Homeಚಳವಳಿ‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

ತಮ್ಮ ಸಿದ್ಧಾಂತಕ್ಕೆ ವಿರುದ್ಧವಾದವರನ್ನು ಹತ್ಯೆ ಮಾಡಲು ಮುಗ್ಧ ಯುವಕರನ್ನು ಆಯ್ಕೆ ಮಾಡುತ್ತಿದ್ದ ತಾವಡೆ ಅವರಿಗೆ ಪಿಸ್ತೂಲ್ ಬಳಸುವ ತರಬೇತಿ ಕೊಟ್ಟು ಬ್ರೈನ್‌ವಾಶ್ ಮಾಡುತ್ತಿದ್ದ

- Advertisement -
- Advertisement -

ಆರು ವರ್ಷಗಳ ಹಿಂದೆ ವಿಚಾರವಾದಿ ನರೇಂದ್ರ ದಾಬೋಲ್ಕರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪ ಹೊತ್ತಿರುವ ಶರದ್ ಕಲಾಸ್ಕರ್, ಕರ್ನಾಟಕ ಪೊಲೀಸರ ಮುಂದೆ ಶಾಕಿಂಗ್ ಸತ್ಯಗಳನ್ನು ಹೊರಗೆಡವಿದ್ದಾನೆ. ‘ನಾನು ಎರಡು ಗುಂಡು ಹಾರಿಸಿ ಅವರನ್ನು ಕೊಂದೆ, ಒಂದು ತಲೆಯ ಹಿಂಬದಿಯಿಂದ ಮತ್ತೊಂದು ಅವರ ಬಲಗಣ್ಣಿನ ಮೇಲೆ’ ಎಂದು ತನ್ನ ಹದಿನಾಲ್ಕು ಪುಟಗಳ ತಪ್ಪೊಪ್ಪಿಗೆಯಲ್ಲಿ ತಿಳಿಸಿರುವುದಾಗಿ ಎನ್‌ಡಿಟಿವಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಗೋವಿಂದ ಪನ್ಸಾರೆ ಮತ್ತು ಪತ್ರಕರ್ತೆ ಗೌರಿ ಲಂಕೇಶ್‌ರ ಹತ್ಯೆಯಲ್ಲೂ ಈತನ ಕೈವಾಡವಿರುವ ಕುರಿತು ತನಿಖೆ ನಡೆಯುತ್ತಿದೆ.

ಗೌರಿ ಲಂಕೇಶರ ಹತ್ಯೆಯ ಸಂಚಿನಲ್ಲಿ ಭಾಗಿಯಾದ ಆರೋಪದ ಮೇಲೆ ಒಂದು ವರ್ಷದಿಂದ ಈತನ ವಿಚಾರಣೆ ನಡೆಸಲಾಗುತ್ತಿದೆ. ಅದಕ್ಕೂ ಮೊದಲು ಮಾಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳವು ಪಾಲ್ಗರ್ ಜಿಲ್ಲೆಯಲ್ಲಿರುವ ನರಸೋಪುರ್‌ನ ಅಕ್ರಮ ಪಿಸ್ತೂಲ್ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ ಆ ಪ್ರಕರಣದಲ್ಲಿ ಶರದ್ ಕಲಾಸ್ಕರ್‌ನನ್ನು ಬಂಧಿಸಿದ್ದರು. ಗೌರಿ ಹತ್ಯೆಯ ವಿಚಾರಣೆ ಸಮಯದಲ್ಲಿ ಆತ ದಾಬೋಲ್ಕರ್ ಹತ್ಯೆಯ ಗುಟ್ಟು ಬಿಚ್ಚಿಟ್ಟಿದ್ದಾನೆ.

ಆಗಸ್ಟ್ 2013ರಲ್ಲಿ ಪುಣೆಯಲ್ಲಿ ಬೆಳಗಿನ ವಾಕಿಂಗ್ ವೇಳೆ ದಾಬೋಲ್ಕರ್ ಹತ್ಯೆ ಮಾಡಲಾಗಿತ್ತು. ಅದಾದ ನಂತರ ಗೋವಿಂದ ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಮತ್ತು ಗೌರಿ ಲಂಕೇಶರ ಹತ್ಯೆಗಳಾಗಿದ್ದವು.

