Homeಕರ್ನಾಟಕಗೌರಿ ಲಂಕೇಶ್ ದಿನ: ಗೌರಿಯನ್ನು ನೆನೆಯುತ್ತಾ...ಸಾವಿರಾರು ಗೌರಿಯರ ಮಾತುಗಳು...

ಗೌರಿ ಲಂಕೇಶ್ ದಿನ: ಗೌರಿಯನ್ನು ನೆನೆಯುತ್ತಾ…ಸಾವಿರಾರು ಗೌರಿಯರ ಮಾತುಗಳು…

ಇಂದಿನ ಸ್ಥಿತಿಯಲ್ಲಿ ಅಪ್ಪ (ಲಂಕೇಶ್), ಗೌರಿ ಇದ್ದಿದ್ದರೆ ಏನು ಮಾಡುತ್ತಿದ್ದರು ಎಂಬ ಆಲೋಚನೆ ನನ್ನನ್ನು ಸದಾ ಕಾಡುತ್ತದೆ- ಕವಿತಾ ಲಂಕೇಶ್

- Advertisement -
- Advertisement -

ಗೌರಿ ಲಂಕೇಶ್ ಅಮರ್‌ ರಹೇ….ಅಮರ್‌ ರಹೇ…ಅಮರ್‌ ರಹೇ…ಗೌರಿ ಲಂಕೇಶ್ ಆಶಯಗಳನ್ನು ಈಡೇರಿಸೋಣ..ಈಡೇರಿಸೋಣ…ನಾನುಗೌರಿ..ನಾವೇಲ್ಲ ಗೌರಿ…ನೂರು ಗುಂಡುಗಳು ತೂರಿ ಬಂದರೂ ಗುಡು ಗುಡು ಗುಡು ಗುಡುಗುವೆವು…

ಈ ಎಲ್ಲಾ ಘೋಷಣೆಗಳು ಕೇಳಿ ಬಂದಿದ್ದು, ಚಾಮರಾಜಪೇಟೆಯಲ್ಲಿರುವ ಗೌರಿ ಲಂಕೇಶ್‌ರವರ ಸಮಾಧಿ ಬಳಿ…ಹೌದು, ಇಂದು ಹಿಂದೂತ್ವವಾದಿಗಳ ಗುಂಡಿಗೆ ಎದೆಯೊಡ್ಡಿ ಹುತಾತ್ಮರಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಅವರು ನಮ್ಮನ್ನಗಲಿ ನಾಲ್ಕು ವರ್ಷ.

ಗೌರಿ ಲಂಕೇಶ್ ಅವರ ನೆನಪಿನಲ್ಲಿ ಇಂದು (ಸೆಪ್ಟಂಬರ್ 05) ಗೌರಿ ಮೆಮೋರಿಯಲ್ ಟ್ರಸ್ಟ್‌ನಿಂದ ‘ಗೌರಿ ನೆನಹು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹುತಾತ್ಮರಾದ ಗೌರಿ ಲಂಕೇಶ್ ಅವರಿಗೆ ಹೋರಾಟದ ವಂದನೆಗಳನ್ನು ಸಲ್ಲಿಸಲಾಯಿತು.

ಗೌರಿ ನೆನಹುನಲ್ಲಿ ಮಾತನಾಡಿದ ಸಹೋದರಿ ಕವಿತಾ ಲಂಕೇಶ್ ಅವರು, “ಆ ಘಟನೆ ಇನ್ನು ನೆನ್ನೆ, ಮೊನ್ನೆ ಆದ ಹಾಗೆ ಕಣ್ಣ ಮುಂದಿದೆ. ಆಕೆಯ ಹೋರಾಟ ಮುಂದುವರೆಯುತ್ತಿದೆ. ಕಡಿಮೆ ಸ್ಥಳ ಸಿಕ್ಕರೂ ಜನ ಮಾತನಾಡುತ್ತಿದ್ದಾರೆ, ಗೌರಿ ಅಂತಹ ಜನ ಇನ್ನೂ ಇದ್ದಾರಲ್ಲ ಎಂಬುದೇ ಹೆಮ್ಮೆಯ ವಿಷಯ. ಪರಿಸ್ಥಿತಿ ಅಂದಿಗಿಂತಲೂ ಇಂದು ಹೆಚ್ಚು ಹದಗೆಟ್ಟಿದೆ. ಪತ್ರಕರ್ತರ ಮೇಲೆ ಹಲ್ಲೆಗಳಾಗುತ್ತಿವೆ. ಸರ್ಕಾರದ ವಿರುದ್ಧ ಬರೆಯಲಾಗದ ಸ್ಥಿತಿ ತಂದಿದ್ದಾರೆ. ಇಂತ ಸ್ಥಿತಿಯಲ್ಲಿ ಅಪ್ಪ (ಲಂಕೇಶ್), ಗೌರಿ ಇದ್ದಿದ್ದರೇ ಏನು ಮಾಡುತ್ತಿದ್ದರು ಎಂಬ ಆಲೋಚನೆ ನನ್ನನ್ನು ಕಾಡುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಇಂದು ಗೌರಿ ದಿನ: ಗೌರಿ ಲಂಕೇಶ್ ನೆನಪಿನಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಸಂವಾದ ಕಾರ್ಯಕ್ರಮಗಳು

