Homeಚಳವಳಿ‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

ತಮ್ಮ ಸಿದ್ಧಾಂತಕ್ಕೆ ವಿರುದ್ಧವಾದವರನ್ನು ಹತ್ಯೆ ಮಾಡಲು ಮುಗ್ಧ ಯುವಕರನ್ನು ಆಯ್ಕೆ ಮಾಡುತ್ತಿದ್ದ ತಾವಡೆ ಅವರಿಗೆ ಪಿಸ್ತೂಲ್ ಬಳಸುವ ತರಬೇತಿ ಕೊಟ್ಟು ಬ್ರೈನ್‌ವಾಶ್ ಮಾಡುತ್ತಿದ್ದ

- Advertisement -
- Advertisement -

ಆರು ವರ್ಷಗಳ ಹಿಂದೆ ವಿಚಾರವಾದಿ ನರೇಂದ್ರ ದಾಬೋಲ್ಕರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪ ಹೊತ್ತಿರುವ ಶರದ್ ಕಲಾಸ್ಕರ್, ಕರ್ನಾಟಕ ಪೊಲೀಸರ ಮುಂದೆ ಶಾಕಿಂಗ್ ಸತ್ಯಗಳನ್ನು ಹೊರಗೆಡವಿದ್ದಾನೆ. ‘ನಾನು ಎರಡು ಗುಂಡು ಹಾರಿಸಿ ಅವರನ್ನು ಕೊಂದೆ, ಒಂದು ತಲೆಯ ಹಿಂಬದಿಯಿಂದ ಮತ್ತೊಂದು ಅವರ ಬಲಗಣ್ಣಿನ ಮೇಲೆ’ ಎಂದು ತನ್ನ ಹದಿನಾಲ್ಕು ಪುಟಗಳ ತಪ್ಪೊಪ್ಪಿಗೆಯಲ್ಲಿ ತಿಳಿಸಿರುವುದಾಗಿ ಎನ್‌ಡಿಟಿವಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಗೋವಿಂದ ಪನ್ಸಾರೆ ಮತ್ತು ಪತ್ರಕರ್ತೆ ಗೌರಿ ಲಂಕೇಶ್‌ರ ಹತ್ಯೆಯಲ್ಲೂ ಈತನ ಕೈವಾಡವಿರುವ ಕುರಿತು ತನಿಖೆ ನಡೆಯುತ್ತಿದೆ.

ಗೌರಿ ಲಂಕೇಶರ ಹತ್ಯೆಯ ಸಂಚಿನಲ್ಲಿ ಭಾಗಿಯಾದ ಆರೋಪದ ಮೇಲೆ ಒಂದು ವರ್ಷದಿಂದ ಈತನ ವಿಚಾರಣೆ ನಡೆಸಲಾಗುತ್ತಿದೆ. ಅದಕ್ಕೂ ಮೊದಲು ಮಾಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳವು ಪಾಲ್ಗರ್ ಜಿಲ್ಲೆಯಲ್ಲಿರುವ ನರಸೋಪುರ್‌ನ ಅಕ್ರಮ ಪಿಸ್ತೂಲ್ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ ಆ ಪ್ರಕರಣದಲ್ಲಿ ಶರದ್ ಕಲಾಸ್ಕರ್‌ನನ್ನು ಬಂಧಿಸಿದ್ದರು. ಗೌರಿ ಹತ್ಯೆಯ ವಿಚಾರಣೆ ಸಮಯದಲ್ಲಿ ಆತ ದಾಬೋಲ್ಕರ್ ಹತ್ಯೆಯ ಗುಟ್ಟು ಬಿಚ್ಚಿಟ್ಟಿದ್ದಾನೆ.

ಆಗಸ್ಟ್ 2013ರಲ್ಲಿ ಪುಣೆಯಲ್ಲಿ ಬೆಳಗಿನ ವಾಕಿಂಗ್ ವೇಳೆ ದಾಬೋಲ್ಕರ್ ಹತ್ಯೆ ಮಾಡಲಾಗಿತ್ತು. ಅದಾದ ನಂತರ ಗೋವಿಂದ ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಮತ್ತು ಗೌರಿ ಲಂಕೇಶರ ಹತ್ಯೆಗಳಾಗಿದ್ದವು.

