Homeಕರ್ನಾಟಕಗೌರಿ ಲಂಕೇಶ್ ದಿನ: ಗೌರಿಯನ್ನು ನೆನೆಯುತ್ತಾ...ಸಾವಿರಾರು ಗೌರಿಯರ ಮಾತುಗಳು...

ಗೌರಿ ಲಂಕೇಶ್ ದಿನ: ಗೌರಿಯನ್ನು ನೆನೆಯುತ್ತಾ…ಸಾವಿರಾರು ಗೌರಿಯರ ಮಾತುಗಳು…

ಇಂದಿನ ಸ್ಥಿತಿಯಲ್ಲಿ ಅಪ್ಪ (ಲಂಕೇಶ್), ಗೌರಿ ಇದ್ದಿದ್ದರೆ ಏನು ಮಾಡುತ್ತಿದ್ದರು ಎಂಬ ಆಲೋಚನೆ ನನ್ನನ್ನು ಸದಾ ಕಾಡುತ್ತದೆ- ಕವಿತಾ ಲಂಕೇಶ್

- Advertisement -
- Advertisement -

ಗೌರಿ ಲಂಕೇಶ್ ಅಮರ್‌ ರಹೇ….ಅಮರ್‌ ರಹೇ…ಅಮರ್‌ ರಹೇ…ಗೌರಿ ಲಂಕೇಶ್ ಆಶಯಗಳನ್ನು ಈಡೇರಿಸೋಣ..ಈಡೇರಿಸೋಣ…ನಾನುಗೌರಿ..ನಾವೇಲ್ಲ ಗೌರಿ…ನೂರು ಗುಂಡುಗಳು ತೂರಿ ಬಂದರೂ ಗುಡು ಗುಡು ಗುಡು ಗುಡುಗುವೆವು…

ಈ ಎಲ್ಲಾ ಘೋಷಣೆಗಳು ಕೇಳಿ ಬಂದಿದ್ದು, ಚಾಮರಾಜಪೇಟೆಯಲ್ಲಿರುವ ಗೌರಿ ಲಂಕೇಶ್‌ರವರ ಸಮಾಧಿ ಬಳಿ…ಹೌದು, ಇಂದು ಹಿಂದೂತ್ವವಾದಿಗಳ ಗುಂಡಿಗೆ ಎದೆಯೊಡ್ಡಿ ಹುತಾತ್ಮರಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಅವರು ನಮ್ಮನ್ನಗಲಿ ನಾಲ್ಕು ವರ್ಷ.

ಗೌರಿ ಲಂಕೇಶ್ ಅವರ ನೆನಪಿನಲ್ಲಿ ಇಂದು (ಸೆಪ್ಟಂಬರ್ 05) ಗೌರಿ ಮೆಮೋರಿಯಲ್ ಟ್ರಸ್ಟ್‌ನಿಂದ ‘ಗೌರಿ ನೆನಹು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹುತಾತ್ಮರಾದ ಗೌರಿ ಲಂಕೇಶ್ ಅವರಿಗೆ ಹೋರಾಟದ ವಂದನೆಗಳನ್ನು ಸಲ್ಲಿಸಲಾಯಿತು.

ಗೌರಿ ನೆನಹುನಲ್ಲಿ ಮಾತನಾಡಿದ ಸಹೋದರಿ ಕವಿತಾ ಲಂಕೇಶ್ ಅವರು, “ಆ ಘಟನೆ ಇನ್ನು ನೆನ್ನೆ, ಮೊನ್ನೆ ಆದ ಹಾಗೆ ಕಣ್ಣ ಮುಂದಿದೆ. ಆಕೆಯ ಹೋರಾಟ ಮುಂದುವರೆಯುತ್ತಿದೆ. ಕಡಿಮೆ ಸ್ಥಳ ಸಿಕ್ಕರೂ ಜನ ಮಾತನಾಡುತ್ತಿದ್ದಾರೆ, ಗೌರಿ ಅಂತಹ ಜನ ಇನ್ನೂ ಇದ್ದಾರಲ್ಲ ಎಂಬುದೇ ಹೆಮ್ಮೆಯ ವಿಷಯ. ಪರಿಸ್ಥಿತಿ ಅಂದಿಗಿಂತಲೂ ಇಂದು ಹೆಚ್ಚು ಹದಗೆಟ್ಟಿದೆ. ಪತ್ರಕರ್ತರ ಮೇಲೆ ಹಲ್ಲೆಗಳಾಗುತ್ತಿವೆ. ಸರ್ಕಾರದ ವಿರುದ್ಧ ಬರೆಯಲಾಗದ ಸ್ಥಿತಿ ತಂದಿದ್ದಾರೆ. ಇಂತ ಸ್ಥಿತಿಯಲ್ಲಿ ಅಪ್ಪ (ಲಂಕೇಶ್), ಗೌರಿ ಇದ್ದಿದ್ದರೇ ಏನು ಮಾಡುತ್ತಿದ್ದರು ಎಂಬ ಆಲೋಚನೆ ನನ್ನನ್ನು ಕಾಡುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಇಂದು ಗೌರಿ ದಿನ: ಗೌರಿ ಲಂಕೇಶ್ ನೆನಪಿನಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಸಂವಾದ ಕಾರ್ಯಕ್ರಮಗಳು

