Homeಮುಖಪುಟಫಾರ್ಬಿಡನ್‌ ಪ್ರಕಟಿಸುತ್ತಿರುವ ‘ಸ್ಟೋರಿ ಕಿಲ್ಲರ್ಸ್’ ಸರಣಿಗೆ ಗೌರಿ ಲಂಕೇಶ್‌ ಸ್ಫೂರ್ತಿ; ಗಾರ್ಡಿಯನ್‌ ಉಲ್ಲೇಖ

ಫಾರ್ಬಿಡನ್‌ ಪ್ರಕಟಿಸುತ್ತಿರುವ ‘ಸ್ಟೋರಿ ಕಿಲ್ಲರ್ಸ್’ ಸರಣಿಗೆ ಗೌರಿ ಲಂಕೇಶ್‌ ಸ್ಫೂರ್ತಿ; ಗಾರ್ಡಿಯನ್‌ ಉಲ್ಲೇಖ

- Advertisement -
- Advertisement -

ಪ್ರಖ್ಯಾತ ತನಿಖಾ ಸಂಸ್ಥೆಯಾಗಿರುವ ‘ಫಾರ್ಬಿಡನ್‌ ಸ್ಟೋರೀಸ್‌’ ಪ್ರಕಟಿಸುತ್ತಿರುವ ‘ಸ್ಟೋರಿ ಕಿಲ್ಲರ್ಸ್’ ವಿಶೇಷ ಸರಣಿಗೆ ‘ಗೌರಿ ಲಂಕೇಶ್‌’ ಅವರು ಸ್ಫೂರ್ತಿಯಾಗಿದ್ದಾರೆ ಎಂದು ‘ದಿ ಗಾರ್ಡಿಯನ್‌’ ವರದಿ ಮಾಡಿದೆ.

ಸುಳ್ಳು ಸುದ್ದಿಗಳಿಂದ ಆಗಿರುವ ಅನಾಹುತಗಳನ್ನು, ಕೊಲೆ, ಹಿಂಸೆಗಳನ್ನು ಈ ಸರಣಿ ಬಿಚ್ಚಿಡುತ್ತಿದೆ. ಗೌರಿ ಲಂಕೇಶ್ ಅವರ ಕುರಿತು ವಿಶೇಷ ವರದಿಯನ್ನು ಇಲ್ಲಿ ಪ್ರಕಟಿಸಲಾಗಿದೆ.

ಗಾರ್ಡಿಯನ್ ತನ್ನ ವರದಿಯಲ್ಲಿ, “ಸುಳ್ಳು ಮಾಹಿತಿಗಳನ್ನು ನಮ್ಮ ಮಾಹಿತಿ ಪರಿಸರ ವ್ಯವಸ್ಥೆಯಲ್ಲಿನ ಪರಮಾಣು ಬಾಂಬ್‌ಗೆ ಹೋಲಿಸಲಾಗಿದೆ. ಸುಳ್ಳು ಮಾಹಿತಿಯು ಗಂಭೀರ ಸಮಸ್ಯೆಯಾಗಿದೆ. ಏಕೆಂದರೆ ಸತ್ಯಕ್ಕಿಂತ ವೇಗವಾಗಿ ದ್ವೇಷ, ಕೋಪ ಮತ್ತು ಪಿತೂರಿ ಸಿದ್ಧಾಂತಗಳು ಹರಡಲು ಸುಳ್ಳು ಮಾಹಿತಿಗಳು ಕಾರಣವಾಗುತ್ತವೆ. ಪತ್ರಕರ್ತೆ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಾರಿಯಾ ರೆಸ್ಸಾ ಅವರ ಹೇಳುವಂತೆ- ‘ಪ್ರಜಾಪ್ರಭುತ್ವ ಎಂಬುದು ಕನಸಷ್ಟೇ” ಎಂಬ ಸಾಲುಗಳನ್ನು ಉಲ್ಲೇಖಿಸಿದೆ.

ಉಕ್ರೇನ್‌ನ ಮೇಲೆ ರಷ್ಯಾದ ಕ್ರೂರ ಆಕ್ರಮಣ, ಅಮೆರಿಕದ ಸಂಸತ್‌ ಮೇಲೆ ದಾಳಿ, ಕೋವಿಡ್ -19ರ ಸುತ್ತ ಹುಟ್ಟಿದ ಸುಳ್ಳುಗಳು- ಇವೆಲ್ಲ ತಪ್ಪು ಮಾಹಿತಿಯ ಪ್ರಮುಖ ಜಾಗತಿಕ ಘಟನೆಗಳಾಗಿ ಕಾಣುತ್ತವೆ ಎಂದಿದೆ.

