Homeಮುಖಪುಟಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

- Advertisement -
- Advertisement -

ರಾಜ್ಯದ ಹಲವು ಪ್ರಮುಖ ಸಾಹಿತಿಗಳಿಗೆ, ಬರಹಗಾರರಿಗೆ ಬೆದರಿಕೆ ಪತ್ರ ಬರೆದ ಆರೋಪಿಯನ್ನು ಕರ್ನಾಟಕ ಪೊಲೀಸರು ಸೆಪ್ಟೆಂಬರ್‌ನಲ್ಲಿ ಬಂಧಿಸಿದ್ದರು. ಬೆದರಿಕೆ ಪತ್ರ ಬರೆದ ಆರೋಪಿ ದಾವಣಗೆರೆ ಮೂಲದ ಶಿವಾಜಿ ರಾವ್ ಜಾಧವ್ (41) ಎಂಬಾತ ಎಂ.ಎಂ ಕಲಬುರ್ಗಿ, ಗೌರಿ ಲಂಕೇಶ್‌ ಹತ್ಯೆಗೈದ ತಂಡಕ್ಕೆ ರಿಕ್ರೂಟರ್ ಆಗಿ ಕೆಲಸ ಮಾಡುತ್ತಿದ್ದ ಸುಜಿತ್ ಕುಮಾರ್‌ ಜೊತೆ ಸಂಪರ್ಕವನ್ನು ಹೊಂದಿದ್ದ ಎನ್ನುವುದು ಬಯಲಾಗದೆ.

ತನಿಖಾ ಸಂಸ್ಥೆಗಳ ಪ್ರಕಾರ, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮೂಲದ ಸುಜಿತ್ ಕುಮಾರ್ ಅಲಿಯಾಸ್ ಪ್ರವೀಣ್ ಅಲಿಯಾಸ್ ಮಂಜುನಾಥ್  ಹೆಚ್ಚಾಗಿ ಹಿಂದುತ್ವ ಗುಂಪುಗಳಲ್ಲಿರುವವರು ಮತ್ತು ಅಪರಾಧಗಳನ್ನು ಮಾಡುವ ಸಾಮರ್ಥ್ಯವಿರುವ ಯುವಕರನ್ನು ಗುರುತಿಸುತ್ತಿದ್ದ. ಬಳಿಕ  ಅವರನ್ನು ಬ್ರೈನ್‌ ವಾಶ್‌ ಮಾಡಿ ಗ್ಯಾಂಗ್‌ಗೆ ಸೇರಿಸಿಕೊಳ್ಳುತ್ತಿದ್ದ.

ಈತ 2013 ಮತ್ತು 2017ರ ನಡುವೆ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ನಾಲ್ವರು ಬರಹಗಾರರು ಮತ್ತು  ಸಾಮಾಜಿಕ ಕಾರ್ಯಕರ್ತರನ್ನು ಹತ್ಯೆಗೈದ ಆರೋಪವಿರುವ ಗೋವಾ ಮೂಲದ ಸನಾತನ ಸಂಸ್ಥೆ ಮತ್ತು ಅದರ ಸಹೋದರ ಸಂಘಟನೆ ಹಿಂದೂ ಜನಜಾಗೃತಿ ಸಮಿತಿಯೊಂದಿಗೆ ಮತ್ತು ಅದರ ನೇತೃತ್ವ ವಹಿಸಿರುವ ಹೆಚ್ಚಿನವರ ಜೊತೆ ಸಂಪರ್ಕ ಹೊಂದಿದ್ದ.

ಗೌರಿ ಲಂಕೇಶ್ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಆತನಿಗೆ ಆರೋಪಿ ಸಂಖ್ಯೆ 13 ಎಂದು ಪಟ್ಟಿ ಮಾಡಲಾಗಿದೆ ಮತ್ತು ಆತ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ. ಗೌರಿ ಲಂಕೇಶ್‌ಗೆ ಶೂಟರ್‌ ಎಂದು ಆರೋಪಿಸಿರುವ ಪರಶುರಾಮ್‌ ವಾಘ್‌ಮೋರೆಯನ್ನು ಕೂಡ ಇದೇ ಸುಜಿತ್‌ ಕುಮಾರ್‌ ನೇಮಕ ಮಾಡಿದ್ದ ಎಂದು ಆರೋಪಿಸಲಾಗಿದೆ.

