Homeಚಳವಳಿ‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

ತಮ್ಮ ಸಿದ್ಧಾಂತಕ್ಕೆ ವಿರುದ್ಧವಾದವರನ್ನು ಹತ್ಯೆ ಮಾಡಲು ಮುಗ್ಧ ಯುವಕರನ್ನು ಆಯ್ಕೆ ಮಾಡುತ್ತಿದ್ದ ತಾವಡೆ ಅವರಿಗೆ ಪಿಸ್ತೂಲ್ ಬಳಸುವ ತರಬೇತಿ ಕೊಟ್ಟು ಬ್ರೈನ್‌ವಾಶ್ ಮಾಡುತ್ತಿದ್ದ

- Advertisement -
- Advertisement -

ಆರು ವರ್ಷಗಳ ಹಿಂದೆ ವಿಚಾರವಾದಿ ನರೇಂದ್ರ ದಾಬೋಲ್ಕರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪ ಹೊತ್ತಿರುವ ಶರದ್ ಕಲಾಸ್ಕರ್, ಕರ್ನಾಟಕ ಪೊಲೀಸರ ಮುಂದೆ ಶಾಕಿಂಗ್ ಸತ್ಯಗಳನ್ನು ಹೊರಗೆಡವಿದ್ದಾನೆ. ‘ನಾನು ಎರಡು ಗುಂಡು ಹಾರಿಸಿ ಅವರನ್ನು ಕೊಂದೆ, ಒಂದು ತಲೆಯ ಹಿಂಬದಿಯಿಂದ ಮತ್ತೊಂದು ಅವರ ಬಲಗಣ್ಣಿನ ಮೇಲೆ’ ಎಂದು ತನ್ನ ಹದಿನಾಲ್ಕು ಪುಟಗಳ ತಪ್ಪೊಪ್ಪಿಗೆಯಲ್ಲಿ ತಿಳಿಸಿರುವುದಾಗಿ ಎನ್‌ಡಿಟಿವಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಗೋವಿಂದ ಪನ್ಸಾರೆ ಮತ್ತು ಪತ್ರಕರ್ತೆ ಗೌರಿ ಲಂಕೇಶ್‌ರ ಹತ್ಯೆಯಲ್ಲೂ ಈತನ ಕೈವಾಡವಿರುವ ಕುರಿತು ತನಿಖೆ ನಡೆಯುತ್ತಿದೆ.

ಗೌರಿ ಲಂಕೇಶರ ಹತ್ಯೆಯ ಸಂಚಿನಲ್ಲಿ ಭಾಗಿಯಾದ ಆರೋಪದ ಮೇಲೆ ಒಂದು ವರ್ಷದಿಂದ ಈತನ ವಿಚಾರಣೆ ನಡೆಸಲಾಗುತ್ತಿದೆ. ಅದಕ್ಕೂ ಮೊದಲು ಮಾಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳವು ಪಾಲ್ಗರ್ ಜಿಲ್ಲೆಯಲ್ಲಿರುವ ನರಸೋಪುರ್‌ನ ಅಕ್ರಮ ಪಿಸ್ತೂಲ್ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ ಆ ಪ್ರಕರಣದಲ್ಲಿ ಶರದ್ ಕಲಾಸ್ಕರ್‌ನನ್ನು ಬಂಧಿಸಿದ್ದರು. ಗೌರಿ ಹತ್ಯೆಯ ವಿಚಾರಣೆ ಸಮಯದಲ್ಲಿ ಆತ ದಾಬೋಲ್ಕರ್ ಹತ್ಯೆಯ ಗುಟ್ಟು ಬಿಚ್ಚಿಟ್ಟಿದ್ದಾನೆ.

ಆಗಸ್ಟ್ 2013ರಲ್ಲಿ ಪುಣೆಯಲ್ಲಿ ಬೆಳಗಿನ ವಾಕಿಂಗ್ ವೇಳೆ ದಾಬೋಲ್ಕರ್ ಹತ್ಯೆ ಮಾಡಲಾಗಿತ್ತು. ಅದಾದ ನಂತರ ಗೋವಿಂದ ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಮತ್ತು ಗೌರಿ ಲಂಕೇಶರ ಹತ್ಯೆಗಳಾಗಿದ್ದವು.

