Homeಮುಖಪುಟಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

- Advertisement -
- Advertisement -

ರಾಜ್ಯದ ಹಲವು ಪ್ರಮುಖ ಸಾಹಿತಿಗಳಿಗೆ, ಬರಹಗಾರರಿಗೆ ಬೆದರಿಕೆ ಪತ್ರ ಬರೆದ ಆರೋಪಿಯನ್ನು ಕರ್ನಾಟಕ ಪೊಲೀಸರು ಸೆಪ್ಟೆಂಬರ್‌ನಲ್ಲಿ ಬಂಧಿಸಿದ್ದರು. ಬೆದರಿಕೆ ಪತ್ರ ಬರೆದ ಆರೋಪಿ ದಾವಣಗೆರೆ ಮೂಲದ ಶಿವಾಜಿ ರಾವ್ ಜಾಧವ್ (41) ಎಂಬಾತ ಎಂ.ಎಂ ಕಲಬುರ್ಗಿ, ಗೌರಿ ಲಂಕೇಶ್‌ ಹತ್ಯೆಗೈದ ತಂಡಕ್ಕೆ ರಿಕ್ರೂಟರ್ ಆಗಿ ಕೆಲಸ ಮಾಡುತ್ತಿದ್ದ ಸುಜಿತ್ ಕುಮಾರ್‌ ಜೊತೆ ಸಂಪರ್ಕವನ್ನು ಹೊಂದಿದ್ದ ಎನ್ನುವುದು ಬಯಲಾಗದೆ.

ತನಿಖಾ ಸಂಸ್ಥೆಗಳ ಪ್ರಕಾರ, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮೂಲದ ಸುಜಿತ್ ಕುಮಾರ್ ಅಲಿಯಾಸ್ ಪ್ರವೀಣ್ ಅಲಿಯಾಸ್ ಮಂಜುನಾಥ್  ಹೆಚ್ಚಾಗಿ ಹಿಂದುತ್ವ ಗುಂಪುಗಳಲ್ಲಿರುವವರು ಮತ್ತು ಅಪರಾಧಗಳನ್ನು ಮಾಡುವ ಸಾಮರ್ಥ್ಯವಿರುವ ಯುವಕರನ್ನು ಗುರುತಿಸುತ್ತಿದ್ದ. ಬಳಿಕ  ಅವರನ್ನು ಬ್ರೈನ್‌ ವಾಶ್‌ ಮಾಡಿ ಗ್ಯಾಂಗ್‌ಗೆ ಸೇರಿಸಿಕೊಳ್ಳುತ್ತಿದ್ದ.

ಈತ 2013 ಮತ್ತು 2017ರ ನಡುವೆ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ನಾಲ್ವರು ಬರಹಗಾರರು ಮತ್ತು  ಸಾಮಾಜಿಕ ಕಾರ್ಯಕರ್ತರನ್ನು ಹತ್ಯೆಗೈದ ಆರೋಪವಿರುವ ಗೋವಾ ಮೂಲದ ಸನಾತನ ಸಂಸ್ಥೆ ಮತ್ತು ಅದರ ಸಹೋದರ ಸಂಘಟನೆ ಹಿಂದೂ ಜನಜಾಗೃತಿ ಸಮಿತಿಯೊಂದಿಗೆ ಮತ್ತು ಅದರ ನೇತೃತ್ವ ವಹಿಸಿರುವ ಹೆಚ್ಚಿನವರ ಜೊತೆ ಸಂಪರ್ಕ ಹೊಂದಿದ್ದ.

ಗೌರಿ ಲಂಕೇಶ್ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಆತನಿಗೆ ಆರೋಪಿ ಸಂಖ್ಯೆ 13 ಎಂದು ಪಟ್ಟಿ ಮಾಡಲಾಗಿದೆ ಮತ್ತು ಆತ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ. ಗೌರಿ ಲಂಕೇಶ್‌ಗೆ ಶೂಟರ್‌ ಎಂದು ಆರೋಪಿಸಿರುವ ಪರಶುರಾಮ್‌ ವಾಘ್‌ಮೋರೆಯನ್ನು ಕೂಡ ಇದೇ ಸುಜಿತ್‌ ಕುಮಾರ್‌ ನೇಮಕ ಮಾಡಿದ್ದ ಎಂದು ಆರೋಪಿಸಲಾಗಿದೆ.