ಮಹಾರಾಷ್ಟ್ರ ಪೊಲೀಸರು ಆತ ಹೇಳಿದ ಗೌರಿ ಹತ್ಯೆ ಕುರಿಯ ಮಾಹಿತಿಗಳನ್ನು ಕರ್ನಾಟಕ ಪೊಲೀಸರ ಜೊತೆ ಹಂಚಿಕೊಂಡ ನಂತರ ಅವನನ್ನು ವಶಕ್ಕೆ ಪಡೆದ ರಾಜ್ಯದ ಎಸ್‌ಐಟಿ ತಂಡ ವಿಚಾರಣೆ ನಡೆಸುತ್ತಿದೆ.

ದಾಬೋಲ್ಕರ್ ಹತ್ಯೆಯ ಕುರಿತ ಘಟನೆಯನ್ನು ಮೆಲುಕು ಹಾಕಿರುವ ಆತ ಕೆಲ ಬಲಪಂಥೀಯ ನಾಯಕರು ತನ್ನನ್ನು ಸಂಪರ್ಕಿಸಿ ಸನಾತನ ಸಿದ್ಧಾಂತ, ಪಿಸ್ತೂಲಿನ ಬಳಕೆ ಮತ್ತು ಬಾಂಬ್ ತಯಾರಿಕೆಯ ತರಬೇತಿ ನೀಡಿದ್ದರು ಎಂದಿದ್ದಾನೆ. ವೀರೇಂದ್ರ ತಾವಡೆ (ಪ್ರಧಾನ ಸಂಚುಗಾರ ಆರೋಪ ಹೊತ್ತಿರುವವನು) ಎಂಬಾತ ನಾವು ಕೆಲ ದುಷ್ಟರಿಗೆ ಅಂತ್ಯ ಹಾಡಬೇಕಿದೆ ಎಂದು ತನ್ನ ಬಳಿ ಹೇಳಿ, ಹತ್ಯೆ ಮಾಡಲು ನನ್ನ ಬ್ರೈನ್‌ವಾಶ್ ಮಾಡಿದ ಎಂಬುದಾಗಿ ಶರದ್ ತಪ್ಪೊಪ್ಪಿಗೆಯಲ್ಲಿ ಹೇಳಿಕೊಂಡಿರುವುದಾಗಿ ವರದಿಯಾಗಿದೆ. ಸದ್ಯ ತಾವಡೆ ಸಿಬಿಐ ಪೊಲೀಸರ ಕಸ್ಟಡಿಯಲ್ಲಿದ್ದಾನೆ.

ದಾಬೋಲ್ಕರ್‌ಗೆ ತಲೆಗೆ ಗುರಿಯಿಟ್ಟು ಗುಂಡು ಹಾರಿಸು, ಅವನು ಅಲ್ಲೇ ಬಿದ್ದು ಸಾಯಬೇಕು ಎಂಬ ಸೂಚನೆಯನ್ನು ತಾವಡೆ, ಶರದ್‌ಗೆ ಕೊಟ್ಟಿದ್ದನಂತೆ. ಆತ ಕೊಟ್ಟ ಸೂಚನೆಗಳಂತೆ ದಾಬೋಲ್ಕರ್ ಬೆಳಗಿನ ವಾಕಿಂಗ್‌ಗೆಂದು ಪುಣೆಯ ಓಂಕಾರೇಶ್ವರ್ ಸೇತುವೆ ಬಳಿ ಬಂದಾಗ ಶರದ್ ಕಲಾಸ್ಕರ್ ಗುಂಡು ಹಾರಿಸಿ ಹತ್ಯೆ ಮಾಡಿದ್ದ.

