Homeಮುಖಪುಟಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

- Advertisement -
- Advertisement -

ರಾಜ್ಯದ ಹಲವು ಪ್ರಮುಖ ಸಾಹಿತಿಗಳಿಗೆ, ಬರಹಗಾರರಿಗೆ ಬೆದರಿಕೆ ಪತ್ರ ಬರೆದ ಆರೋಪಿಯನ್ನು ಕರ್ನಾಟಕ ಪೊಲೀಸರು ಸೆಪ್ಟೆಂಬರ್‌ನಲ್ಲಿ ಬಂಧಿಸಿದ್ದರು. ಬೆದರಿಕೆ ಪತ್ರ ಬರೆದ ಆರೋಪಿ ದಾವಣಗೆರೆ ಮೂಲದ ಶಿವಾಜಿ ರಾವ್ ಜಾಧವ್ (41) ಎಂಬಾತ ಎಂ.ಎಂ ಕಲಬುರ್ಗಿ, ಗೌರಿ ಲಂಕೇಶ್‌ ಹತ್ಯೆಗೈದ ತಂಡಕ್ಕೆ ರಿಕ್ರೂಟರ್ ಆಗಿ ಕೆಲಸ ಮಾಡುತ್ತಿದ್ದ ಸುಜಿತ್ ಕುಮಾರ್‌ ಜೊತೆ ಸಂಪರ್ಕವನ್ನು ಹೊಂದಿದ್ದ ಎನ್ನುವುದು ಬಯಲಾಗದೆ.

ತನಿಖಾ ಸಂಸ್ಥೆಗಳ ಪ್ರಕಾರ, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮೂಲದ ಸುಜಿತ್ ಕುಮಾರ್ ಅಲಿಯಾಸ್ ಪ್ರವೀಣ್ ಅಲಿಯಾಸ್ ಮಂಜುನಾಥ್  ಹೆಚ್ಚಾಗಿ ಹಿಂದುತ್ವ ಗುಂಪುಗಳಲ್ಲಿರುವವರು ಮತ್ತು ಅಪರಾಧಗಳನ್ನು ಮಾಡುವ ಸಾಮರ್ಥ್ಯವಿರುವ ಯುವಕರನ್ನು ಗುರುತಿಸುತ್ತಿದ್ದ. ಬಳಿಕ  ಅವರನ್ನು ಬ್ರೈನ್‌ ವಾಶ್‌ ಮಾಡಿ ಗ್ಯಾಂಗ್‌ಗೆ ಸೇರಿಸಿಕೊಳ್ಳುತ್ತಿದ್ದ.

ಈತ 2013 ಮತ್ತು 2017ರ ನಡುವೆ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ನಾಲ್ವರು ಬರಹಗಾರರು ಮತ್ತು  ಸಾಮಾಜಿಕ ಕಾರ್ಯಕರ್ತರನ್ನು ಹತ್ಯೆಗೈದ ಆರೋಪವಿರುವ ಗೋವಾ ಮೂಲದ ಸನಾತನ ಸಂಸ್ಥೆ ಮತ್ತು ಅದರ ಸಹೋದರ ಸಂಘಟನೆ ಹಿಂದೂ ಜನಜಾಗೃತಿ ಸಮಿತಿಯೊಂದಿಗೆ ಮತ್ತು ಅದರ ನೇತೃತ್ವ ವಹಿಸಿರುವ ಹೆಚ್ಚಿನವರ ಜೊತೆ ಸಂಪರ್ಕ ಹೊಂದಿದ್ದ.

ಗೌರಿ ಲಂಕೇಶ್ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಆತನಿಗೆ ಆರೋಪಿ ಸಂಖ್ಯೆ 13 ಎಂದು ಪಟ್ಟಿ ಮಾಡಲಾಗಿದೆ ಮತ್ತು ಆತ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ. ಗೌರಿ ಲಂಕೇಶ್‌ಗೆ ಶೂಟರ್‌ ಎಂದು ಆರೋಪಿಸಿರುವ ಪರಶುರಾಮ್‌ ವಾಘ್‌ಮೋರೆಯನ್ನು ಕೂಡ ಇದೇ ಸುಜಿತ್‌ ಕುಮಾರ್‌ ನೇಮಕ ಮಾಡಿದ್ದ ಎಂದು ಆರೋಪಿಸಲಾಗಿದೆ.