‘Disinfo black ops’ ಎಂಬ ವಿಶೇಷ ತನಿಖೆಯು ಪ್ರಪಂಚದಾದ್ಯಂತ ಆಗುತ್ತಿರುವ ಸುಳ್ಳು ಮಾಹಿತಿಯ ಉದ್ದೇಶಪೂರ್ವಕ ಹರಡುವಿಕೆಯ ಕುರಿತು ಬಹಿರಂಗಪಡಿಸುತ್ತಿದೆ. ಇದು ಸ್ಟೋರಿ ಕಿಲ್ಲರ್ಸ್‌ ಸರಣಿಯ ಭಾಗವಾಗಿದೆ. ಗಾರ್ಡಿಯನ್, ಅಬ್ಸರ್ವರ್, ಹಾರೆಟ್ಜ್, ಲೆ ಮಾಂಡೆ, ಡೆರ್ ಸ್ಪೀಗೆಲ್, ರೇಡಿಯೋ ಫ್ರಾನ್ಸ್, ದಿ ಮಾರ್ಕರ್, ಪೇಪರ್ ಟ್ರಯಲ್ ಮೀಡಿಯಾ ಮತ್ತು ವಾಷಿಂಗ್ಟನ್ ಪೋಸ್ಟ್ ಸೇರಿದಂತೆ 30 ಸುದ್ದಿ ಮಾಧ್ಯಮಗಳ ಪತ್ರಕರ್ತರನ್ನು ಒಳಗೊಂಡ ಅಂತಾರಾಷ್ಟ್ರೀಯ ಮಟ್ಟದ ಸಹಯೋಗದಲ್ಲಿ ನಡೆಯುತ್ತಿರುವ ಯೋಜನೆ ಇದಾಗಿದೆ.

ಲಾಭದ ಉದ್ದೇಶದಿಂದ ಅಂತರ್ಜಾಲದಾದ್ಯಂತ ನಕಲಿ ಮಾಹಿತಿಯನ್ನು ಹರಡುವ ಸರ್ಕಾರಿ-ಪ್ರಾಯೋಜಿತ ಘಟಕಗಳು ಅಥವಾ ಖಾಸಗಿ ಸಂಸ್ಥೆಗಳು ಹರಡುವ ಸುಳ್ಳು ಮಾಹಿತಿಗಳ ಬಗ್ಗೆ ಈ ತನಿಖೆ ಬೆಳಕು ಚೆಲ್ಲುತ್ತಿದೆ.

ಡ್ಯಾಫ್ನೆ ಪ್ರಾಜೆಕ್ಟ್ ಮತ್ತು ಪೆಗಾಸಸ್ ಪ್ರಾಜೆಕ್ಟ್‌ನ ಹಿಂದಿರುವ ‘ಫೋರ್ಬಿಡನ್ ಸ್ಟೋರೀಸ್’ (ಲಾಭೋದ್ದೇಶವಿಲ್ಲದ ಫ್ರೆಂಚ್ ಮೂಲದ ಸಂಸ್ಥೆ) ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಹತ್ಯೆಗೀಡಾದ, ಬೆದರಿಕೆ ಅಥವಾ ಜೈಲಿನಲ್ಲಿರುವ ಪತ್ರಕರ್ತರ ಆಶಯಗಳನ್ನು ಮುಂದುವರಿಸುವುದು ಈ ಯೋಜನೆಯ ಉದ್ದೇಶವಾಗಿದೆ.

2017ರಲ್ಲಿ ತಮ್ಮ ಬೆಂಗಳೂರಿನ ಮನೆಯ ಹೊರಗೆ ಹತ್ಯೆಯಾದ ಗೌರಿ ಲಂಕೇಶ್ ಅವರ ನಿರ್ಭೀತ ಕೆಲಸಗಳೇ ಈ ಎಂಟು ತಿಂಗಳ ಕಾಲ ನಡೆಸಿರುವ ತನಿಖೆಗೆ ಸ್ಫೂರ್ತಿಯಾಗಿದೆ ಎಂದು ‘ಗಾರ್ಡಿಯನ್‌’ ಉಲ್ಲೇಖಿಸಿದೆ.

ಹತ್ಯೆಯಾಗುವ ಕೆಲವೇ ಗಂಟೆಗಳ ಮೊದಲು ಗೌರಿ ಲಂಕೇಶ್ ಅವರು ‘ಸುಳ್ಳು ಸುದ್ದಿಗಳ ಯುಗದಲ್ಲಿ’ ಎಂಬ ಲೇಖನಕ್ಕೆ ಅಂತಿಮ ಸ್ಪರ್ಶ ನೀಡುತ್ತಿದ್ದರು. ಆನ್‌ಲೈನ್‌ನಲ್ಲಿ ಫೇಕ್‌ನ್ಯೂಸ್ ಪ್ಯಾಕ್ಟರಿಗಳು ಹೇಗೆ ಭಾರತದಲ್ಲಿ ತಪ್ಪು ಮಾಹಿತಿಗಳನ್ನು ಹರಡುತ್ತಿವೆ ಎಂಬುದನ್ನು ಈ ಲೇಖನ ಚರ್ಚಿಸಿದೆ ಎಂಬ ಸಂಗತಿಯನ್ನು ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.