ಹೋರಾಟಗಾರ್ತಿ, ಚಿಂತಕಿ, ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯ್ಕ್ ಮಾತನಾಡಿ, “ಧಾರ್ಮಿಕ ಸಂಘಟನೆಗಳು ಹೆಚ್ಚಾಗಿ ಹೇಗೆ ರಾಜಕೀಯ ಮಾಡುತ್ತಿವೆ ಎಂಬುದನ್ನು ಲಂಕೇಶರು, ಗೌರಿ ಲಂಕೇಶರು ತಮ್ಮ ಬರಹಗಳ ಮೂಲಕ, ಚಿಂತನೆ ಮೂಲಕ ತಮ್ಮದೇ ರೀತಿಯಲ್ಲಿ ತಿಳಿಸಿದ್ದಾರೆ. ಈ ದಿನ ಗೌರಿ ಆಶಯದಲ್ಲಿ ಮುನ್ನಡೆಯುತ್ತಿರುವವರು, ನಾವೆಲ್ಲರೂ ಅದನ್ನು ಪಾಲಿಸಬೇಕಿದೆ. ಅನ್ಯಾಯ ಖಂಡಿಸುವ ಕೆಲಸ ಮಾಡುವವರಿಗೆ ಗುಂಡೇಟು ಬೀಳುವುದು ದುರಂತದ ವಿಷಯ. ಇವತ್ತಿಗೂ ಅದು ಇದೆ. ಅದು ಮುಂದೆಯೂ ಮುಂದುವರೆಯಲಿದೆ. ಆದರೆ, ನಾವ್ಯಾರು ಎದೆಗುಂದಬಾರದು. ಅವರಿದ್ದ ಕಾಲಕ್ಕಿಂತಲೂ ಕೆಟ್ಟ ಕಾಲ ಈಗ ಇದೆ. ಜಾತಿಯತೆ, ಕೋಮುದೌರ್ಜನ್ಯ ಹೆಚ್ಚಾಗುತ್ತಿದೆ. ಮತ್ತೆ ಗೌರಿ, ಲಂಕೇಶ್ ಅವರನ್ನು ನೆನೆಯುತ್ತಾ ಈ ಸವಾಲು ಸ್ವೀಕರಿಸಬೇಕಾಗಿದೆ. ಯಾವುದಕ್ಕೂ ಜಗ್ಗದೆ, ಅನ್ಯಾಯ ಸಹಿಸುವುದಿಲ್ಲ ಎಂಬ ಸಂಕಲ್ಪ ತೆಗೆದುಕೊಳ್ಳಬೇಕಾಗಿದೆ”  ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಗೌರಿ ನೆನಹು ಕಾರ್ಯಕ್ರಮ ಆಯೋಜಿಸಿದ್ದ ಗೌರಿ ಮೆಮೋರಿಯಲ್ ಟ್ರಸ್ಟ್ ಸದಸ್ಯರಾದ ನೂರ್ ಶ್ರೀಧರ್, ಹೇಗೆ ಗೌರಿ ಲಂಕೇಶ್ ಅವರ ಹತ್ಯೆಯಿಂದ ಜನ ಸಿಡಿದೆದ್ದರು ಎಂಬುದನ್ನು ತಿಳಿಸಿದರು.

