Homeಚಳವಳಿ‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

ತಮ್ಮ ಸಿದ್ಧಾಂತಕ್ಕೆ ವಿರುದ್ಧವಾದವರನ್ನು ಹತ್ಯೆ ಮಾಡಲು ಮುಗ್ಧ ಯುವಕರನ್ನು ಆಯ್ಕೆ ಮಾಡುತ್ತಿದ್ದ ತಾವಡೆ ಅವರಿಗೆ ಪಿಸ್ತೂಲ್ ಬಳಸುವ ತರಬೇತಿ ಕೊಟ್ಟು ಬ್ರೈನ್‌ವಾಶ್ ಮಾಡುತ್ತಿದ್ದ

- Advertisement -
- Advertisement -

ಆರು ವರ್ಷಗಳ ಹಿಂದೆ ವಿಚಾರವಾದಿ ನರೇಂದ್ರ ದಾಬೋಲ್ಕರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪ ಹೊತ್ತಿರುವ ಶರದ್ ಕಲಾಸ್ಕರ್, ಕರ್ನಾಟಕ ಪೊಲೀಸರ ಮುಂದೆ ಶಾಕಿಂಗ್ ಸತ್ಯಗಳನ್ನು ಹೊರಗೆಡವಿದ್ದಾನೆ. ‘ನಾನು ಎರಡು ಗುಂಡು ಹಾರಿಸಿ ಅವರನ್ನು ಕೊಂದೆ, ಒಂದು ತಲೆಯ ಹಿಂಬದಿಯಿಂದ ಮತ್ತೊಂದು ಅವರ ಬಲಗಣ್ಣಿನ ಮೇಲೆ’ ಎಂದು ತನ್ನ ಹದಿನಾಲ್ಕು ಪುಟಗಳ ತಪ್ಪೊಪ್ಪಿಗೆಯಲ್ಲಿ ತಿಳಿಸಿರುವುದಾಗಿ ಎನ್‌ಡಿಟಿವಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಗೋವಿಂದ ಪನ್ಸಾರೆ ಮತ್ತು ಪತ್ರಕರ್ತೆ ಗೌರಿ ಲಂಕೇಶ್‌ರ ಹತ್ಯೆಯಲ್ಲೂ ಈತನ ಕೈವಾಡವಿರುವ ಕುರಿತು ತನಿಖೆ ನಡೆಯುತ್ತಿದೆ.

ಗೌರಿ ಲಂಕೇಶರ ಹತ್ಯೆಯ ಸಂಚಿನಲ್ಲಿ ಭಾಗಿಯಾದ ಆರೋಪದ ಮೇಲೆ ಒಂದು ವರ್ಷದಿಂದ ಈತನ ವಿಚಾರಣೆ ನಡೆಸಲಾಗುತ್ತಿದೆ. ಅದಕ್ಕೂ ಮೊದಲು ಮಾಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳವು ಪಾಲ್ಗರ್ ಜಿಲ್ಲೆಯಲ್ಲಿರುವ ನರಸೋಪುರ್‌ನ ಅಕ್ರಮ ಪಿಸ್ತೂಲ್ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ ಆ ಪ್ರಕರಣದಲ್ಲಿ ಶರದ್ ಕಲಾಸ್ಕರ್‌ನನ್ನು ಬಂಧಿಸಿದ್ದರು. ಗೌರಿ ಹತ್ಯೆಯ ವಿಚಾರಣೆ ಸಮಯದಲ್ಲಿ ಆತ ದಾಬೋಲ್ಕರ್ ಹತ್ಯೆಯ ಗುಟ್ಟು ಬಿಚ್ಚಿಟ್ಟಿದ್ದಾನೆ.

ಆಗಸ್ಟ್ 2013ರಲ್ಲಿ ಪುಣೆಯಲ್ಲಿ ಬೆಳಗಿನ ವಾಕಿಂಗ್ ವೇಳೆ ದಾಬೋಲ್ಕರ್ ಹತ್ಯೆ ಮಾಡಲಾಗಿತ್ತು. ಅದಾದ ನಂತರ ಗೋವಿಂದ ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಮತ್ತು ಗೌರಿ ಲಂಕೇಶರ ಹತ್ಯೆಗಳಾಗಿದ್ದವು.

