Homeಮುಖಪುಟಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

- Advertisement -
- Advertisement -

ರಾಜ್ಯದ ಹಲವು ಪ್ರಮುಖ ಸಾಹಿತಿಗಳಿಗೆ, ಬರಹಗಾರರಿಗೆ ಬೆದರಿಕೆ ಪತ್ರ ಬರೆದ ಆರೋಪಿಯನ್ನು ಕರ್ನಾಟಕ ಪೊಲೀಸರು ಸೆಪ್ಟೆಂಬರ್‌ನಲ್ಲಿ ಬಂಧಿಸಿದ್ದರು. ಬೆದರಿಕೆ ಪತ್ರ ಬರೆದ ಆರೋಪಿ ದಾವಣಗೆರೆ ಮೂಲದ ಶಿವಾಜಿ ರಾವ್ ಜಾಧವ್ (41) ಎಂಬಾತ ಎಂ.ಎಂ ಕಲಬುರ್ಗಿ, ಗೌರಿ ಲಂಕೇಶ್‌ ಹತ್ಯೆಗೈದ ತಂಡಕ್ಕೆ ರಿಕ್ರೂಟರ್ ಆಗಿ ಕೆಲಸ ಮಾಡುತ್ತಿದ್ದ ಸುಜಿತ್ ಕುಮಾರ್‌ ಜೊತೆ ಸಂಪರ್ಕವನ್ನು ಹೊಂದಿದ್ದ ಎನ್ನುವುದು ಬಯಲಾಗದೆ.

ತನಿಖಾ ಸಂಸ್ಥೆಗಳ ಪ್ರಕಾರ, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮೂಲದ ಸುಜಿತ್ ಕುಮಾರ್ ಅಲಿಯಾಸ್ ಪ್ರವೀಣ್ ಅಲಿಯಾಸ್ ಮಂಜುನಾಥ್  ಹೆಚ್ಚಾಗಿ ಹಿಂದುತ್ವ ಗುಂಪುಗಳಲ್ಲಿರುವವರು ಮತ್ತು ಅಪರಾಧಗಳನ್ನು ಮಾಡುವ ಸಾಮರ್ಥ್ಯವಿರುವ ಯುವಕರನ್ನು ಗುರುತಿಸುತ್ತಿದ್ದ. ಬಳಿಕ  ಅವರನ್ನು ಬ್ರೈನ್‌ ವಾಶ್‌ ಮಾಡಿ ಗ್ಯಾಂಗ್‌ಗೆ ಸೇರಿಸಿಕೊಳ್ಳುತ್ತಿದ್ದ.

ಈತ 2013 ಮತ್ತು 2017ರ ನಡುವೆ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ನಾಲ್ವರು ಬರಹಗಾರರು ಮತ್ತು  ಸಾಮಾಜಿಕ ಕಾರ್ಯಕರ್ತರನ್ನು ಹತ್ಯೆಗೈದ ಆರೋಪವಿರುವ ಗೋವಾ ಮೂಲದ ಸನಾತನ ಸಂಸ್ಥೆ ಮತ್ತು ಅದರ ಸಹೋದರ ಸಂಘಟನೆ ಹಿಂದೂ ಜನಜಾಗೃತಿ ಸಮಿತಿಯೊಂದಿಗೆ ಮತ್ತು ಅದರ ನೇತೃತ್ವ ವಹಿಸಿರುವ ಹೆಚ್ಚಿನವರ ಜೊತೆ ಸಂಪರ್ಕ ಹೊಂದಿದ್ದ.

ಗೌರಿ ಲಂಕೇಶ್ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಆತನಿಗೆ ಆರೋಪಿ ಸಂಖ್ಯೆ 13 ಎಂದು ಪಟ್ಟಿ ಮಾಡಲಾಗಿದೆ ಮತ್ತು ಆತ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ. ಗೌರಿ ಲಂಕೇಶ್‌ಗೆ ಶೂಟರ್‌ ಎಂದು ಆರೋಪಿಸಿರುವ ಪರಶುರಾಮ್‌ ವಾಘ್‌ಮೋರೆಯನ್ನು ಕೂಡ ಇದೇ ಸುಜಿತ್‌ ಕುಮಾರ್‌ ನೇಮಕ ಮಾಡಿದ್ದ ಎಂದು ಆರೋಪಿಸಲಾಗಿದೆ.