2018ರಲ್ಲಿ ಸುಜಿತ್ ಕುಮಾರ್ ಬಂಧನದ ಸಮಯದಲ್ಲಿ ವಶಪಡಿಸಿಕೊಂಡ ಡೈರಿಯಲ್ಲಿ ಶಿವಾಜಿ ರಾವ್ ಜಾಧವ್‌ನ ಹೆಸರು ಮತ್ತು ಅವನ ಹಳೆಯ ಫೋನ್ ಸಂಖ್ಯೆ ಕಂಡು ಬಂದಿತ್ತು. ಶಿವಾಜಿ ರಾವ್‌ ಈತನಿಗೆ ಹಲವು ಬಾರಿ ಭೇಟಿಯಾಗಿರುವುದನ್ನು ಆತನ ಫೋಟೊ ನೋಡಿ ಒಪ್ಪಿಕೊಂಡಿದ್ದಾನೆ. ಆತನಿಗೆ ಮಂಜುನಾಥ್ ಎಂಬ ಹೆಸರಿನಿಂದ ತಿಳಿದಿದ್ದೇನೆ ಎಂದು ಹೇಳಿದ್ದಾನೆ ಎಂದು ಕೇಂದ್ರೀಯ ಅಪರಾಧ ವಿಭಾಗದ (CCB) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಜಿತ್ ಕುಮಾರ್‌ನ ಸಂಭಾವ್ಯ ನೇಮಕಾತಿಗಳಲ್ಲಿ ಒಬ್ಬನೆಂದು ಶಿವಾಜಿ ರಾವ್‌ನನ್ನು ಗುರುತಿಸಲಾಗಿದೆ. ಶಿವಾಜಿ ಕೊಲೆಗಳ ಬಗ್ಗೆ ತನಗೆ ತಿಳಿದಿರಲಿಲ್ಲ ಎಂದು ಹೇಳುತ್ತಾನೆ. ಆದರೆ 2018ರಲ್ಲಿ ಸುಜಿತ್‌ನನ್ನು ಎಸ್‌ಐಟಿ ಬಂಧಿಸದಿದ್ದರೆ ಬಹುಶಃ ಅವನು ಶಿವಾಜಿ ರಾವ್‌ನನ್ನು ಮತ್ತಷ್ಟು ಬೆಳೆಸಿರಬಹುದು ಮತ್ತು ಏನಾದರೂ ಅಪರಾಧ ಮಾಡಲು ಅವನನ್ನು ಬಳಸಿಕೊಳ್ಳುವ ಸಾಧ್ಯತೆ ಇತ್ತು ಎಂದು ಅಧಿಕಾರಿ ಹೇಳಿದ್ದಾರೆ.

8ನೇ ತರಗತಿಯನ್ನು ತೊರೆದ ಶಿವಾಜಿ ರಾವ್ ಜಾಧವ್ ದಾವಣಗೆರೆಯ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಯಾಗಿದ್ದಾನೆ. ಪ್ರಿಂಟಿಂಗ್ ಪ್ರೆಸ್‌ನಲ್ಲಿ ಕೆಲಸ ಮಾಡುತ್ತಿದ್ದ ಈತ ಹತ್ತಿರದ ಗ್ರಂಥಾಲಯದಲ್ಲಿ ಪತ್ರಿಕೆಗಳನ್ನು ದಿನನಿತ್ಯ ಓದುತ್ತಿದ್ದ ಜೊತೆಗೆ ಹಿಂದುತ್ವ ಸಿದ್ಧಾಂತವನ್ನು ಮೌಲ್ಯೀಕರಿಸುವ ಪುಸ್ತಕಗಳನ್ನು ಓದುತ್ತಿದ್ದ. ಇದು ಆತನಿಗೆ ಹಲವಾರು ಬರಹಗಾರರಿಗೆ ಬೆದರಿಕೆ ಪತ್ರಗಳನ್ನು ಬರೆಯಲು ಪ್ರೇರೇಪಿಸಿದೆ.

ಈತ ಸಾಹಿತಿಗಳಾದ ವೀರಭದ್ರಪ್ಪ, ಬಿ.ಟಿ. ಲಲಿತಾ ನಾಯಕ್, ವಸುಂಧರಾ ಭೂಪತಿ, ಬಂಜಗೆರೆ ಜಯಪ್ರಕಾಶ್, ಬಿ.ಎಲ್. ವೇಣು ಮತ್ತು ನಿಜಗುಣಾನಂದ ಸ್ವಾಮಿ ಅವರಿಗೆ ಬಂಧನಕ್ಕಿಂತ ಮೊದಲು ಬೆದರಿಕೆ ಪತ್ರವನ್ನು ಬರೆದಿದ್ದ.