ಮಹಾರಾಷ್ಟ್ರ ಪೊಲೀಸರು ಆತ ಹೇಳಿದ ಗೌರಿ ಹತ್ಯೆ ಕುರಿಯ ಮಾಹಿತಿಗಳನ್ನು ಕರ್ನಾಟಕ ಪೊಲೀಸರ ಜೊತೆ ಹಂಚಿಕೊಂಡ ನಂತರ ಅವನನ್ನು ವಶಕ್ಕೆ ಪಡೆದ ರಾಜ್ಯದ ಎಸ್‌ಐಟಿ ತಂಡ ವಿಚಾರಣೆ ನಡೆಸುತ್ತಿದೆ.

ದಾಬೋಲ್ಕರ್ ಹತ್ಯೆಯ ಕುರಿತ ಘಟನೆಯನ್ನು ಮೆಲುಕು ಹಾಕಿರುವ ಆತ ಕೆಲ ಬಲಪಂಥೀಯ ನಾಯಕರು ತನ್ನನ್ನು ಸಂಪರ್ಕಿಸಿ ಸನಾತನ ಸಿದ್ಧಾಂತ, ಪಿಸ್ತೂಲಿನ ಬಳಕೆ ಮತ್ತು ಬಾಂಬ್ ತಯಾರಿಕೆಯ ತರಬೇತಿ ನೀಡಿದ್ದರು ಎಂದಿದ್ದಾನೆ. ವೀರೇಂದ್ರ ತಾವಡೆ (ಪ್ರಧಾನ ಸಂಚುಗಾರ ಆರೋಪ ಹೊತ್ತಿರುವವನು) ಎಂಬಾತ ನಾವು ಕೆಲ ದುಷ್ಟರಿಗೆ ಅಂತ್ಯ ಹಾಡಬೇಕಿದೆ ಎಂದು ತನ್ನ ಬಳಿ ಹೇಳಿ, ಹತ್ಯೆ ಮಾಡಲು ನನ್ನ ಬ್ರೈನ್‌ವಾಶ್ ಮಾಡಿದ ಎಂಬುದಾಗಿ ಶರದ್ ತಪ್ಪೊಪ್ಪಿಗೆಯಲ್ಲಿ ಹೇಳಿಕೊಂಡಿರುವುದಾಗಿ ವರದಿಯಾಗಿದೆ. ಸದ್ಯ ತಾವಡೆ ಸಿಬಿಐ ಪೊಲೀಸರ ಕಸ್ಟಡಿಯಲ್ಲಿದ್ದಾನೆ.

ದಾಬೋಲ್ಕರ್‌ಗೆ ತಲೆಗೆ ಗುರಿಯಿಟ್ಟು ಗುಂಡು ಹಾರಿಸು, ಅವನು ಅಲ್ಲೇ ಬಿದ್ದು ಸಾಯಬೇಕು ಎಂಬ ಸೂಚನೆಯನ್ನು ತಾವಡೆ, ಶರದ್‌ಗೆ ಕೊಟ್ಟಿದ್ದನಂತೆ. ಆತ ಕೊಟ್ಟ ಸೂಚನೆಗಳಂತೆ ದಾಬೋಲ್ಕರ್ ಬೆಳಗಿನ ವಾಕಿಂಗ್‌ಗೆಂದು ಪುಣೆಯ ಓಂಕಾರೇಶ್ವರ್ ಸೇತುವೆ ಬಳಿ ಬಂದಾಗ ಶರದ್ ಕಲಾಸ್ಕರ್ ಗುಂಡು ಹಾರಿಸಿ ಹತ್ಯೆ ಮಾಡಿದ್ದ.

