Homeಮುಖಪುಟಫಾರ್ಬಿಡನ್‌ ಪ್ರಕಟಿಸುತ್ತಿರುವ ‘ಸ್ಟೋರಿ ಕಿಲ್ಲರ್ಸ್’ ಸರಣಿಗೆ ಗೌರಿ ಲಂಕೇಶ್‌ ಸ್ಫೂರ್ತಿ; ಗಾರ್ಡಿಯನ್‌ ಉಲ್ಲೇಖ

ಫಾರ್ಬಿಡನ್‌ ಪ್ರಕಟಿಸುತ್ತಿರುವ ‘ಸ್ಟೋರಿ ಕಿಲ್ಲರ್ಸ್’ ಸರಣಿಗೆ ಗೌರಿ ಲಂಕೇಶ್‌ ಸ್ಫೂರ್ತಿ; ಗಾರ್ಡಿಯನ್‌ ಉಲ್ಲೇಖ

- Advertisement -
- Advertisement -

ಪ್ರಖ್ಯಾತ ತನಿಖಾ ಸಂಸ್ಥೆಯಾಗಿರುವ ‘ಫಾರ್ಬಿಡನ್‌ ಸ್ಟೋರೀಸ್‌’ ಪ್ರಕಟಿಸುತ್ತಿರುವ ‘ಸ್ಟೋರಿ ಕಿಲ್ಲರ್ಸ್’ ವಿಶೇಷ ಸರಣಿಗೆ ‘ಗೌರಿ ಲಂಕೇಶ್‌’ ಅವರು ಸ್ಫೂರ್ತಿಯಾಗಿದ್ದಾರೆ ಎಂದು ‘ದಿ ಗಾರ್ಡಿಯನ್‌’ ವರದಿ ಮಾಡಿದೆ.

ಸುಳ್ಳು ಸುದ್ದಿಗಳಿಂದ ಆಗಿರುವ ಅನಾಹುತಗಳನ್ನು, ಕೊಲೆ, ಹಿಂಸೆಗಳನ್ನು ಈ ಸರಣಿ ಬಿಚ್ಚಿಡುತ್ತಿದೆ. ಗೌರಿ ಲಂಕೇಶ್ ಅವರ ಕುರಿತು ವಿಶೇಷ ವರದಿಯನ್ನು ಇಲ್ಲಿ ಪ್ರಕಟಿಸಲಾಗಿದೆ.

ಗಾರ್ಡಿಯನ್ ತನ್ನ ವರದಿಯಲ್ಲಿ, “ಸುಳ್ಳು ಮಾಹಿತಿಗಳನ್ನು ನಮ್ಮ ಮಾಹಿತಿ ಪರಿಸರ ವ್ಯವಸ್ಥೆಯಲ್ಲಿನ ಪರಮಾಣು ಬಾಂಬ್‌ಗೆ ಹೋಲಿಸಲಾಗಿದೆ. ಸುಳ್ಳು ಮಾಹಿತಿಯು ಗಂಭೀರ ಸಮಸ್ಯೆಯಾಗಿದೆ. ಏಕೆಂದರೆ ಸತ್ಯಕ್ಕಿಂತ ವೇಗವಾಗಿ ದ್ವೇಷ, ಕೋಪ ಮತ್ತು ಪಿತೂರಿ ಸಿದ್ಧಾಂತಗಳು ಹರಡಲು ಸುಳ್ಳು ಮಾಹಿತಿಗಳು ಕಾರಣವಾಗುತ್ತವೆ. ಪತ್ರಕರ್ತೆ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಾರಿಯಾ ರೆಸ್ಸಾ ಅವರ ಹೇಳುವಂತೆ- ‘ಪ್ರಜಾಪ್ರಭುತ್ವ ಎಂಬುದು ಕನಸಷ್ಟೇ” ಎಂಬ ಸಾಲುಗಳನ್ನು ಉಲ್ಲೇಖಿಸಿದೆ.

ಉಕ್ರೇನ್‌ನ ಮೇಲೆ ರಷ್ಯಾದ ಕ್ರೂರ ಆಕ್ರಮಣ, ಅಮೆರಿಕದ ಸಂಸತ್‌ ಮೇಲೆ ದಾಳಿ, ಕೋವಿಡ್ -19ರ ಸುತ್ತ ಹುಟ್ಟಿದ ಸುಳ್ಳುಗಳು- ಇವೆಲ್ಲ ತಪ್ಪು ಮಾಹಿತಿಯ ಪ್ರಮುಖ ಜಾಗತಿಕ ಘಟನೆಗಳಾಗಿ ಕಾಣುತ್ತವೆ ಎಂದಿದೆ.

