Homeಮುಖಪುಟಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

- Advertisement -
- Advertisement -

ರಾಜ್ಯದ ಹಲವು ಪ್ರಮುಖ ಸಾಹಿತಿಗಳಿಗೆ, ಬರಹಗಾರರಿಗೆ ಬೆದರಿಕೆ ಪತ್ರ ಬರೆದ ಆರೋಪಿಯನ್ನು ಕರ್ನಾಟಕ ಪೊಲೀಸರು ಸೆಪ್ಟೆಂಬರ್‌ನಲ್ಲಿ ಬಂಧಿಸಿದ್ದರು. ಬೆದರಿಕೆ ಪತ್ರ ಬರೆದ ಆರೋಪಿ ದಾವಣಗೆರೆ ಮೂಲದ ಶಿವಾಜಿ ರಾವ್ ಜಾಧವ್ (41) ಎಂಬಾತ ಎಂ.ಎಂ ಕಲಬುರ್ಗಿ, ಗೌರಿ ಲಂಕೇಶ್‌ ಹತ್ಯೆಗೈದ ತಂಡಕ್ಕೆ ರಿಕ್ರೂಟರ್ ಆಗಿ ಕೆಲಸ ಮಾಡುತ್ತಿದ್ದ ಸುಜಿತ್ ಕುಮಾರ್‌ ಜೊತೆ ಸಂಪರ್ಕವನ್ನು ಹೊಂದಿದ್ದ ಎನ್ನುವುದು ಬಯಲಾಗದೆ.

ತನಿಖಾ ಸಂಸ್ಥೆಗಳ ಪ್ರಕಾರ, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮೂಲದ ಸುಜಿತ್ ಕುಮಾರ್ ಅಲಿಯಾಸ್ ಪ್ರವೀಣ್ ಅಲಿಯಾಸ್ ಮಂಜುನಾಥ್  ಹೆಚ್ಚಾಗಿ ಹಿಂದುತ್ವ ಗುಂಪುಗಳಲ್ಲಿರುವವರು ಮತ್ತು ಅಪರಾಧಗಳನ್ನು ಮಾಡುವ ಸಾಮರ್ಥ್ಯವಿರುವ ಯುವಕರನ್ನು ಗುರುತಿಸುತ್ತಿದ್ದ. ಬಳಿಕ  ಅವರನ್ನು ಬ್ರೈನ್‌ ವಾಶ್‌ ಮಾಡಿ ಗ್ಯಾಂಗ್‌ಗೆ ಸೇರಿಸಿಕೊಳ್ಳುತ್ತಿದ್ದ.

ಈತ 2013 ಮತ್ತು 2017ರ ನಡುವೆ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ನಾಲ್ವರು ಬರಹಗಾರರು ಮತ್ತು  ಸಾಮಾಜಿಕ ಕಾರ್ಯಕರ್ತರನ್ನು ಹತ್ಯೆಗೈದ ಆರೋಪವಿರುವ ಗೋವಾ ಮೂಲದ ಸನಾತನ ಸಂಸ್ಥೆ ಮತ್ತು ಅದರ ಸಹೋದರ ಸಂಘಟನೆ ಹಿಂದೂ ಜನಜಾಗೃತಿ ಸಮಿತಿಯೊಂದಿಗೆ ಮತ್ತು ಅದರ ನೇತೃತ್ವ ವಹಿಸಿರುವ ಹೆಚ್ಚಿನವರ ಜೊತೆ ಸಂಪರ್ಕ ಹೊಂದಿದ್ದ.

ಗೌರಿ ಲಂಕೇಶ್ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಆತನಿಗೆ ಆರೋಪಿ ಸಂಖ್ಯೆ 13 ಎಂದು ಪಟ್ಟಿ ಮಾಡಲಾಗಿದೆ ಮತ್ತು ಆತ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ. ಗೌರಿ ಲಂಕೇಶ್‌ಗೆ ಶೂಟರ್‌ ಎಂದು ಆರೋಪಿಸಿರುವ ಪರಶುರಾಮ್‌ ವಾಘ್‌ಮೋರೆಯನ್ನು ಕೂಡ ಇದೇ ಸುಜಿತ್‌ ಕುಮಾರ್‌ ನೇಮಕ ಮಾಡಿದ್ದ ಎಂದು ಆರೋಪಿಸಲಾಗಿದೆ.

