Homeಕರ್ನಾಟಕಗೌರಿ ಲಂಕೇಶ್ ದಿನ: ಗೌರಿಯನ್ನು ನೆನೆಯುತ್ತಾ...ಸಾವಿರಾರು ಗೌರಿಯರ ಮಾತುಗಳು...

ಗೌರಿ ಲಂಕೇಶ್ ದಿನ: ಗೌರಿಯನ್ನು ನೆನೆಯುತ್ತಾ…ಸಾವಿರಾರು ಗೌರಿಯರ ಮಾತುಗಳು…

ಇಂದಿನ ಸ್ಥಿತಿಯಲ್ಲಿ ಅಪ್ಪ (ಲಂಕೇಶ್), ಗೌರಿ ಇದ್ದಿದ್ದರೆ ಏನು ಮಾಡುತ್ತಿದ್ದರು ಎಂಬ ಆಲೋಚನೆ ನನ್ನನ್ನು ಸದಾ ಕಾಡುತ್ತದೆ- ಕವಿತಾ ಲಂಕೇಶ್

- Advertisement -
- Advertisement -

ಗೌರಿ ಲಂಕೇಶ್ ಅಮರ್‌ ರಹೇ….ಅಮರ್‌ ರಹೇ…ಅಮರ್‌ ರಹೇ…ಗೌರಿ ಲಂಕೇಶ್ ಆಶಯಗಳನ್ನು ಈಡೇರಿಸೋಣ..ಈಡೇರಿಸೋಣ…ನಾನುಗೌರಿ..ನಾವೇಲ್ಲ ಗೌರಿ…ನೂರು ಗುಂಡುಗಳು ತೂರಿ ಬಂದರೂ ಗುಡು ಗುಡು ಗುಡು ಗುಡುಗುವೆವು…

ಈ ಎಲ್ಲಾ ಘೋಷಣೆಗಳು ಕೇಳಿ ಬಂದಿದ್ದು, ಚಾಮರಾಜಪೇಟೆಯಲ್ಲಿರುವ ಗೌರಿ ಲಂಕೇಶ್‌ರವರ ಸಮಾಧಿ ಬಳಿ…ಹೌದು, ಇಂದು ಹಿಂದೂತ್ವವಾದಿಗಳ ಗುಂಡಿಗೆ ಎದೆಯೊಡ್ಡಿ ಹುತಾತ್ಮರಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಅವರು ನಮ್ಮನ್ನಗಲಿ ನಾಲ್ಕು ವರ್ಷ.

ಗೌರಿ ಲಂಕೇಶ್ ಅವರ ನೆನಪಿನಲ್ಲಿ ಇಂದು (ಸೆಪ್ಟಂಬರ್ 05) ಗೌರಿ ಮೆಮೋರಿಯಲ್ ಟ್ರಸ್ಟ್‌ನಿಂದ ‘ಗೌರಿ ನೆನಹು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹುತಾತ್ಮರಾದ ಗೌರಿ ಲಂಕೇಶ್ ಅವರಿಗೆ ಹೋರಾಟದ ವಂದನೆಗಳನ್ನು ಸಲ್ಲಿಸಲಾಯಿತು.

ಗೌರಿ ನೆನಹುನಲ್ಲಿ ಮಾತನಾಡಿದ ಸಹೋದರಿ ಕವಿತಾ ಲಂಕೇಶ್ ಅವರು, “ಆ ಘಟನೆ ಇನ್ನು ನೆನ್ನೆ, ಮೊನ್ನೆ ಆದ ಹಾಗೆ ಕಣ್ಣ ಮುಂದಿದೆ. ಆಕೆಯ ಹೋರಾಟ ಮುಂದುವರೆಯುತ್ತಿದೆ. ಕಡಿಮೆ ಸ್ಥಳ ಸಿಕ್ಕರೂ ಜನ ಮಾತನಾಡುತ್ತಿದ್ದಾರೆ, ಗೌರಿ ಅಂತಹ ಜನ ಇನ್ನೂ ಇದ್ದಾರಲ್ಲ ಎಂಬುದೇ ಹೆಮ್ಮೆಯ ವಿಷಯ. ಪರಿಸ್ಥಿತಿ ಅಂದಿಗಿಂತಲೂ ಇಂದು ಹೆಚ್ಚು ಹದಗೆಟ್ಟಿದೆ. ಪತ್ರಕರ್ತರ ಮೇಲೆ ಹಲ್ಲೆಗಳಾಗುತ್ತಿವೆ. ಸರ್ಕಾರದ ವಿರುದ್ಧ ಬರೆಯಲಾಗದ ಸ್ಥಿತಿ ತಂದಿದ್ದಾರೆ. ಇಂತ ಸ್ಥಿತಿಯಲ್ಲಿ ಅಪ್ಪ (ಲಂಕೇಶ್), ಗೌರಿ ಇದ್ದಿದ್ದರೇ ಏನು ಮಾಡುತ್ತಿದ್ದರು ಎಂಬ ಆಲೋಚನೆ ನನ್ನನ್ನು ಕಾಡುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಇಂದು ಗೌರಿ ದಿನ: ಗೌರಿ ಲಂಕೇಶ್ ನೆನಪಿನಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಸಂವಾದ ಕಾರ್ಯಕ್ರಮಗಳು