ಮಹಾರಾಷ್ಟ್ರ ಪೊಲೀಸರು ಆತ ಹೇಳಿದ ಗೌರಿ ಹತ್ಯೆ ಕುರಿಯ ಮಾಹಿತಿಗಳನ್ನು ಕರ್ನಾಟಕ ಪೊಲೀಸರ ಜೊತೆ ಹಂಚಿಕೊಂಡ ನಂತರ ಅವನನ್ನು ವಶಕ್ಕೆ ಪಡೆದ ರಾಜ್ಯದ ಎಸ್‌ಐಟಿ ತಂಡ ವಿಚಾರಣೆ ನಡೆಸುತ್ತಿದೆ.

ದಾಬೋಲ್ಕರ್ ಹತ್ಯೆಯ ಕುರಿತ ಘಟನೆಯನ್ನು ಮೆಲುಕು ಹಾಕಿರುವ ಆತ ಕೆಲ ಬಲಪಂಥೀಯ ನಾಯಕರು ತನ್ನನ್ನು ಸಂಪರ್ಕಿಸಿ ಸನಾತನ ಸಿದ್ಧಾಂತ, ಪಿಸ್ತೂಲಿನ ಬಳಕೆ ಮತ್ತು ಬಾಂಬ್ ತಯಾರಿಕೆಯ ತರಬೇತಿ ನೀಡಿದ್ದರು ಎಂದಿದ್ದಾನೆ. ವೀರೇಂದ್ರ ತಾವಡೆ (ಪ್ರಧಾನ ಸಂಚುಗಾರ ಆರೋಪ ಹೊತ್ತಿರುವವನು) ಎಂಬಾತ ನಾವು ಕೆಲ ದುಷ್ಟರಿಗೆ ಅಂತ್ಯ ಹಾಡಬೇಕಿದೆ ಎಂದು ತನ್ನ ಬಳಿ ಹೇಳಿ, ಹತ್ಯೆ ಮಾಡಲು ನನ್ನ ಬ್ರೈನ್‌ವಾಶ್ ಮಾಡಿದ ಎಂಬುದಾಗಿ ಶರದ್ ತಪ್ಪೊಪ್ಪಿಗೆಯಲ್ಲಿ ಹೇಳಿಕೊಂಡಿರುವುದಾಗಿ ವರದಿಯಾಗಿದೆ. ಸದ್ಯ ತಾವಡೆ ಸಿಬಿಐ ಪೊಲೀಸರ ಕಸ್ಟಡಿಯಲ್ಲಿದ್ದಾನೆ.

ದಾಬೋಲ್ಕರ್‌ಗೆ ತಲೆಗೆ ಗುರಿಯಿಟ್ಟು ಗುಂಡು ಹಾರಿಸು, ಅವನು ಅಲ್ಲೇ ಬಿದ್ದು ಸಾಯಬೇಕು ಎಂಬ ಸೂಚನೆಯನ್ನು ತಾವಡೆ, ಶರದ್‌ಗೆ ಕೊಟ್ಟಿದ್ದನಂತೆ. ಆತ ಕೊಟ್ಟ ಸೂಚನೆಗಳಂತೆ ದಾಬೋಲ್ಕರ್ ಬೆಳಗಿನ ವಾಕಿಂಗ್‌ಗೆಂದು ಪುಣೆಯ ಓಂಕಾರೇಶ್ವರ್ ಸೇತುವೆ ಬಳಿ ಬಂದಾಗ ಶರದ್ ಕಲಾಸ್ಕರ್ ಗುಂಡು ಹಾರಿಸಿ ಹತ್ಯೆ ಮಾಡಿದ್ದ.

