Homeಮುಖಪುಟಫಾರ್ಬಿಡನ್‌ ಪ್ರಕಟಿಸುತ್ತಿರುವ ‘ಸ್ಟೋರಿ ಕಿಲ್ಲರ್ಸ್’ ಸರಣಿಗೆ ಗೌರಿ ಲಂಕೇಶ್‌ ಸ್ಫೂರ್ತಿ; ಗಾರ್ಡಿಯನ್‌ ಉಲ್ಲೇಖ

ಫಾರ್ಬಿಡನ್‌ ಪ್ರಕಟಿಸುತ್ತಿರುವ ‘ಸ್ಟೋರಿ ಕಿಲ್ಲರ್ಸ್’ ಸರಣಿಗೆ ಗೌರಿ ಲಂಕೇಶ್‌ ಸ್ಫೂರ್ತಿ; ಗಾರ್ಡಿಯನ್‌ ಉಲ್ಲೇಖ

- Advertisement -
- Advertisement -

ಪ್ರಖ್ಯಾತ ತನಿಖಾ ಸಂಸ್ಥೆಯಾಗಿರುವ ‘ಫಾರ್ಬಿಡನ್‌ ಸ್ಟೋರೀಸ್‌’ ಪ್ರಕಟಿಸುತ್ತಿರುವ ‘ಸ್ಟೋರಿ ಕಿಲ್ಲರ್ಸ್’ ವಿಶೇಷ ಸರಣಿಗೆ ‘ಗೌರಿ ಲಂಕೇಶ್‌’ ಅವರು ಸ್ಫೂರ್ತಿಯಾಗಿದ್ದಾರೆ ಎಂದು ‘ದಿ ಗಾರ್ಡಿಯನ್‌’ ವರದಿ ಮಾಡಿದೆ.

ಸುಳ್ಳು ಸುದ್ದಿಗಳಿಂದ ಆಗಿರುವ ಅನಾಹುತಗಳನ್ನು, ಕೊಲೆ, ಹಿಂಸೆಗಳನ್ನು ಈ ಸರಣಿ ಬಿಚ್ಚಿಡುತ್ತಿದೆ. ಗೌರಿ ಲಂಕೇಶ್ ಅವರ ಕುರಿತು ವಿಶೇಷ ವರದಿಯನ್ನು ಇಲ್ಲಿ ಪ್ರಕಟಿಸಲಾಗಿದೆ.

ಗಾರ್ಡಿಯನ್ ತನ್ನ ವರದಿಯಲ್ಲಿ, “ಸುಳ್ಳು ಮಾಹಿತಿಗಳನ್ನು ನಮ್ಮ ಮಾಹಿತಿ ಪರಿಸರ ವ್ಯವಸ್ಥೆಯಲ್ಲಿನ ಪರಮಾಣು ಬಾಂಬ್‌ಗೆ ಹೋಲಿಸಲಾಗಿದೆ. ಸುಳ್ಳು ಮಾಹಿತಿಯು ಗಂಭೀರ ಸಮಸ್ಯೆಯಾಗಿದೆ. ಏಕೆಂದರೆ ಸತ್ಯಕ್ಕಿಂತ ವೇಗವಾಗಿ ದ್ವೇಷ, ಕೋಪ ಮತ್ತು ಪಿತೂರಿ ಸಿದ್ಧಾಂತಗಳು ಹರಡಲು ಸುಳ್ಳು ಮಾಹಿತಿಗಳು ಕಾರಣವಾಗುತ್ತವೆ. ಪತ್ರಕರ್ತೆ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಾರಿಯಾ ರೆಸ್ಸಾ ಅವರ ಹೇಳುವಂತೆ- ‘ಪ್ರಜಾಪ್ರಭುತ್ವ ಎಂಬುದು ಕನಸಷ್ಟೇ” ಎಂಬ ಸಾಲುಗಳನ್ನು ಉಲ್ಲೇಖಿಸಿದೆ.

ಉಕ್ರೇನ್‌ನ ಮೇಲೆ ರಷ್ಯಾದ ಕ್ರೂರ ಆಕ್ರಮಣ, ಅಮೆರಿಕದ ಸಂಸತ್‌ ಮೇಲೆ ದಾಳಿ, ಕೋವಿಡ್ -19ರ ಸುತ್ತ ಹುಟ್ಟಿದ ಸುಳ್ಳುಗಳು- ಇವೆಲ್ಲ ತಪ್ಪು ಮಾಹಿತಿಯ ಪ್ರಮುಖ ಜಾಗತಿಕ ಘಟನೆಗಳಾಗಿ ಕಾಣುತ್ತವೆ ಎಂದಿದೆ.

