Homeಮುಖಪುಟಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

- Advertisement -
- Advertisement -

ರಾಜ್ಯದ ಹಲವು ಪ್ರಮುಖ ಸಾಹಿತಿಗಳಿಗೆ, ಬರಹಗಾರರಿಗೆ ಬೆದರಿಕೆ ಪತ್ರ ಬರೆದ ಆರೋಪಿಯನ್ನು ಕರ್ನಾಟಕ ಪೊಲೀಸರು ಸೆಪ್ಟೆಂಬರ್‌ನಲ್ಲಿ ಬಂಧಿಸಿದ್ದರು. ಬೆದರಿಕೆ ಪತ್ರ ಬರೆದ ಆರೋಪಿ ದಾವಣಗೆರೆ ಮೂಲದ ಶಿವಾಜಿ ರಾವ್ ಜಾಧವ್ (41) ಎಂಬಾತ ಎಂ.ಎಂ ಕಲಬುರ್ಗಿ, ಗೌರಿ ಲಂಕೇಶ್‌ ಹತ್ಯೆಗೈದ ತಂಡಕ್ಕೆ ರಿಕ್ರೂಟರ್ ಆಗಿ ಕೆಲಸ ಮಾಡುತ್ತಿದ್ದ ಸುಜಿತ್ ಕುಮಾರ್‌ ಜೊತೆ ಸಂಪರ್ಕವನ್ನು ಹೊಂದಿದ್ದ ಎನ್ನುವುದು ಬಯಲಾಗದೆ.

ತನಿಖಾ ಸಂಸ್ಥೆಗಳ ಪ್ರಕಾರ, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮೂಲದ ಸುಜಿತ್ ಕುಮಾರ್ ಅಲಿಯಾಸ್ ಪ್ರವೀಣ್ ಅಲಿಯಾಸ್ ಮಂಜುನಾಥ್  ಹೆಚ್ಚಾಗಿ ಹಿಂದುತ್ವ ಗುಂಪುಗಳಲ್ಲಿರುವವರು ಮತ್ತು ಅಪರಾಧಗಳನ್ನು ಮಾಡುವ ಸಾಮರ್ಥ್ಯವಿರುವ ಯುವಕರನ್ನು ಗುರುತಿಸುತ್ತಿದ್ದ. ಬಳಿಕ  ಅವರನ್ನು ಬ್ರೈನ್‌ ವಾಶ್‌ ಮಾಡಿ ಗ್ಯಾಂಗ್‌ಗೆ ಸೇರಿಸಿಕೊಳ್ಳುತ್ತಿದ್ದ.

ಈತ 2013 ಮತ್ತು 2017ರ ನಡುವೆ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ನಾಲ್ವರು ಬರಹಗಾರರು ಮತ್ತು  ಸಾಮಾಜಿಕ ಕಾರ್ಯಕರ್ತರನ್ನು ಹತ್ಯೆಗೈದ ಆರೋಪವಿರುವ ಗೋವಾ ಮೂಲದ ಸನಾತನ ಸಂಸ್ಥೆ ಮತ್ತು ಅದರ ಸಹೋದರ ಸಂಘಟನೆ ಹಿಂದೂ ಜನಜಾಗೃತಿ ಸಮಿತಿಯೊಂದಿಗೆ ಮತ್ತು ಅದರ ನೇತೃತ್ವ ವಹಿಸಿರುವ ಹೆಚ್ಚಿನವರ ಜೊತೆ ಸಂಪರ್ಕ ಹೊಂದಿದ್ದ.

ಗೌರಿ ಲಂಕೇಶ್ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಆತನಿಗೆ ಆರೋಪಿ ಸಂಖ್ಯೆ 13 ಎಂದು ಪಟ್ಟಿ ಮಾಡಲಾಗಿದೆ ಮತ್ತು ಆತ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ. ಗೌರಿ ಲಂಕೇಶ್‌ಗೆ ಶೂಟರ್‌ ಎಂದು ಆರೋಪಿಸಿರುವ ಪರಶುರಾಮ್‌ ವಾಘ್‌ಮೋರೆಯನ್ನು ಕೂಡ ಇದೇ ಸುಜಿತ್‌ ಕುಮಾರ್‌ ನೇಮಕ ಮಾಡಿದ್ದ ಎಂದು ಆರೋಪಿಸಲಾಗಿದೆ.