ಮಹಾರಾಷ್ಟ್ರ ಪೊಲೀಸರು ಆತ ಹೇಳಿದ ಗೌರಿ ಹತ್ಯೆ ಕುರಿಯ ಮಾಹಿತಿಗಳನ್ನು ಕರ್ನಾಟಕ ಪೊಲೀಸರ ಜೊತೆ ಹಂಚಿಕೊಂಡ ನಂತರ ಅವನನ್ನು ವಶಕ್ಕೆ ಪಡೆದ ರಾಜ್ಯದ ಎಸ್‌ಐಟಿ ತಂಡ ವಿಚಾರಣೆ ನಡೆಸುತ್ತಿದೆ.

ದಾಬೋಲ್ಕರ್ ಹತ್ಯೆಯ ಕುರಿತ ಘಟನೆಯನ್ನು ಮೆಲುಕು ಹಾಕಿರುವ ಆತ ಕೆಲ ಬಲಪಂಥೀಯ ನಾಯಕರು ತನ್ನನ್ನು ಸಂಪರ್ಕಿಸಿ ಸನಾತನ ಸಿದ್ಧಾಂತ, ಪಿಸ್ತೂಲಿನ ಬಳಕೆ ಮತ್ತು ಬಾಂಬ್ ತಯಾರಿಕೆಯ ತರಬೇತಿ ನೀಡಿದ್ದರು ಎಂದಿದ್ದಾನೆ. ವೀರೇಂದ್ರ ತಾವಡೆ (ಪ್ರಧಾನ ಸಂಚುಗಾರ ಆರೋಪ ಹೊತ್ತಿರುವವನು) ಎಂಬಾತ ನಾವು ಕೆಲ ದುಷ್ಟರಿಗೆ ಅಂತ್ಯ ಹಾಡಬೇಕಿದೆ ಎಂದು ತನ್ನ ಬಳಿ ಹೇಳಿ, ಹತ್ಯೆ ಮಾಡಲು ನನ್ನ ಬ್ರೈನ್‌ವಾಶ್ ಮಾಡಿದ ಎಂಬುದಾಗಿ ಶರದ್ ತಪ್ಪೊಪ್ಪಿಗೆಯಲ್ಲಿ ಹೇಳಿಕೊಂಡಿರುವುದಾಗಿ ವರದಿಯಾಗಿದೆ. ಸದ್ಯ ತಾವಡೆ ಸಿಬಿಐ ಪೊಲೀಸರ ಕಸ್ಟಡಿಯಲ್ಲಿದ್ದಾನೆ.

ದಾಬೋಲ್ಕರ್‌ಗೆ ತಲೆಗೆ ಗುರಿಯಿಟ್ಟು ಗುಂಡು ಹಾರಿಸು, ಅವನು ಅಲ್ಲೇ ಬಿದ್ದು ಸಾಯಬೇಕು ಎಂಬ ಸೂಚನೆಯನ್ನು ತಾವಡೆ, ಶರದ್‌ಗೆ ಕೊಟ್ಟಿದ್ದನಂತೆ. ಆತ ಕೊಟ್ಟ ಸೂಚನೆಗಳಂತೆ ದಾಬೋಲ್ಕರ್ ಬೆಳಗಿನ ವಾಕಿಂಗ್‌ಗೆಂದು ಪುಣೆಯ ಓಂಕಾರೇಶ್ವರ್ ಸೇತುವೆ ಬಳಿ ಬಂದಾಗ ಶರದ್ ಕಲಾಸ್ಕರ್ ಗುಂಡು ಹಾರಿಸಿ ಹತ್ಯೆ ಮಾಡಿದ್ದ.