‘Disinfo black ops’ ಎಂಬ ವಿಶೇಷ ತನಿಖೆಯು ಪ್ರಪಂಚದಾದ್ಯಂತ ಆಗುತ್ತಿರುವ ಸುಳ್ಳು ಮಾಹಿತಿಯ ಉದ್ದೇಶಪೂರ್ವಕ ಹರಡುವಿಕೆಯ ಕುರಿತು ಬಹಿರಂಗಪಡಿಸುತ್ತಿದೆ. ಇದು ಸ್ಟೋರಿ ಕಿಲ್ಲರ್ಸ್‌ ಸರಣಿಯ ಭಾಗವಾಗಿದೆ. ಗಾರ್ಡಿಯನ್, ಅಬ್ಸರ್ವರ್, ಹಾರೆಟ್ಜ್, ಲೆ ಮಾಂಡೆ, ಡೆರ್ ಸ್ಪೀಗೆಲ್, ರೇಡಿಯೋ ಫ್ರಾನ್ಸ್, ದಿ ಮಾರ್ಕರ್, ಪೇಪರ್ ಟ್ರಯಲ್ ಮೀಡಿಯಾ ಮತ್ತು ವಾಷಿಂಗ್ಟನ್ ಪೋಸ್ಟ್ ಸೇರಿದಂತೆ 30 ಸುದ್ದಿ ಮಾಧ್ಯಮಗಳ ಪತ್ರಕರ್ತರನ್ನು ಒಳಗೊಂಡ ಅಂತಾರಾಷ್ಟ್ರೀಯ ಮಟ್ಟದ ಸಹಯೋಗದಲ್ಲಿ ನಡೆಯುತ್ತಿರುವ ಯೋಜನೆ ಇದಾಗಿದೆ.

ಲಾಭದ ಉದ್ದೇಶದಿಂದ ಅಂತರ್ಜಾಲದಾದ್ಯಂತ ನಕಲಿ ಮಾಹಿತಿಯನ್ನು ಹರಡುವ ಸರ್ಕಾರಿ-ಪ್ರಾಯೋಜಿತ ಘಟಕಗಳು ಅಥವಾ ಖಾಸಗಿ ಸಂಸ್ಥೆಗಳು ಹರಡುವ ಸುಳ್ಳು ಮಾಹಿತಿಗಳ ಬಗ್ಗೆ ಈ ತನಿಖೆ ಬೆಳಕು ಚೆಲ್ಲುತ್ತಿದೆ.

ಡ್ಯಾಫ್ನೆ ಪ್ರಾಜೆಕ್ಟ್ ಮತ್ತು ಪೆಗಾಸಸ್ ಪ್ರಾಜೆಕ್ಟ್‌ನ ಹಿಂದಿರುವ ‘ಫೋರ್ಬಿಡನ್ ಸ್ಟೋರೀಸ್’ (ಲಾಭೋದ್ದೇಶವಿಲ್ಲದ ಫ್ರೆಂಚ್ ಮೂಲದ ಸಂಸ್ಥೆ) ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಹತ್ಯೆಗೀಡಾದ, ಬೆದರಿಕೆ ಅಥವಾ ಜೈಲಿನಲ್ಲಿರುವ ಪತ್ರಕರ್ತರ ಆಶಯಗಳನ್ನು ಮುಂದುವರಿಸುವುದು ಈ ಯೋಜನೆಯ ಉದ್ದೇಶವಾಗಿದೆ.

2017ರಲ್ಲಿ ತಮ್ಮ ಬೆಂಗಳೂರಿನ ಮನೆಯ ಹೊರಗೆ ಹತ್ಯೆಯಾದ ಗೌರಿ ಲಂಕೇಶ್ ಅವರ ನಿರ್ಭೀತ ಕೆಲಸಗಳೇ ಈ ಎಂಟು ತಿಂಗಳ ಕಾಲ ನಡೆಸಿರುವ ತನಿಖೆಗೆ ಸ್ಫೂರ್ತಿಯಾಗಿದೆ ಎಂದು ‘ಗಾರ್ಡಿಯನ್‌’ ಉಲ್ಲೇಖಿಸಿದೆ.

ಹತ್ಯೆಯಾಗುವ ಕೆಲವೇ ಗಂಟೆಗಳ ಮೊದಲು ಗೌರಿ ಲಂಕೇಶ್ ಅವರು ‘ಸುಳ್ಳು ಸುದ್ದಿಗಳ ಯುಗದಲ್ಲಿ’ ಎಂಬ ಲೇಖನಕ್ಕೆ ಅಂತಿಮ ಸ್ಪರ್ಶ ನೀಡುತ್ತಿದ್ದರು. ಆನ್‌ಲೈನ್‌ನಲ್ಲಿ ಫೇಕ್‌ನ್ಯೂಸ್ ಪ್ಯಾಕ್ಟರಿಗಳು ಹೇಗೆ ಭಾರತದಲ್ಲಿ ತಪ್ಪು ಮಾಹಿತಿಗಳನ್ನು ಹರಡುತ್ತಿವೆ ಎಂಬುದನ್ನು ಈ ಲೇಖನ ಚರ್ಚಿಸಿದೆ ಎಂಬ ಸಂಗತಿಯನ್ನು ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.

