬಳಸುವ ತರಬೇತಿ ಕೊಟ್ಟು ಬ್ರೈನ್‌ವಾಶ್ ಮಾಡುತ್ತಿದ್ದ

- Advertisement -
- Advertisement -

ಆರು ವರ್ಷಗಳ ಹಿಂದೆ ವಿಚಾರವಾದಿ ನರೇಂದ್ರ ದಾಬೋಲ್ಕರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪ ಹೊತ್ತಿರುವ ಶರದ್ ಕಲಾಸ್ಕರ್, ಕರ್ನಾಟಕ ಪೊಲೀಸರ ಮುಂದೆ ಶಾಕಿಂಗ್ ಸತ್ಯಗಳನ್ನು ಹೊರಗೆಡವಿದ್ದಾನೆ. ‘ನಾನು ಎರಡು ಗುಂಡು ಹಾರಿಸಿ ಅವರನ್ನು ಕೊಂದೆ, ಒಂದು ತಲೆಯ ಹಿಂಬದಿಯಿಂದ ಮತ್ತೊಂದು ಅವರ ಬಲಗಣ್ಣಿನ ಮೇಲೆ’ ಎಂದು ತನ್ನ ಹದಿನಾಲ್ಕು ಪುಟಗಳ ತಪ್ಪೊಪ್ಪಿಗೆಯಲ್ಲಿ ತಿಳಿಸಿರುವುದಾಗಿ ಎನ್‌ಡಿಟಿವಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಗೋವಿಂದ ಪನ್ಸಾರೆ ಮತ್ತು ಪತ್ರಕರ್ತೆ ಗೌರಿ ಲಂಕೇಶ್‌ರ ಹತ್ಯೆಯಲ್ಲೂ ಈತನ ಕೈವಾಡವಿರುವ ಕುರಿತು ತನಿಖೆ ನಡೆಯುತ್ತಿದೆ.

ಗೌರಿ ಲಂಕೇಶರ ಹತ್ಯೆಯ ಸಂಚಿನಲ್ಲಿ ಭಾಗಿಯಾದ ಆರೋಪದ ಮೇಲೆ ಒಂದು ವರ್ಷದಿಂದ ಈತನ ವಿಚಾರಣೆ ನಡೆಸಲಾಗುತ್ತಿದೆ. ಅದಕ್ಕೂ ಮೊದಲು ಮಾಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳವು ಪಾಲ್ಗರ್ ಜಿಲ್ಲೆಯಲ್ಲಿರುವ ನರಸೋಪುರ್‌ನ ಅಕ್ರಮ ಪಿಸ್ತೂಲ್ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ ಆ ಪ್ರಕರಣದಲ್ಲಿ ಶರದ್ ಕಲಾಸ್ಕರ್‌ನನ್ನು ಬಂಧಿಸಿದ್ದರು. ಗೌರಿ ಹತ್ಯೆಯ ವಿಚಾರಣೆ ಸಮಯದಲ್ಲಿ ಆತ ದಾಬೋಲ್ಕರ್ ಹತ್ಯೆಯ ಗುಟ್ಟು ಬಿಚ್ಚಿಟ್ಟಿದ್ದಾನೆ.

ಆಗಸ್ಟ್ 2013ರಲ್ಲಿ ಪುಣೆಯಲ್ಲಿ ಬೆಳಗಿನ ವಾಕಿಂಗ್ ವೇಳೆ ದಾಬೋಲ್ಕರ್ ಹತ್ಯೆ ಮಾಡಲಾಗಿತ್ತು. ಅದಾದ ನಂತರ ಗೋವಿಂದ ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಮತ್ತು ಗೌರಿ ಲಂಕೇಶರ ಹತ್ಯೆಗಳಾಗಿದ್ದವು.

ಮಹಾರಾಷ್ಟ್ರ ಪೊಲೀಸರು ಆತ ಹೇಳಿದ ಗೌರಿ ಹತ್ಯೆ ಕುರಿಯ ಮಾಹಿತಿಗಳನ್ನು ಕರ್ನಾಟಕ ಪೊಲೀಸರ ಜೊತೆ ಹಂಚಿಕೊಂಡ ನಂತರ ಅವನನ್ನು ವಶಕ್ಕೆ ಪಡೆದ ರಾಜ್ಯದ ಎಸ್‌ಐಟಿ ತಂಡ ವಿಚಾರಣೆ ನಡೆಸುತ್ತಿದೆ.