2018ರಲ್ಲಿ ಸುಜಿತ್ ಕುಮಾರ್ ಬಂಧನದ ಸಮಯದಲ್ಲಿ ವಶಪಡಿಸಿಕೊಂಡ ಡೈರಿಯಲ್ಲಿ ಶಿವಾಜಿ ರಾವ್ ಜಾಧವ್‌ನ ಹೆಸರು ಮತ್ತು ಅವನ ಹಳೆಯ ಫೋನ್ ಸಂಖ್ಯೆ ಕಂಡು ಬಂದಿತ್ತು. ಶಿವಾಜಿ ರಾವ್‌ ಈತನಿಗೆ ಹಲವು ಬಾರಿ ಭೇಟಿಯಾಗಿರುವುದನ್ನು ಆತನ ಫೋಟೊ ನೋಡಿ ಒಪ್ಪಿಕೊಂಡಿದ್ದಾನೆ. ಆತನಿಗೆ ಮಂಜುನಾಥ್ ಎಂಬ ಹೆಸರಿನಿಂದ ತಿಳಿದಿದ್ದೇನೆ ಎಂದು ಹೇಳಿದ್ದಾನೆ ಎಂದು ಕೇಂದ್ರೀಯ ಅಪರಾಧ ವಿಭಾಗದ (CCB) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಜಿತ್ ಕುಮಾರ್‌ನ ಸಂಭಾವ್ಯ ನೇಮಕಾತಿಗಳಲ್ಲಿ ಒಬ್ಬನೆಂದು ಶಿವಾಜಿ ರಾವ್‌ನನ್ನು ಗುರುತಿಸಲಾಗಿದೆ. ಶಿವಾಜಿ ಕೊಲೆಗಳ ಬಗ್ಗೆ ತನಗೆ ತಿಳಿದಿರಲಿಲ್ಲ ಎಂದು ಹೇಳುತ್ತಾನೆ. ಆದರೆ 2018ರಲ್ಲಿ ಸುಜಿತ್‌ನನ್ನು ಎಸ್‌ಐಟಿ ಬಂಧಿಸದಿದ್ದರೆ ಬಹುಶಃ ಅವನು ಶಿವಾಜಿ ರಾವ್‌ನನ್ನು ಮತ್ತಷ್ಟು ಬೆಳೆಸಿರಬಹುದು ಮತ್ತು ಏನಾದರೂ ಅಪರಾಧ ಮಾಡಲು ಅವನನ್ನು ಬಳಸಿಕೊಳ್ಳುವ ಸಾಧ್ಯತೆ ಇತ್ತು ಎಂದು ಅಧಿಕಾರಿ ಹೇಳಿದ್ದಾರೆ.

8ನೇ ತರಗತಿಯನ್ನು ತೊರೆದ ಶಿವಾಜಿ ರಾವ್ ಜಾಧವ್ ದಾವಣಗೆರೆಯ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಯಾಗಿದ್ದಾನೆ. ಪ್ರಿಂಟಿಂಗ್ ಪ್ರೆಸ್‌ನಲ್ಲಿ ಕೆಲಸ ಮಾಡುತ್ತಿದ್ದ ಈತ ಹತ್ತಿರದ ಗ್ರಂಥಾಲಯದಲ್ಲಿ ಪತ್ರಿಕೆಗಳನ್ನು ದಿನನಿತ್ಯ ಓದುತ್ತಿದ್ದ ಜೊತೆಗೆ ಹಿಂದುತ್ವ ಸಿದ್ಧಾಂತವನ್ನು ಮೌಲ್ಯೀಕರಿಸುವ ಪುಸ್ತಕಗಳನ್ನು ಓದುತ್ತಿದ್ದ. ಇದು ಆತನಿಗೆ ಹಲವಾರು ಬರಹಗಾರರಿಗೆ ಬೆದರಿಕೆ ಪತ್ರಗಳನ್ನು ಬರೆಯಲು ಪ್ರೇರೇಪಿಸಿದೆ.

ಈತ ಸಾಹಿತಿಗಳಾದ ವೀರಭದ್ರಪ್ಪ, ಬಿ.ಟಿ. ಲಲಿತಾ ನಾಯಕ್, ವಸುಂಧರಾ ಭೂಪತಿ, ಬಂಜಗೆರೆ ಜಯಪ್ರಕಾಶ್, ಬಿ.ಎಲ್. ವೇಣು ಮತ್ತು ನಿಜಗುಣಾನಂದ ಸ್ವಾಮಿ ಅವರಿಗೆ ಬಂಧನಕ್ಕಿಂತ ಮೊದಲು ಬೆದರಿಕೆ ಪತ್ರವನ್ನು ಬರೆದಿದ್ದ.

