Homeಚಳವಳಿ‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

‘ಎರಡು ಗುಂಡು ಹಾರಿಸಿ ಕೊಂದೆ’: ದಾಬೋಲ್ಕರ್ ಹಂತಕನ ತಪ್ಪೊಪ್ಪಿಗೆಯಲ್ಲಿ ಮತ್ತಷ್ಟು ಶಾಕ್‌ಗಳು!

ತಮ್ಮ ಸಿದ್ಧಾಂತಕ್ಕೆ ವಿರುದ್ಧವಾದವರನ್ನು ಹತ್ಯೆ ಮಾಡಲು ಮುಗ್ಧ ಯುವಕರನ್ನು ಆಯ್ಕೆ ಮಾಡುತ್ತಿದ್ದ ತಾವಡೆ ಅವರಿಗೆ ಪಿಸ್ತೂಲ್ ಬಳಸುವ ತರಬೇತಿ ಕೊಟ್ಟು ಬ್ರೈನ್‌ವಾಶ್ ಮಾಡುತ್ತಿದ್ದ

- Advertisement -
- Advertisement -

ಆರು ವರ್ಷಗಳ ಹಿಂದೆ ವಿಚಾರವಾದಿ ನರೇಂದ್ರ ದಾಬೋಲ್ಕರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪ ಹೊತ್ತಿರುವ ಶರದ್ ಕಲಾಸ್ಕರ್, ಕರ್ನಾಟಕ ಪೊಲೀಸರ ಮುಂದೆ ಶಾಕಿಂಗ್ ಸತ್ಯಗಳನ್ನು ಹೊರಗೆಡವಿದ್ದಾನೆ. ‘ನಾನು ಎರಡು ಗುಂಡು ಹಾರಿಸಿ ಅವರನ್ನು ಕೊಂದೆ, ಒಂದು ತಲೆಯ ಹಿಂಬದಿಯಿಂದ ಮತ್ತೊಂದು ಅವರ ಬಲಗಣ್ಣಿನ ಮೇಲೆ’ ಎಂದು ತನ್ನ ಹದಿನಾಲ್ಕು ಪುಟಗಳ ತಪ್ಪೊಪ್ಪಿಗೆಯಲ್ಲಿ ತಿಳಿಸಿರುವುದಾಗಿ ಎನ್‌ಡಿಟಿವಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಗೋವಿಂದ ಪನ್ಸಾರೆ ಮತ್ತು ಪತ್ರಕರ್ತೆ ಗೌರಿ ಲಂಕೇಶ್‌ರ ಹತ್ಯೆಯಲ್ಲೂ ಈತನ ಕೈವಾಡವಿರುವ ಕುರಿತು ತನಿಖೆ ನಡೆಯುತ್ತಿದೆ.

ಗೌರಿ ಲಂಕೇಶರ ಹತ್ಯೆಯ ಸಂಚಿನಲ್ಲಿ ಭಾಗಿಯಾದ ಆರೋಪದ ಮೇಲೆ ಒಂದು ವರ್ಷದಿಂದ ಈತನ ವಿಚಾರಣೆ ನಡೆಸಲಾಗುತ್ತಿದೆ. ಅದಕ್ಕೂ ಮೊದಲು ಮಾಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳವು ಪಾಲ್ಗರ್ ಜಿಲ್ಲೆಯಲ್ಲಿರುವ ನರಸೋಪುರ್‌ನ ಅಕ್ರಮ ಪಿಸ್ತೂಲ್ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ ಆ ಪ್ರಕರಣದಲ್ಲಿ ಶರದ್ ಕಲಾಸ್ಕರ್‌ನನ್ನು ಬಂಧಿಸಿದ್ದರು. ಗೌರಿ ಹತ್ಯೆಯ ವಿಚಾರಣೆ ಸಮಯದಲ್ಲಿ ಆತ ದಾಬೋಲ್ಕರ್ ಹತ್ಯೆಯ ಗುಟ್ಟು ಬಿಚ್ಚಿಟ್ಟಿದ್ದಾನೆ.

ಆಗಸ್ಟ್ 2013ರಲ್ಲಿ ಪುಣೆಯಲ್ಲಿ ಬೆಳಗಿನ ವಾಕಿಂಗ್ ವೇಳೆ ದಾಬೋಲ್ಕರ್ ಹತ್ಯೆ ಮಾಡಲಾಗಿತ್ತು. ಅದಾದ ನಂತರ ಗೋವಿಂದ ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಮತ್ತು ಗೌರಿ ಲಂಕೇಶರ ಹತ್ಯೆಗಳಾಗಿದ್ದವು.

