Homeಮುಖಪುಟಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

- Advertisement -
- Advertisement -

ರಾಜ್ಯದ ಹಲವು ಪ್ರಮುಖ ಸಾಹಿತಿಗಳಿಗೆ, ಬರಹಗಾರರಿಗೆ ಬೆದರಿಕೆ ಪತ್ರ ಬರೆದ ಆರೋಪಿಯನ್ನು ಕರ್ನಾಟಕ ಪೊಲೀಸರು ಸೆಪ್ಟೆಂಬರ್‌ನಲ್ಲಿ ಬಂಧಿಸಿದ್ದರು. ಬೆದರಿಕೆ ಪತ್ರ ಬರೆದ ಆರೋಪಿ ದಾವಣಗೆರೆ ಮೂಲದ ಶಿವಾಜಿ ರಾವ್ ಜಾಧವ್ (41) ಎಂಬಾತ ಎಂ.ಎಂ ಕಲಬುರ್ಗಿ, ಗೌರಿ ಲಂಕೇಶ್‌ ಹತ್ಯೆಗೈದ ತಂಡಕ್ಕೆ ರಿಕ್ರೂಟರ್ ಆಗಿ ಕೆಲಸ ಮಾಡುತ್ತಿದ್ದ ಸುಜಿತ್ ಕುಮಾರ್‌ ಜೊತೆ ಸಂಪರ್ಕವನ್ನು ಹೊಂದಿದ್ದ ಎನ್ನುವುದು ಬಯಲಾಗದೆ.

ತನಿಖಾ ಸಂಸ್ಥೆಗಳ ಪ್ರಕಾರ, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮೂಲದ ಸುಜಿತ್ ಕುಮಾರ್ ಅಲಿಯಾಸ್ ಪ್ರವೀಣ್ ಅಲಿಯಾಸ್ ಮಂಜುನಾಥ್  ಹೆಚ್ಚಾಗಿ ಹಿಂದುತ್ವ ಗುಂಪುಗಳಲ್ಲಿರುವವರು ಮತ್ತು ಅಪರಾಧಗಳನ್ನು ಮಾಡುವ ಸಾಮರ್ಥ್ಯವಿರುವ ಯುವಕರನ್ನು ಗುರುತಿಸುತ್ತಿದ್ದ. ಬಳಿಕ  ಅವರನ್ನು ಬ್ರೈನ್‌ ವಾಶ್‌ ಮಾಡಿ ಗ್ಯಾಂಗ್‌ಗೆ ಸೇರಿಸಿಕೊಳ್ಳುತ್ತಿದ್ದ.

ಈತ 2013 ಮತ್ತು 2017ರ ನಡುವೆ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ನಾಲ್ವರು ಬರಹಗಾರರು ಮತ್ತು  ಸಾಮಾಜಿಕ ಕಾರ್ಯಕರ್ತರನ್ನು ಹತ್ಯೆಗೈದ ಆರೋಪವಿರುವ ಗೋವಾ ಮೂಲದ ಸನಾತನ ಸಂಸ್ಥೆ ಮತ್ತು ಅದರ ಸಹೋದರ ಸಂಘಟನೆ ಹಿಂದೂ ಜನಜಾಗೃತಿ ಸಮಿತಿಯೊಂದಿಗೆ ಮತ್ತು ಅದರ ನೇತೃತ್ವ ವಹಿಸಿರುವ ಹೆಚ್ಚಿನವರ ಜೊತೆ ಸಂಪರ್ಕ ಹೊಂದಿದ್ದ.

ಗೌರಿ ಲಂಕೇಶ್ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಆತನಿಗೆ ಆರೋಪಿ ಸಂಖ್ಯೆ 13 ಎಂದು ಪಟ್ಟಿ ಮಾಡಲಾಗಿದೆ ಮತ್ತು ಆತ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ. ಗೌರಿ ಲಂಕೇಶ್‌ಗೆ ಶೂಟರ್‌ ಎಂದು ಆರೋಪಿಸಿರುವ ಪರಶುರಾಮ್‌ ವಾಘ್‌ಮೋರೆಯನ್ನು ಕೂಡ ಇದೇ ಸುಜಿತ್‌ ಕುಮಾರ್‌ ನೇಮಕ ಮಾಡಿದ್ದ ಎಂದು ಆರೋಪಿಸಲಾಗಿದೆ.