ಎಂ.ಎಂ ಕಲ್ಬುರ್ಗಿ ಮಾತ್ರವಲ್ಲದೆ ಗೌರಿ ಲಂಕೇಶ್, ಮಹಾರಾಷ್ಟ್ರದ ನರೇಂದ್ರ ದಾಭೋಲ್ಕರ್ ಮತ್ತು ಗೋವಿಂದ್ ಪನ್ಸಾರೆ ಅವರ ಹತ್ಯೆಯ ಪ್ರಮುಖ ಆರೋಪಿಗಳಾದ ಅಮೋಲ್ ಕಾಳೆ, ಸುಜಿತ್ ಕುಮಾರ್ ಮತ್ತು ಮನೋಹರ್ ಎಡವೆ ಅವರ ಹಿಟ್ ಲಿಸ್ಟ್ ಮತ್ತು ಹೆಸರುಗಳು, ಕೋಡ್ ಹೆಸರುಗಳು ಮತ್ತು ಫೋನ್ ಸಂಖ್ಯೆಗಳನ್ನು ಬರೆದ ಅನೇಕ ಡೈರಿಗಳನ್ನು ತನಿಖಾಧಿಖಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಡೈರಿಗಳ ಸುಳಿವುಗಳ ಆಧಾರದಲ್ಲಿ ಗೌರಿ ಲಂಕೇಶ್ ಅವರನ್ನು ಗುರಿಯಾಗಿಸಿಕೊಂಡ ಆರೋಪಿ ಸೇರಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಎಸ್‌ಐಟಿಯು ಈ ಹೆಸರುಗಳ ಪಟ್ಟಿಯನ್ನು ತಯಾರಿಸಿ ಅವುಗಳನ್ನು ರಾಜ್ಯ ಮತ್ತು ಕೇಂದ್ರ ತನಿಖಾ ಏಜೆನ್ಸಿಗಳಿಗೆ ನೀಡಿದೆ ಮತ್ತು ಅವರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಆಶಿಸಿದ್ದರು.

ನಾಲ್ವರನ್ನು ಹತ್ಯೆ ಮಾಡಿದ ಗ್ಯಾಂಗ್‌ನ ಇತಿಹಾಸವನ್ನು ನೋಡಿದಾಗ ತಂಡದ ಮೊದಲ ನೇತೃತ್ವ ವಹಿಸಿದ್ದು 2016ರಲ್ಲಿ ನರೇಂದ್ರ ದಾಭೋಲ್ಕರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿಸಲ್ಪಟ್ಟ ವೀರೇಂದ್ರ ತಾವ್ಡೆ. ನಂತರ ಅಮೋಲ್ ಕಾಳೆ ಗ್ಯಾಂಗ್‌ನ್ನು ಮುನ್ನಡೆಸಿದ್ದ. ಇದೀಗ ಆ ಗ್ಯಾಂಗ್ ಕರ್ನಾಟಕದಲ್ಲಿ ಮತ್ತೆರಡು ಹತ್ಯೆ ನಡೆಸಿದೆ.  ಆ ಗ್ಯಾಂಗ್ ಕೂಡ ಬಂಧಿಯಾಗಿದೆ. ಆದರೆ ಈ ಗ್ಯಾಂಗ್ ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಅನೇಕ ಬಾಂಬ್ ಸ್ಫೋಟಗಳನ್ನು ನಡೆಸಿದೆ.  ಅದು ಕೂಡ ಭೇದಿಸಲ್ಪಟ್ಟಿದೆ. ಈ ಹಿಂದಿನ ಗ್ಯಾಂಗ್‌ನಿಂದ ಅನೇಕ ಶಂಕಿತರು ಇಂದಿಗೂ ಕಾಣೆಯಾಗಿದ್ದಾರೆ. ಆದ್ದರಿಂದ ಈ ಹಂತಕರ ಗುಂಪು ಮರುಸಂಘಟನೆಯ ಸಾಧ್ಯತೆಯನ್ನು ಕೂಡ ಅಲ್ಲಗಳೆಯುವಂತಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನು ಓದಿ: ಇಡಿ ಚುನಾವಣೆಗೆ ಹಣ ಹಂಚುತ್ತಿದೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಗಂಭೀರ ಆರೋಪ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...