ತಪ್ಪೊಪ್ಪಿಗೆಯಲ್ಲಿ ತಿಳಿಸಿರುವಂತೆ ಶರದ್ ಕಲಾಸ್ಕರ್ ದಾಬೋಲ್ಕರ್‌ಗೆ ಹಿಂಬದಿಯಿಂದ ತಲೆಗೆ ಗುಂಡು ಹಾರಿಸಿದ್ದ. ಅವರು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿರುವಂತೆಯೇ ಅವರ ಮೇಲೆ ಇನ್ನೊಂದು ಗುಂಡು ಹಾರಿಸಿದ್ದ. ಆದರೆ ಆ ಗುಂಡು ಹೊರಗೆ ಸಿಡಿಯದೆ ಪಿಸ್ತೂಲಿನೊಳಗೇ ಸ್ಟ್ರಕ್ ಆಗಿದ್ದರಿಂದ, ಗುಂಡನ್ನು ಹೊರತೆಗೆದು, ಮತ್ತೊಮ್ಮೆ ಅವರ ಬಲಗಣ್ಣಿನ ಮೇಲೆ ಹಣೆಗೆ ಗುಂಡು ಹಾರಿಸಿದ್ದ. ಆನಂತರ ಎರಡನೇ ಹಂತಕ ಸಚಿನ್ ಅಂಡುರೆ ಕೂಡಾ ಗುಂಡು ಹಾರಿಸಿದ್ದ ಎಂದು ತಪ್ಪೊಪ್ಪಿಗೆಯಲ್ಲಿ ಇರುವುದಾಗಿ ವರದಿ ಹೇಳುತ್ತಿದೆ.
ವೀರೇಂದ್ರ ತಾವಡೆಯೇ ನಂತರ ಶರದ್ ಕಲಾಸ್ಕರ್‌ನನ್ನು, ಗೌರಿ ಲಂಕೇಶ್ ಹತ್ಯೆಯಲ್ಲಿ ಭಾಗಿಯಾದ ಆರೋಪ ಹೊತ್ತು ಜೈಲಿನಲ್ಲಿರುವ ಅಮೋಲ್ ಕಾಳೆಗೆ ಪರಿಚಯ ಮಾಡಿಕೊಟ್ಟಿದ್ದ ಎಂಬ ಅಂಶವೂ ತಪ್ಪೊಪ್ಪಿಗೆಯಲ್ಲಿದೆ. ಗೌರಿ ಲಂಕೇಶ್‌ರ ಹತ್ಯೆ ಕುರಿತ ಪ್ಲ್ಯಾನ್ ಮಾಡಲಾದ ಹಲವು ಸಭೆಗಳಲ್ಲಿ ಭಾಗಿಯಾಗಿದ್ದಾಗಿ ಕಲಾಸ್ಕರ್ ಒಪ್ಪಿಕೊಂಡಿದ್ದಾನೆ.

2016ರ ಆಗಸ್ಟ್‌ನಲ್ಲಿ ಬೆಳಗಾಂನಲ್ಲಿ ಒಂದು ಸಭೆ ನಡೆಯಿತು. ಅಲ್ಲಿ ನಮ್ಮ ಸಿದ್ಧಾಂತಕ್ಕೆ ವಿರುದ್ಧವಾಗಿರುವವರು ಯಾರ್ಯಾಲರು ಎಂದು ಪಟ್ಟಿ ಮಾಡಲಾಯ್ತು. ಆ ಪಟ್ಟಿಯಲ್ಲಿ ಗೌರಿ ಲಂಕೇಶರ ಹೆಸರು ಮೊದಲ ಸ್ಥಾನ ಪಡೆದು, ಅವರನ್ನು ಕೊಲೆ ಮಾಡಲು ತೀರ್ಮಾನಿಸಲಾಯಿತು ಎಂದು ತಪ್ಪೊಪ್ಪಿಗೆಯಲ್ಲಿ ಆತ ಹೇಳಿದ್ದಾನೆ. ಒಂದು ವರ್ಷದ ನಂತರ 2017ರ ಆಗಸ್ಟನಲ್ಲಿ ಮತ್ತೊಂದು ಸಭೆ ನಡೆದು, ಅಲ್ಲಿ ಹತ್ಯೆಯ ಯೋಜನೆ ಅಂತಿಮಗೊಂಡಿತ್ತು. ಅದಾದ ಒಂದು ತಿಂಗಳಿಗೆ, ಸೆಪ್ಟಂಬರ್ ೫ರ ರಾತ್ರಿ ಅವರ ಮನೆಯ ಮುಂದೆಯೇ ಗೌರಿ ಲಂಕೇಶರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

ಈ ಬಂಧನಗಳು ನಡೆಯದಿದ್ದರೆ, ಬಾಂಬೆ ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ಬಿ.ಜಿ.ಖೋಲ್ಸೆ ಪಾಟೀಲರನ್ನು ಹತ್ಯೆ ಮಾಡಲು ಯೋಜನೆ ರೂಪಿಸಲಾಗಿತ್ತು ಎಂಬ ಶಾಕಿಂಗ್ ಅಂಶವನ್ನೂ ತನ್ನ ತಪ್ಪೊಪ್ಪಿಗೆಯಲ್ಲಿ ಕಲಾಸ್ಕರ್ ಹೊರಗೆಡವಿದ್ದಾನೆ. 14 ಪುಟಗಳ ಆತನ ತಪ್ಪೊಪ್ಪಿಗೆ ತನಗೆ ಲಭ್ಯವಾಗಿದೆ ಎಂದು ಎನ್‌ಡಿಟಿವಿ ವರದಿ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...