ಎಂ.ಎಂ ಕಲ್ಬುರ್ಗಿ ಮಾತ್ರವಲ್ಲದೆ ಗೌರಿ ಲಂಕೇಶ್, ಮಹಾರಾಷ್ಟ್ರದ ನರೇಂದ್ರ ದಾಭೋಲ್ಕರ್ ಮತ್ತು ಗೋವಿಂದ್ ಪನ್ಸಾರೆ ಅವರ ಹತ್ಯೆಯ ಪ್ರಮುಖ ಆರೋಪಿಗಳಾದ ಅಮೋಲ್ ಕಾಳೆ, ಸುಜಿತ್ ಕುಮಾರ್ ಮತ್ತು ಮನೋಹರ್ ಎಡವೆ ಅವರ ಹಿಟ್ ಲಿಸ್ಟ್ ಮತ್ತು ಹೆಸರುಗಳು, ಕೋಡ್ ಹೆಸರುಗಳು ಮತ್ತು ಫೋನ್ ಸಂಖ್ಯೆಗಳನ್ನು ಬರೆದ ಅನೇಕ ಡೈರಿಗಳನ್ನು ತನಿಖಾಧಿಖಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಡೈರಿಗಳ ಸುಳಿವುಗಳ ಆಧಾರದಲ್ಲಿ ಗೌರಿ ಲಂಕೇಶ್ ಅವರನ್ನು ಗುರಿಯಾಗಿಸಿಕೊಂಡ ಆರೋಪಿ ಸೇರಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಎಸ್‌ಐಟಿಯು ಈ ಹೆಸರುಗಳ ಪಟ್ಟಿಯನ್ನು ತಯಾರಿಸಿ ಅವುಗಳನ್ನು ರಾಜ್ಯ ಮತ್ತು ಕೇಂದ್ರ ತನಿಖಾ ಏಜೆನ್ಸಿಗಳಿಗೆ ನೀಡಿದೆ ಮತ್ತು ಅವರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಆಶಿಸಿದ್ದರು.

ನಾಲ್ವರನ್ನು ಹತ್ಯೆ ಮಾಡಿದ ಗ್ಯಾಂಗ್‌ನ ಇತಿಹಾಸವನ್ನು ನೋಡಿದಾಗ ತಂಡದ ಮೊದಲ ನೇತೃತ್ವ ವಹಿಸಿದ್ದು 2016ರಲ್ಲಿ ನರೇಂದ್ರ ದಾಭೋಲ್ಕರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿಸಲ್ಪಟ್ಟ ವೀರೇಂದ್ರ ತಾವ್ಡೆ. ನಂತರ ಅಮೋಲ್ ಕಾಳೆ ಗ್ಯಾಂಗ್‌ನ್ನು ಮುನ್ನಡೆಸಿದ್ದ. ಇದೀಗ ಆ ಗ್ಯಾಂಗ್ ಕರ್ನಾಟಕದಲ್ಲಿ ಮತ್ತೆರಡು ಹತ್ಯೆ ನಡೆಸಿದೆ.  ಆ ಗ್ಯಾಂಗ್ ಕೂಡ ಬಂಧಿಯಾಗಿದೆ. ಆದರೆ ಈ ಗ್ಯಾಂಗ್ ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಅನೇಕ ಬಾಂಬ್ ಸ್ಫೋಟಗಳನ್ನು ನಡೆಸಿದೆ.  ಅದು ಕೂಡ ಭೇದಿಸಲ್ಪಟ್ಟಿದೆ. ಈ ಹಿಂದಿನ ಗ್ಯಾಂಗ್‌ನಿಂದ ಅನೇಕ ಶಂಕಿತರು ಇಂದಿಗೂ ಕಾಣೆಯಾಗಿದ್ದಾರೆ. ಆದ್ದರಿಂದ ಈ ಹಂತಕರ ಗುಂಪು ಮರುಸಂಘಟನೆಯ ಸಾಧ್ಯತೆಯನ್ನು ಕೂಡ ಅಲ್ಲಗಳೆಯುವಂತಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನು ಓದಿ: ಇಡಿ ಚುನಾವಣೆಗೆ ಹಣ ಹಂಚುತ್ತಿದೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಗಂಭೀರ ಆರೋಪ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...