ಹೋರಾಟಗಾರ್ತಿ, ಚಿಂತಕಿ, ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯ್ಕ್ ಮಾತನಾಡಿ, “ಧಾರ್ಮಿಕ ಸಂಘಟನೆಗಳು ಹೆಚ್ಚಾಗಿ ಹೇಗೆ ರಾಜಕೀಯ ಮಾಡುತ್ತಿವೆ ಎಂಬುದನ್ನು ಲಂಕೇಶರು, ಗೌರಿ ಲಂಕೇಶರು ತಮ್ಮ ಬರಹಗಳ ಮೂಲಕ, ಚಿಂತನೆ ಮೂಲಕ ತಮ್ಮದೇ ರೀತಿಯಲ್ಲಿ ತಿಳಿಸಿದ್ದಾರೆ. ಈ ದಿನ ಗೌರಿ ಆಶಯದಲ್ಲಿ ಮುನ್ನಡೆಯುತ್ತಿರುವವರು, ನಾವೆಲ್ಲರೂ ಅದನ್ನು ಪಾಲಿಸಬೇಕಿದೆ. ಅನ್ಯಾಯ ಖಂಡಿಸುವ ಕೆಲಸ ಮಾಡುವವರಿಗೆ ಗುಂಡೇಟು ಬೀಳುವುದು ದುರಂತದ ವಿಷಯ. ಇವತ್ತಿಗೂ ಅದು ಇದೆ. ಅದು ಮುಂದೆಯೂ ಮುಂದುವರೆಯಲಿದೆ. ಆದರೆ, ನಾವ್ಯಾರು ಎದೆಗುಂದಬಾರದು. ಅವರಿದ್ದ ಕಾಲಕ್ಕಿಂತಲೂ ಕೆಟ್ಟ ಕಾಲ ಈಗ ಇದೆ. ಜಾತಿಯತೆ, ಕೋಮುದೌರ್ಜನ್ಯ ಹೆಚ್ಚಾಗುತ್ತಿದೆ. ಮತ್ತೆ ಗೌರಿ, ಲಂಕೇಶ್ ಅವರನ್ನು ನೆನೆಯುತ್ತಾ ಈ ಸವಾಲು ಸ್ವೀಕರಿಸಬೇಕಾಗಿದೆ. ಯಾವುದಕ್ಕೂ ಜಗ್ಗದೆ, ಅನ್ಯಾಯ ಸಹಿಸುವುದಿಲ್ಲ ಎಂಬ ಸಂಕಲ್ಪ ತೆಗೆದುಕೊಳ್ಳಬೇಕಾಗಿದೆ”  ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಗೌರಿ ನೆನಹು ಕಾರ್ಯಕ್ರಮ ಆಯೋಜಿಸಿದ್ದ ಗೌರಿ ಮೆಮೋರಿಯಲ್ ಟ್ರಸ್ಟ್ ಸದಸ್ಯರಾದ ನೂರ್ ಶ್ರೀಧರ್, ಹೇಗೆ ಗೌರಿ ಲಂಕೇಶ್ ಅವರ ಹತ್ಯೆಯಿಂದ ಜನ ಸಿಡಿದೆದ್ದರು ಎಂಬುದನ್ನು ತಿಳಿಸಿದರು.