ದಾಬೋಲ್ಕರ್ ಹತ್ಯೆಯ ಕುರಿತ ಘಟನೆಯನ್ನು ಮೆಲುಕು ಹಾಕಿರುವ ಆತ ಕೆಲ ಬಲಪಂಥೀಯ ನಾಯಕರು ತನ್ನನ್ನು ಸಂಪರ್ಕಿಸಿ ಸನಾತನ ಸಿದ್ಧಾಂತ, ಪಿಸ್ತೂಲಿನ ಬಳಕೆ ಮತ್ತು ಬಾಂಬ್ ತಯಾರಿಕೆಯ ತರಬೇತಿ ನೀಡಿದ್ದರು ಎಂದಿದ್ದಾನೆ. ವೀರೇಂದ್ರ ತಾವಡೆ (ಪ್ರಧಾನ ಸಂಚುಗಾರ ಆರೋಪ ಹೊತ್ತಿರುವವನು) ಎಂಬಾತ ನಾವು ಕೆಲ ದುಷ್ಟರಿಗೆ ಅಂತ್ಯ ಹಾಡಬೇಕಿದೆ ಎಂದು ತನ್ನ ಬಳಿ ಹೇಳಿ, ಹತ್ಯೆ ಮಾಡಲು ನನ್ನ ಬ್ರೈನ್‌ವಾಶ್ ಮಾಡಿದ ಎಂಬುದಾಗಿ ಶರದ್ ತಪ್ಪೊಪ್ಪಿಗೆಯಲ್ಲಿ ಹೇಳಿಕೊಂಡಿರುವುದಾಗಿ ವರದಿಯಾಗಿದೆ. ಸದ್ಯ ತಾವಡೆ ಸಿಬಿಐ ಪೊಲೀಸರ ಕಸ್ಟಡಿಯಲ್ಲಿದ್ದಾನೆ.

ದಾಬೋಲ್ಕರ್‌ಗೆ ತಲೆಗೆ ಗುರಿಯಿಟ್ಟು ಗುಂಡು ಹಾರಿಸು, ಅವನು ಅಲ್ಲೇ ಬಿದ್ದು ಸಾಯಬೇಕು ಎಂಬ ಸೂಚನೆಯನ್ನು ತಾವಡೆ, ಶರದ್‌ಗೆ ಕೊಟ್ಟಿದ್ದನಂತೆ. ಆತ ಕೊಟ್ಟ ಸೂಚನೆಗಳಂತೆ ದಾಬೋಲ್ಕರ್ ಬೆಳಗಿನ ವಾಕಿಂಗ್‌ಗೆಂದು ಪುಣೆಯ ಓಂಕಾರೇಶ್ವರ್ ಸೇತುವೆ ಬಳಿ ಬಂದಾಗ ಶರದ್ ಕಲಾಸ್ಕರ್ ಗುಂಡು ಹಾರಿಸಿ ಹತ್ಯೆ ಮಾಡಿದ್ದ.