2018ರಲ್ಲಿ ಸುಜಿತ್ ಕುಮಾರ್ ಬಂಧನದ ಸಮಯದಲ್ಲಿ ವಶಪಡಿಸಿಕೊಂಡ ಡೈರಿಯಲ್ಲಿ ಶಿವಾಜಿ ರಾವ್ ಜಾಧವ್‌ನ ಹೆಸರು ಮತ್ತು ಅವನ ಹಳೆಯ ಫೋನ್ ಸಂಖ್ಯೆ ಕಂಡು ಬಂದಿತ್ತು. ಶಿವಾಜಿ ರಾವ್‌ ಈತನಿಗೆ ಹಲವು ಬಾರಿ ಭೇಟಿಯಾಗಿರುವುದನ್ನು ಆತನ ಫೋಟೊ ನೋಡಿ ಒಪ್ಪಿಕೊಂಡಿದ್ದಾನೆ. ಆತನಿಗೆ ಮಂಜುನಾಥ್ ಎಂಬ ಹೆಸರಿನಿಂದ ತಿಳಿದಿದ್ದೇನೆ ಎಂದು ಹೇಳಿದ್ದಾನೆ ಎಂದು ಕೇಂದ್ರೀಯ ಅಪರಾಧ ವಿಭಾಗದ (CCB) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಜಿತ್ ಕುಮಾರ್‌ನ ಸಂಭಾವ್ಯ ನೇಮಕಾತಿಗಳಲ್ಲಿ ಒಬ್ಬನೆಂದು ಶಿವಾಜಿ ರಾವ್‌ನನ್ನು ಗುರುತಿಸಲಾಗಿದೆ. ಶಿವಾಜಿ ಕೊಲೆಗಳ ಬಗ್ಗೆ ತನಗೆ ತಿಳಿದಿರಲಿಲ್ಲ ಎಂದು ಹೇಳುತ್ತಾನೆ. ಆದರೆ 2018ರಲ್ಲಿ ಸುಜಿತ್‌ನನ್ನು ಎಸ್‌ಐಟಿ ಬಂಧಿಸದಿದ್ದರೆ ಬಹುಶಃ ಅವನು ಶಿವಾಜಿ ರಾವ್‌ನನ್ನು ಮತ್ತಷ್ಟು ಬೆಳೆಸಿರಬಹುದು ಮತ್ತು ಏನಾದರೂ ಅಪರಾಧ ಮಾಡಲು ಅವನನ್ನು ಬಳಸಿಕೊಳ್ಳುವ ಸಾಧ್ಯತೆ ಇತ್ತು ಎಂದು ಅಧಿಕಾರಿ ಹೇಳಿದ್ದಾರೆ.

8ನೇ ತರಗತಿಯನ್ನು ತೊರೆದ ಶಿವಾಜಿ ರಾವ್ ಜಾಧವ್ ದಾವಣಗೆರೆಯ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಯಾಗಿದ್ದಾನೆ. ಪ್ರಿಂಟಿಂಗ್ ಪ್ರೆಸ್‌ನಲ್ಲಿ ಕೆಲಸ ಮಾಡುತ್ತಿದ್ದ ಈತ ಹತ್ತಿರದ ಗ್ರಂಥಾಲಯದಲ್ಲಿ ಪತ್ರಿಕೆಗಳನ್ನು ದಿನನಿತ್ಯ ಓದುತ್ತಿದ್ದ ಜೊತೆಗೆ ಹಿಂದುತ್ವ ಸಿದ್ಧಾಂತವನ್ನು ಮೌಲ್ಯೀಕರಿಸುವ ಪುಸ್ತಕಗಳನ್ನು ಓದುತ್ತಿದ್ದ. ಇದು ಆತನಿಗೆ ಹಲವಾರು ಬರಹಗಾರರಿಗೆ ಬೆದರಿಕೆ ಪತ್ರಗಳನ್ನು ಬರೆಯಲು ಪ್ರೇರೇಪಿಸಿದೆ.

ಈತ ಸಾಹಿತಿಗಳಾದ ವೀರಭದ್ರಪ್ಪ, ಬಿ.ಟಿ. ಲಲಿತಾ ನಾಯಕ್, ವಸುಂಧರಾ ಭೂಪತಿ, ಬಂಜಗೆರೆ ಜಯಪ್ರಕಾಶ್, ಬಿ.ಎಲ್. ವೇಣು ಮತ್ತು ನಿಜಗುಣಾನಂದ ಸ್ವಾಮಿ ಅವರಿಗೆ ಬಂಧನಕ್ಕಿಂತ ಮೊದಲು ಬೆದರಿಕೆ ಪತ್ರವನ್ನು ಬರೆದಿದ್ದ.

