Homeಕರ್ನಾಟಕಗೌರಿ ಲಂಕೇಶ್ ದಿನ: ಗೌರಿಯನ್ನು ನೆನೆಯುತ್ತಾ...ಸಾವಿರಾರು ಗೌರಿಯರ ಮಾತುಗಳು...

ಗೌರಿ ಲಂಕೇಶ್ ದಿನ: ಗೌರಿಯನ್ನು ನೆನೆಯುತ್ತಾ…ಸಾವಿರಾರು ಗೌರಿಯರ ಮಾತುಗಳು…

ಇಂದಿನ ಸ್ಥಿತಿಯಲ್ಲಿ ಅಪ್ಪ (ಲಂಕೇಶ್), ಗೌರಿ ಇದ್ದಿದ್ದರೆ ಏನು ಮಾಡುತ್ತಿದ್ದರು ಎಂಬ ಆಲೋಚನೆ ನನ್ನನ್ನು ಸದಾ ಕಾಡುತ್ತದೆ- ಕವಿತಾ ಲಂಕೇಶ್

- Advertisement -
- Advertisement -

ಗೌರಿ ಲಂಕೇಶ್ ಅಮರ್‌ ರಹೇ….ಅಮರ್‌ ರಹೇ…ಅಮರ್‌ ರಹೇ…ಗೌರಿ ಲಂಕೇಶ್ ಆಶಯಗಳನ್ನು ಈಡೇರಿಸೋಣ..ಈಡೇರಿಸೋಣ…ನಾನುಗೌರಿ..ನಾವೇಲ್ಲ ಗೌರಿ…ನೂರು ಗುಂಡುಗಳು ತೂರಿ ಬಂದರೂ ಗುಡು ಗುಡು ಗುಡು ಗುಡುಗುವೆವು…

ಈ ಎಲ್ಲಾ ಘೋಷಣೆಗಳು ಕೇಳಿ ಬಂದಿದ್ದು, ಚಾಮರಾಜಪೇಟೆಯಲ್ಲಿರುವ ಗೌರಿ ಲಂಕೇಶ್‌ರವರ ಸಮಾಧಿ ಬಳಿ…ಹೌದು, ಇಂದು ಹಿಂದೂತ್ವವಾದಿಗಳ ಗುಂಡಿಗೆ ಎದೆಯೊಡ್ಡಿ ಹುತಾತ್ಮರಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಅವರು ನಮ್ಮನ್ನಗಲಿ ನಾಲ್ಕು ವರ್ಷ.

ಗೌರಿ ಲಂಕೇಶ್ ಅವರ ನೆನಪಿನಲ್ಲಿ ಇಂದು (ಸೆಪ್ಟಂಬರ್ 05) ಗೌರಿ ಮೆಮೋರಿಯಲ್ ಟ್ರಸ್ಟ್‌ನಿಂದ ‘ಗೌರಿ ನೆನಹು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹುತಾತ್ಮರಾದ ಗೌರಿ ಲಂಕೇಶ್ ಅವರಿಗೆ ಹೋರಾಟದ ವಂದನೆಗಳನ್ನು ಸಲ್ಲಿಸಲಾಯಿತು.

ಗೌರಿ ನೆನಹುನಲ್ಲಿ ಮಾತನಾಡಿದ ಸಹೋದರಿ ಕವಿತಾ ಲಂಕೇಶ್ ಅವರು, “ಆ ಘಟನೆ ಇನ್ನು ನೆನ್ನೆ, ಮೊನ್ನೆ ಆದ ಹಾಗೆ ಕಣ್ಣ ಮುಂದಿದೆ. ಆಕೆಯ ಹೋರಾಟ ಮುಂದುವರೆಯುತ್ತಿದೆ. ಕಡಿಮೆ ಸ್ಥಳ ಸಿಕ್ಕರೂ ಜನ ಮಾತನಾಡುತ್ತಿದ್ದಾರೆ, ಗೌರಿ ಅಂತಹ ಜನ ಇನ್ನೂ ಇದ್ದಾರಲ್ಲ ಎಂಬುದೇ ಹೆಮ್ಮೆಯ ವಿಷಯ. ಪರಿಸ್ಥಿತಿ ಅಂದಿಗಿಂತಲೂ ಇಂದು ಹೆಚ್ಚು ಹದಗೆಟ್ಟಿದೆ. ಪತ್ರಕರ್ತರ ಮೇಲೆ ಹಲ್ಲೆಗಳಾಗುತ್ತಿವೆ. ಸರ್ಕಾರದ ವಿರುದ್ಧ ಬರೆಯಲಾಗದ ಸ್ಥಿತಿ ತಂದಿದ್ದಾರೆ. ಇಂತ ಸ್ಥಿತಿಯಲ್ಲಿ ಅಪ್ಪ (ಲಂಕೇಶ್), ಗೌರಿ ಇದ್ದಿದ್ದರೇ ಏನು ಮಾಡುತ್ತಿದ್ದರು ಎಂಬ ಆಲೋಚನೆ ನನ್ನನ್ನು ಕಾಡುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಇಂದು ಗೌರಿ ದಿನ: ಗೌರಿ ಲಂಕೇಶ್ ನೆನಪಿನಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಸಂವಾದ ಕಾರ್ಯಕ್ರಮಗಳು