“ಈ ಹೇಡಿಗಳು ಪನ್ಸಾರೆ, ದಾಬೊಲ್ಕರ್‌ ಅವರನ್ನು ಕೊಂದ ನಂತರ ಕಲ್ಬುರ್ಗಿ ಅವರನ್ನು ಟಾರ್ಗೆಟ್ ಮಾಡಿದರು. ನಂತರ ಗೌರಿ ಅವರನ್ನು ಟಾರ್ಗೆಟ್ ಮಾಡಿದರು. ಹೆಣ್ಣು ಜರ್ನಲಿಸ್ಟ್ ಏನು ಮಾಡಲು ಸಾಧ್ಯ ಎಂದು ಕೊಂಡಿದ್ರು. ಆ ಸಣ್ಣ ದೇಹದಲ್ಲಿನ ಗೌರಿ ಒಂದು ಜೀವ ಸೆಲೆ ಎಂಬುದು ಅವರಿಗೆ ತಿಳಿಯಲಿಲ್ಲ. ಅವರ ದೊಡ್ಡ ತಪ್ಪು ಗೌರಿ ಲಂಕೇಶ್ ಅವರನ್ನು ಟಾರ್ಗೆಟ್ ಮಾಡಿದ್ದು. ಗೌರಿ ಇಷ್ಟು ದೊಡ್ಡ ವ್ಯಕ್ತಿತ್ವ ಎಂಬುದು ಅವರಿಗೆ ತಿಳಿದಿರಲಿಲ್ಲ. ಗೌರಿ ಎಲ್ಲ ಜನರ ಹೃದಯದಲ್ಲಿ ಇದ್ದವರು ಎಂದು ಅವರಿಗೆ ತಿಳಿಯಲಿಲ್ಲ. ಹಾಗಾಗಿ ಅವರು ಗೌರಿ ಅವರ ಎದೆಗೆ ಹೊಡೆದ ಗುಂಡು ದೇಶ, ವಿದೇಶಗಳ ಸಹೃದಯರ ಹೃದಯಗಳಿಗೆ ತಾಗಿತ್ತು. ಅದು ಗೌರಿ ಘರ್ಜನೆಯಾಯಿತು. ಅದು ಭಯದ ಬದಲು ಇನ್ನು ವಿಶ್ವಾಸ, ಹೋರಾಟದ ಸಂಕಲ್ಪಕ್ಕೆ ನಾಂದಿಯಾಯಿತು. ನಾನುಗೌರಿ..ನಾವೆಲ್ಲಾ ಗೌರಿ ಎಂಬುದು ತಾನಾಗೆ ಹುಟ್ಟಿಕೊಂಡ ಒಂದು ಹೋರಾಟವಾಯಿತು” ಎಂದರು.

“ಈ ಘರ್ಜನೆಯಿಂದ ಈ ಹಂತಕರ ಪಡೆಗೆ ಮುಳುವಾಯಿತು. ಅಂದಿನ ಸರ್ಕಾರ ಕೂಡ ಈ ಒತ್ತಡಕ್ಕೆ ಒಳಗಾಗಬೇಕಾಯಿತು. ಸಂಘ ಪರಿವಾರದ ಷಡ್ಯಂತರ ಎಷ್ಟು ಕೆಲಸ ಮಾಡಿದರೂ ಕೂಡ ಆರೋಪಿಗಳನ್ನು ಬಿಡಿಸಲು ಸಾಧ್ಯವಾಗಲಿಲ್ಲ. ಇಂದು ನಮ್ಮನ್ನೆಲ್ಲಾ ಕಾಪಾಡಿದ್ದು ಈ ಗೌರಿ ಘರ್ಜನೆ. ಗೌರಿ ಆಶಯಗಳನ್ನು ಹೊತ್ತ ಗೌರಿ ತಂಡ ಕೆಲಸ ನಿಲ್ಲಿಸಲಿಲ್ಲ. ಕೆಲಸ ಮುಂದುವರೆಸಿದೆ. ಗೌರಿ ಆಶಯಗಳನ್ನು ಮುಂದುವರೆಸಲು ನಾನಾ ರೀತಿಯ ಚಿಂತನೆ ನಡೆಯುತ್ತಿದೆ. ಮುಂದೆ ಪತ್ರಿಕೋದ್ಯಮದಲ್ಲಿ ದಟ್ಟ ಅಲೆ ಸೃಷ್ಟಿಯಾಗಲಿದೆ” ಎಂದು ಗೌರಿ ಮೆಮೋರಿಯಲ್ ಟ್ರಸ್ಟ್ ಸದಸ್ಯರಾದ ನೂರ್ ಶ್ರೀಧರ್ ತಿಳಿಸಿದ್ದಾರೆ.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಮೇಲಿನ KCOCA ಕಾಯ್ದೆ ಕೈಬಿಡದಂತೆ ಸುಪ್ರೀಂ ಆದೇಶ