2018ರಲ್ಲಿ ಸುಜಿತ್ ಕುಮಾರ್ ಬಂಧನದ ಸಮಯದಲ್ಲಿ ವಶಪಡಿಸಿಕೊಂಡ ಡೈರಿಯಲ್ಲಿ ಶಿವಾಜಿ ರಾವ್ ಜಾಧವ್‌ನ ಹೆಸರು ಮತ್ತು ಅವನ ಹಳೆಯ ಫೋನ್ ಸಂಖ್ಯೆ ಕಂಡು ಬಂದಿತ್ತು. ಶಿವಾಜಿ ರಾವ್‌ ಈತನಿಗೆ ಹಲವು ಬಾರಿ ಭೇಟಿಯಾಗಿರುವುದನ್ನು ಆತನ ಫೋಟೊ ನೋಡಿ ಒಪ್ಪಿಕೊಂಡಿದ್ದಾನೆ. ಆತನಿಗೆ ಮಂಜುನಾಥ್ ಎಂಬ ಹೆಸರಿನಿಂದ ತಿಳಿದಿದ್ದೇನೆ ಎಂದು ಹೇಳಿದ್ದಾನೆ ಎಂದು ಕೇಂದ್ರೀಯ ಅಪರಾಧ ವಿಭಾಗದ (CCB) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಜಿತ್ ಕುಮಾರ್‌ನ ಸಂಭಾವ್ಯ ನೇಮಕಾತಿಗಳಲ್ಲಿ ಒಬ್ಬನೆಂದು ಶಿವಾಜಿ ರಾವ್‌ನನ್ನು ಗುರುತಿಸಲಾಗಿದೆ. ಶಿವಾಜಿ ಕೊಲೆಗಳ ಬಗ್ಗೆ ತನಗೆ ತಿಳಿದಿರಲಿಲ್ಲ ಎಂದು ಹೇಳುತ್ತಾನೆ. ಆದರೆ 2018ರಲ್ಲಿ ಸುಜಿತ್‌ನನ್ನು ಎಸ್‌ಐಟಿ ಬಂಧಿಸದಿದ್ದರೆ ಬಹುಶಃ ಅವನು ಶಿವಾಜಿ ರಾವ್‌ನನ್ನು ಮತ್ತಷ್ಟು ಬೆಳೆಸಿರಬಹುದು ಮತ್ತು ಏನಾದರೂ ಅಪರಾಧ ಮಾಡಲು ಅವನನ್ನು ಬಳಸಿಕೊಳ್ಳುವ ಸಾಧ್ಯತೆ ಇತ್ತು ಎಂದು ಅಧಿಕಾರಿ ಹೇಳಿದ್ದಾರೆ.

8ನೇ ತರಗತಿಯನ್ನು ತೊರೆದ ಶಿವಾಜಿ ರಾವ್ ಜಾಧವ್ ದಾವಣಗೆರೆಯ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಯಾಗಿದ್ದಾನೆ. ಪ್ರಿಂಟಿಂಗ್ ಪ್ರೆಸ್‌ನಲ್ಲಿ ಕೆಲಸ ಮಾಡುತ್ತಿದ್ದ ಈತ ಹತ್ತಿರದ ಗ್ರಂಥಾಲಯದಲ್ಲಿ ಪತ್ರಿಕೆಗಳನ್ನು ದಿನನಿತ್ಯ ಓದುತ್ತಿದ್ದ ಜೊತೆಗೆ ಹಿಂದುತ್ವ ಸಿದ್ಧಾಂತವನ್ನು ಮೌಲ್ಯೀಕರಿಸುವ ಪುಸ್ತಕಗಳನ್ನು ಓದುತ್ತಿದ್ದ. ಇದು ಆತನಿಗೆ ಹಲವಾರು ಬರಹಗಾರರಿಗೆ ಬೆದರಿಕೆ ಪತ್ರಗಳನ್ನು ಬರೆಯಲು ಪ್ರೇರೇಪಿಸಿದೆ.

ಈತ ಸಾಹಿತಿಗಳಾದ ವೀರಭದ್ರಪ್ಪ, ಬಿ.ಟಿ. ಲಲಿತಾ ನಾಯಕ್, ವಸುಂಧರಾ ಭೂಪತಿ, ಬಂಜಗೆರೆ ಜಯಪ್ರಕಾಶ್, ಬಿ.ಎಲ್. ವೇಣು ಮತ್ತು ನಿಜಗುಣಾನಂದ ಸ್ವಾಮಿ ಅವರಿಗೆ ಬಂಧನಕ್ಕಿಂತ ಮೊದಲು ಬೆದರಿಕೆ ಪತ್ರವನ್ನು ಬರೆದಿದ್ದ.