ಮಹಾರಾಷ್ಟ್ರ ಪೊಲೀಸರು ಆತ ಹೇಳಿದ ಗೌರಿ ಹತ್ಯೆ ಕುರಿಯ ಮಾಹಿತಿಗಳನ್ನು ಕರ್ನಾಟಕ ಪೊಲೀಸರ ಜೊತೆ ಹಂಚಿಕೊಂಡ ನಂತರ ಅವನನ್ನು ವಶಕ್ಕೆ ಪಡೆದ ರಾಜ್ಯದ ಎಸ್‌ಐಟಿ ತಂಡ ವಿಚಾರಣೆ ನಡೆಸುತ್ತಿದೆ.

ದಾಬೋಲ್ಕರ್ ಹತ್ಯೆಯ ಕುರಿತ ಘಟನೆಯನ್ನು ಮೆಲುಕು ಹಾಕಿರುವ ಆತ ಕೆಲ ಬಲಪಂಥೀಯ ನಾಯಕರು ತನ್ನನ್ನು ಸಂಪರ್ಕಿಸಿ ಸನಾತನ ಸಿದ್ಧಾಂತ, ಪಿಸ್ತೂಲಿನ ಬಳಕೆ ಮತ್ತು ಬಾಂಬ್ ತಯಾರಿಕೆಯ ತರಬೇತಿ ನೀಡಿದ್ದರು ಎಂದಿದ್ದಾನೆ. ವೀರೇಂದ್ರ ತಾವಡೆ (ಪ್ರಧಾನ ಸಂಚುಗಾರ ಆರೋಪ ಹೊತ್ತಿರುವವನು) ಎಂಬಾತ ನಾವು ಕೆಲ ದುಷ್ಟರಿಗೆ ಅಂತ್ಯ ಹಾಡಬೇಕಿದೆ ಎಂದು ತನ್ನ ಬಳಿ ಹೇಳಿ, ಹತ್ಯೆ ಮಾಡಲು ನನ್ನ ಬ್ರೈನ್‌ವಾಶ್ ಮಾಡಿದ ಎಂಬುದಾಗಿ ಶರದ್ ತಪ್ಪೊಪ್ಪಿಗೆಯಲ್ಲಿ ಹೇಳಿಕೊಂಡಿರುವುದಾಗಿ ವರದಿಯಾಗಿದೆ. ಸದ್ಯ ತಾವಡೆ ಸಿಬಿಐ ಪೊಲೀಸರ ಕಸ್ಟಡಿಯಲ್ಲಿದ್ದಾನೆ.

ದಾಬೋಲ್ಕರ್‌ಗೆ ತಲೆಗೆ ಗುರಿಯಿಟ್ಟು ಗುಂಡು ಹಾರಿಸು, ಅವನು ಅಲ್ಲೇ ಬಿದ್ದು ಸಾಯಬೇಕು ಎಂಬ ಸೂಚನೆಯನ್ನು ತಾವಡೆ, ಶರದ್‌ಗೆ ಕೊಟ್ಟಿದ್ದನಂತೆ. ಆತ ಕೊಟ್ಟ ಸೂಚನೆಗಳಂತೆ ದಾಬೋಲ್ಕರ್ ಬೆಳಗಿನ ವಾಕಿಂಗ್‌ಗೆಂದು ಪುಣೆಯ ಓಂಕಾರೇಶ್ವರ್ ಸೇತುವೆ ಬಳಿ ಬಂದಾಗ ಶರದ್ ಕಲಾಸ್ಕರ್ ಗುಂಡು ಹಾರಿಸಿ ಹತ್ಯೆ ಮಾಡಿದ್ದ.