ಹೋರಾಟಗಾರರಾದ ಮಲ್ಲೂ ಕುಂಬಾರ್‌ ಗೌರಿಯವರನ್ನು ನೆನೆಯುತ್ತಾ, “ಲೈಂಗಿಕ ಅಲ್ಪ ಸಂಖ್ಯಾತರ ಬಗ್ಗೆ ಯಾರು ದನಿ ಎತ್ತದ ಕಾಲದಲ್ಲಿ ತುಂಬಾ ಸೂಕ್ಷ್ಮವಾಗಿ ಮಾತಾಡುತ್ತಿದ್ದವರು ಗೌರಿ. ಗೌರಿ ಕೊಲ್ಲಲ್ಪಟ್ಟಿದ್ದಾಳೆ. ಆದರೆ ಸತ್ತಿಲ್ಲ. ಎಲ್ಲಾ ಶೋಷಿತರು ತಮ್ಮ ಈಗೋಗಳನ್ನು ಬಿಟ್ಟು ಒಂದಾಗಿ ಗೌರಿ ಆಶಯಕ್ಕೆ ಗೌರವ ಸಲ್ಲಿಸಬೇಕಿದೆ” ಎಂದು ಆಗ್ರಹಿಸಿದ್ದಾರೆ.

ಕರ್ನಾಟಕ ಜನಶಕ್ತಿ ಮತ್ತು ಮಹಿಳಾ ಮುನ್ನಡೆ ಕಾರ್ಯಕರ್ತೆ ಚೆನ್ನಮ್ಮ ಮಾತನಾಡುತ್ತಾ, “ಒಂದು ಒಳ್ಳೆ ಬದುಕು ಕಟ್ಟಿ ಕೊಳ್ಳಲು ಸಹಾಯ ಮಾಡಿದವರು ಗೌರಿ ಅವರು. ಒಬ್ಬ ಮಹಿಳೆ ಹೇಗೆ ದಿಟ್ಟವಾಗಿ ಹೋರಾಟ ಮಾಡಬಹುದು ಎಂಬುದಕ್ಕೆ ಆದರ್ಶವಾಗಿದ್ದಾರೆ. ಇಷ್ಟೊಂದು ಎದುರಾಳಿಗಳ ನಡುವೆ ಸತ್ಯವನ್ನು ಬರೆಯಲು ಮನಸ್ಸು ಮಾಡಿದವರು ಅವರು. ಪೆನ್ನಿನ ಮೂಲಕ ಅವರ ತಪ್ಪುಗಳನ್ನು ಹೊರ ಹಾಕವುದನ್ನು ಕಲಿಸಿಕೊಟ್ಟಿದ್ದಾರೆ. ನಗರದಲ್ಲಷ್ಟೇ ಅಲ್ಲ ನಾವು ಹೋಗುವ ಪ್ರತಿ ಹಳ್ಳಿಯ ಜನರ ಮನಸ್ಸಿನಲ್ಲಿಯೂ ಅವರು ಆಳವಾಗಿ ಬೇರೂರಿದ್ದಾರೆ” ಎಂದು ಗೌರಿ ಲಂಕೇಶ್ ಅವರು ಜನರ ಮನಸ್ಸಲ್ಲಿ ವಿಸ್ತರಿಸಿರುವ ಬಗೆಯನ್ನು ವಿವರಿಸಿದ್ದಾರೆ.

ಗೌರಿ ಲಂಕೇಶ್ ಅವರ ತಾಯಿ ಇಂದಿರಾ ಲಂಕೇಶ್, ಸಹೋದರಿ ಕವಿತಾ ಲಂಕೇಶ್, ಗೌರಿ ಮೆಮೋರಿಯಲ್ ಟ್ರಸ್ಟ್‌ ಕಾರ್ಯದರ್ಶಿ ದೀಪು, ಕೆ.ಎಲ್, ಅಶೋಕ್, ಚಿಂತಕರಾದ ಶಿವಸುಂದರ್‌, ಹೋರಾಟಗಾರರಾದ ಸಿರಿಮನೆ ನಾಗರಾಜು, ವಾಸು, ಮಲ್ಲಿಗೆ ಸಿರಿಮನೆ, ಪ್ರೋ. ನಗರಿ ಬಾಬಯ್ಯ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್‌ ಬೆಂಕಿಕೆರೆ, ಹೇಮಂತ್ ಸೇರಿದಂತೆ, ಚಿಂತಕರು ಸಾಮಾಜಿಕ ಹೋರಾಟಗಾರರು ಭಾಗವಹಿಸಿದ್ದರು.

ಇದನ್ನೂ ಓದಿ: ನಾನು ನಾಲ್ಕನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಮಾಧ್ಯಮವನ್ನು ಜನರ ತೆಕ್ಕೆಗೆ ಮರಳಿ ಪಡೆಯುವ ಬಗ್ಗೆ ಎರಡು ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...