ಎಂ.ಎಂ ಕಲ್ಬುರ್ಗಿ ಮಾತ್ರವಲ್ಲದೆ ಗೌರಿ ಲಂಕೇಶ್, ಮಹಾರಾಷ್ಟ್ರದ ನರೇಂದ್ರ ದಾಭೋಲ್ಕರ್ ಮತ್ತು ಗೋವಿಂದ್ ಪನ್ಸಾರೆ ಅವರ ಹತ್ಯೆಯ ಪ್ರಮುಖ ಆರೋಪಿಗಳಾದ ಅಮೋಲ್ ಕಾಳೆ, ಸುಜಿತ್ ಕುಮಾರ್ ಮತ್ತು ಮನೋಹರ್ ಎಡವೆ ಅವರ ಹಿಟ್ ಲಿಸ್ಟ್ ಮತ್ತು ಹೆಸರುಗಳು, ಕೋಡ್ ಹೆಸರುಗಳು ಮತ್ತು ಫೋನ್ ಸಂಖ್ಯೆಗಳನ್ನು ಬರೆದ ಅನೇಕ ಡೈರಿಗಳನ್ನು ತನಿಖಾಧಿಖಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಡೈರಿಗಳ ಸುಳಿವುಗಳ ಆಧಾರದಲ್ಲಿ ಗೌರಿ ಲಂಕೇಶ್ ಅವರನ್ನು ಗುರಿಯಾಗಿಸಿಕೊಂಡ ಆರೋಪಿ ಸೇರಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಎಸ್‌ಐಟಿಯು ಈ ಹೆಸರುಗಳ ಪಟ್ಟಿಯನ್ನು ತಯಾರಿಸಿ ಅವುಗಳನ್ನು ರಾಜ್ಯ ಮತ್ತು ಕೇಂದ್ರ ತನಿಖಾ ಏಜೆನ್ಸಿಗಳಿಗೆ ನೀಡಿದೆ ಮತ್ತು ಅವರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಆಶಿಸಿದ್ದರು.

ನಾಲ್ವರನ್ನು ಹತ್ಯೆ ಮಾಡಿದ ಗ್ಯಾಂಗ್‌ನ ಇತಿಹಾಸವನ್ನು ನೋಡಿದಾಗ ತಂಡದ ಮೊದಲ ನೇತೃತ್ವ ವಹಿಸಿದ್ದು 2016ರಲ್ಲಿ ನರೇಂದ್ರ ದಾಭೋಲ್ಕರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿಸಲ್ಪಟ್ಟ ವೀರೇಂದ್ರ ತಾವ್ಡೆ. ನಂತರ ಅಮೋಲ್ ಕಾಳೆ ಗ್ಯಾಂಗ್‌ನ್ನು ಮುನ್ನಡೆಸಿದ್ದ. ಇದೀಗ ಆ ಗ್ಯಾಂಗ್ ಕರ್ನಾಟಕದಲ್ಲಿ ಮತ್ತೆರಡು ಹತ್ಯೆ ನಡೆಸಿದೆ.  ಆ ಗ್ಯಾಂಗ್ ಕೂಡ ಬಂಧಿಯಾಗಿದೆ. ಆದರೆ ಈ ಗ್ಯಾಂಗ್ ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಅನೇಕ ಬಾಂಬ್ ಸ್ಫೋಟಗಳನ್ನು ನಡೆಸಿದೆ.  ಅದು ಕೂಡ ಭೇದಿಸಲ್ಪಟ್ಟಿದೆ. ಈ ಹಿಂದಿನ ಗ್ಯಾಂಗ್‌ನಿಂದ ಅನೇಕ ಶಂಕಿತರು ಇಂದಿಗೂ ಕಾಣೆಯಾಗಿದ್ದಾರೆ. ಆದ್ದರಿಂದ ಈ ಹಂತಕರ ಗುಂಪು ಮರುಸಂಘಟನೆಯ ಸಾಧ್ಯತೆಯನ್ನು ಕೂಡ ಅಲ್ಲಗಳೆಯುವಂತಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನು ಓದಿ: ಇಡಿ ಚುನಾವಣೆಗೆ ಹಣ ಹಂಚುತ್ತಿದೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಗಂಭೀರ ಆರೋಪ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...