ತಪ್ಪೊಪ್ಪಿಗೆಯಲ್ಲಿ ತಿಳಿಸಿರುವಂತೆ ಶರದ್ ಕಲಾಸ್ಕರ್ ದಾಬೋಲ್ಕರ್‌ಗೆ ಹಿಂಬದಿಯಿಂದ ತಲೆಗೆ ಗುಂಡು ಹಾರಿಸಿದ್ದ. ಅವರು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿರುವಂತೆಯೇ ಅವರ ಮೇಲೆ ಇನ್ನೊಂದು ಗುಂಡು ಹಾರಿಸಿದ್ದ. ಆದರೆ ಆ ಗುಂಡು ಹೊರಗೆ ಸಿಡಿಯದೆ ಪಿಸ್ತೂಲಿನೊಳಗೇ ಸ್ಟ್ರಕ್ ಆಗಿದ್ದರಿಂದ, ಗುಂಡನ್ನು ಹೊರತೆಗೆದು, ಮತ್ತೊಮ್ಮೆ ಅವರ ಬಲಗಣ್ಣಿನ ಮೇಲೆ ಹಣೆಗೆ ಗುಂಡು ಹಾರಿಸಿದ್ದ. ಆನಂತರ ಎರಡನೇ ಹಂತಕ ಸಚಿನ್ ಅಂಡುರೆ ಕೂಡಾ ಗುಂಡು ಹಾರಿಸಿದ್ದ ಎಂದು ತಪ್ಪೊಪ್ಪಿಗೆಯಲ್ಲಿ ಇರುವುದಾಗಿ ವರದಿ ಹೇಳುತ್ತಿದೆ.
ವೀರೇಂದ್ರ ತಾವಡೆಯೇ ನಂತರ ಶರದ್ ಕಲಾಸ್ಕರ್‌ನನ್ನು, ಗೌರಿ ಲಂಕೇಶ್ ಹತ್ಯೆಯಲ್ಲಿ ಭಾಗಿಯಾದ ಆರೋಪ ಹೊತ್ತು ಜೈಲಿನಲ್ಲಿರುವ ಅಮೋಲ್ ಕಾಳೆಗೆ ಪರಿಚಯ ಮಾಡಿಕೊಟ್ಟಿದ್ದ ಎಂಬ ಅಂಶವೂ ತಪ್ಪೊಪ್ಪಿಗೆಯಲ್ಲಿದೆ. ಗೌರಿ ಲಂಕೇಶ್‌ರ ಹತ್ಯೆ ಕುರಿತ ಪ್ಲ್ಯಾನ್ ಮಾಡಲಾದ ಹಲವು ಸಭೆಗಳಲ್ಲಿ ಭಾಗಿಯಾಗಿದ್ದಾಗಿ ಕಲಾಸ್ಕರ್ ಒಪ್ಪಿಕೊಂಡಿದ್ದಾನೆ.

2016ರ ಆಗಸ್ಟ್‌ನಲ್ಲಿ ಬೆಳಗಾಂನಲ್ಲಿ ಒಂದು ಸಭೆ ನಡೆಯಿತು. ಅಲ್ಲಿ ನಮ್ಮ ಸಿದ್ಧಾಂತಕ್ಕೆ ವಿರುದ್ಧವಾಗಿರುವವರು ಯಾರ್ಯಾಲರು ಎಂದು ಪಟ್ಟಿ ಮಾಡಲಾಯ್ತು. ಆ ಪಟ್ಟಿಯಲ್ಲಿ ಗೌರಿ ಲಂಕೇಶರ ಹೆಸರು ಮೊದಲ ಸ್ಥಾನ ಪಡೆದು, ಅವರನ್ನು ಕೊಲೆ ಮಾಡಲು ತೀರ್ಮಾನಿಸಲಾಯಿತು ಎಂದು ತಪ್ಪೊಪ್ಪಿಗೆಯಲ್ಲಿ ಆತ ಹೇಳಿದ್ದಾನೆ. ಒಂದು ವರ್ಷದ ನಂತರ 2017ರ ಆಗಸ್ಟನಲ್ಲಿ ಮತ್ತೊಂದು ಸಭೆ ನಡೆದು, ಅಲ್ಲಿ ಹತ್ಯೆಯ ಯೋಜನೆ ಅಂತಿಮಗೊಂಡಿತ್ತು. ಅದಾದ ಒಂದು ತಿಂಗಳಿಗೆ, ಸೆಪ್ಟಂಬರ್ ೫ರ ರಾತ್ರಿ ಅವರ ಮನೆಯ ಮುಂದೆಯೇ ಗೌರಿ ಲಂಕೇಶರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

ಈ ಬಂಧನಗಳು ನಡೆಯದಿದ್ದರೆ, ಬಾಂಬೆ ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ಬಿ.ಜಿ.ಖೋಲ್ಸೆ ಪಾಟೀಲರನ್ನು ಹತ್ಯೆ ಮಾಡಲು ಯೋಜನೆ ರೂಪಿಸಲಾಗಿತ್ತು ಎಂಬ ಶಾಕಿಂಗ್ ಅಂಶವನ್ನೂ ತನ್ನ ತಪ್ಪೊಪ್ಪಿಗೆಯಲ್ಲಿ ಕಲಾಸ್ಕರ್ ಹೊರಗೆಡವಿದ್ದಾನೆ. 14 ಪುಟಗಳ ಆತನ ತಪ್ಪೊಪ್ಪಿಗೆ ತನಗೆ ಲಭ್ಯವಾಗಿದೆ ಎಂದು ಎನ್‌ಡಿಟಿವಿ ವರದಿ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...