ತಪ್ಪೊಪ್ಪಿಗೆಯಲ್ಲಿ ತಿಳಿಸಿರುವಂತೆ ಶರದ್ ಕಲಾಸ್ಕರ್ ದಾಬೋಲ್ಕರ್‌ಗೆ ಹಿಂಬದಿಯಿಂದ ತಲೆಗೆ ಗುಂಡು ಹಾರಿಸಿದ್ದ. ಅವರು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿರುವಂತೆಯೇ ಅವರ ಮೇಲೆ ಇನ್ನೊಂದು ಗುಂಡು ಹಾರಿಸಿದ್ದ. ಆದರೆ ಆ ಗುಂಡು ಹೊರಗೆ ಸಿಡಿಯದೆ ಪಿಸ್ತೂಲಿನೊಳಗೇ ಸ್ಟ್ರಕ್ ಆಗಿದ್ದರಿಂದ, ಗುಂಡನ್ನು ಹೊರತೆಗೆದು, ಮತ್ತೊಮ್ಮೆ ಅವರ ಬಲಗಣ್ಣಿನ ಮೇಲೆ ಹಣೆಗೆ ಗುಂಡು ಹಾರಿಸಿದ್ದ. ಆನಂತರ ಎರಡನೇ ಹಂತಕ ಸಚಿನ್ ಅಂಡುರೆ ಕೂಡಾ ಗುಂಡು ಹಾರಿಸಿದ್ದ ಎಂದು ತಪ್ಪೊಪ್ಪಿಗೆಯಲ್ಲಿ ಇರುವುದಾಗಿ ವರದಿ ಹೇಳುತ್ತಿದೆ.
ವೀರೇಂದ್ರ ತಾವಡೆಯೇ ನಂತರ ಶರದ್ ಕಲಾಸ್ಕರ್‌ನನ್ನು, ಗೌರಿ ಲಂಕೇಶ್ ಹತ್ಯೆಯಲ್ಲಿ ಭಾಗಿಯಾದ ಆರೋಪ ಹೊತ್ತು ಜೈಲಿನಲ್ಲಿರುವ ಅಮೋಲ್ ಕಾಳೆಗೆ ಪರಿಚಯ ಮಾಡಿಕೊಟ್ಟಿದ್ದ ಎಂಬ ಅಂಶವೂ ತಪ್ಪೊಪ್ಪಿಗೆಯಲ್ಲಿದೆ. ಗೌರಿ ಲಂಕೇಶ್‌ರ ಹತ್ಯೆ ಕುರಿತ ಪ್ಲ್ಯಾನ್ ಮಾಡಲಾದ ಹಲವು ಸಭೆಗಳಲ್ಲಿ ಭಾಗಿಯಾಗಿದ್ದಾಗಿ ಕಲಾಸ್ಕರ್ ಒಪ್ಪಿಕೊಂಡಿದ್ದಾನೆ.

2016ರ ಆಗಸ್ಟ್‌ನಲ್ಲಿ ಬೆಳಗಾಂನಲ್ಲಿ ಒಂದು ಸಭೆ ನಡೆಯಿತು. ಅಲ್ಲಿ ನಮ್ಮ ಸಿದ್ಧಾಂತಕ್ಕೆ ವಿರುದ್ಧವಾಗಿರುವವರು ಯಾರ್ಯಾಲರು ಎಂದು ಪಟ್ಟಿ ಮಾಡಲಾಯ್ತು. ಆ ಪಟ್ಟಿಯಲ್ಲಿ ಗೌರಿ ಲಂಕೇಶರ ಹೆಸರು ಮೊದಲ ಸ್ಥಾನ ಪಡೆದು, ಅವರನ್ನು ಕೊಲೆ ಮಾಡಲು ತೀರ್ಮಾನಿಸಲಾಯಿತು ಎಂದು ತಪ್ಪೊಪ್ಪಿಗೆಯಲ್ಲಿ ಆತ ಹೇಳಿದ್ದಾನೆ. ಒಂದು ವರ್ಷದ ನಂತರ 2017ರ ಆಗಸ್ಟನಲ್ಲಿ ಮತ್ತೊಂದು ಸಭೆ ನಡೆದು, ಅಲ್ಲಿ ಹತ್ಯೆಯ ಯೋಜನೆ ಅಂತಿಮಗೊಂಡಿತ್ತು. ಅದಾದ ಒಂದು ತಿಂಗಳಿಗೆ, ಸೆಪ್ಟಂಬರ್ ೫ರ ರಾತ್ರಿ ಅವರ ಮನೆಯ ಮುಂದೆಯೇ ಗೌರಿ ಲಂಕೇಶರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

ಈ ಬಂಧನಗಳು ನಡೆಯದಿದ್ದರೆ, ಬಾಂಬೆ ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ಬಿ.ಜಿ.ಖೋಲ್ಸೆ ಪಾಟೀಲರನ್ನು ಹತ್ಯೆ ಮಾಡಲು ಯೋಜನೆ ರೂಪಿಸಲಾಗಿತ್ತು ಎಂಬ ಶಾಕಿಂಗ್ ಅಂಶವನ್ನೂ ತನ್ನ ತಪ್ಪೊಪ್ಪಿಗೆಯಲ್ಲಿ ಕಲಾಸ್ಕರ್ ಹೊರಗೆಡವಿದ್ದಾನೆ. 14 ಪುಟಗಳ ಆತನ ತಪ್ಪೊಪ್ಪಿಗೆ ತನಗೆ ಲಭ್ಯವಾಗಿದೆ ಎಂದು ಎನ್‌ಡಿಟಿವಿ ವರದಿ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...