ಹೋರಾಟಗಾರ್ತಿ, ಚಿಂತಕಿ, ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯ್ಕ್ ಮಾತನಾಡಿ, “ಧಾರ್ಮಿಕ ಸಂಘಟನೆಗಳು ಹೆಚ್ಚಾಗಿ ಹೇಗೆ ರಾಜಕೀಯ ಮಾಡುತ್ತಿವೆ ಎಂಬುದನ್ನು ಲಂಕೇಶರು, ಗೌರಿ ಲಂಕೇಶರು ತಮ್ಮ ಬರಹಗಳ ಮೂಲಕ, ಚಿಂತನೆ ಮೂಲಕ ತಮ್ಮದೇ ರೀತಿಯಲ್ಲಿ ತಿಳಿಸಿದ್ದಾರೆ. ಈ ದಿನ ಗೌರಿ ಆಶಯದಲ್ಲಿ ಮುನ್ನಡೆಯುತ್ತಿರುವವರು, ನಾವೆಲ್ಲರೂ ಅದನ್ನು ಪಾಲಿಸಬೇಕಿದೆ. ಅನ್ಯಾಯ ಖಂಡಿಸುವ ಕೆಲಸ ಮಾಡುವವರಿಗೆ ಗುಂಡೇಟು ಬೀಳುವುದು ದುರಂತದ ವಿಷಯ. ಇವತ್ತಿಗೂ ಅದು ಇದೆ. ಅದು ಮುಂದೆಯೂ ಮುಂದುವರೆಯಲಿದೆ. ಆದರೆ, ನಾವ್ಯಾರು ಎದೆಗುಂದಬಾರದು. ಅವರಿದ್ದ ಕಾಲಕ್ಕಿಂತಲೂ ಕೆಟ್ಟ ಕಾಲ ಈಗ ಇದೆ. ಜಾತಿಯತೆ, ಕೋಮುದೌರ್ಜನ್ಯ ಹೆಚ್ಚಾಗುತ್ತಿದೆ. ಮತ್ತೆ ಗೌರಿ, ಲಂಕೇಶ್ ಅವರನ್ನು ನೆನೆಯುತ್ತಾ ಈ ಸವಾಲು ಸ್ವೀಕರಿಸಬೇಕಾಗಿದೆ. ಯಾವುದಕ್ಕೂ ಜಗ್ಗದೆ, ಅನ್ಯಾಯ ಸಹಿಸುವುದಿಲ್ಲ ಎಂಬ ಸಂಕಲ್ಪ ತೆಗೆದುಕೊಳ್ಳಬೇಕಾಗಿದೆ”  ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಗೌರಿ ನೆನಹು ಕಾರ್ಯಕ್ರಮ ಆಯೋಜಿಸಿದ್ದ ಗೌರಿ ಮೆಮೋರಿಯಲ್ ಟ್ರಸ್ಟ್ ಸದಸ್ಯರಾದ ನೂರ್ ಶ್ರೀಧರ್, ಹೇಗೆ ಗೌರಿ ಲಂಕೇಶ್ ಅವರ ಹತ್ಯೆಯಿಂದ ಜನ ಸಿಡಿದೆದ್ದರು ಎಂಬುದನ್ನು ತಿಳಿಸಿದರು.