‘Disinfo black ops’ ಎಂಬ ವಿಶೇಷ ತನಿಖೆಯು ಪ್ರಪಂಚದಾದ್ಯಂತ ಆಗುತ್ತಿರುವ ಸುಳ್ಳು ಮಾಹಿತಿಯ ಉದ್ದೇಶಪೂರ್ವಕ ಹರಡುವಿಕೆಯ ಕುರಿತು ಬಹಿರಂಗಪಡಿಸುತ್ತಿದೆ. ಇದು ಸ್ಟೋರಿ ಕಿಲ್ಲರ್ಸ್‌ ಸರಣಿಯ ಭಾಗವಾಗಿದೆ. ಗಾರ್ಡಿಯನ್, ಅಬ್ಸರ್ವರ್, ಹಾರೆಟ್ಜ್, ಲೆ ಮಾಂಡೆ, ಡೆರ್ ಸ್ಪೀಗೆಲ್, ರೇಡಿಯೋ ಫ್ರಾನ್ಸ್, ದಿ ಮಾರ್ಕರ್, ಪೇಪರ್ ಟ್ರಯಲ್ ಮೀಡಿಯಾ ಮತ್ತು ವಾಷಿಂಗ್ಟನ್ ಪೋಸ್ಟ್ ಸೇರಿದಂತೆ 30 ಸುದ್ದಿ ಮಾಧ್ಯಮಗಳ ಪತ್ರಕರ್ತರನ್ನು ಒಳಗೊಂಡ ಅಂತಾರಾಷ್ಟ್ರೀಯ ಮಟ್ಟದ ಸಹಯೋಗದಲ್ಲಿ ನಡೆಯುತ್ತಿರುವ ಯೋಜನೆ ಇದಾಗಿದೆ.

ಲಾಭದ ಉದ್ದೇಶದಿಂದ ಅಂತರ್ಜಾಲದಾದ್ಯಂತ ನಕಲಿ ಮಾಹಿತಿಯನ್ನು ಹರಡುವ ಸರ್ಕಾರಿ-ಪ್ರಾಯೋಜಿತ ಘಟಕಗಳು ಅಥವಾ ಖಾಸಗಿ ಸಂಸ್ಥೆಗಳು ಹರಡುವ ಸುಳ್ಳು ಮಾಹಿತಿಗಳ ಬಗ್ಗೆ ಈ ತನಿಖೆ ಬೆಳಕು ಚೆಲ್ಲುತ್ತಿದೆ.

ಡ್ಯಾಫ್ನೆ ಪ್ರಾಜೆಕ್ಟ್ ಮತ್ತು ಪೆಗಾಸಸ್ ಪ್ರಾಜೆಕ್ಟ್‌ನ ಹಿಂದಿರುವ ‘ಫೋರ್ಬಿಡನ್ ಸ್ಟೋರೀಸ್’ (ಲಾಭೋದ್ದೇಶವಿಲ್ಲದ ಫ್ರೆಂಚ್ ಮೂಲದ ಸಂಸ್ಥೆ) ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಹತ್ಯೆಗೀಡಾದ, ಬೆದರಿಕೆ ಅಥವಾ ಜೈಲಿನಲ್ಲಿರುವ ಪತ್ರಕರ್ತರ ಆಶಯಗಳನ್ನು ಮುಂದುವರಿಸುವುದು ಈ ಯೋಜನೆಯ ಉದ್ದೇಶವಾಗಿದೆ.

2017ರಲ್ಲಿ ತಮ್ಮ ಬೆಂಗಳೂರಿನ ಮನೆಯ ಹೊರಗೆ ಹತ್ಯೆಯಾದ ಗೌರಿ ಲಂಕೇಶ್ ಅವರ ನಿರ್ಭೀತ ಕೆಲಸಗಳೇ ಈ ಎಂಟು ತಿಂಗಳ ಕಾಲ ನಡೆಸಿರುವ ತನಿಖೆಗೆ ಸ್ಫೂರ್ತಿಯಾಗಿದೆ ಎಂದು ‘ಗಾರ್ಡಿಯನ್‌’ ಉಲ್ಲೇಖಿಸಿದೆ.

ಹತ್ಯೆಯಾಗುವ ಕೆಲವೇ ಗಂಟೆಗಳ ಮೊದಲು ಗೌರಿ ಲಂಕೇಶ್ ಅವರು ‘ಸುಳ್ಳು ಸುದ್ದಿಗಳ ಯುಗದಲ್ಲಿ’ ಎಂಬ ಲೇಖನಕ್ಕೆ ಅಂತಿಮ ಸ್ಪರ್ಶ ನೀಡುತ್ತಿದ್ದರು. ಆನ್‌ಲೈನ್‌ನಲ್ಲಿ ಫೇಕ್‌ನ್ಯೂಸ್ ಪ್ಯಾಕ್ಟರಿಗಳು ಹೇಗೆ ಭಾರತದಲ್ಲಿ ತಪ್ಪು ಮಾಹಿತಿಗಳನ್ನು ಹರಡುತ್ತಿವೆ ಎಂಬುದನ್ನು ಈ ಲೇಖನ ಚರ್ಚಿಸಿದೆ ಎಂಬ ಸಂಗತಿಯನ್ನು ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.