‘ಇನ್ ಏಜ್ ಆಫ್ ಫಾಲ್ಸ್ ನ್ಯೂಸ್’ ಲೇಖನವು ಗೌರಿಯವರ ಸಾವಿನ ನಂತರ ಪ್ರಕಟವಾಯಿತು. ಗೌರಿ ತಮ್ಮ ಅಂತಿಮ ವಾಕ್ಯದಲ್ಲಿ, “ನಕಲಿ ಸುದ್ದಿಗಳನ್ನು ಬಹಿರಂಗಪಡಿಸುವ ಎಲ್ಲರಿಗೂ ನಾನು ಸೆಲ್ಯೂಟ್ ಮಾಡಲು ಬಯಸುತ್ತೇನೆ. ಅಲ್ಲಿ ಇನ್ನೂ ಹೆಚ್ಚಿನವರು ಇರಬೇಕೆಂದು ನಾನು ಬಯಸುತ್ತೇನೆ” ಎಂದಿದ್ದರು.

ಹತ್ಯೆಗೆ ಸಂಬಂಧಿಸಿದಂತೆ 17 ಮಂದಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಗಳು ಮುಂದುವರಿದಿವೆ.

ಇಸ್ರೇಲ್‌ನ ಬೆನ್-ಗುರಿಯನ್ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕರಾದ ನಿರ್ ಗ್ರಿನ್‌ಬರ್ಗ್ ಪ್ರತಿಕ್ರಿಯಿಸಿ, “ತಪ್ಪು ಮಾಹಿತಿಗಳ ಕುರಿತು ಸ್ಟೋರಿ ಕಿಲ್ಲರ್ಸ್ ಯೋಜನೆಯಲ್ಲಿ ಬಹಿರಂಗವಾಗುತ್ತಿರುವ ಸಂಗತಿಗಳು ನವೀನವಾಗಿದೆ” ಎಂದಿದ್ದಾರೆ.

“ನಾಗರಿಕ ಸಮಾಜವು ಈ ಆನ್‌ಲೈನ್ ವೇದಿಕೆಗಳಿಗೆ ಸಂಬಂಧಿಸಿದಂತೆ ನಿಯಮಗಳನ್ನು ಪುನಾ ರಚಿಸದ ಹೊರತು, ಈ ವೇದಿಕೆಗಳನ್ನು ಹೊಣೆಗಾರರನ್ನಾಗಿ ಮಾಡದ ಹೊರತು, ಅಂತಹ ತಪ್ಪು ಮಾಹಿತಿಯ ಪ್ರಚಾರಗಳಿಗೆ ಯಾರಾದರೂ ಬಲಿಯಾಗಬಹುದೆಂಬ ಭವಿಷ್ಯವನ್ನು ನಾವು ನೋಡುತ್ತಿದ್ದೇವೆ” ಎಂದಿದ್ದಾರೆ ಗ್ರಿನ್‌ಬರ್ಗ್.

ಈ ಸುಳ್ಳು ಸುದ್ದಿಗಳಿಂದಾಗಿ ವಿಶೇಷವಾಗಿ ಜಗತ್ತಿನಾದ್ಯಂತ ಮಹಿಳಾ ಪತ್ರಕರ್ತರು ಟಾರ್ಗೆಟ್ ಆಗಿದ್ದಾರೆ. ರೆಸ್ಸಾ ಅವರು ತಮ್ಮ ‘ರಾಪ್ಲರ್’ ಡಿಜಿಟಲ್‌ ವೇದಿಕೆಯ ಮೂಲಕ ಮಾಡಿದ ವರದಿಗಳ ಕಾರಣಕ್ಕೆ ಟ್ರೋಲ್ ಆಗಿದ್ದಾರೆ.

‘ಫಿಲಿಪೈನ್ಸ್‌ನ ಮುಕ್ತ ಪತ್ರಿಕಾ ಮುಖ’ ಎಂದೇ ಖ್ಯಾತರಾಗಿರುವ ರೆಸ್ಸಾ, ತೆರಿಗೆ ವಂಚನೆ ಆರೋಪಗಳಿಂದ ಖುಲಾಸೆಗೊಂಡರು, ಒಂದು ಪ್ರಕರಣದಲ್ಲಿ ಅವರು ಕಿರುಕುಳ ಎದುರಿಸಿದ್ದಾರೆ. ಫಿನ್‌ಲ್ಯಾಂಡ್‌ನ ಪತ್ರಕರ್ತೆ ಜೆಸ್ಸಿಕ್ಕಾ ಅರೋ ಅವರು ಫೇಕ್‌ನ್ಯೂಸ್‌ಗಳ ದಾಳಿಗೆ ಗುರಿಯಾಗಿದ್ದಾರೆ. ಹೀಗೆ ಸುಳ್ಳು ಸುದ್ದಿಗಳಿಂದ ತೊಂದರೆಗೊಳಗಾದ ಪತ್ರಕರ್ತರ ಕುರಿತು ‘ಫಾರ್ಬಿಡನ್‌ ಸ್ಟೋರೀಸ್‌’ ಸರಣಿ ತನಿಖಾ ವರದಿಗಳನ್ನು ಪ್ರಕಟಿಸುತ್ತಿದೆ.

ಮಾಹಿತಿ ಕೃಪೆ: ದಿ ಗಾರ್ಡಿಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...