“ಈ ಹೇಡಿಗಳು ಪನ್ಸಾರೆ, ದಾಬೊಲ್ಕರ್‌ ಅವರನ್ನು ಕೊಂದ ನಂತರ ಕಲ್ಬುರ್ಗಿ ಅವರನ್ನು ಟಾರ್ಗೆಟ್ ಮಾಡಿದರು. ನಂತರ ಗೌರಿ ಅವರನ್ನು ಟಾರ್ಗೆಟ್ ಮಾಡಿದರು. ಹೆಣ್ಣು ಜರ್ನಲಿಸ್ಟ್ ಏನು ಮಾಡಲು ಸಾಧ್ಯ ಎಂದು ಕೊಂಡಿದ್ರು. ಆ ಸಣ್ಣ ದೇಹದಲ್ಲಿನ ಗೌರಿ ಒಂದು ಜೀವ ಸೆಲೆ ಎಂಬುದು ಅವರಿಗೆ ತಿಳಿಯಲಿಲ್ಲ. ಅವರ ದೊಡ್ಡ ತಪ್ಪು ಗೌರಿ ಲಂಕೇಶ್ ಅವರನ್ನು ಟಾರ್ಗೆಟ್ ಮಾಡಿದ್ದು. ಗೌರಿ ಇಷ್ಟು ದೊಡ್ಡ ವ್ಯಕ್ತಿತ್ವ ಎಂಬುದು ಅವರಿಗೆ ತಿಳಿದಿರಲಿಲ್ಲ. ಗೌರಿ ಎಲ್ಲ ಜನರ ಹೃದಯದಲ್ಲಿ ಇದ್ದವರು ಎಂದು ಅವರಿಗೆ ತಿಳಿಯಲಿಲ್ಲ. ಹಾಗಾಗಿ ಅವರು ಗೌರಿ ಅವರ ಎದೆಗೆ ಹೊಡೆದ ಗುಂಡು ದೇಶ, ವಿದೇಶಗಳ ಸಹೃದಯರ ಹೃದಯಗಳಿಗೆ ತಾಗಿತ್ತು. ಅದು ಗೌರಿ ಘರ್ಜನೆಯಾಯಿತು. ಅದು ಭಯದ ಬದಲು ಇನ್ನು ವಿಶ್ವಾಸ, ಹೋರಾಟದ ಸಂಕಲ್ಪಕ್ಕೆ ನಾಂದಿಯಾಯಿತು. ನಾನುಗೌರಿ..ನಾವೆಲ್ಲಾ ಗೌರಿ ಎಂಬುದು ತಾನಾಗೆ ಹುಟ್ಟಿಕೊಂಡ ಒಂದು ಹೋರಾಟವಾಯಿತು” ಎಂದರು.

“ಈ ಘರ್ಜನೆಯಿಂದ ಈ ಹಂತಕರ ಪಡೆಗೆ ಮುಳುವಾಯಿತು. ಅಂದಿನ ಸರ್ಕಾರ ಕೂಡ ಈ ಒತ್ತಡಕ್ಕೆ ಒಳಗಾಗಬೇಕಾಯಿತು. ಸಂಘ ಪರಿವಾರದ ಷಡ್ಯಂತರ ಎಷ್ಟು ಕೆಲಸ ಮಾಡಿದರೂ ಕೂಡ ಆರೋಪಿಗಳನ್ನು ಬಿಡಿಸಲು ಸಾಧ್ಯವಾಗಲಿಲ್ಲ. ಇಂದು ನಮ್ಮನ್ನೆಲ್ಲಾ ಕಾಪಾಡಿದ್ದು ಈ ಗೌರಿ ಘರ್ಜನೆ. ಗೌರಿ ಆಶಯಗಳನ್ನು ಹೊತ್ತ ಗೌರಿ ತಂಡ ಕೆಲಸ ನಿಲ್ಲಿಸಲಿಲ್ಲ. ಕೆಲಸ ಮುಂದುವರೆಸಿದೆ. ಗೌರಿ ಆಶಯಗಳನ್ನು ಮುಂದುವರೆಸಲು ನಾನಾ ರೀತಿಯ ಚಿಂತನೆ ನಡೆಯುತ್ತಿದೆ. ಮುಂದೆ ಪತ್ರಿಕೋದ್ಯಮದಲ್ಲಿ ದಟ್ಟ ಅಲೆ ಸೃಷ್ಟಿಯಾಗಲಿದೆ” ಎಂದು ಗೌರಿ ಮೆಮೋರಿಯಲ್ ಟ್ರಸ್ಟ್ ಸದಸ್ಯರಾದ ನೂರ್ ಶ್ರೀಧರ್ ತಿಳಿಸಿದ್ದಾರೆ.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಮೇಲಿನ KCOCA ಕಾಯ್ದೆ ಕೈಬಿಡದಂತೆ ಸುಪ್ರೀಂ ಆದೇಶ