“ಈ ಹೇಡಿಗಳು ಪನ್ಸಾರೆ, ದಾಬೊಲ್ಕರ್‌ ಅವರನ್ನು ಕೊಂದ ನಂತರ ಕಲ್ಬುರ್ಗಿ ಅವರನ್ನು ಟಾರ್ಗೆಟ್ ಮಾಡಿದರು. ನಂತರ ಗೌರಿ ಅವರನ್ನು ಟಾರ್ಗೆಟ್ ಮಾಡಿದರು. ಹೆಣ್ಣು ಜರ್ನಲಿಸ್ಟ್ ಏನು ಮಾಡಲು ಸಾಧ್ಯ ಎಂದು ಕೊಂಡಿದ್ರು. ಆ ಸಣ್ಣ ದೇಹದಲ್ಲಿನ ಗೌರಿ ಒಂದು ಜೀವ ಸೆಲೆ ಎಂಬುದು ಅವರಿಗೆ ತಿಳಿಯಲಿಲ್ಲ. ಅವರ ದೊಡ್ಡ ತಪ್ಪು ಗೌರಿ ಲಂಕೇಶ್ ಅವರನ್ನು ಟಾರ್ಗೆಟ್ ಮಾಡಿದ್ದು. ಗೌರಿ ಇಷ್ಟು ದೊಡ್ಡ ವ್ಯಕ್ತಿತ್ವ ಎಂಬುದು ಅವರಿಗೆ ತಿಳಿದಿರಲಿಲ್ಲ. ಗೌರಿ ಎಲ್ಲ ಜನರ ಹೃದಯದಲ್ಲಿ ಇದ್ದವರು ಎಂದು ಅವರಿಗೆ ತಿಳಿಯಲಿಲ್ಲ. ಹಾಗಾಗಿ ಅವರು ಗೌರಿ ಅವರ ಎದೆಗೆ ಹೊಡೆದ ಗುಂಡು ದೇಶ, ವಿದೇಶಗಳ ಸಹೃದಯರ ಹೃದಯಗಳಿಗೆ ತಾಗಿತ್ತು. ಅದು ಗೌರಿ ಘರ್ಜನೆಯಾಯಿತು. ಅದು ಭಯದ ಬದಲು ಇನ್ನು ವಿಶ್ವಾಸ, ಹೋರಾಟದ ಸಂಕಲ್ಪಕ್ಕೆ ನಾಂದಿಯಾಯಿತು. ನಾನುಗೌರಿ..ನಾವೆಲ್ಲಾ ಗೌರಿ ಎಂಬುದು ತಾನಾಗೆ ಹುಟ್ಟಿಕೊಂಡ ಒಂದು ಹೋರಾಟವಾಯಿತು” ಎಂದರು.

“ಈ ಘರ್ಜನೆಯಿಂದ ಈ ಹಂತಕರ ಪಡೆಗೆ ಮುಳುವಾಯಿತು. ಅಂದಿನ ಸರ್ಕಾರ ಕೂಡ ಈ ಒತ್ತಡಕ್ಕೆ ಒಳಗಾಗಬೇಕಾಯಿತು. ಸಂಘ ಪರಿವಾರದ ಷಡ್ಯಂತರ ಎಷ್ಟು ಕೆಲಸ ಮಾಡಿದರೂ ಕೂಡ ಆರೋಪಿಗಳನ್ನು ಬಿಡಿಸಲು ಸಾಧ್ಯವಾಗಲಿಲ್ಲ. ಇಂದು ನಮ್ಮನ್ನೆಲ್ಲಾ ಕಾಪಾಡಿದ್ದು ಈ ಗೌರಿ ಘರ್ಜನೆ. ಗೌರಿ ಆಶಯಗಳನ್ನು ಹೊತ್ತ ಗೌರಿ ತಂಡ ಕೆಲಸ ನಿಲ್ಲಿಸಲಿಲ್ಲ. ಕೆಲಸ ಮುಂದುವರೆಸಿದೆ. ಗೌರಿ ಆಶಯಗಳನ್ನು ಮುಂದುವರೆಸಲು ನಾನಾ ರೀತಿಯ ಚಿಂತನೆ ನಡೆಯುತ್ತಿದೆ. ಮುಂದೆ ಪತ್ರಿಕೋದ್ಯಮದಲ್ಲಿ ದಟ್ಟ ಅಲೆ ಸೃಷ್ಟಿಯಾಗಲಿದೆ” ಎಂದು ಗೌರಿ ಮೆಮೋರಿಯಲ್ ಟ್ರಸ್ಟ್ ಸದಸ್ಯರಾದ ನೂರ್ ಶ್ರೀಧರ್ ತಿಳಿಸಿದ್ದಾರೆ.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಮೇಲಿನ KCOCA ಕಾಯ್ದೆ ಕೈಬಿಡದಂತೆ ಸುಪ್ರೀಂ ಆದೇಶ