ತಪ್ಪೊಪ್ಪಿಗೆಯಲ್ಲಿ ತಿಳಿಸಿರುವಂತೆ ಶರದ್ ಕಲಾಸ್ಕರ್ ದಾಬೋಲ್ಕರ್‌ಗೆ ಹಿಂಬದಿಯಿಂದ ತಲೆಗೆ ಗುಂಡು ಹಾರಿಸಿದ್ದ. ಅವರು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿರುವಂತೆಯೇ ಅವರ ಮೇಲೆ ಇನ್ನೊಂದು ಗುಂಡು ಹಾರಿಸಿದ್ದ. ಆದರೆ ಆ ಗುಂಡು ಹೊರಗೆ ಸಿಡಿಯದೆ ಪಿಸ್ತೂಲಿನೊಳಗೇ ಸ್ಟ್ರಕ್ ಆಗಿದ್ದರಿಂದ, ಗುಂಡನ್ನು ಹೊರತೆಗೆದು, ಮತ್ತೊಮ್ಮೆ ಅವರ ಬಲಗಣ್ಣಿನ ಮೇಲೆ ಹಣೆಗೆ ಗುಂಡು ಹಾರಿಸಿದ್ದ. ಆನಂತರ ಎರಡನೇ ಹಂತಕ ಸಚಿನ್ ಅಂಡುರೆ ಕೂಡಾ ಗುಂಡು ಹಾರಿಸಿದ್ದ ಎಂದು ತಪ್ಪೊಪ್ಪಿಗೆಯಲ್ಲಿ ಇರುವುದಾಗಿ ವರದಿ ಹೇಳುತ್ತಿದೆ.
ವೀರೇಂದ್ರ ತಾವಡೆಯೇ ನಂತರ ಶರದ್ ಕಲಾಸ್ಕರ್‌ನನ್ನು, ಗೌರಿ ಲಂಕೇಶ್ ಹತ್ಯೆಯಲ್ಲಿ ಭಾಗಿಯಾದ ಆರೋಪ ಹೊತ್ತು ಜೈಲಿನಲ್ಲಿರುವ ಅಮೋಲ್ ಕಾಳೆಗೆ ಪರಿಚಯ ಮಾಡಿಕೊಟ್ಟಿದ್ದ ಎಂಬ ಅಂಶವೂ ತಪ್ಪೊಪ್ಪಿಗೆಯಲ್ಲಿದೆ. ಗೌರಿ ಲಂಕೇಶ್‌ರ ಹತ್ಯೆ ಕುರಿತ ಪ್ಲ್ಯಾನ್ ಮಾಡಲಾದ ಹಲವು ಸಭೆಗಳಲ್ಲಿ ಭಾಗಿಯಾಗಿದ್ದಾಗಿ ಕಲಾಸ್ಕರ್ ಒಪ್ಪಿಕೊಂಡಿದ್ದಾನೆ.

2016ರ ಆಗಸ್ಟ್‌ನಲ್ಲಿ ಬೆಳಗಾಂನಲ್ಲಿ ಒಂದು ಸಭೆ ನಡೆಯಿತು. ಅಲ್ಲಿ ನಮ್ಮ ಸಿದ್ಧಾಂತಕ್ಕೆ ವಿರುದ್ಧವಾಗಿರುವವರು ಯಾರ್ಯಾಲರು ಎಂದು ಪಟ್ಟಿ ಮಾಡಲಾಯ್ತು. ಆ ಪಟ್ಟಿಯಲ್ಲಿ ಗೌರಿ ಲಂಕೇಶರ ಹೆಸರು ಮೊದಲ ಸ್ಥಾನ ಪಡೆದು, ಅವರನ್ನು ಕೊಲೆ ಮಾಡಲು ತೀರ್ಮಾನಿಸಲಾಯಿತು ಎಂದು ತಪ್ಪೊಪ್ಪಿಗೆಯಲ್ಲಿ ಆತ ಹೇಳಿದ್ದಾನೆ. ಒಂದು ವರ್ಷದ ನಂತರ 2017ರ ಆಗಸ್ಟನಲ್ಲಿ ಮತ್ತೊಂದು ಸಭೆ ನಡೆದು, ಅಲ್ಲಿ ಹತ್ಯೆಯ ಯೋಜನೆ ಅಂತಿಮಗೊಂಡಿತ್ತು. ಅದಾದ ಒಂದು ತಿಂಗಳಿಗೆ, ಸೆಪ್ಟಂಬರ್ ೫ರ ರಾತ್ರಿ ಅವರ ಮನೆಯ ಮುಂದೆಯೇ ಗೌರಿ ಲಂಕೇಶರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

ಈ ಬಂಧನಗಳು ನಡೆಯದಿದ್ದರೆ, ಬಾಂಬೆ ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ಬಿ.ಜಿ.ಖೋಲ್ಸೆ ಪಾಟೀಲರನ್ನು ಹತ್ಯೆ ಮಾಡಲು ಯೋಜನೆ ರೂಪಿಸಲಾಗಿತ್ತು ಎಂಬ ಶಾಕಿಂಗ್ ಅಂಶವನ್ನೂ ತನ್ನ ತಪ್ಪೊಪ್ಪಿಗೆಯಲ್ಲಿ ಕಲಾಸ್ಕರ್ ಹೊರಗೆಡವಿದ್ದಾನೆ. 14 ಪುಟಗಳ ಆತನ ತಪ್ಪೊಪ್ಪಿಗೆ ತನಗೆ ಲಭ್ಯವಾಗಿದೆ ಎಂದು ಎನ್‌ಡಿಟಿವಿ ವರದಿ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....