2018ರಲ್ಲಿ ಸುಜಿತ್ ಕುಮಾರ್ ಬಂಧನದ ಸಮಯದಲ್ಲಿ ವಶಪಡಿಸಿಕೊಂಡ ಡೈರಿಯಲ್ಲಿ ಶಿವಾಜಿ ರಾವ್ ಜಾಧವ್‌ನ ಹೆಸರು ಮತ್ತು ಅವನ ಹಳೆಯ ಫೋನ್ ಸಂಖ್ಯೆ ಕಂಡು ಬಂದಿತ್ತು. ಶಿವಾಜಿ ರಾವ್‌ ಈತನಿಗೆ ಹಲವು ಬಾರಿ ಭೇಟಿಯಾಗಿರುವುದನ್ನು ಆತನ ಫೋಟೊ ನೋಡಿ ಒಪ್ಪಿಕೊಂಡಿದ್ದಾನೆ. ಆತನಿಗೆ ಮಂಜುನಾಥ್ ಎಂಬ ಹೆಸರಿನಿಂದ ತಿಳಿದಿದ್ದೇನೆ ಎಂದು ಹೇಳಿದ್ದಾನೆ ಎಂದು ಕೇಂದ್ರೀಯ ಅಪರಾಧ ವಿಭಾಗದ (CCB) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಜಿತ್ ಕುಮಾರ್‌ನ ಸಂಭಾವ್ಯ ನೇಮಕಾತಿಗಳಲ್ಲಿ ಒಬ್ಬನೆಂದು ಶಿವಾಜಿ ರಾವ್‌ನನ್ನು ಗುರುತಿಸಲಾಗಿದೆ. ಶಿವಾಜಿ ಕೊಲೆಗಳ ಬಗ್ಗೆ ತನಗೆ ತಿಳಿದಿರಲಿಲ್ಲ ಎಂದು ಹೇಳುತ್ತಾನೆ. ಆದರೆ 2018ರಲ್ಲಿ ಸುಜಿತ್‌ನನ್ನು ಎಸ್‌ಐಟಿ ಬಂಧಿಸದಿದ್ದರೆ ಬಹುಶಃ ಅವನು ಶಿವಾಜಿ ರಾವ್‌ನನ್ನು ಮತ್ತಷ್ಟು ಬೆಳೆಸಿರಬಹುದು ಮತ್ತು ಏನಾದರೂ ಅಪರಾಧ ಮಾಡಲು ಅವನನ್ನು ಬಳಸಿಕೊಳ್ಳುವ ಸಾಧ್ಯತೆ ಇತ್ತು ಎಂದು ಅಧಿಕಾರಿ ಹೇಳಿದ್ದಾರೆ.

8ನೇ ತರಗತಿಯನ್ನು ತೊರೆದ ಶಿವಾಜಿ ರಾವ್ ಜಾಧವ್ ದಾವಣಗೆರೆಯ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಯಾಗಿದ್ದಾನೆ. ಪ್ರಿಂಟಿಂಗ್ ಪ್ರೆಸ್‌ನಲ್ಲಿ ಕೆಲಸ ಮಾಡುತ್ತಿದ್ದ ಈತ ಹತ್ತಿರದ ಗ್ರಂಥಾಲಯದಲ್ಲಿ ಪತ್ರಿಕೆಗಳನ್ನು ದಿನನಿತ್ಯ ಓದುತ್ತಿದ್ದ ಜೊತೆಗೆ ಹಿಂದುತ್ವ ಸಿದ್ಧಾಂತವನ್ನು ಮೌಲ್ಯೀಕರಿಸುವ ಪುಸ್ತಕಗಳನ್ನು ಓದುತ್ತಿದ್ದ. ಇದು ಆತನಿಗೆ ಹಲವಾರು ಬರಹಗಾರರಿಗೆ ಬೆದರಿಕೆ ಪತ್ರಗಳನ್ನು ಬರೆಯಲು ಪ್ರೇರೇಪಿಸಿದೆ.

ಈತ ಸಾಹಿತಿಗಳಾದ ವೀರಭದ್ರಪ್ಪ, ಬಿ.ಟಿ. ಲಲಿತಾ ನಾಯಕ್, ವಸುಂಧರಾ ಭೂಪತಿ, ಬಂಜಗೆರೆ ಜಯಪ್ರಕಾಶ್, ಬಿ.ಎಲ್. ವೇಣು ಮತ್ತು ನಿಜಗುಣಾನಂದ ಸ್ವಾಮಿ ಅವರಿಗೆ ಬಂಧನಕ್ಕಿಂತ ಮೊದಲು ಬೆದರಿಕೆ ಪತ್ರವನ್ನು ಬರೆದಿದ್ದ.