ಹೋರಾಟಗಾರ್ತಿ, ಚಿಂತಕಿ, ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯ್ಕ್ ಮಾತನಾಡಿ, “ಧಾರ್ಮಿಕ ಸಂಘಟನೆಗಳು ಹೆಚ್ಚಾಗಿ ಹೇಗೆ ರಾಜಕೀಯ ಮಾಡುತ್ತಿವೆ ಎಂಬುದನ್ನು ಲಂಕೇಶರು, ಗೌರಿ ಲಂಕೇಶರು ತಮ್ಮ ಬರಹಗಳ ಮೂಲಕ, ಚಿಂತನೆ ಮೂಲಕ ತಮ್ಮದೇ ರೀತಿಯಲ್ಲಿ ತಿಳಿಸಿದ್ದಾರೆ. ಈ ದಿನ ಗೌರಿ ಆಶಯದಲ್ಲಿ ಮುನ್ನಡೆಯುತ್ತಿರುವವರು, ನಾವೆಲ್ಲರೂ ಅದನ್ನು ಪಾಲಿಸಬೇಕಿದೆ. ಅನ್ಯಾಯ ಖಂಡಿಸುವ ಕೆಲಸ ಮಾಡುವವರಿಗೆ ಗುಂಡೇಟು ಬೀಳುವುದು ದುರಂತದ ವಿಷಯ. ಇವತ್ತಿಗೂ ಅದು ಇದೆ. ಅದು ಮುಂದೆಯೂ ಮುಂದುವರೆಯಲಿದೆ. ಆದರೆ, ನಾವ್ಯಾರು ಎದೆಗುಂದಬಾರದು. ಅವರಿದ್ದ ಕಾಲಕ್ಕಿಂತಲೂ ಕೆಟ್ಟ ಕಾಲ ಈಗ ಇದೆ. ಜಾತಿಯತೆ, ಕೋಮುದೌರ್ಜನ್ಯ ಹೆಚ್ಚಾಗುತ್ತಿದೆ. ಮತ್ತೆ ಗೌರಿ, ಲಂಕೇಶ್ ಅವರನ್ನು ನೆನೆಯುತ್ತಾ ಈ ಸವಾಲು ಸ್ವೀಕರಿಸಬೇಕಾಗಿದೆ. ಯಾವುದಕ್ಕೂ ಜಗ್ಗದೆ, ಅನ್ಯಾಯ ಸಹಿಸುವುದಿಲ್ಲ ಎಂಬ ಸಂಕಲ್ಪ ತೆಗೆದುಕೊಳ್ಳಬೇಕಾಗಿದೆ”  ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಗೌರಿ ನೆನಹು ಕಾರ್ಯಕ್ರಮ ಆಯೋಜಿಸಿದ್ದ ಗೌರಿ ಮೆಮೋರಿಯಲ್ ಟ್ರಸ್ಟ್ ಸದಸ್ಯರಾದ ನೂರ್ ಶ್ರೀಧರ್, ಹೇಗೆ ಗೌರಿ ಲಂಕೇಶ್ ಅವರ ಹತ್ಯೆಯಿಂದ ಜನ ಸಿಡಿದೆದ್ದರು ಎಂಬುದನ್ನು ತಿಳಿಸಿದರು.