2018ರಲ್ಲಿ ಸುಜಿತ್ ಕುಮಾರ್ ಬಂಧನದ ಸಮಯದಲ್ಲಿ ವಶಪಡಿಸಿಕೊಂಡ ಡೈರಿಯಲ್ಲಿ ಶಿವಾಜಿ ರಾವ್ ಜಾಧವ್‌ನ ಹೆಸರು ಮತ್ತು ಅವನ ಹಳೆಯ ಫೋನ್ ಸಂಖ್ಯೆ ಕಂಡು ಬಂದಿತ್ತು. ಶಿವಾಜಿ ರಾವ್‌ ಈತನಿಗೆ ಹಲವು ಬಾರಿ ಭೇಟಿಯಾಗಿರುವುದನ್ನು ಆತನ ಫೋಟೊ ನೋಡಿ ಒಪ್ಪಿಕೊಂಡಿದ್ದಾನೆ. ಆತನಿಗೆ ಮಂಜುನಾಥ್ ಎಂಬ ಹೆಸರಿನಿಂದ ತಿಳಿದಿದ್ದೇನೆ ಎಂದು ಹೇಳಿದ್ದಾನೆ ಎಂದು ಕೇಂದ್ರೀಯ ಅಪರಾಧ ವಿಭಾಗದ (CCB) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಜಿತ್ ಕುಮಾರ್‌ನ ಸಂಭಾವ್ಯ ನೇಮಕಾತಿಗಳಲ್ಲಿ ಒಬ್ಬನೆಂದು ಶಿವಾಜಿ ರಾವ್‌ನನ್ನು ಗುರುತಿಸಲಾಗಿದೆ. ಶಿವಾಜಿ ಕೊಲೆಗಳ ಬಗ್ಗೆ ತನಗೆ ತಿಳಿದಿರಲಿಲ್ಲ ಎಂದು ಹೇಳುತ್ತಾನೆ. ಆದರೆ 2018ರಲ್ಲಿ ಸುಜಿತ್‌ನನ್ನು ಎಸ್‌ಐಟಿ ಬಂಧಿಸದಿದ್ದರೆ ಬಹುಶಃ ಅವನು ಶಿವಾಜಿ ರಾವ್‌ನನ್ನು ಮತ್ತಷ್ಟು ಬೆಳೆಸಿರಬಹುದು ಮತ್ತು ಏನಾದರೂ ಅಪರಾಧ ಮಾಡಲು ಅವನನ್ನು ಬಳಸಿಕೊಳ್ಳುವ ಸಾಧ್ಯತೆ ಇತ್ತು ಎಂದು ಅಧಿಕಾರಿ ಹೇಳಿದ್ದಾರೆ.

8ನೇ ತರಗತಿಯನ್ನು ತೊರೆದ ಶಿವಾಜಿ ರಾವ್ ಜಾಧವ್ ದಾವಣಗೆರೆಯ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಯಾಗಿದ್ದಾನೆ. ಪ್ರಿಂಟಿಂಗ್ ಪ್ರೆಸ್‌ನಲ್ಲಿ ಕೆಲಸ ಮಾಡುತ್ತಿದ್ದ ಈತ ಹತ್ತಿರದ ಗ್ರಂಥಾಲಯದಲ್ಲಿ ಪತ್ರಿಕೆಗಳನ್ನು ದಿನನಿತ್ಯ ಓದುತ್ತಿದ್ದ ಜೊತೆಗೆ ಹಿಂದುತ್ವ ಸಿದ್ಧಾಂತವನ್ನು ಮೌಲ್ಯೀಕರಿಸುವ ಪುಸ್ತಕಗಳನ್ನು ಓದುತ್ತಿದ್ದ. ಇದು ಆತನಿಗೆ ಹಲವಾರು ಬರಹಗಾರರಿಗೆ ಬೆದರಿಕೆ ಪತ್ರಗಳನ್ನು ಬರೆಯಲು ಪ್ರೇರೇಪಿಸಿದೆ.

ಈತ ಸಾಹಿತಿಗಳಾದ ವೀರಭದ್ರಪ್ಪ, ಬಿ.ಟಿ. ಲಲಿತಾ ನಾಯಕ್, ವಸುಂಧರಾ ಭೂಪತಿ, ಬಂಜಗೆರೆ ಜಯಪ್ರಕಾಶ್, ಬಿ.ಎಲ್. ವೇಣು ಮತ್ತು ನಿಜಗುಣಾನಂದ ಸ್ವಾಮಿ ಅವರಿಗೆ ಬಂಧನಕ್ಕಿಂತ ಮೊದಲು ಬೆದರಿಕೆ ಪತ್ರವನ್ನು ಬರೆದಿದ್ದ.