2018ರಲ್ಲಿ ಸುಜಿತ್ ಕುಮಾರ್ ಬಂಧನದ ಸಮಯದಲ್ಲಿ ವಶಪಡಿಸಿಕೊಂಡ ಡೈರಿಯಲ್ಲಿ ಶಿವಾಜಿ ರಾವ್ ಜಾಧವ್‌ನ ಹೆಸರು ಮತ್ತು ಅವನ ಹಳೆಯ ಫೋನ್ ಸಂಖ್ಯೆ ಕಂಡು ಬಂದಿತ್ತು. ಶಿವಾಜಿ ರಾವ್‌ ಈತನಿಗೆ ಹಲವು ಬಾರಿ ಭೇಟಿಯಾಗಿರುವುದನ್ನು ಆತನ ಫೋಟೊ ನೋಡಿ ಒಪ್ಪಿಕೊಂಡಿದ್ದಾನೆ. ಆತನಿಗೆ ಮಂಜುನಾಥ್ ಎಂಬ ಹೆಸರಿನಿಂದ ತಿಳಿದಿದ್ದೇನೆ ಎಂದು ಹೇಳಿದ್ದಾನೆ ಎಂದು ಕೇಂದ್ರೀಯ ಅಪರಾಧ ವಿಭಾಗದ (CCB) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಜಿತ್ ಕುಮಾರ್‌ನ ಸಂಭಾವ್ಯ ನೇಮಕಾತಿಗಳಲ್ಲಿ ಒಬ್ಬನೆಂದು ಶಿವಾಜಿ ರಾವ್‌ನನ್ನು ಗುರುತಿಸಲಾಗಿದೆ. ಶಿವಾಜಿ ಕೊಲೆಗಳ ಬಗ್ಗೆ ತನಗೆ ತಿಳಿದಿರಲಿಲ್ಲ ಎಂದು ಹೇಳುತ್ತಾನೆ. ಆದರೆ 2018ರಲ್ಲಿ ಸುಜಿತ್‌ನನ್ನು ಎಸ್‌ಐಟಿ ಬಂಧಿಸದಿದ್ದರೆ ಬಹುಶಃ ಅವನು ಶಿವಾಜಿ ರಾವ್‌ನನ್ನು ಮತ್ತಷ್ಟು ಬೆಳೆಸಿರಬಹುದು ಮತ್ತು ಏನಾದರೂ ಅಪರಾಧ ಮಾಡಲು ಅವನನ್ನು ಬಳಸಿಕೊಳ್ಳುವ ಸಾಧ್ಯತೆ ಇತ್ತು ಎಂದು ಅಧಿಕಾರಿ ಹೇಳಿದ್ದಾರೆ.

8ನೇ ತರಗತಿಯನ್ನು ತೊರೆದ ಶಿವಾಜಿ ರಾವ್ ಜಾಧವ್ ದಾವಣಗೆರೆಯ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಯಾಗಿದ್ದಾನೆ. ಪ್ರಿಂಟಿಂಗ್ ಪ್ರೆಸ್‌ನಲ್ಲಿ ಕೆಲಸ ಮಾಡುತ್ತಿದ್ದ ಈತ ಹತ್ತಿರದ ಗ್ರಂಥಾಲಯದಲ್ಲಿ ಪತ್ರಿಕೆಗಳನ್ನು ದಿನನಿತ್ಯ ಓದುತ್ತಿದ್ದ ಜೊತೆಗೆ ಹಿಂದುತ್ವ ಸಿದ್ಧಾಂತವನ್ನು ಮೌಲ್ಯೀಕರಿಸುವ ಪುಸ್ತಕಗಳನ್ನು ಓದುತ್ತಿದ್ದ. ಇದು ಆತನಿಗೆ ಹಲವಾರು ಬರಹಗಾರರಿಗೆ ಬೆದರಿಕೆ ಪತ್ರಗಳನ್ನು ಬರೆಯಲು ಪ್ರೇರೇಪಿಸಿದೆ.

ಈತ ಸಾಹಿತಿಗಳಾದ ವೀರಭದ್ರಪ್ಪ, ಬಿ.ಟಿ. ಲಲಿತಾ ನಾಯಕ್, ವಸುಂಧರಾ ಭೂಪತಿ, ಬಂಜಗೆರೆ ಜಯಪ್ರಕಾಶ್, ಬಿ.ಎಲ್. ವೇಣು ಮತ್ತು ನಿಜಗುಣಾನಂದ ಸ್ವಾಮಿ ಅವರಿಗೆ ಬಂಧನಕ್ಕಿಂತ ಮೊದಲು ಬೆದರಿಕೆ ಪತ್ರವನ್ನು ಬರೆದಿದ್ದ.