“ಈ ಹೇಡಿಗಳು ಪನ್ಸಾರೆ, ದಾಬೊಲ್ಕರ್‌ ಅವರನ್ನು ಕೊಂದ ನಂತರ ಕಲ್ಬುರ್ಗಿ ಅವರನ್ನು ಟಾರ್ಗೆಟ್ ಮಾಡಿದರು. ನಂತರ ಗೌರಿ ಅವರನ್ನು ಟಾರ್ಗೆಟ್ ಮಾಡಿದರು. ಹೆಣ್ಣು ಜರ್ನಲಿಸ್ಟ್ ಏನು ಮಾಡಲು ಸಾಧ್ಯ ಎಂದು ಕೊಂಡಿದ್ರು. ಆ ಸಣ್ಣ ದೇಹದಲ್ಲಿನ ಗೌರಿ ಒಂದು ಜೀವ ಸೆಲೆ ಎಂಬುದು ಅವರಿಗೆ ತಿಳಿಯಲಿಲ್ಲ. ಅವರ ದೊಡ್ಡ ತಪ್ಪು ಗೌರಿ ಲಂಕೇಶ್ ಅವರನ್ನು ಟಾರ್ಗೆಟ್ ಮಾಡಿದ್ದು. ಗೌರಿ ಇಷ್ಟು ದೊಡ್ಡ ವ್ಯಕ್ತಿತ್ವ ಎಂಬುದು ಅವರಿಗೆ ತಿಳಿದಿರಲಿಲ್ಲ. ಗೌರಿ ಎಲ್ಲ ಜನರ ಹೃದಯದಲ್ಲಿ ಇದ್ದವರು ಎಂದು ಅವರಿಗೆ ತಿಳಿಯಲಿಲ್ಲ. ಹಾಗಾಗಿ ಅವರು ಗೌರಿ ಅವರ ಎದೆಗೆ ಹೊಡೆದ ಗುಂಡು ದೇಶ, ವಿದೇಶಗಳ ಸಹೃದಯರ ಹೃದಯಗಳಿಗೆ ತಾಗಿತ್ತು. ಅದು ಗೌರಿ ಘರ್ಜನೆಯಾಯಿತು. ಅದು ಭಯದ ಬದಲು ಇನ್ನು ವಿಶ್ವಾಸ, ಹೋರಾಟದ ಸಂಕಲ್ಪಕ್ಕೆ ನಾಂದಿಯಾಯಿತು. ನಾನುಗೌರಿ..ನಾವೆಲ್ಲಾ ಗೌರಿ ಎಂಬುದು ತಾನಾಗೆ ಹುಟ್ಟಿಕೊಂಡ ಒಂದು ಹೋರಾಟವಾಯಿತು” ಎಂದರು.

“ಈ ಘರ್ಜನೆಯಿಂದ ಈ ಹಂತಕರ ಪಡೆಗೆ ಮುಳುವಾಯಿತು. ಅಂದಿನ ಸರ್ಕಾರ ಕೂಡ ಈ ಒತ್ತಡಕ್ಕೆ ಒಳಗಾಗಬೇಕಾಯಿತು. ಸಂಘ ಪರಿವಾರದ ಷಡ್ಯಂತರ ಎಷ್ಟು ಕೆಲಸ ಮಾಡಿದರೂ ಕೂಡ ಆರೋಪಿಗಳನ್ನು ಬಿಡಿಸಲು ಸಾಧ್ಯವಾಗಲಿಲ್ಲ. ಇಂದು ನಮ್ಮನ್ನೆಲ್ಲಾ ಕಾಪಾಡಿದ್ದು ಈ ಗೌರಿ ಘರ್ಜನೆ. ಗೌರಿ ಆಶಯಗಳನ್ನು ಹೊತ್ತ ಗೌರಿ ತಂಡ ಕೆಲಸ ನಿಲ್ಲಿಸಲಿಲ್ಲ. ಕೆಲಸ ಮುಂದುವರೆಸಿದೆ. ಗೌರಿ ಆಶಯಗಳನ್ನು ಮುಂದುವರೆಸಲು ನಾನಾ ರೀತಿಯ ಚಿಂತನೆ ನಡೆಯುತ್ತಿದೆ. ಮುಂದೆ ಪತ್ರಿಕೋದ್ಯಮದಲ್ಲಿ ದಟ್ಟ ಅಲೆ ಸೃಷ್ಟಿಯಾಗಲಿದೆ” ಎಂದು ಗೌರಿ ಮೆಮೋರಿಯಲ್ ಟ್ರಸ್ಟ್ ಸದಸ್ಯರಾದ ನೂರ್ ಶ್ರೀಧರ್ ತಿಳಿಸಿದ್ದಾರೆ.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಮೇಲಿನ KCOCA ಕಾಯ್ದೆ ಕೈಬಿಡದಂತೆ ಸುಪ್ರೀಂ ಆದೇಶ