‘ಇನ್ ಏಜ್ ಆಫ್ ಫಾಲ್ಸ್ ನ್ಯೂಸ್’ ಲೇಖನವು ಗೌರಿಯವರ ಸಾವಿನ ನಂತರ ಪ್ರಕಟವಾಯಿತು. ಗೌರಿ ತಮ್ಮ ಅಂತಿಮ ವಾಕ್ಯದಲ್ಲಿ, “ನಕಲಿ ಸುದ್ದಿಗಳನ್ನು ಬಹಿರಂಗಪಡಿಸುವ ಎಲ್ಲರಿಗೂ ನಾನು ಸೆಲ್ಯೂಟ್ ಮಾಡಲು ಬಯಸುತ್ತೇನೆ. ಅಲ್ಲಿ ಇನ್ನೂ ಹೆಚ್ಚಿನವರು ಇರಬೇಕೆಂದು ನಾನು ಬಯಸುತ್ತೇನೆ” ಎಂದಿದ್ದರು.

ಹತ್ಯೆಗೆ ಸಂಬಂಧಿಸಿದಂತೆ 17 ಮಂದಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಗಳು ಮುಂದುವರಿದಿವೆ.

ಇಸ್ರೇಲ್‌ನ ಬೆನ್-ಗುರಿಯನ್ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕರಾದ ನಿರ್ ಗ್ರಿನ್‌ಬರ್ಗ್ ಪ್ರತಿಕ್ರಿಯಿಸಿ, “ತಪ್ಪು ಮಾಹಿತಿಗಳ ಕುರಿತು ಸ್ಟೋರಿ ಕಿಲ್ಲರ್ಸ್ ಯೋಜನೆಯಲ್ಲಿ ಬಹಿರಂಗವಾಗುತ್ತಿರುವ ಸಂಗತಿಗಳು ನವೀನವಾಗಿದೆ” ಎಂದಿದ್ದಾರೆ.

“ನಾಗರಿಕ ಸಮಾಜವು ಈ ಆನ್‌ಲೈನ್ ವೇದಿಕೆಗಳಿಗೆ ಸಂಬಂಧಿಸಿದಂತೆ ನಿಯಮಗಳನ್ನು ಪುನಾ ರಚಿಸದ ಹೊರತು, ಈ ವೇದಿಕೆಗಳನ್ನು ಹೊಣೆಗಾರರನ್ನಾಗಿ ಮಾಡದ ಹೊರತು, ಅಂತಹ ತಪ್ಪು ಮಾಹಿತಿಯ ಪ್ರಚಾರಗಳಿಗೆ ಯಾರಾದರೂ ಬಲಿಯಾಗಬಹುದೆಂಬ ಭವಿಷ್ಯವನ್ನು ನಾವು ನೋಡುತ್ತಿದ್ದೇವೆ” ಎಂದಿದ್ದಾರೆ ಗ್ರಿನ್‌ಬರ್ಗ್.

ಈ ಸುಳ್ಳು ಸುದ್ದಿಗಳಿಂದಾಗಿ ವಿಶೇಷವಾಗಿ ಜಗತ್ತಿನಾದ್ಯಂತ ಮಹಿಳಾ ಪತ್ರಕರ್ತರು ಟಾರ್ಗೆಟ್ ಆಗಿದ್ದಾರೆ. ರೆಸ್ಸಾ ಅವರು ತಮ್ಮ ‘ರಾಪ್ಲರ್’ ಡಿಜಿಟಲ್‌ ವೇದಿಕೆಯ ಮೂಲಕ ಮಾಡಿದ ವರದಿಗಳ ಕಾರಣಕ್ಕೆ ಟ್ರೋಲ್ ಆಗಿದ್ದಾರೆ.

‘ಫಿಲಿಪೈನ್ಸ್‌ನ ಮುಕ್ತ ಪತ್ರಿಕಾ ಮುಖ’ ಎಂದೇ ಖ್ಯಾತರಾಗಿರುವ ರೆಸ್ಸಾ, ತೆರಿಗೆ ವಂಚನೆ ಆರೋಪಗಳಿಂದ ಖುಲಾಸೆಗೊಂಡರು, ಒಂದು ಪ್ರಕರಣದಲ್ಲಿ ಅವರು ಕಿರುಕುಳ ಎದುರಿಸಿದ್ದಾರೆ. ಫಿನ್‌ಲ್ಯಾಂಡ್‌ನ ಪತ್ರಕರ್ತೆ ಜೆಸ್ಸಿಕ್ಕಾ ಅರೋ ಅವರು ಫೇಕ್‌ನ್ಯೂಸ್‌ಗಳ ದಾಳಿಗೆ ಗುರಿಯಾಗಿದ್ದಾರೆ. ಹೀಗೆ ಸುಳ್ಳು ಸುದ್ದಿಗಳಿಂದ ತೊಂದರೆಗೊಳಗಾದ ಪತ್ರಕರ್ತರ ಕುರಿತು ‘ಫಾರ್ಬಿಡನ್‌ ಸ್ಟೋರೀಸ್‌’ ಸರಣಿ ತನಿಖಾ ವರದಿಗಳನ್ನು ಪ್ರಕಟಿಸುತ್ತಿದೆ.

ಮಾಹಿತಿ ಕೃಪೆ: ದಿ ಗಾರ್ಡಿಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...