ಎಂ.ಎಂ ಕಲ್ಬುರ್ಗಿ ಮಾತ್ರವಲ್ಲದೆ ಗೌರಿ ಲಂಕೇಶ್, ಮಹಾರಾಷ್ಟ್ರದ ನರೇಂದ್ರ ದಾಭೋಲ್ಕರ್ ಮತ್ತು ಗೋವಿಂದ್ ಪನ್ಸಾರೆ ಅವರ ಹತ್ಯೆಯ ಪ್ರಮುಖ ಆರೋಪಿಗಳಾದ ಅಮೋಲ್ ಕಾಳೆ, ಸುಜಿತ್ ಕುಮಾರ್ ಮತ್ತು ಮನೋಹರ್ ಎಡವೆ ಅವರ ಹಿಟ್ ಲಿಸ್ಟ್ ಮತ್ತು ಹೆಸರುಗಳು, ಕೋಡ್ ಹೆಸರುಗಳು ಮತ್ತು ಫೋನ್ ಸಂಖ್ಯೆಗಳನ್ನು ಬರೆದ ಅನೇಕ ಡೈರಿಗಳನ್ನು ತನಿಖಾಧಿಖಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಡೈರಿಗಳ ಸುಳಿವುಗಳ ಆಧಾರದಲ್ಲಿ ಗೌರಿ ಲಂಕೇಶ್ ಅವರನ್ನು ಗುರಿಯಾಗಿಸಿಕೊಂಡ ಆರೋಪಿ ಸೇರಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಎಸ್‌ಐಟಿಯು ಈ ಹೆಸರುಗಳ ಪಟ್ಟಿಯನ್ನು ತಯಾರಿಸಿ ಅವುಗಳನ್ನು ರಾಜ್ಯ ಮತ್ತು ಕೇಂದ್ರ ತನಿಖಾ ಏಜೆನ್ಸಿಗಳಿಗೆ ನೀಡಿದೆ ಮತ್ತು ಅವರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಆಶಿಸಿದ್ದರು.

ನಾಲ್ವರನ್ನು ಹತ್ಯೆ ಮಾಡಿದ ಗ್ಯಾಂಗ್‌ನ ಇತಿಹಾಸವನ್ನು ನೋಡಿದಾಗ ತಂಡದ ಮೊದಲ ನೇತೃತ್ವ ವಹಿಸಿದ್ದು 2016ರಲ್ಲಿ ನರೇಂದ್ರ ದಾಭೋಲ್ಕರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿಸಲ್ಪಟ್ಟ ವೀರೇಂದ್ರ ತಾವ್ಡೆ. ನಂತರ ಅಮೋಲ್ ಕಾಳೆ ಗ್ಯಾಂಗ್‌ನ್ನು ಮುನ್ನಡೆಸಿದ್ದ. ಇದೀಗ ಆ ಗ್ಯಾಂಗ್ ಕರ್ನಾಟಕದಲ್ಲಿ ಮತ್ತೆರಡು ಹತ್ಯೆ ನಡೆಸಿದೆ.  ಆ ಗ್ಯಾಂಗ್ ಕೂಡ ಬಂಧಿಯಾಗಿದೆ. ಆದರೆ ಈ ಗ್ಯಾಂಗ್ ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಅನೇಕ ಬಾಂಬ್ ಸ್ಫೋಟಗಳನ್ನು ನಡೆಸಿದೆ.  ಅದು ಕೂಡ ಭೇದಿಸಲ್ಪಟ್ಟಿದೆ. ಈ ಹಿಂದಿನ ಗ್ಯಾಂಗ್‌ನಿಂದ ಅನೇಕ ಶಂಕಿತರು ಇಂದಿಗೂ ಕಾಣೆಯಾಗಿದ್ದಾರೆ. ಆದ್ದರಿಂದ ಈ ಹಂತಕರ ಗುಂಪು ಮರುಸಂಘಟನೆಯ ಸಾಧ್ಯತೆಯನ್ನು ಕೂಡ ಅಲ್ಲಗಳೆಯುವಂತಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನು ಓದಿ: ಇಡಿ ಚುನಾವಣೆಗೆ ಹಣ ಹಂಚುತ್ತಿದೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಗಂಭೀರ ಆರೋಪ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...