ಎಂ.ಎಂ ಕಲ್ಬುರ್ಗಿ ಮಾತ್ರವಲ್ಲದೆ ಗೌರಿ ಲಂಕೇಶ್, ಮಹಾರಾಷ್ಟ್ರದ ನರೇಂದ್ರ ದಾಭೋಲ್ಕರ್ ಮತ್ತು ಗೋವಿಂದ್ ಪನ್ಸಾರೆ ಅವರ ಹತ್ಯೆಯ ಪ್ರಮುಖ ಆರೋಪಿಗಳಾದ ಅಮೋಲ್ ಕಾಳೆ, ಸುಜಿತ್ ಕುಮಾರ್ ಮತ್ತು ಮನೋಹರ್ ಎಡವೆ ಅವರ ಹಿಟ್ ಲಿಸ್ಟ್ ಮತ್ತು ಹೆಸರುಗಳು, ಕೋಡ್ ಹೆಸರುಗಳು ಮತ್ತು ಫೋನ್ ಸಂಖ್ಯೆಗಳನ್ನು ಬರೆದ ಅನೇಕ ಡೈರಿಗಳನ್ನು ತನಿಖಾಧಿಖಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಡೈರಿಗಳ ಸುಳಿವುಗಳ ಆಧಾರದಲ್ಲಿ ಗೌರಿ ಲಂಕೇಶ್ ಅವರನ್ನು ಗುರಿಯಾಗಿಸಿಕೊಂಡ ಆರೋಪಿ ಸೇರಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಎಸ್‌ಐಟಿಯು ಈ ಹೆಸರುಗಳ ಪಟ್ಟಿಯನ್ನು ತಯಾರಿಸಿ ಅವುಗಳನ್ನು ರಾಜ್ಯ ಮತ್ತು ಕೇಂದ್ರ ತನಿಖಾ ಏಜೆನ್ಸಿಗಳಿಗೆ ನೀಡಿದೆ ಮತ್ತು ಅವರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಆಶಿಸಿದ್ದರು.

ನಾಲ್ವರನ್ನು ಹತ್ಯೆ ಮಾಡಿದ ಗ್ಯಾಂಗ್‌ನ ಇತಿಹಾಸವನ್ನು ನೋಡಿದಾಗ ತಂಡದ ಮೊದಲ ನೇತೃತ್ವ ವಹಿಸಿದ್ದು 2016ರಲ್ಲಿ ನರೇಂದ್ರ ದಾಭೋಲ್ಕರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿಸಲ್ಪಟ್ಟ ವೀರೇಂದ್ರ ತಾವ್ಡೆ. ನಂತರ ಅಮೋಲ್ ಕಾಳೆ ಗ್ಯಾಂಗ್‌ನ್ನು ಮುನ್ನಡೆಸಿದ್ದ. ಇದೀಗ ಆ ಗ್ಯಾಂಗ್ ಕರ್ನಾಟಕದಲ್ಲಿ ಮತ್ತೆರಡು ಹತ್ಯೆ ನಡೆಸಿದೆ.  ಆ ಗ್ಯಾಂಗ್ ಕೂಡ ಬಂಧಿಯಾಗಿದೆ. ಆದರೆ ಈ ಗ್ಯಾಂಗ್ ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಅನೇಕ ಬಾಂಬ್ ಸ್ಫೋಟಗಳನ್ನು ನಡೆಸಿದೆ.  ಅದು ಕೂಡ ಭೇದಿಸಲ್ಪಟ್ಟಿದೆ. ಈ ಹಿಂದಿನ ಗ್ಯಾಂಗ್‌ನಿಂದ ಅನೇಕ ಶಂಕಿತರು ಇಂದಿಗೂ ಕಾಣೆಯಾಗಿದ್ದಾರೆ. ಆದ್ದರಿಂದ ಈ ಹಂತಕರ ಗುಂಪು ಮರುಸಂಘಟನೆಯ ಸಾಧ್ಯತೆಯನ್ನು ಕೂಡ ಅಲ್ಲಗಳೆಯುವಂತಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನು ಓದಿ: ಇಡಿ ಚುನಾವಣೆಗೆ ಹಣ ಹಂಚುತ್ತಿದೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಗಂಭೀರ ಆರೋಪ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...