‘ಇನ್ ಏಜ್ ಆಫ್ ಫಾಲ್ಸ್ ನ್ಯೂಸ್’ ಲೇಖನವು ಗೌರಿಯವರ ಸಾವಿನ ನಂತರ ಪ್ರಕಟವಾಯಿತು. ಗೌರಿ ತಮ್ಮ ಅಂತಿಮ ವಾಕ್ಯದಲ್ಲಿ, “ನಕಲಿ ಸುದ್ದಿಗಳನ್ನು ಬಹಿರಂಗಪಡಿಸುವ ಎಲ್ಲರಿಗೂ ನಾನು ಸೆಲ್ಯೂಟ್ ಮಾಡಲು ಬಯಸುತ್ತೇನೆ. ಅಲ್ಲಿ ಇನ್ನೂ ಹೆಚ್ಚಿನವರು ಇರಬೇಕೆಂದು ನಾನು ಬಯಸುತ್ತೇನೆ” ಎಂದಿದ್ದರು.

ಹತ್ಯೆಗೆ ಸಂಬಂಧಿಸಿದಂತೆ 17 ಮಂದಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಗಳು ಮುಂದುವರಿದಿವೆ.

ಇಸ್ರೇಲ್‌ನ ಬೆನ್-ಗುರಿಯನ್ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕರಾದ ನಿರ್ ಗ್ರಿನ್‌ಬರ್ಗ್ ಪ್ರತಿಕ್ರಿಯಿಸಿ, “ತಪ್ಪು ಮಾಹಿತಿಗಳ ಕುರಿತು ಸ್ಟೋರಿ ಕಿಲ್ಲರ್ಸ್ ಯೋಜನೆಯಲ್ಲಿ ಬಹಿರಂಗವಾಗುತ್ತಿರುವ ಸಂಗತಿಗಳು ನವೀನವಾಗಿದೆ” ಎಂದಿದ್ದಾರೆ.

“ನಾಗರಿಕ ಸಮಾಜವು ಈ ಆನ್‌ಲೈನ್ ವೇದಿಕೆಗಳಿಗೆ ಸಂಬಂಧಿಸಿದಂತೆ ನಿಯಮಗಳನ್ನು ಪುನಾ ರಚಿಸದ ಹೊರತು, ಈ ವೇದಿಕೆಗಳನ್ನು ಹೊಣೆಗಾರರನ್ನಾಗಿ ಮಾಡದ ಹೊರತು, ಅಂತಹ ತಪ್ಪು ಮಾಹಿತಿಯ ಪ್ರಚಾರಗಳಿಗೆ ಯಾರಾದರೂ ಬಲಿಯಾಗಬಹುದೆಂಬ ಭವಿಷ್ಯವನ್ನು ನಾವು ನೋಡುತ್ತಿದ್ದೇವೆ” ಎಂದಿದ್ದಾರೆ ಗ್ರಿನ್‌ಬರ್ಗ್.

ಈ ಸುಳ್ಳು ಸುದ್ದಿಗಳಿಂದಾಗಿ ವಿಶೇಷವಾಗಿ ಜಗತ್ತಿನಾದ್ಯಂತ ಮಹಿಳಾ ಪತ್ರಕರ್ತರು ಟಾರ್ಗೆಟ್ ಆಗಿದ್ದಾರೆ. ರೆಸ್ಸಾ ಅವರು ತಮ್ಮ ‘ರಾಪ್ಲರ್’ ಡಿಜಿಟಲ್‌ ವೇದಿಕೆಯ ಮೂಲಕ ಮಾಡಿದ ವರದಿಗಳ ಕಾರಣಕ್ಕೆ ಟ್ರೋಲ್ ಆಗಿದ್ದಾರೆ.

‘ಫಿಲಿಪೈನ್ಸ್‌ನ ಮುಕ್ತ ಪತ್ರಿಕಾ ಮುಖ’ ಎಂದೇ ಖ್ಯಾತರಾಗಿರುವ ರೆಸ್ಸಾ, ತೆರಿಗೆ ವಂಚನೆ ಆರೋಪಗಳಿಂದ ಖುಲಾಸೆಗೊಂಡರು, ಒಂದು ಪ್ರಕರಣದಲ್ಲಿ ಅವರು ಕಿರುಕುಳ ಎದುರಿಸಿದ್ದಾರೆ. ಫಿನ್‌ಲ್ಯಾಂಡ್‌ನ ಪತ್ರಕರ್ತೆ ಜೆಸ್ಸಿಕ್ಕಾ ಅರೋ ಅವರು ಫೇಕ್‌ನ್ಯೂಸ್‌ಗಳ ದಾಳಿಗೆ ಗುರಿಯಾಗಿದ್ದಾರೆ. ಹೀಗೆ ಸುಳ್ಳು ಸುದ್ದಿಗಳಿಂದ ತೊಂದರೆಗೊಳಗಾದ ಪತ್ರಕರ್ತರ ಕುರಿತು ‘ಫಾರ್ಬಿಡನ್‌ ಸ್ಟೋರೀಸ್‌’ ಸರಣಿ ತನಿಖಾ ವರದಿಗಳನ್ನು ಪ್ರಕಟಿಸುತ್ತಿದೆ.

ಮಾಹಿತಿ ಕೃಪೆ: ದಿ ಗಾರ್ಡಿಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...