ಹೋರಾಟಗಾರರಾದ ಮಲ್ಲೂ ಕುಂಬಾರ್‌ ಗೌರಿಯವರನ್ನು ನೆನೆಯುತ್ತಾ, “ಲೈಂಗಿಕ ಅಲ್ಪ ಸಂಖ್ಯಾತರ ಬಗ್ಗೆ ಯಾರು ದನಿ ಎತ್ತದ ಕಾಲದಲ್ಲಿ ತುಂಬಾ ಸೂಕ್ಷ್ಮವಾಗಿ ಮಾತಾಡುತ್ತಿದ್ದವರು ಗೌರಿ. ಗೌರಿ ಕೊಲ್ಲಲ್ಪಟ್ಟಿದ್ದಾಳೆ. ಆದರೆ ಸತ್ತಿಲ್ಲ. ಎಲ್ಲಾ ಶೋಷಿತರು ತಮ್ಮ ಈಗೋಗಳನ್ನು ಬಿಟ್ಟು ಒಂದಾಗಿ ಗೌರಿ ಆಶಯಕ್ಕೆ ಗೌರವ ಸಲ್ಲಿಸಬೇಕಿದೆ” ಎಂದು ಆಗ್ರಹಿಸಿದ್ದಾರೆ.

ಕರ್ನಾಟಕ ಜನಶಕ್ತಿ ಮತ್ತು ಮಹಿಳಾ ಮುನ್ನಡೆ ಕಾರ್ಯಕರ್ತೆ ಚೆನ್ನಮ್ಮ ಮಾತನಾಡುತ್ತಾ, “ಒಂದು ಒಳ್ಳೆ ಬದುಕು ಕಟ್ಟಿ ಕೊಳ್ಳಲು ಸಹಾಯ ಮಾಡಿದವರು ಗೌರಿ ಅವರು. ಒಬ್ಬ ಮಹಿಳೆ ಹೇಗೆ ದಿಟ್ಟವಾಗಿ ಹೋರಾಟ ಮಾಡಬಹುದು ಎಂಬುದಕ್ಕೆ ಆದರ್ಶವಾಗಿದ್ದಾರೆ. ಇಷ್ಟೊಂದು ಎದುರಾಳಿಗಳ ನಡುವೆ ಸತ್ಯವನ್ನು ಬರೆಯಲು ಮನಸ್ಸು ಮಾಡಿದವರು ಅವರು. ಪೆನ್ನಿನ ಮೂಲಕ ಅವರ ತಪ್ಪುಗಳನ್ನು ಹೊರ ಹಾಕವುದನ್ನು ಕಲಿಸಿಕೊಟ್ಟಿದ್ದಾರೆ. ನಗರದಲ್ಲಷ್ಟೇ ಅಲ್ಲ ನಾವು ಹೋಗುವ ಪ್ರತಿ ಹಳ್ಳಿಯ ಜನರ ಮನಸ್ಸಿನಲ್ಲಿಯೂ ಅವರು ಆಳವಾಗಿ ಬೇರೂರಿದ್ದಾರೆ” ಎಂದು ಗೌರಿ ಲಂಕೇಶ್ ಅವರು ಜನರ ಮನಸ್ಸಲ್ಲಿ ವಿಸ್ತರಿಸಿರುವ ಬಗೆಯನ್ನು ವಿವರಿಸಿದ್ದಾರೆ.

ಗೌರಿ ಲಂಕೇಶ್ ಅವರ ತಾಯಿ ಇಂದಿರಾ ಲಂಕೇಶ್, ಸಹೋದರಿ ಕವಿತಾ ಲಂಕೇಶ್, ಗೌರಿ ಮೆಮೋರಿಯಲ್ ಟ್ರಸ್ಟ್‌ ಕಾರ್ಯದರ್ಶಿ ದೀಪು, ಕೆ.ಎಲ್, ಅಶೋಕ್, ಚಿಂತಕರಾದ ಶಿವಸುಂದರ್‌, ಹೋರಾಟಗಾರರಾದ ಸಿರಿಮನೆ ನಾಗರಾಜು, ವಾಸು, ಮಲ್ಲಿಗೆ ಸಿರಿಮನೆ, ಪ್ರೋ. ನಗರಿ ಬಾಬಯ್ಯ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್‌ ಬೆಂಕಿಕೆರೆ, ಹೇಮಂತ್ ಸೇರಿದಂತೆ, ಚಿಂತಕರು ಸಾಮಾಜಿಕ ಹೋರಾಟಗಾರರು ಭಾಗವಹಿಸಿದ್ದರು.

ಇದನ್ನೂ ಓದಿ: ನಾನು ನಾಲ್ಕನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಮಾಧ್ಯಮವನ್ನು ಜನರ ತೆಕ್ಕೆಗೆ ಮರಳಿ ಪಡೆಯುವ ಬಗ್ಗೆ ಎರಡು ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....