ಎಂ.ಎಂ ಕಲ್ಬುರ್ಗಿ ಮಾತ್ರವಲ್ಲದೆ ಗೌರಿ ಲಂಕೇಶ್, ಮಹಾರಾಷ್ಟ್ರದ ನರೇಂದ್ರ ದಾಭೋಲ್ಕರ್ ಮತ್ತು ಗೋವಿಂದ್ ಪನ್ಸಾರೆ ಅವರ ಹತ್ಯೆಯ ಪ್ರಮುಖ ಆರೋಪಿಗಳಾದ ಅಮೋಲ್ ಕಾಳೆ, ಸುಜಿತ್ ಕುಮಾರ್ ಮತ್ತು ಮನೋಹರ್ ಎಡವೆ ಅವರ ಹಿಟ್ ಲಿಸ್ಟ್ ಮತ್ತು ಹೆಸರುಗಳು, ಕೋಡ್ ಹೆಸರುಗಳು ಮತ್ತು ಫೋನ್ ಸಂಖ್ಯೆಗಳನ್ನು ಬರೆದ ಅನೇಕ ಡೈರಿಗಳನ್ನು ತನಿಖಾಧಿಖಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಡೈರಿಗಳ ಸುಳಿವುಗಳ ಆಧಾರದಲ್ಲಿ ಗೌರಿ ಲಂಕೇಶ್ ಅವರನ್ನು ಗುರಿಯಾಗಿಸಿಕೊಂಡ ಆರೋಪಿ ಸೇರಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಎಸ್‌ಐಟಿಯು ಈ ಹೆಸರುಗಳ ಪಟ್ಟಿಯನ್ನು ತಯಾರಿಸಿ ಅವುಗಳನ್ನು ರಾಜ್ಯ ಮತ್ತು ಕೇಂದ್ರ ತನಿಖಾ ಏಜೆನ್ಸಿಗಳಿಗೆ ನೀಡಿದೆ ಮತ್ತು ಅವರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಆಶಿಸಿದ್ದರು.

ನಾಲ್ವರನ್ನು ಹತ್ಯೆ ಮಾಡಿದ ಗ್ಯಾಂಗ್‌ನ ಇತಿಹಾಸವನ್ನು ನೋಡಿದಾಗ ತಂಡದ ಮೊದಲ ನೇತೃತ್ವ ವಹಿಸಿದ್ದು 2016ರಲ್ಲಿ ನರೇಂದ್ರ ದಾಭೋಲ್ಕರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿಸಲ್ಪಟ್ಟ ವೀರೇಂದ್ರ ತಾವ್ಡೆ. ನಂತರ ಅಮೋಲ್ ಕಾಳೆ ಗ್ಯಾಂಗ್‌ನ್ನು ಮುನ್ನಡೆಸಿದ್ದ. ಇದೀಗ ಆ ಗ್ಯಾಂಗ್ ಕರ್ನಾಟಕದಲ್ಲಿ ಮತ್ತೆರಡು ಹತ್ಯೆ ನಡೆಸಿದೆ.  ಆ ಗ್ಯಾಂಗ್ ಕೂಡ ಬಂಧಿಯಾಗಿದೆ. ಆದರೆ ಈ ಗ್ಯಾಂಗ್ ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಅನೇಕ ಬಾಂಬ್ ಸ್ಫೋಟಗಳನ್ನು ನಡೆಸಿದೆ.  ಅದು ಕೂಡ ಭೇದಿಸಲ್ಪಟ್ಟಿದೆ. ಈ ಹಿಂದಿನ ಗ್ಯಾಂಗ್‌ನಿಂದ ಅನೇಕ ಶಂಕಿತರು ಇಂದಿಗೂ ಕಾಣೆಯಾಗಿದ್ದಾರೆ. ಆದ್ದರಿಂದ ಈ ಹಂತಕರ ಗುಂಪು ಮರುಸಂಘಟನೆಯ ಸಾಧ್ಯತೆಯನ್ನು ಕೂಡ ಅಲ್ಲಗಳೆಯುವಂತಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನು ಓದಿ: ಇಡಿ ಚುನಾವಣೆಗೆ ಹಣ ಹಂಚುತ್ತಿದೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಗಂಭೀರ ಆರೋಪ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...