ತಪ್ಪೊಪ್ಪಿಗೆಯಲ್ಲಿ ತಿಳಿಸಿರುವಂತೆ ಶರದ್ ಕಲಾಸ್ಕರ್ ದಾಬೋಲ್ಕರ್‌ಗೆ ಹಿಂಬದಿಯಿಂದ ತಲೆಗೆ ಗುಂಡು ಹಾರಿಸಿದ್ದ. ಅವರು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿರುವಂತೆಯೇ ಅವರ ಮೇಲೆ ಇನ್ನೊಂದು ಗುಂಡು ಹಾರಿಸಿದ್ದ. ಆದರೆ ಆ ಗುಂಡು ಹೊರಗೆ ಸಿಡಿಯದೆ ಪಿಸ್ತೂಲಿನೊಳಗೇ ಸ್ಟ್ರಕ್ ಆಗಿದ್ದರಿಂದ, ಗುಂಡನ್ನು ಹೊರತೆಗೆದು, ಮತ್ತೊಮ್ಮೆ ಅವರ ಬಲಗಣ್ಣಿನ ಮೇಲೆ ಹಣೆಗೆ ಗುಂಡು ಹಾರಿಸಿದ್ದ. ಆನಂತರ ಎರಡನೇ ಹಂತಕ ಸಚಿನ್ ಅಂಡುರೆ ಕೂಡಾ ಗುಂಡು ಹಾರಿಸಿದ್ದ ಎಂದು ತಪ್ಪೊಪ್ಪಿಗೆಯಲ್ಲಿ ಇರುವುದಾಗಿ ವರದಿ ಹೇಳುತ್ತಿದೆ.
ವೀರೇಂದ್ರ ತಾವಡೆಯೇ ನಂತರ ಶರದ್ ಕಲಾಸ್ಕರ್‌ನನ್ನು, ಗೌರಿ ಲಂಕೇಶ್ ಹತ್ಯೆಯಲ್ಲಿ ಭಾಗಿಯಾದ ಆರೋಪ ಹೊತ್ತು ಜೈಲಿನಲ್ಲಿರುವ ಅಮೋಲ್ ಕಾಳೆಗೆ ಪರಿಚಯ ಮಾಡಿಕೊಟ್ಟಿದ್ದ ಎಂಬ ಅಂಶವೂ ತಪ್ಪೊಪ್ಪಿಗೆಯಲ್ಲಿದೆ. ಗೌರಿ ಲಂಕೇಶ್‌ರ ಹತ್ಯೆ ಕುರಿತ ಪ್ಲ್ಯಾನ್ ಮಾಡಲಾದ ಹಲವು ಸಭೆಗಳಲ್ಲಿ ಭಾಗಿಯಾಗಿದ್ದಾಗಿ ಕಲಾಸ್ಕರ್ ಒಪ್ಪಿಕೊಂಡಿದ್ದಾನೆ.

2016ರ ಆಗಸ್ಟ್‌ನಲ್ಲಿ ಬೆಳಗಾಂನಲ್ಲಿ ಒಂದು ಸಭೆ ನಡೆಯಿತು. ಅಲ್ಲಿ ನಮ್ಮ ಸಿದ್ಧಾಂತಕ್ಕೆ ವಿರುದ್ಧವಾಗಿರುವವರು ಯಾರ್ಯಾಲರು ಎಂದು ಪಟ್ಟಿ ಮಾಡಲಾಯ್ತು. ಆ ಪಟ್ಟಿಯಲ್ಲಿ ಗೌರಿ ಲಂಕೇಶರ ಹೆಸರು ಮೊದಲ ಸ್ಥಾನ ಪಡೆದು, ಅವರನ್ನು ಕೊಲೆ ಮಾಡಲು ತೀರ್ಮಾನಿಸಲಾಯಿತು ಎಂದು ತಪ್ಪೊಪ್ಪಿಗೆಯಲ್ಲಿ ಆತ ಹೇಳಿದ್ದಾನೆ. ಒಂದು ವರ್ಷದ ನಂತರ 2017ರ ಆಗಸ್ಟನಲ್ಲಿ ಮತ್ತೊಂದು ಸಭೆ ನಡೆದು, ಅಲ್ಲಿ ಹತ್ಯೆಯ ಯೋಜನೆ ಅಂತಿಮಗೊಂಡಿತ್ತು. ಅದಾದ ಒಂದು ತಿಂಗಳಿಗೆ, ಸೆಪ್ಟಂಬರ್ ೫ರ ರಾತ್ರಿ ಅವರ ಮನೆಯ ಮುಂದೆಯೇ ಗೌರಿ ಲಂಕೇಶರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

ಈ ಬಂಧನಗಳು ನಡೆಯದಿದ್ದರೆ, ಬಾಂಬೆ ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ಬಿ.ಜಿ.ಖೋಲ್ಸೆ ಪಾಟೀಲರನ್ನು ಹತ್ಯೆ ಮಾಡಲು ಯೋಜನೆ ರೂಪಿಸಲಾಗಿತ್ತು ಎಂಬ ಶಾಕಿಂಗ್ ಅಂಶವನ್ನೂ ತನ್ನ ತಪ್ಪೊಪ್ಪಿಗೆಯಲ್ಲಿ ಕಲಾಸ್ಕರ್ ಹೊರಗೆಡವಿದ್ದಾನೆ. 14 ಪುಟಗಳ ಆತನ ತಪ್ಪೊಪ್ಪಿಗೆ ತನಗೆ ಲಭ್ಯವಾಗಿದೆ ಎಂದು ಎನ್‌ಡಿಟಿವಿ ವರದಿ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...