ಹೋರಾಟಗಾರರಾದ ಮಲ್ಲೂ ಕುಂಬಾರ್‌ ಗೌರಿಯವರನ್ನು ನೆನೆಯುತ್ತಾ, “ಲೈಂಗಿಕ ಅಲ್ಪ ಸಂಖ್ಯಾತರ ಬಗ್ಗೆ ಯಾರು ದನಿ ಎತ್ತದ ಕಾಲದಲ್ಲಿ ತುಂಬಾ ಸೂಕ್ಷ್ಮವಾಗಿ ಮಾತಾಡುತ್ತಿದ್ದವರು ಗೌರಿ. ಗೌರಿ ಕೊಲ್ಲಲ್ಪಟ್ಟಿದ್ದಾಳೆ. ಆದರೆ ಸತ್ತಿಲ್ಲ. ಎಲ್ಲಾ ಶೋಷಿತರು ತಮ್ಮ ಈಗೋಗಳನ್ನು ಬಿಟ್ಟು ಒಂದಾಗಿ ಗೌರಿ ಆಶಯಕ್ಕೆ ಗೌರವ ಸಲ್ಲಿಸಬೇಕಿದೆ” ಎಂದು ಆಗ್ರಹಿಸಿದ್ದಾರೆ.

ಕರ್ನಾಟಕ ಜನಶಕ್ತಿ ಮತ್ತು ಮಹಿಳಾ ಮುನ್ನಡೆ ಕಾರ್ಯಕರ್ತೆ ಚೆನ್ನಮ್ಮ ಮಾತನಾಡುತ್ತಾ, “ಒಂದು ಒಳ್ಳೆ ಬದುಕು ಕಟ್ಟಿ ಕೊಳ್ಳಲು ಸಹಾಯ ಮಾಡಿದವರು ಗೌರಿ ಅವರು. ಒಬ್ಬ ಮಹಿಳೆ ಹೇಗೆ ದಿಟ್ಟವಾಗಿ ಹೋರಾಟ ಮಾಡಬಹುದು ಎಂಬುದಕ್ಕೆ ಆದರ್ಶವಾಗಿದ್ದಾರೆ. ಇಷ್ಟೊಂದು ಎದುರಾಳಿಗಳ ನಡುವೆ ಸತ್ಯವನ್ನು ಬರೆಯಲು ಮನಸ್ಸು ಮಾಡಿದವರು ಅವರು. ಪೆನ್ನಿನ ಮೂಲಕ ಅವರ ತಪ್ಪುಗಳನ್ನು ಹೊರ ಹಾಕವುದನ್ನು ಕಲಿಸಿಕೊಟ್ಟಿದ್ದಾರೆ. ನಗರದಲ್ಲಷ್ಟೇ ಅಲ್ಲ ನಾವು ಹೋಗುವ ಪ್ರತಿ ಹಳ್ಳಿಯ ಜನರ ಮನಸ್ಸಿನಲ್ಲಿಯೂ ಅವರು ಆಳವಾಗಿ ಬೇರೂರಿದ್ದಾರೆ” ಎಂದು ಗೌರಿ ಲಂಕೇಶ್ ಅವರು ಜನರ ಮನಸ್ಸಲ್ಲಿ ವಿಸ್ತರಿಸಿರುವ ಬಗೆಯನ್ನು ವಿವರಿಸಿದ್ದಾರೆ.

ಗೌರಿ ಲಂಕೇಶ್ ಅವರ ತಾಯಿ ಇಂದಿರಾ ಲಂಕೇಶ್, ಸಹೋದರಿ ಕವಿತಾ ಲಂಕೇಶ್, ಗೌರಿ ಮೆಮೋರಿಯಲ್ ಟ್ರಸ್ಟ್‌ ಕಾರ್ಯದರ್ಶಿ ದೀಪು, ಕೆ.ಎಲ್, ಅಶೋಕ್, ಚಿಂತಕರಾದ ಶಿವಸುಂದರ್‌, ಹೋರಾಟಗಾರರಾದ ಸಿರಿಮನೆ ನಾಗರಾಜು, ವಾಸು, ಮಲ್ಲಿಗೆ ಸಿರಿಮನೆ, ಪ್ರೋ. ನಗರಿ ಬಾಬಯ್ಯ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್‌ ಬೆಂಕಿಕೆರೆ, ಹೇಮಂತ್ ಸೇರಿದಂತೆ, ಚಿಂತಕರು ಸಾಮಾಜಿಕ ಹೋರಾಟಗಾರರು ಭಾಗವಹಿಸಿದ್ದರು.

ಇದನ್ನೂ ಓದಿ: ನಾನು ನಾಲ್ಕನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಮಾಧ್ಯಮವನ್ನು ಜನರ ತೆಕ್ಕೆಗೆ ಮರಳಿ ಪಡೆಯುವ ಬಗ್ಗೆ ಎರಡು ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...