ಹೋರಾಟಗಾರರಾದ ಮಲ್ಲೂ ಕುಂಬಾರ್‌ ಗೌರಿಯವರನ್ನು ನೆನೆಯುತ್ತಾ, “ಲೈಂಗಿಕ ಅಲ್ಪ ಸಂಖ್ಯಾತರ ಬಗ್ಗೆ ಯಾರು ದನಿ ಎತ್ತದ ಕಾಲದಲ್ಲಿ ತುಂಬಾ ಸೂಕ್ಷ್ಮವಾಗಿ ಮಾತಾಡುತ್ತಿದ್ದವರು ಗೌರಿ. ಗೌರಿ ಕೊಲ್ಲಲ್ಪಟ್ಟಿದ್ದಾಳೆ. ಆದರೆ ಸತ್ತಿಲ್ಲ. ಎಲ್ಲಾ ಶೋಷಿತರು ತಮ್ಮ ಈಗೋಗಳನ್ನು ಬಿಟ್ಟು ಒಂದಾಗಿ ಗೌರಿ ಆಶಯಕ್ಕೆ ಗೌರವ ಸಲ್ಲಿಸಬೇಕಿದೆ” ಎಂದು ಆಗ್ರಹಿಸಿದ್ದಾರೆ.

ಕರ್ನಾಟಕ ಜನಶಕ್ತಿ ಮತ್ತು ಮಹಿಳಾ ಮುನ್ನಡೆ ಕಾರ್ಯಕರ್ತೆ ಚೆನ್ನಮ್ಮ ಮಾತನಾಡುತ್ತಾ, “ಒಂದು ಒಳ್ಳೆ ಬದುಕು ಕಟ್ಟಿ ಕೊಳ್ಳಲು ಸಹಾಯ ಮಾಡಿದವರು ಗೌರಿ ಅವರು. ಒಬ್ಬ ಮಹಿಳೆ ಹೇಗೆ ದಿಟ್ಟವಾಗಿ ಹೋರಾಟ ಮಾಡಬಹುದು ಎಂಬುದಕ್ಕೆ ಆದರ್ಶವಾಗಿದ್ದಾರೆ. ಇಷ್ಟೊಂದು ಎದುರಾಳಿಗಳ ನಡುವೆ ಸತ್ಯವನ್ನು ಬರೆಯಲು ಮನಸ್ಸು ಮಾಡಿದವರು ಅವರು. ಪೆನ್ನಿನ ಮೂಲಕ ಅವರ ತಪ್ಪುಗಳನ್ನು ಹೊರ ಹಾಕವುದನ್ನು ಕಲಿಸಿಕೊಟ್ಟಿದ್ದಾರೆ. ನಗರದಲ್ಲಷ್ಟೇ ಅಲ್ಲ ನಾವು ಹೋಗುವ ಪ್ರತಿ ಹಳ್ಳಿಯ ಜನರ ಮನಸ್ಸಿನಲ್ಲಿಯೂ ಅವರು ಆಳವಾಗಿ ಬೇರೂರಿದ್ದಾರೆ” ಎಂದು ಗೌರಿ ಲಂಕೇಶ್ ಅವರು ಜನರ ಮನಸ್ಸಲ್ಲಿ ವಿಸ್ತರಿಸಿರುವ ಬಗೆಯನ್ನು ವಿವರಿಸಿದ್ದಾರೆ.

ಗೌರಿ ಲಂಕೇಶ್ ಅವರ ತಾಯಿ ಇಂದಿರಾ ಲಂಕೇಶ್, ಸಹೋದರಿ ಕವಿತಾ ಲಂಕೇಶ್, ಗೌರಿ ಮೆಮೋರಿಯಲ್ ಟ್ರಸ್ಟ್‌ ಕಾರ್ಯದರ್ಶಿ ದೀಪು, ಕೆ.ಎಲ್, ಅಶೋಕ್, ಚಿಂತಕರಾದ ಶಿವಸುಂದರ್‌, ಹೋರಾಟಗಾರರಾದ ಸಿರಿಮನೆ ನಾಗರಾಜು, ವಾಸು, ಮಲ್ಲಿಗೆ ಸಿರಿಮನೆ, ಪ್ರೋ. ನಗರಿ ಬಾಬಯ್ಯ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್‌ ಬೆಂಕಿಕೆರೆ, ಹೇಮಂತ್ ಸೇರಿದಂತೆ, ಚಿಂತಕರು ಸಾಮಾಜಿಕ ಹೋರಾಟಗಾರರು ಭಾಗವಹಿಸಿದ್ದರು.

ಇದನ್ನೂ ಓದಿ: ನಾನು ನಾಲ್ಕನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಮಾಧ್ಯಮವನ್ನು ಜನರ ತೆಕ್ಕೆಗೆ ಮರಳಿ ಪಡೆಯುವ ಬಗ್ಗೆ ಎರಡು ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....