ಎಂ.ಎಂ ಕಲ್ಬುರ್ಗಿ ಮಾತ್ರವಲ್ಲದೆ ಗೌರಿ ಲಂಕೇಶ್, ಮಹಾರಾಷ್ಟ್ರದ ನರೇಂದ್ರ ದಾಭೋಲ್ಕರ್ ಮತ್ತು ಗೋವಿಂದ್ ಪನ್ಸಾರೆ ಅವರ ಹತ್ಯೆಯ ಪ್ರಮುಖ ಆರೋಪಿಗಳಾದ ಅಮೋಲ್ ಕಾಳೆ, ಸುಜಿತ್ ಕುಮಾರ್ ಮತ್ತು ಮನೋಹರ್ ಎಡವೆ ಅವರ ಹಿಟ್ ಲಿಸ್ಟ್ ಮತ್ತು ಹೆಸರುಗಳು, ಕೋಡ್ ಹೆಸರುಗಳು ಮತ್ತು ಫೋನ್ ಸಂಖ್ಯೆಗಳನ್ನು ಬರೆದ ಅನೇಕ ಡೈರಿಗಳನ್ನು ತನಿಖಾಧಿಖಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಡೈರಿಗಳ ಸುಳಿವುಗಳ ಆಧಾರದಲ್ಲಿ ಗೌರಿ ಲಂಕೇಶ್ ಅವರನ್ನು ಗುರಿಯಾಗಿಸಿಕೊಂಡ ಆರೋಪಿ ಸೇರಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಎಸ್‌ಐಟಿಯು ಈ ಹೆಸರುಗಳ ಪಟ್ಟಿಯನ್ನು ತಯಾರಿಸಿ ಅವುಗಳನ್ನು ರಾಜ್ಯ ಮತ್ತು ಕೇಂದ್ರ ತನಿಖಾ ಏಜೆನ್ಸಿಗಳಿಗೆ ನೀಡಿದೆ ಮತ್ತು ಅವರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಆಶಿಸಿದ್ದರು.

ನಾಲ್ವರನ್ನು ಹತ್ಯೆ ಮಾಡಿದ ಗ್ಯಾಂಗ್‌ನ ಇತಿಹಾಸವನ್ನು ನೋಡಿದಾಗ ತಂಡದ ಮೊದಲ ನೇತೃತ್ವ ವಹಿಸಿದ್ದು 2016ರಲ್ಲಿ ನರೇಂದ್ರ ದಾಭೋಲ್ಕರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿಸಲ್ಪಟ್ಟ ವೀರೇಂದ್ರ ತಾವ್ಡೆ. ನಂತರ ಅಮೋಲ್ ಕಾಳೆ ಗ್ಯಾಂಗ್‌ನ್ನು ಮುನ್ನಡೆಸಿದ್ದ. ಇದೀಗ ಆ ಗ್ಯಾಂಗ್ ಕರ್ನಾಟಕದಲ್ಲಿ ಮತ್ತೆರಡು ಹತ್ಯೆ ನಡೆಸಿದೆ.  ಆ ಗ್ಯಾಂಗ್ ಕೂಡ ಬಂಧಿಯಾಗಿದೆ. ಆದರೆ ಈ ಗ್ಯಾಂಗ್ ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಅನೇಕ ಬಾಂಬ್ ಸ್ಫೋಟಗಳನ್ನು ನಡೆಸಿದೆ.  ಅದು ಕೂಡ ಭೇದಿಸಲ್ಪಟ್ಟಿದೆ. ಈ ಹಿಂದಿನ ಗ್ಯಾಂಗ್‌ನಿಂದ ಅನೇಕ ಶಂಕಿತರು ಇಂದಿಗೂ ಕಾಣೆಯಾಗಿದ್ದಾರೆ. ಆದ್ದರಿಂದ ಈ ಹಂತಕರ ಗುಂಪು ಮರುಸಂಘಟನೆಯ ಸಾಧ್ಯತೆಯನ್ನು ಕೂಡ ಅಲ್ಲಗಳೆಯುವಂತಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನು ಓದಿ: ಇಡಿ ಚುನಾವಣೆಗೆ ಹಣ ಹಂಚುತ್ತಿದೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಗಂಭೀರ ಆರೋಪ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...