ತಪ್ಪೊಪ್ಪಿಗೆಯಲ್ಲಿ ತಿಳಿಸಿರುವಂತೆ ಶರದ್ ಕಲಾಸ್ಕರ್ ದಾಬೋಲ್ಕರ್‌ಗೆ ಹಿಂಬದಿಯಿಂದ ತಲೆಗೆ ಗುಂಡು ಹಾರಿಸಿದ್ದ. ಅವರು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿರುವಂತೆಯೇ ಅವರ ಮೇಲೆ ಇನ್ನೊಂದು ಗುಂಡು ಹಾರಿಸಿದ್ದ. ಆದರೆ ಆ ಗುಂಡು ಹೊರಗೆ ಸಿಡಿಯದೆ ಪಿಸ್ತೂಲಿನೊಳಗೇ ಸ್ಟ್ರಕ್ ಆಗಿದ್ದರಿಂದ, ಗುಂಡನ್ನು ಹೊರತೆಗೆದು, ಮತ್ತೊಮ್ಮೆ ಅವರ ಬಲಗಣ್ಣಿನ ಮೇಲೆ ಹಣೆಗೆ ಗುಂಡು ಹಾರಿಸಿದ್ದ. ಆನಂತರ ಎರಡನೇ ಹಂತಕ ಸಚಿನ್ ಅಂಡುರೆ ಕೂಡಾ ಗುಂಡು ಹಾರಿಸಿದ್ದ ಎಂದು ತಪ್ಪೊಪ್ಪಿಗೆಯಲ್ಲಿ ಇರುವುದಾಗಿ ವರದಿ ಹೇಳುತ್ತಿದೆ.
ವೀರೇಂದ್ರ ತಾವಡೆಯೇ ನಂತರ ಶರದ್ ಕಲಾಸ್ಕರ್‌ನನ್ನು, ಗೌರಿ ಲಂಕೇಶ್ ಹತ್ಯೆಯಲ್ಲಿ ಭಾಗಿಯಾದ ಆರೋಪ ಹೊತ್ತು ಜೈಲಿನಲ್ಲಿರುವ ಅಮೋಲ್ ಕಾಳೆಗೆ ಪರಿಚಯ ಮಾಡಿಕೊಟ್ಟಿದ್ದ ಎಂಬ ಅಂಶವೂ ತಪ್ಪೊಪ್ಪಿಗೆಯಲ್ಲಿದೆ. ಗೌರಿ ಲಂಕೇಶ್‌ರ ಹತ್ಯೆ ಕುರಿತ ಪ್ಲ್ಯಾನ್ ಮಾಡಲಾದ ಹಲವು ಸಭೆಗಳಲ್ಲಿ ಭಾಗಿಯಾಗಿದ್ದಾಗಿ ಕಲಾಸ್ಕರ್ ಒಪ್ಪಿಕೊಂಡಿದ್ದಾನೆ.

2016ರ ಆಗಸ್ಟ್‌ನಲ್ಲಿ ಬೆಳಗಾಂನಲ್ಲಿ ಒಂದು ಸಭೆ ನಡೆಯಿತು. ಅಲ್ಲಿ ನಮ್ಮ ಸಿದ್ಧಾಂತಕ್ಕೆ ವಿರುದ್ಧವಾಗಿರುವವರು ಯಾರ್ಯಾಲರು ಎಂದು ಪಟ್ಟಿ ಮಾಡಲಾಯ್ತು. ಆ ಪಟ್ಟಿಯಲ್ಲಿ ಗೌರಿ ಲಂಕೇಶರ ಹೆಸರು ಮೊದಲ ಸ್ಥಾನ ಪಡೆದು, ಅವರನ್ನು ಕೊಲೆ ಮಾಡಲು ತೀರ್ಮಾನಿಸಲಾಯಿತು ಎಂದು ತಪ್ಪೊಪ್ಪಿಗೆಯಲ್ಲಿ ಆತ ಹೇಳಿದ್ದಾನೆ. ಒಂದು ವರ್ಷದ ನಂತರ 2017ರ ಆಗಸ್ಟನಲ್ಲಿ ಮತ್ತೊಂದು ಸಭೆ ನಡೆದು, ಅಲ್ಲಿ ಹತ್ಯೆಯ ಯೋಜನೆ ಅಂತಿಮಗೊಂಡಿತ್ತು. ಅದಾದ ಒಂದು ತಿಂಗಳಿಗೆ, ಸೆಪ್ಟಂಬರ್ ೫ರ ರಾತ್ರಿ ಅವರ ಮನೆಯ ಮುಂದೆಯೇ ಗೌರಿ ಲಂಕೇಶರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

ಈ ಬಂಧನಗಳು ನಡೆಯದಿದ್ದರೆ, ಬಾಂಬೆ ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ಬಿ.ಜಿ.ಖೋಲ್ಸೆ ಪಾಟೀಲರನ್ನು ಹತ್ಯೆ ಮಾಡಲು ಯೋಜನೆ ರೂಪಿಸಲಾಗಿತ್ತು ಎಂಬ ಶಾಕಿಂಗ್ ಅಂಶವನ್ನೂ ತನ್ನ ತಪ್ಪೊಪ್ಪಿಗೆಯಲ್ಲಿ ಕಲಾಸ್ಕರ್ ಹೊರಗೆಡವಿದ್ದಾನೆ. 14 ಪುಟಗಳ ಆತನ ತಪ್ಪೊಪ್ಪಿಗೆ ತನಗೆ ಲಭ್ಯವಾಗಿದೆ ಎಂದು ಎನ್‌ಡಿಟಿವಿ ವರದಿ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...